Homeಮುಖಪುಟಏಳು ವರ್ಷಗಳಲ್ಲಿ 55,607 ವೆಬ್‌ಸೈಟ್‌ಗಳನ್ನು ನಿರ್ಬಂಧಿಸಿದ ಭಾರತ: ವರದಿ

ಏಳು ವರ್ಷಗಳಲ್ಲಿ 55,607 ವೆಬ್‌ಸೈಟ್‌ಗಳನ್ನು ನಿರ್ಬಂಧಿಸಿದ ಭಾರತ: ವರದಿ

- Advertisement -
- Advertisement -

ಜನವರಿ 2015 ಮತ್ತು ಸೆಪ್ಟೆಂಬರ್ 2022ರ ನಡುವೆ ಭಾರತವು 55,607 ಯುಆರ್‌‌ಎಲ್‌ಗಳನ್ನು (ವೆಬ್‌ಸೈಟ್‌ಗಳನ್ನು) ನಿರ್ಬಂಧಿಸಿದೆ ಎಂದು ಭಾರತದ ಸಾಫ್ಟ್‌ವೇರ್ ಫ್ರೀಡಂ ಲಾ ಸೆಂಟರ್‌ನ ವರದಿ ಹೇಳಿರುವುದಾಗಿ ‘ನ್ಯೂಸ್‌ಲಾಂಡ್ರಿ’ ಜಾಲತಾಣ ಪ್ರಕಟಿಸಿದೆ.

ಇವುಗಳಲ್ಲಿ 26,474 ಯುಆರ್‌ಎಲ್‌ಗಳು (ಅಥವಾ 47.6 ಶೇ.) ಮಾಹಿತಿ ತಂತ್ರಜ್ಞಾನ ಕಾಯಿದೆಯ ಸೆಕ್ಷನ್ 69ಎ ಅಡಿಯಲ್ಲಿ ನಿರ್ಬಂಧಕ್ಕೊಳಪಟ್ಟಿವೆ. 46.8 ಪ್ರತಿಶತದಷ್ಟು ಯುಆರ್‌ಎಲ್‌ಗಳು ಹಕ್ಕುಸ್ವಾಮ್ಯ ಉಲ್ಲಂಘನೆಗಾಗಿ ನಿರ್ಬಂಧಕ್ಕೆ ಒಳಪಟ್ಟರೆ, ಉಳಿದವುಗಳನ್ನು ಅಶ್ಲೀಲತೆ, ಪೊರ್ನೊಗ್ರಫಿ, ಮಕ್ಕಳ ಮೇಲಿನ ಲೈಂಗಿಕ ನಿಂದನೆಯ ಕಾರಣಕ್ಕೆ ತಡೆಹಿಡಿಯಲಾಗಿದೆ.

ಈ ಯುಆರ್‌‌ಎಲ್‌‌ಗಳನ್ನು ಏಕೆ ನಿರ್ಬಂಧಿಸಲಾಗಿದೆ?

1. ಸೆಕ್ಷನ್ 69ಎ ಅಡಿಯಲ್ಲಿ ನಿರ್ಬಂಧ ಹೇರಲಾಗಿದೆ. ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆ, ರಕ್ಷಣೆ, ರಾಜ್ಯದ ಭದ್ರತೆ, ವಿದೇಶಿಗಳೊಂದಿಗಿನ ಸ್ನೇಹ ಸಂಬಂಧಗಳು, ಸಾರ್ವಜನಿಕ ಸುವ್ಯವಸ್ಥೆ ಮತ್ತು ಈ ಆಧಾರಗಳಿಗೆ ಸಂಬಂಧಿಸಿದ ಅಪರಾಧಗಳ ತಡೆ- ವಿಚಾರವಾಗಿ ಈ ಸೆಕ್ಷನ್ ಹೇಳುತ್ತದೆ.

ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು 26,379 ಯುಆರ್‌ಎಲ್‌ಗಳನ್ನು ನಿರ್ಬಂಧಿಸಿದೆ, ಇದರ ಜೊತೆಗೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು 94 (ಮುಖ್ಯವಾಗಿ YouTube ಚಾನಲ್‌ಗಳು) ಯುಆರ್‌ಎಲ್‌ಗಳನ್ನು ಐಟಿ ನಿಯಮಗಳ ಮೂಲಕ ನಿರ್ಬಂಧಿಸಿದೆ.

