Homeಮುಖಪುಟಚೀನಾದ 'ಗ್ಲೋಬಲ್ ಟೈಮ್ಸ್', 'ಕ್ಸಿನ್ಹುವಾ', ಟರ್ಕಿಯ 'ಟಿಆರ್‌ಟಿ ವರ್ಲ್ಡ್' ಸುದ್ದಿ ಸಂಸ್ಥೆಗಳ ಎಕ್ಸ್ ಖಾತೆ ನಿರ್ಬಂಧಿಸಿದ...

ಚೀನಾದ ‘ಗ್ಲೋಬಲ್ ಟೈಮ್ಸ್’, ‘ಕ್ಸಿನ್ಹುವಾ’, ಟರ್ಕಿಯ ‘ಟಿಆರ್‌ಟಿ ವರ್ಲ್ಡ್’ ಸುದ್ದಿ ಸಂಸ್ಥೆಗಳ ಎಕ್ಸ್ ಖಾತೆ ನಿರ್ಬಂಧಿಸಿದ ಭಾರತ

- Advertisement -
- Advertisement -

ಚೀನಾದ ಸರ್ಕಾರಿ ಸ್ವಾಮ್ಯದ ಸುದ್ದಿ ಸಂಸ್ಥೆಗಳಾದ ಗ್ಲೋಬಲ್ ಟೈಮ್ಸ್ ಮತ್ತು ಕ್ಸಿನ್ಹುವಾ ಹಾಗೂ ಟರ್ಕಿಯ ಸಾರ್ವಜನಿಕ ಪ್ರಸಾರಕ ಟಿಆರ್‌ಟಿ ವರ್ಲ್ಡ್‌ನ ಎಕ್ಸ್ ಖಾತೆಗಳನ್ನು ಭಾರತ ಬುಧವಾರ ನಿರ್ಬಂಧಿಸಿದೆ. ಭಾರತ ಸರ್ಕಾರದ ಕಾನೂನು ಬೇಡಿಕೆಗಳಿಗೆ ಪ್ರತಿಕ್ರಿಯೆಯಾಗಿ ಅವರ ಖಾತೆಗಳನ್ನು ನಿರ್ಬಂಧಿಸಲಾಗಿದೆ ಎಂದು ಸಾಮಾಜಿಕ ಮಾಧ್ಯಮ ಎಕ್ಸ್‌ ಹೇಳಿದೆ.

ಗ್ಲೋಬಲ್ ಟೈಮ್ಸ್ ಎಂಬುದು ಚೀನಾದ ಕಮ್ಯುನಿಸ್ಟ್ ಪಕ್ಷದ ಒಡೆತನದ ಪೀಪಲ್ಸ್ ಡೈಲಿಗೆ ಸಂಯೋಜಿತವಾಗಿರುವ ಇಂಗ್ಲಿಷ್ ಭಾಷೆಯ ಪತ್ರಿಕೆಯಾಗಿದೆ. ಕ್ಸಿನ್ಹುವಾ ಚೀನಾದ ಸರ್ಕಾರಿ ಸ್ವಾಮ್ಯದ ಸುದ್ದಿ ಸಂಸ್ಥೆಯಾಗಿದೆ. ಟಿಆರ್‌ಟಿ ವರ್ಲ್ಡ್ ಎಂಬುದು ದೇಶದ ಸಾರ್ವಜನಿಕ ಪ್ರಸಾರಕರಾದ ಟರ್ಕಿಶ್ ರೇಡಿಯೋ ಮತ್ತು ಟೆಲಿವಿಷನ್ ಕಾರ್ಪೊರೇಷನ್ ನಿರ್ವಹಿಸುವ ಟಿವಿ ಚಾನೆಲ್ ಆಗಿದೆ. ಅದಾಗ್ಯೂ, ಸುದ್ದಿ ಸಂಸ್ಥೆಗಳನ್ನು ನಿರ್ಬಂಧಿಸಲು ಕಾರಣವೇನು ಎಂಬುದು ಸ್ಪಷ್ಟವಾಗಿಲ್ಲ.

ಮೇ 7 ರಂದು, ಭಾರತ ಆಪರೇಷನ್ ಸಿಂಧೂರವನ್ನು ಪ್ರಾರಂಭಿಸಿದ ಗಂಟೆಗಳ ನಂತರ, ಬೀಜಿಂಗ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಗ್ಲೋಬಲ್ ಟೈಮ್ಸ್‌ನ ಪೋಸ್ಟ್ ಅನ್ನು “ಆಧಾರರಹಿತ” ಎಂದು ಕರೆದು ಫ್ಯಾಕ್ಟ್‌ಚೆಕ್ ಮಾಡಿತ್ತು.

