Homeಮುಖಪುಟಏಳು ವರ್ಷಗಳಲ್ಲಿ 55,607 ವೆಬ್‌ಸೈಟ್‌ಗಳನ್ನು ನಿರ್ಬಂಧಿಸಿದ ಭಾರತ: ವರದಿ

ಏಳು ವರ್ಷಗಳಲ್ಲಿ 55,607 ವೆಬ್‌ಸೈಟ್‌ಗಳನ್ನು ನಿರ್ಬಂಧಿಸಿದ ಭಾರತ: ವರದಿ

- Advertisement -
- Advertisement -

ಜನವರಿ 2015 ಮತ್ತು ಸೆಪ್ಟೆಂಬರ್ 2022ರ ನಡುವೆ ಭಾರತವು 55,607 ಯುಆರ್‌‌ಎಲ್‌ಗಳನ್ನು (ವೆಬ್‌ಸೈಟ್‌ಗಳನ್ನು) ನಿರ್ಬಂಧಿಸಿದೆ ಎಂದು ಭಾರತದ ಸಾಫ್ಟ್‌ವೇರ್ ಫ್ರೀಡಂ ಲಾ ಸೆಂಟರ್‌ನ ವರದಿ ಹೇಳಿರುವುದಾಗಿ ‘ನ್ಯೂಸ್‌ಲಾಂಡ್ರಿ’ ಜಾಲತಾಣ ಪ್ರಕಟಿಸಿದೆ.

ಇವುಗಳಲ್ಲಿ 26,474 ಯುಆರ್‌ಎಲ್‌ಗಳು (ಅಥವಾ 47.6 ಶೇ.) ಮಾಹಿತಿ ತಂತ್ರಜ್ಞಾನ ಕಾಯಿದೆಯ ಸೆಕ್ಷನ್ 69ಎ ಅಡಿಯಲ್ಲಿ ನಿರ್ಬಂಧಕ್ಕೊಳಪಟ್ಟಿವೆ. 46.8 ಪ್ರತಿಶತದಷ್ಟು ಯುಆರ್‌ಎಲ್‌ಗಳು ಹಕ್ಕುಸ್ವಾಮ್ಯ ಉಲ್ಲಂಘನೆಗಾಗಿ ನಿರ್ಬಂಧಕ್ಕೆ ಒಳಪಟ್ಟರೆ, ಉಳಿದವುಗಳನ್ನು ಅಶ್ಲೀಲತೆ, ಪೊರ್ನೊಗ್ರಫಿ, ಮಕ್ಕಳ ಮೇಲಿನ ಲೈಂಗಿಕ ನಿಂದನೆಯ ಕಾರಣಕ್ಕೆ ತಡೆಹಿಡಿಯಲಾಗಿದೆ.

ಈ ಯುಆರ್‌‌ಎಲ್‌‌ಗಳನ್ನು ಏಕೆ ನಿರ್ಬಂಧಿಸಲಾಗಿದೆ?

1. ಸೆಕ್ಷನ್ 69ಎ ಅಡಿಯಲ್ಲಿ ನಿರ್ಬಂಧ ಹೇರಲಾಗಿದೆ. ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆ, ರಕ್ಷಣೆ, ರಾಜ್ಯದ ಭದ್ರತೆ, ವಿದೇಶಿಗಳೊಂದಿಗಿನ ಸ್ನೇಹ ಸಂಬಂಧಗಳು, ಸಾರ್ವಜನಿಕ ಸುವ್ಯವಸ್ಥೆ ಮತ್ತು ಈ ಆಧಾರಗಳಿಗೆ ಸಂಬಂಧಿಸಿದ ಅಪರಾಧಗಳ ತಡೆ- ವಿಚಾರವಾಗಿ ಈ ಸೆಕ್ಷನ್ ಹೇಳುತ್ತದೆ.

ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು 26,379 ಯುಆರ್‌ಎಲ್‌ಗಳನ್ನು ನಿರ್ಬಂಧಿಸಿದೆ, ಇದರ ಜೊತೆಗೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು 94 (ಮುಖ್ಯವಾಗಿ YouTube ಚಾನಲ್‌ಗಳು) ಯುಆರ್‌ಎಲ್‌ಗಳನ್ನು ಐಟಿ ನಿಯಮಗಳ ಮೂಲಕ ನಿರ್ಬಂಧಿಸಿದೆ.

