Homeಮುಖಪುಟಚೀನಾದ 'ಗ್ಲೋಬಲ್ ಟೈಮ್ಸ್', 'ಕ್ಸಿನ್ಹುವಾ', ಟರ್ಕಿಯ 'ಟಿಆರ್‌ಟಿ ವರ್ಲ್ಡ್' ಸುದ್ದಿ ಸಂಸ್ಥೆಗಳ ಎಕ್ಸ್ ಖಾತೆ ನಿರ್ಬಂಧಿಸಿದ...

ಚೀನಾದ ‘ಗ್ಲೋಬಲ್ ಟೈಮ್ಸ್’, ‘ಕ್ಸಿನ್ಹುವಾ’, ಟರ್ಕಿಯ ‘ಟಿಆರ್‌ಟಿ ವರ್ಲ್ಡ್’ ಸುದ್ದಿ ಸಂಸ್ಥೆಗಳ ಎಕ್ಸ್ ಖಾತೆ ನಿರ್ಬಂಧಿಸಿದ ಭಾರತ

- Advertisement -
- Advertisement -

ಚೀನಾದ ಸರ್ಕಾರಿ ಸ್ವಾಮ್ಯದ ಸುದ್ದಿ ಸಂಸ್ಥೆಗಳಾದ ಗ್ಲೋಬಲ್ ಟೈಮ್ಸ್ ಮತ್ತು ಕ್ಸಿನ್ಹುವಾ ಹಾಗೂ ಟರ್ಕಿಯ ಸಾರ್ವಜನಿಕ ಪ್ರಸಾರಕ ಟಿಆರ್‌ಟಿ ವರ್ಲ್ಡ್‌ನ ಎಕ್ಸ್ ಖಾತೆಗಳನ್ನು ಭಾರತ ಬುಧವಾರ ನಿರ್ಬಂಧಿಸಿದೆ. ಭಾರತ ಸರ್ಕಾರದ ಕಾನೂನು ಬೇಡಿಕೆಗಳಿಗೆ ಪ್ರತಿಕ್ರಿಯೆಯಾಗಿ ಅವರ ಖಾತೆಗಳನ್ನು ನಿರ್ಬಂಧಿಸಲಾಗಿದೆ ಎಂದು ಸಾಮಾಜಿಕ ಮಾಧ್ಯಮ ಎಕ್ಸ್‌ ಹೇಳಿದೆ.

ಗ್ಲೋಬಲ್ ಟೈಮ್ಸ್ ಎಂಬುದು ಚೀನಾದ ಕಮ್ಯುನಿಸ್ಟ್ ಪಕ್ಷದ ಒಡೆತನದ ಪೀಪಲ್ಸ್ ಡೈಲಿಗೆ ಸಂಯೋಜಿತವಾಗಿರುವ ಇಂಗ್ಲಿಷ್ ಭಾಷೆಯ ಪತ್ರಿಕೆಯಾಗಿದೆ. ಕ್ಸಿನ್ಹುವಾ ಚೀನಾದ ಸರ್ಕಾರಿ ಸ್ವಾಮ್ಯದ ಸುದ್ದಿ ಸಂಸ್ಥೆಯಾಗಿದೆ. ಟಿಆರ್‌ಟಿ ವರ್ಲ್ಡ್ ಎಂಬುದು ದೇಶದ ಸಾರ್ವಜನಿಕ ಪ್ರಸಾರಕರಾದ ಟರ್ಕಿಶ್ ರೇಡಿಯೋ ಮತ್ತು ಟೆಲಿವಿಷನ್ ಕಾರ್ಪೊರೇಷನ್ ನಿರ್ವಹಿಸುವ ಟಿವಿ ಚಾನೆಲ್ ಆಗಿದೆ. ಅದಾಗ್ಯೂ, ಸುದ್ದಿ ಸಂಸ್ಥೆಗಳನ್ನು ನಿರ್ಬಂಧಿಸಲು ಕಾರಣವೇನು ಎಂಬುದು ಸ್ಪಷ್ಟವಾಗಿಲ್ಲ.

ಮೇ 7 ರಂದು, ಭಾರತ ಆಪರೇಷನ್ ಸಿಂಧೂರವನ್ನು ಪ್ರಾರಂಭಿಸಿದ ಗಂಟೆಗಳ ನಂತರ, ಬೀಜಿಂಗ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಗ್ಲೋಬಲ್ ಟೈಮ್ಸ್‌ನ ಪೋಸ್ಟ್ ಅನ್ನು “ಆಧಾರರಹಿತ” ಎಂದು ಕರೆದು ಫ್ಯಾಕ್ಟ್‌ಚೆಕ್ ಮಾಡಿತ್ತು.

