Homeಮುಖಪುಟಏಳು ವರ್ಷಗಳಲ್ಲಿ 55,607 ವೆಬ್‌ಸೈಟ್‌ಗಳನ್ನು ನಿರ್ಬಂಧಿಸಿದ ಭಾರತ: ವರದಿ

ಏಳು ವರ್ಷಗಳಲ್ಲಿ 55,607 ವೆಬ್‌ಸೈಟ್‌ಗಳನ್ನು ನಿರ್ಬಂಧಿಸಿದ ಭಾರತ: ವರದಿ

- Advertisement -
- Advertisement -

ಜನವರಿ 2015 ಮತ್ತು ಸೆಪ್ಟೆಂಬರ್ 2022ರ ನಡುವೆ ಭಾರತವು 55,607 ಯುಆರ್‌‌ಎಲ್‌ಗಳನ್ನು (ವೆಬ್‌ಸೈಟ್‌ಗಳನ್ನು) ನಿರ್ಬಂಧಿಸಿದೆ ಎಂದು ಭಾರತದ ಸಾಫ್ಟ್‌ವೇರ್ ಫ್ರೀಡಂ ಲಾ ಸೆಂಟರ್‌ನ ವರದಿ ಹೇಳಿರುವುದಾಗಿ ‘ನ್ಯೂಸ್‌ಲಾಂಡ್ರಿ’ ಜಾಲತಾಣ ಪ್ರಕಟಿಸಿದೆ.

ಇವುಗಳಲ್ಲಿ 26,474 ಯುಆರ್‌ಎಲ್‌ಗಳು (ಅಥವಾ 47.6 ಶೇ.) ಮಾಹಿತಿ ತಂತ್ರಜ್ಞಾನ ಕಾಯಿದೆಯ ಸೆಕ್ಷನ್ 69ಎ ಅಡಿಯಲ್ಲಿ ನಿರ್ಬಂಧಕ್ಕೊಳಪಟ್ಟಿವೆ. 46.8 ಪ್ರತಿಶತದಷ್ಟು ಯುಆರ್‌ಎಲ್‌ಗಳು ಹಕ್ಕುಸ್ವಾಮ್ಯ ಉಲ್ಲಂಘನೆಗಾಗಿ ನಿರ್ಬಂಧಕ್ಕೆ ಒಳಪಟ್ಟರೆ, ಉಳಿದವುಗಳನ್ನು ಅಶ್ಲೀಲತೆ, ಪೊರ್ನೊಗ್ರಫಿ, ಮಕ್ಕಳ ಮೇಲಿನ ಲೈಂಗಿಕ ನಿಂದನೆಯ ಕಾರಣಕ್ಕೆ ತಡೆಹಿಡಿಯಲಾಗಿದೆ.

ಈ ಯುಆರ್‌‌ಎಲ್‌‌ಗಳನ್ನು ಏಕೆ ನಿರ್ಬಂಧಿಸಲಾಗಿದೆ?

1. ಸೆಕ್ಷನ್ 69ಎ ಅಡಿಯಲ್ಲಿ ನಿರ್ಬಂಧ ಹೇರಲಾಗಿದೆ. ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆ, ರಕ್ಷಣೆ, ರಾಜ್ಯದ ಭದ್ರತೆ, ವಿದೇಶಿಗಳೊಂದಿಗಿನ ಸ್ನೇಹ ಸಂಬಂಧಗಳು, ಸಾರ್ವಜನಿಕ ಸುವ್ಯವಸ್ಥೆ ಮತ್ತು ಈ ಆಧಾರಗಳಿಗೆ ಸಂಬಂಧಿಸಿದ ಅಪರಾಧಗಳ ತಡೆ- ವಿಚಾರವಾಗಿ ಈ ಸೆಕ್ಷನ್ ಹೇಳುತ್ತದೆ.

ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು 26,379 ಯುಆರ್‌ಎಲ್‌ಗಳನ್ನು ನಿರ್ಬಂಧಿಸಿದೆ, ಇದರ ಜೊತೆಗೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು 94 (ಮುಖ್ಯವಾಗಿ YouTube ಚಾನಲ್‌ಗಳು) ಯುಆರ್‌ಎಲ್‌ಗಳನ್ನು ಐಟಿ ನಿಯಮಗಳ ಮೂಲಕ ನಿರ್ಬಂಧಿಸಿದೆ.