ತಪ್ಪು ಮಾಹಿತಿ ಮತ್ತು ಪ್ರೊಪಗಾಂಡದಂತಹ ವಿಚಾರಗಳಿಗೆ ಸಂಬಂಧಿಸಿದಂತೆ ಮಾಹಿತಿ ತಂತ್ರಜ್ಞಾನ ಸಚಿವಾಲಯದ ಕಾರಣಗಳಿವೆ. ಯುಎಪಿಎ ಅಡಿಯಲ್ಲಿ ನಿಷೇಧಗೊಂಡ ಸಂಸ್ಥೆಗಳ ಲಿಂಕ್‌ಗಳು ಬ್ಲಾಕ್ ಆಗಿವೆ. ಭಾರತೀಯ ಸೇನೆ, ಜಮ್ಮು ಮತ್ತು ಕಾಶ್ಮೀರ, 2021ರ ಜನರಲ್ ಬಿಪಿನ್ ರಾವತ್ ಅವರ ಸಾವಿಗೆ ಸಂಬಂಧಿಸಿದ ನಕಲಿ ಸುದ್ದಿಗಳನ್ನು ಪ್ರಸಾರ ಮಾಡಿದ ಯುಆರ್‌ಎಲ್‌ ಲಿಂಕ್‌ಗಳನ್ನು ರದ್ದು ಮಾಡಲಾಗಿದೆ.

2. ಹಕ್ಕುಸ್ವಾಮ್ಯ ಉಲ್ಲಂಘನೆಗಾಗಿ ನಿರ್ಬಂಧಿಸಲಾದ 26,024 ಯುಆರ್‌ಎಲ್‌‌ಗಳಿಗೆ ಸಂಬಂಧಿಸಿದಂತೆ, ಹೆಚ್ಚಿನ ಆದೇಶಗಳು ನ್ಯಾಯಾಲಯಗಳಿಂದ ಬಂದಿವೆ.

ಯುಎಸ್‌ ಕಾನೂನಿನ ಅಡಿಯಲ್ಲಿ ನಿರ್ಬಂಧಿಸುವಿಕೆ ಪ್ರಕ್ರಿಯೆ ನಡೆಯುತ್ತದೆ. ಏಕೆಂದರೆ ಗೂಗಲ್‌, ಮೆಟಾ (ಫೇಸ್‌ಬುಕ್‌, ಇನ್ಸ್‌ಸ್ಟಾಗ್ರಾಮ್‌, ವಾಟ್ಸ್‌ಅಪ್‌) ಮತ್ತು ಟ್ವಿಟರ್‌ ಸಂಸ್ಥೆಗಳು ಅಮೆರಿಕಾದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿವೆ. ಭಾರತವು 1928 ರಿಂದ ಬರ್ನ್ ಕನ್ವೆನ್ಷನ್‌ಗೆ ಸಹಿ ಹಾಕಿದೆ ಮತ್ತು 2018ರಲ್ಲಿ ವಿಶ್ವ ಬೌದ್ಧಿಕ ಆಸ್ತಿ ಸಂಸ್ಥೆಯ ಹಕ್ಕುಸ್ವಾಮ್ಯ ಒಪ್ಪಂದವನ್ನು ಒಪ್ಪಿಕೊಂಡಿದೆ.

3. ಒಟ್ಟು 1,065 ಯುಆರ್‌ಎಲ್‌ಗಳನ್ನು ಅಶ್ಲೀಲತೆ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಪೋನ್ರೋಗ್ರಫಿ ಕಾರಣಕ್ಕಾಗಿ ನಿರ್ಬಂಧಿಸಲಾಗಿದೆ. 2018ರಲ್ಲಿ ಉತ್ತರಾಖಂಡ ಹೈಕೋರ್ಟ್‌ನ ಆದೇಶದ ನಂತರ ಐಟಿ ಸಚಿವಾಲಯವು 857 ಯುಆರ್‌ಎಲ್‌ಗಳನ್ನು ತೆರವು ಮಾಡಿದರೆ, 238 ಅನ್ನು ಮುಂಬೈನ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ 2016 ರಲ್ಲಿ ನಿರ್ಬಂಧಿಸಿದ್ದಾರೆ.

4. ಇತರ ಕಾರಣಗಳಲ್ಲಿ- ಮಾನನಷ್ಟ, ಸಾರ್ವಜನಿಕ ಅವ್ಯವಸ್ಥೆ, ಕಾನೂನು ಮತ್ತು ಸುವ್ಯವಸ್ಥೆ, ನ್ಯಾಯಾಲಯದ ನಿಂದನೆ ಸೇರಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...