“ಹಲವಾರು ಪಾಕಿಸ್ತಾನ ಪರ ಹ್ಯಾಂಡಲ್‌ಗಳು ಆಪರೇಷನ್ ಸಿಂಧೂರ ಸಂದರ್ಭದಲ್ಲಿ ಆಧಾರರಹಿತ ಹೇಳಿಕೆಗಳನ್ನು ಹರಡುತ್ತಿದ್ದು, ಸಾರ್ವಜನಿಕರನ್ನು ದಾರಿ ತಪ್ಪಿಸಲು ಪ್ರಯತ್ನಿಸುತ್ತಿವೆ. ಮಾಧ್ಯಮ ಸಂಸ್ಥೆಗಳು ಮೂಲಗಳನ್ನು ಪರಿಶೀಲಿಸದೆ ಅಂತಹ ಮಾಹಿತಿಯನ್ನು ಹಂಚಿಕೊಂಡಾಗ, ಅದು ಜವಾಬ್ದಾರಿಯುತ ಪತ್ರಿಕೋದ್ಯಮ ನೀತಿಶಾಸ್ತ್ರದಲ್ಲಿನ ಗಂಭೀರ ಲೋಪವನ್ನು ಪ್ರತಿಬಿಂಬಿಸುತ್ತದೆ.” ಎಂದು ರಾಯಭಾರ ಕಚೇರಿ ಹೇಳಿದೆ.

ಚೀನಾದಿಂದ ಅರುಣಾಚಲ ಪ್ರದೇಶದ ಸ್ಥಳಗಳ ಮರುನಾಮಕರಣ

ಅರುಣಾಚಲ ಪ್ರದೇಶದ ಸ್ಥಳಗಳ ಮರುನಾಮಕರಣಕ್ಕೆ ಚೀನಾ ಮಾಡಿದ ಹೊಸ ಪ್ರಯತ್ನಗಳನ್ನು ಭಾರತ ಬುಧವಾರ ತಿರಸ್ಕರಿಸಿದೆ. ಇದನ್ನು “ಅಸಂಬದ್ಧ” ಪ್ರಯತ್ನ ಎಂದು ಹೇಳಿರುವ ಭಾರತ, ಈಶಾನ್ಯ ರಾಜ್ಯವು ಭಾರತದ ಅವಿಭಾಜ್ಯ ಅಂಗವಾಗಿತ್ತು, ಈಗಲೂ ಆಗಿದ್ದು ಮತ್ತು ಮುಂದೆಯೂ ಅದು ಭಾರತದ್ದೆ ಆಗಿರುತ್ತದೆ ಎಂದು ಹೇಳಿದೆ.

2024ರ ಏಪ್ರಿಲ್ ತಿಂಗಳ ವೇಳೆ ಚೀನಾ ಅರುಣಾಚಲ ಪ್ರದೇಶದ 30 ಸ್ಥಳಗಳಿಗೆ ಪ್ರಮಾಣೀಕೃತ ಹೆಸರುಗಳ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಈ ವೇಳೆ ಕೂಡಾ ಭಾರತ ಆಕ್ಷೇಪ ವ್ಯಕ್ತಪಡಿಸಿತ್ತು.

ಅದಕ್ಕೂ ಮೊದಲು ಚೀನಾದ ನಾಗರಿಕ ವ್ಯವಹಾರಗಳ ಸಚಿವಾಲಯವು 2017 ರಲ್ಲಿ ಅರುಣಾಚಲ ಪ್ರದೇಶದ ಆರು ಸ್ಥಳಗಳಿಗೆ ಪ್ರಮಾಣೀಕೃತ ಹೆಸರುಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ನಂತರ 2021 ರಲ್ಲಿ 15 ಸ್ಥಳಗಳ ಎರಡನೇ ಪಟ್ಟಿಯನ್ನು ಮತ್ತು 2023 ರಲ್ಲಿ 11 ಸ್ಥಳಗಳನ್ನು ಹೆಸರಿಸಿದ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿತ್ತು ಎಂದು ದಿ ಹಿಂದೂ ವರದಿ ಮಾಡಿದೆ.

ಚೀನಾವು ಅರುಣಾಚಲ ಪ್ರದೇಶದ ಹೆಚ್ಚಿನ ಭಾಗವು ತಮ್ಮದು ಎಂದು ವಾದಿಸುತ್ತದೆ. ಅದು ರಾಜ್ಯವನ್ನು “ದಕ್ಷಿಣ ಟಿಬೆಟ್” ಎಂದು ಹೇಳಿಕೊಳ್ಳುತ್ತದೆ. ಅದಾಗ್ಯೂ, ಭಾರತ ಈ ಪ್ರತಿಪಾದನೆಗಳನ್ನು ತಿರಸ್ಕರಿಸಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ವ್ಯರ್ಥ, ಅಸಂಬದ್ಧ ಪ್ರಯತ್ನ’: ಅರುಣಾಚಲ ಪ್ರದೇಶದ ಸ್ಥಳಗಳ ಮರುನಾಮಕರಣಕ್ಕೆ ಮುಂದಾದ ಚೀನಾಗೆ ಭಾರತ ಪ್ರತಿಕ್ರಿಯೆ

‘ವ್ಯರ್ಥ, ಅಸಂಬದ್ಧ ಪ್ರಯತ್ನ’: ಅರುಣಾಚಲ ಪ್ರದೇಶದ ಸ್ಥಳಗಳ ಮರುನಾಮಕರಣಕ್ಕೆ ಮುಂದಾದ ಚೀನಾಗೆ ಭಾರತ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...