ತಪ್ಪು ಮಾಹಿತಿ ಮತ್ತು ಪ್ರೊಪಗಾಂಡದಂತಹ ವಿಚಾರಗಳಿಗೆ ಸಂಬಂಧಿಸಿದಂತೆ ಮಾಹಿತಿ ತಂತ್ರಜ್ಞಾನ ಸಚಿವಾಲಯದ ಕಾರಣಗಳಿವೆ. ಯುಎಪಿಎ ಅಡಿಯಲ್ಲಿ ನಿಷೇಧಗೊಂಡ ಸಂಸ್ಥೆಗಳ ಲಿಂಕ್‌ಗಳು ಬ್ಲಾಕ್ ಆಗಿವೆ. ಭಾರತೀಯ ಸೇನೆ, ಜಮ್ಮು ಮತ್ತು ಕಾಶ್ಮೀರ, 2021ರ ಜನರಲ್ ಬಿಪಿನ್ ರಾವತ್ ಅವರ ಸಾವಿಗೆ ಸಂಬಂಧಿಸಿದ ನಕಲಿ ಸುದ್ದಿಗಳನ್ನು ಪ್ರಸಾರ ಮಾಡಿದ ಯುಆರ್‌ಎಲ್‌ ಲಿಂಕ್‌ಗಳನ್ನು ರದ್ದು ಮಾಡಲಾಗಿದೆ.

2. ಹಕ್ಕುಸ್ವಾಮ್ಯ ಉಲ್ಲಂಘನೆಗಾಗಿ ನಿರ್ಬಂಧಿಸಲಾದ 26,024 ಯುಆರ್‌ಎಲ್‌‌ಗಳಿಗೆ ಸಂಬಂಧಿಸಿದಂತೆ, ಹೆಚ್ಚಿನ ಆದೇಶಗಳು ನ್ಯಾಯಾಲಯಗಳಿಂದ ಬಂದಿವೆ.

ಯುಎಸ್‌ ಕಾನೂನಿನ ಅಡಿಯಲ್ಲಿ ನಿರ್ಬಂಧಿಸುವಿಕೆ ಪ್ರಕ್ರಿಯೆ ನಡೆಯುತ್ತದೆ. ಏಕೆಂದರೆ ಗೂಗಲ್‌, ಮೆಟಾ (ಫೇಸ್‌ಬುಕ್‌, ಇನ್ಸ್‌ಸ್ಟಾಗ್ರಾಮ್‌, ವಾಟ್ಸ್‌ಅಪ್‌) ಮತ್ತು ಟ್ವಿಟರ್‌ ಸಂಸ್ಥೆಗಳು ಅಮೆರಿಕಾದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿವೆ. ಭಾರತವು 1928 ರಿಂದ ಬರ್ನ್ ಕನ್ವೆನ್ಷನ್‌ಗೆ ಸಹಿ ಹಾಕಿದೆ ಮತ್ತು 2018ರಲ್ಲಿ ವಿಶ್ವ ಬೌದ್ಧಿಕ ಆಸ್ತಿ ಸಂಸ್ಥೆಯ ಹಕ್ಕುಸ್ವಾಮ್ಯ ಒಪ್ಪಂದವನ್ನು ಒಪ್ಪಿಕೊಂಡಿದೆ.

3. ಒಟ್ಟು 1,065 ಯುಆರ್‌ಎಲ್‌ಗಳನ್ನು ಅಶ್ಲೀಲತೆ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಪೋನ್ರೋಗ್ರಫಿ ಕಾರಣಕ್ಕಾಗಿ ನಿರ್ಬಂಧಿಸಲಾಗಿದೆ. 2018ರಲ್ಲಿ ಉತ್ತರಾಖಂಡ ಹೈಕೋರ್ಟ್‌ನ ಆದೇಶದ ನಂತರ ಐಟಿ ಸಚಿವಾಲಯವು 857 ಯುಆರ್‌ಎಲ್‌ಗಳನ್ನು ತೆರವು ಮಾಡಿದರೆ, 238 ಅನ್ನು ಮುಂಬೈನ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ 2016 ರಲ್ಲಿ ನಿರ್ಬಂಧಿಸಿದ್ದಾರೆ.

4. ಇತರ ಕಾರಣಗಳಲ್ಲಿ- ಮಾನನಷ್ಟ, ಸಾರ್ವಜನಿಕ ಅವ್ಯವಸ್ಥೆ, ಕಾನೂನು ಮತ್ತು ಸುವ್ಯವಸ್ಥೆ, ನ್ಯಾಯಾಲಯದ ನಿಂದನೆ ಸೇರಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...