ತಪ್ಪು ಮಾಹಿತಿ ಮತ್ತು ಪ್ರೊಪಗಾಂಡದಂತಹ ವಿಚಾರಗಳಿಗೆ ಸಂಬಂಧಿಸಿದಂತೆ ಮಾಹಿತಿ ತಂತ್ರಜ್ಞಾನ ಸಚಿವಾಲಯದ ಕಾರಣಗಳಿವೆ. ಯುಎಪಿಎ ಅಡಿಯಲ್ಲಿ ನಿಷೇಧಗೊಂಡ ಸಂಸ್ಥೆಗಳ ಲಿಂಕ್‌ಗಳು ಬ್ಲಾಕ್ ಆಗಿವೆ. ಭಾರತೀಯ ಸೇನೆ, ಜಮ್ಮು ಮತ್ತು ಕಾಶ್ಮೀರ, 2021ರ ಜನರಲ್ ಬಿಪಿನ್ ರಾವತ್ ಅವರ ಸಾವಿಗೆ ಸಂಬಂಧಿಸಿದ ನಕಲಿ ಸುದ್ದಿಗಳನ್ನು ಪ್ರಸಾರ ಮಾಡಿದ ಯುಆರ್‌ಎಲ್‌ ಲಿಂಕ್‌ಗಳನ್ನು ರದ್ದು ಮಾಡಲಾಗಿದೆ.

2. ಹಕ್ಕುಸ್ವಾಮ್ಯ ಉಲ್ಲಂಘನೆಗಾಗಿ ನಿರ್ಬಂಧಿಸಲಾದ 26,024 ಯುಆರ್‌ಎಲ್‌‌ಗಳಿಗೆ ಸಂಬಂಧಿಸಿದಂತೆ, ಹೆಚ್ಚಿನ ಆದೇಶಗಳು ನ್ಯಾಯಾಲಯಗಳಿಂದ ಬಂದಿವೆ.

ಯುಎಸ್‌ ಕಾನೂನಿನ ಅಡಿಯಲ್ಲಿ ನಿರ್ಬಂಧಿಸುವಿಕೆ ಪ್ರಕ್ರಿಯೆ ನಡೆಯುತ್ತದೆ. ಏಕೆಂದರೆ ಗೂಗಲ್‌, ಮೆಟಾ (ಫೇಸ್‌ಬುಕ್‌, ಇನ್ಸ್‌ಸ್ಟಾಗ್ರಾಮ್‌, ವಾಟ್ಸ್‌ಅಪ್‌) ಮತ್ತು ಟ್ವಿಟರ್‌ ಸಂಸ್ಥೆಗಳು ಅಮೆರಿಕಾದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿವೆ. ಭಾರತವು 1928 ರಿಂದ ಬರ್ನ್ ಕನ್ವೆನ್ಷನ್‌ಗೆ ಸಹಿ ಹಾಕಿದೆ ಮತ್ತು 2018ರಲ್ಲಿ ವಿಶ್ವ ಬೌದ್ಧಿಕ ಆಸ್ತಿ ಸಂಸ್ಥೆಯ ಹಕ್ಕುಸ್ವಾಮ್ಯ ಒಪ್ಪಂದವನ್ನು ಒಪ್ಪಿಕೊಂಡಿದೆ.

3. ಒಟ್ಟು 1,065 ಯುಆರ್‌ಎಲ್‌ಗಳನ್ನು ಅಶ್ಲೀಲತೆ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಪೋನ್ರೋಗ್ರಫಿ ಕಾರಣಕ್ಕಾಗಿ ನಿರ್ಬಂಧಿಸಲಾಗಿದೆ. 2018ರಲ್ಲಿ ಉತ್ತರಾಖಂಡ ಹೈಕೋರ್ಟ್‌ನ ಆದೇಶದ ನಂತರ ಐಟಿ ಸಚಿವಾಲಯವು 857 ಯುಆರ್‌ಎಲ್‌ಗಳನ್ನು ತೆರವು ಮಾಡಿದರೆ, 238 ಅನ್ನು ಮುಂಬೈನ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ 2016 ರಲ್ಲಿ ನಿರ್ಬಂಧಿಸಿದ್ದಾರೆ.

4. ಇತರ ಕಾರಣಗಳಲ್ಲಿ- ಮಾನನಷ್ಟ, ಸಾರ್ವಜನಿಕ ಅವ್ಯವಸ್ಥೆ, ಕಾನೂನು ಮತ್ತು ಸುವ್ಯವಸ್ಥೆ, ನ್ಯಾಯಾಲಯದ ನಿಂದನೆ ಸೇರಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...