Homeಮುಖಪುಟಚೀನಾದ 'ಗ್ಲೋಬಲ್ ಟೈಮ್ಸ್', 'ಕ್ಸಿನ್ಹುವಾ', ಟರ್ಕಿಯ 'ಟಿಆರ್‌ಟಿ ವರ್ಲ್ಡ್' ಸುದ್ದಿ ಸಂಸ್ಥೆಗಳ ಎಕ್ಸ್ ಖಾತೆ ನಿರ್ಬಂಧಿಸಿದ...

ಚೀನಾದ ‘ಗ್ಲೋಬಲ್ ಟೈಮ್ಸ್’, ‘ಕ್ಸಿನ್ಹುವಾ’, ಟರ್ಕಿಯ ‘ಟಿಆರ್‌ಟಿ ವರ್ಲ್ಡ್’ ಸುದ್ದಿ ಸಂಸ್ಥೆಗಳ ಎಕ್ಸ್ ಖಾತೆ ನಿರ್ಬಂಧಿಸಿದ ಭಾರತ

- Advertisement -
- Advertisement -

ಚೀನಾದ ಸರ್ಕಾರಿ ಸ್ವಾಮ್ಯದ ಸುದ್ದಿ ಸಂಸ್ಥೆಗಳಾದ ಗ್ಲೋಬಲ್ ಟೈಮ್ಸ್ ಮತ್ತು ಕ್ಸಿನ್ಹುವಾ ಹಾಗೂ ಟರ್ಕಿಯ ಸಾರ್ವಜನಿಕ ಪ್ರಸಾರಕ ಟಿಆರ್‌ಟಿ ವರ್ಲ್ಡ್‌ನ ಎಕ್ಸ್ ಖಾತೆಗಳನ್ನು ಭಾರತ ಬುಧವಾರ ನಿರ್ಬಂಧಿಸಿದೆ. ಭಾರತ ಸರ್ಕಾರದ ಕಾನೂನು ಬೇಡಿಕೆಗಳಿಗೆ ಪ್ರತಿಕ್ರಿಯೆಯಾಗಿ ಅವರ ಖಾತೆಗಳನ್ನು ನಿರ್ಬಂಧಿಸಲಾಗಿದೆ ಎಂದು ಸಾಮಾಜಿಕ ಮಾಧ್ಯಮ ಎಕ್ಸ್‌ ಹೇಳಿದೆ.

ಗ್ಲೋಬಲ್ ಟೈಮ್ಸ್ ಎಂಬುದು ಚೀನಾದ ಕಮ್ಯುನಿಸ್ಟ್ ಪಕ್ಷದ ಒಡೆತನದ ಪೀಪಲ್ಸ್ ಡೈಲಿಗೆ ಸಂಯೋಜಿತವಾಗಿರುವ ಇಂಗ್ಲಿಷ್ ಭಾಷೆಯ ಪತ್ರಿಕೆಯಾಗಿದೆ. ಕ್ಸಿನ್ಹುವಾ ಚೀನಾದ ಸರ್ಕಾರಿ ಸ್ವಾಮ್ಯದ ಸುದ್ದಿ ಸಂಸ್ಥೆಯಾಗಿದೆ. ಟಿಆರ್‌ಟಿ ವರ್ಲ್ಡ್ ಎಂಬುದು ದೇಶದ ಸಾರ್ವಜನಿಕ ಪ್ರಸಾರಕರಾದ ಟರ್ಕಿಶ್ ರೇಡಿಯೋ ಮತ್ತು ಟೆಲಿವಿಷನ್ ಕಾರ್ಪೊರೇಷನ್ ನಿರ್ವಹಿಸುವ ಟಿವಿ ಚಾನೆಲ್ ಆಗಿದೆ. ಅದಾಗ್ಯೂ, ಸುದ್ದಿ ಸಂಸ್ಥೆಗಳನ್ನು ನಿರ್ಬಂಧಿಸಲು ಕಾರಣವೇನು ಎಂಬುದು ಸ್ಪಷ್ಟವಾಗಿಲ್ಲ.

ಮೇ 7 ರಂದು, ಭಾರತ ಆಪರೇಷನ್ ಸಿಂಧೂರವನ್ನು ಪ್ರಾರಂಭಿಸಿದ ಗಂಟೆಗಳ ನಂತರ, ಬೀಜಿಂಗ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಗ್ಲೋಬಲ್ ಟೈಮ್ಸ್‌ನ ಪೋಸ್ಟ್ ಅನ್ನು “ಆಧಾರರಹಿತ” ಎಂದು ಕರೆದು ಫ್ಯಾಕ್ಟ್‌ಚೆಕ್ ಮಾಡಿತ್ತು.