“ಹಲವಾರು ಪಾಕಿಸ್ತಾನ ಪರ ಹ್ಯಾಂಡಲ್‌ಗಳು ಆಪರೇಷನ್ ಸಿಂಧೂರ ಸಂದರ್ಭದಲ್ಲಿ ಆಧಾರರಹಿತ ಹೇಳಿಕೆಗಳನ್ನು ಹರಡುತ್ತಿದ್ದು, ಸಾರ್ವಜನಿಕರನ್ನು ದಾರಿ ತಪ್ಪಿಸಲು ಪ್ರಯತ್ನಿಸುತ್ತಿವೆ. ಮಾಧ್ಯಮ ಸಂಸ್ಥೆಗಳು ಮೂಲಗಳನ್ನು ಪರಿಶೀಲಿಸದೆ ಅಂತಹ ಮಾಹಿತಿಯನ್ನು ಹಂಚಿಕೊಂಡಾಗ, ಅದು ಜವಾಬ್ದಾರಿಯುತ ಪತ್ರಿಕೋದ್ಯಮ ನೀತಿಶಾಸ್ತ್ರದಲ್ಲಿನ ಗಂಭೀರ ಲೋಪವನ್ನು ಪ್ರತಿಬಿಂಬಿಸುತ್ತದೆ.” ಎಂದು ರಾಯಭಾರ ಕಚೇರಿ ಹೇಳಿದೆ.

ಚೀನಾದಿಂದ ಅರುಣಾಚಲ ಪ್ರದೇಶದ ಸ್ಥಳಗಳ ಮರುನಾಮಕರಣ

ಅರುಣಾಚಲ ಪ್ರದೇಶದ ಸ್ಥಳಗಳ ಮರುನಾಮಕರಣಕ್ಕೆ ಚೀನಾ ಮಾಡಿದ ಹೊಸ ಪ್ರಯತ್ನಗಳನ್ನು ಭಾರತ ಬುಧವಾರ ತಿರಸ್ಕರಿಸಿದೆ. ಇದನ್ನು “ಅಸಂಬದ್ಧ” ಪ್ರಯತ್ನ ಎಂದು ಹೇಳಿರುವ ಭಾರತ, ಈಶಾನ್ಯ ರಾಜ್ಯವು ಭಾರತದ ಅವಿಭಾಜ್ಯ ಅಂಗವಾಗಿತ್ತು, ಈಗಲೂ ಆಗಿದ್ದು ಮತ್ತು ಮುಂದೆಯೂ ಅದು ಭಾರತದ್ದೆ ಆಗಿರುತ್ತದೆ ಎಂದು ಹೇಳಿದೆ.

2024ರ ಏಪ್ರಿಲ್ ತಿಂಗಳ ವೇಳೆ ಚೀನಾ ಅರುಣಾಚಲ ಪ್ರದೇಶದ 30 ಸ್ಥಳಗಳಿಗೆ ಪ್ರಮಾಣೀಕೃತ ಹೆಸರುಗಳ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಈ ವೇಳೆ ಕೂಡಾ ಭಾರತ ಆಕ್ಷೇಪ ವ್ಯಕ್ತಪಡಿಸಿತ್ತು.

ಅದಕ್ಕೂ ಮೊದಲು ಚೀನಾದ ನಾಗರಿಕ ವ್ಯವಹಾರಗಳ ಸಚಿವಾಲಯವು 2017 ರಲ್ಲಿ ಅರುಣಾಚಲ ಪ್ರದೇಶದ ಆರು ಸ್ಥಳಗಳಿಗೆ ಪ್ರಮಾಣೀಕೃತ ಹೆಸರುಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ನಂತರ 2021 ರಲ್ಲಿ 15 ಸ್ಥಳಗಳ ಎರಡನೇ ಪಟ್ಟಿಯನ್ನು ಮತ್ತು 2023 ರಲ್ಲಿ 11 ಸ್ಥಳಗಳನ್ನು ಹೆಸರಿಸಿದ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿತ್ತು ಎಂದು ದಿ ಹಿಂದೂ ವರದಿ ಮಾಡಿದೆ.

ಚೀನಾವು ಅರುಣಾಚಲ ಪ್ರದೇಶದ ಹೆಚ್ಚಿನ ಭಾಗವು ತಮ್ಮದು ಎಂದು ವಾದಿಸುತ್ತದೆ. ಅದು ರಾಜ್ಯವನ್ನು “ದಕ್ಷಿಣ ಟಿಬೆಟ್” ಎಂದು ಹೇಳಿಕೊಳ್ಳುತ್ತದೆ. ಅದಾಗ್ಯೂ, ಭಾರತ ಈ ಪ್ರತಿಪಾದನೆಗಳನ್ನು ತಿರಸ್ಕರಿಸಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ವ್ಯರ್ಥ, ಅಸಂಬದ್ಧ ಪ್ರಯತ್ನ’: ಅರುಣಾಚಲ ಪ್ರದೇಶದ ಸ್ಥಳಗಳ ಮರುನಾಮಕರಣಕ್ಕೆ ಮುಂದಾದ ಚೀನಾಗೆ ಭಾರತ ಪ್ರತಿಕ್ರಿಯೆ

‘ವ್ಯರ್ಥ, ಅಸಂಬದ್ಧ ಪ್ರಯತ್ನ’: ಅರುಣಾಚಲ ಪ್ರದೇಶದ ಸ್ಥಳಗಳ ಮರುನಾಮಕರಣಕ್ಕೆ ಮುಂದಾದ ಚೀನಾಗೆ ಭಾರತ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...