“ಹಲವಾರು ಪಾಕಿಸ್ತಾನ ಪರ ಹ್ಯಾಂಡಲ್‌ಗಳು ಆಪರೇಷನ್ ಸಿಂಧೂರ ಸಂದರ್ಭದಲ್ಲಿ ಆಧಾರರಹಿತ ಹೇಳಿಕೆಗಳನ್ನು ಹರಡುತ್ತಿದ್ದು, ಸಾರ್ವಜನಿಕರನ್ನು ದಾರಿ ತಪ್ಪಿಸಲು ಪ್ರಯತ್ನಿಸುತ್ತಿವೆ. ಮಾಧ್ಯಮ ಸಂಸ್ಥೆಗಳು ಮೂಲಗಳನ್ನು ಪರಿಶೀಲಿಸದೆ ಅಂತಹ ಮಾಹಿತಿಯನ್ನು ಹಂಚಿಕೊಂಡಾಗ, ಅದು ಜವಾಬ್ದಾರಿಯುತ ಪತ್ರಿಕೋದ್ಯಮ ನೀತಿಶಾಸ್ತ್ರದಲ್ಲಿನ ಗಂಭೀರ ಲೋಪವನ್ನು ಪ್ರತಿಬಿಂಬಿಸುತ್ತದೆ.” ಎಂದು ರಾಯಭಾರ ಕಚೇರಿ ಹೇಳಿದೆ.

ಚೀನಾದಿಂದ ಅರುಣಾಚಲ ಪ್ರದೇಶದ ಸ್ಥಳಗಳ ಮರುನಾಮಕರಣ

ಅರುಣಾಚಲ ಪ್ರದೇಶದ ಸ್ಥಳಗಳ ಮರುನಾಮಕರಣಕ್ಕೆ ಚೀನಾ ಮಾಡಿದ ಹೊಸ ಪ್ರಯತ್ನಗಳನ್ನು ಭಾರತ ಬುಧವಾರ ತಿರಸ್ಕರಿಸಿದೆ. ಇದನ್ನು “ಅಸಂಬದ್ಧ” ಪ್ರಯತ್ನ ಎಂದು ಹೇಳಿರುವ ಭಾರತ, ಈಶಾನ್ಯ ರಾಜ್ಯವು ಭಾರತದ ಅವಿಭಾಜ್ಯ ಅಂಗವಾಗಿತ್ತು, ಈಗಲೂ ಆಗಿದ್ದು ಮತ್ತು ಮುಂದೆಯೂ ಅದು ಭಾರತದ್ದೆ ಆಗಿರುತ್ತದೆ ಎಂದು ಹೇಳಿದೆ.

2024ರ ಏಪ್ರಿಲ್ ತಿಂಗಳ ವೇಳೆ ಚೀನಾ ಅರುಣಾಚಲ ಪ್ರದೇಶದ 30 ಸ್ಥಳಗಳಿಗೆ ಪ್ರಮಾಣೀಕೃತ ಹೆಸರುಗಳ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಈ ವೇಳೆ ಕೂಡಾ ಭಾರತ ಆಕ್ಷೇಪ ವ್ಯಕ್ತಪಡಿಸಿತ್ತು.

ಅದಕ್ಕೂ ಮೊದಲು ಚೀನಾದ ನಾಗರಿಕ ವ್ಯವಹಾರಗಳ ಸಚಿವಾಲಯವು 2017 ರಲ್ಲಿ ಅರುಣಾಚಲ ಪ್ರದೇಶದ ಆರು ಸ್ಥಳಗಳಿಗೆ ಪ್ರಮಾಣೀಕೃತ ಹೆಸರುಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ನಂತರ 2021 ರಲ್ಲಿ 15 ಸ್ಥಳಗಳ ಎರಡನೇ ಪಟ್ಟಿಯನ್ನು ಮತ್ತು 2023 ರಲ್ಲಿ 11 ಸ್ಥಳಗಳನ್ನು ಹೆಸರಿಸಿದ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿತ್ತು ಎಂದು ದಿ ಹಿಂದೂ ವರದಿ ಮಾಡಿದೆ.

ಚೀನಾವು ಅರುಣಾಚಲ ಪ್ರದೇಶದ ಹೆಚ್ಚಿನ ಭಾಗವು ತಮ್ಮದು ಎಂದು ವಾದಿಸುತ್ತದೆ. ಅದು ರಾಜ್ಯವನ್ನು “ದಕ್ಷಿಣ ಟಿಬೆಟ್” ಎಂದು ಹೇಳಿಕೊಳ್ಳುತ್ತದೆ. ಅದಾಗ್ಯೂ, ಭಾರತ ಈ ಪ್ರತಿಪಾದನೆಗಳನ್ನು ತಿರಸ್ಕರಿಸಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ‘ವ್ಯರ್ಥ, ಅಸಂಬದ್ಧ ಪ್ರಯತ್ನ’: ಅರುಣಾಚಲ ಪ್ರದೇಶದ ಸ್ಥಳಗಳ ಮರುನಾಮಕರಣಕ್ಕೆ ಮುಂದಾದ ಚೀನಾಗೆ ಭಾರತ ಪ್ರತಿಕ್ರಿಯೆ

‘ವ್ಯರ್ಥ, ಅಸಂಬದ್ಧ ಪ್ರಯತ್ನ’: ಅರುಣಾಚಲ ಪ್ರದೇಶದ ಸ್ಥಳಗಳ ಮರುನಾಮಕರಣಕ್ಕೆ ಮುಂದಾದ ಚೀನಾಗೆ ಭಾರತ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...