Homeಅಂತರಾಷ್ಟ್ರೀಯಭಾರತ, ಬ್ರಿಟನ್‌ನ ಹೊಸ ರೂಪಾಂತರಿ ಕೊರೋನಾ ವೈರಸ್‌ ಗಾಳಿಯಲ್ಲಿ ಅತಿ ಬೇಗ ಹರಡಬಲ್ಲದು: ವಿಯೆಟ್ನಾಮ್‌

ಭಾರತ, ಬ್ರಿಟನ್‌ನ ಹೊಸ ರೂಪಾಂತರಿ ಕೊರೋನಾ ವೈರಸ್‌ ಗಾಳಿಯಲ್ಲಿ ಅತಿ ಬೇಗ ಹರಡಬಲ್ಲದು: ವಿಯೆಟ್ನಾಮ್‌

- Advertisement -
- Advertisement -

ಭಾರತ ಮತ್ತು ಬ್ರಿಟನ್‌ನಲ್ಲಿ ಪತ್ತೆಯಾಗಿರುವ ಹೊಸ ರೂಪಾಂತರಿ ಕೊರೋನಾ ವೈರೈಸ್‌ ಈಗ ವಿಯೆಟ್ನಾಂ ದೇಶದಲ್ಲೂ ಕಾಣಿಸಿಕೊಂಡಿದೆ. ಈ ಮಾದರಿಯ ವೈರಸ್‌ಗಳು ಗಾಳಿಯಲ್ಲಿ ಅತಿ ಶೀಘ್ರವಾಗಿ ಹರಡಬಲ್ಲದು ಎಂದು ವಿಯೆಟ್ನಾಂ ತನ್ನ ಸಂಶೋಧನೆಯ ಮೂಲಕ ತಿಳಿಸಿದೆ. ಗಂಟಲ ದ್ರವದಲ್ಲಿ ಸೇರಿರುವ ಹೊಸ ರೂಪಾಂತರಿ ವೈರಸ್‌ ಶೀಘ್ರವಾಗಿ ಸುತ್ತಲಿನ ವಾತಾವರಣಕ್ಕೆ ಹರಡುವ ಶಕ್ತಿ ಹೊಂದಿದೆ ಎಂದು ಹೇಳಿದೆ.

ವಿಯೆಟ್ನಾಂ ದೇಶದಲ್ಲಿ ಇದುವರೆಗೆ 6800 ಜನರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು 47 ಜನರು ಈ ವೈರಸ್‌ ಗೆ ಬಲಿಯಾಗಿದ್ದಾರೆ ಎಂದು ವಿಯೆಟ್ನಾಂ ಸರ್ಕಾರ ತಿಳಿಸಿದೆ. ವಿಯೆಟ್ನಾಂ ನಲ್ಲಿ ಇದು ವರೆಗೆ 10 ಲಕ್ಷ ಜನರಿಗೆ ಕೋವಿಡ್‌ ವ್ಯಾಕ್ಸಿನ್‌ ನೀಡಲಾಗಿದೆ ಎಂದು ಅಲ್ಲಿನ ಸರ್ಕಾರ ತಿಳಿಸಿದೆ.

ಬ್ರಿಟನ್‌ ಮತ್ತು ಭಾರತದಲ್ಲಿ ರೂಪಾಂತರಗೊಂಡ ಹೊಸ ಕೋರೋನಾ ವೈರಸ್‌ ತಳಿ ವಿಯೆಟ್ನಾಂ ನಲ್ಲಿ ತೀವ್ರವಾಗಿ ಹರಡುತ್ತಿದೆ ಇದೆ ಎಂದು ವಿಯೆಟ್ನಾಂ ಆರೋಗ್ಯ ಸಚಿವಾಲಯ ತಿಳಿಸಿದೆ. ಕೊರೋನಾ ಎರಡನೇಯ ಅಲೆಯ ಸಂದರ್ಭದಲ್ಲಿ ವಿಯೆಟ್ನಾಂ ನ ಅರ್ಧದಷ್ಟು ಭಾಗಕ್ಕೆ ಕೊರೋನಾ ವೈರಸ್‌ ಹರಡಿದೆ. ಹನೋಯಿ ಮತ್ತು ಹೋ ಚಿನ್‌ ಮಿನ್ಹ್‌ ನಂತಹ ಕೈಗಾರಿಕಾ ನಗರಗಳಲ್ಲಿ ಕೊರೋನಾ ಹೊಸ ರೂಪಾಂತರಿ ತಳಿ ವೈರಸ್‌ ತೀವ್ರವಾಗಿ ಹರಡುತ್ತಿದೆ. ಕೊರೋನಾ ಸೋಂಕಿನ ಹರಡುವಿಕೆ ಕಳೆದ ವರ್ಷಕ್ಕಿಂತ ಈ ವರ್ಷ ತೀವ್ರವಾಗಿದೆ ಎಂದು ವಿಯೆಟ್ನಾಂ ಸರ್ಕಾರ ತಿಳಿಸಿದೆ.

ನಾವು ಭಾರತ ಮತ್ತು ಬ್ರಿಟನ್‌ ನಲ್ಲಿ ಮೊತ್ತ ಮೊದಲಿಗೆ ಕಾಣಿಸಿಕೊಂಡ ಕೊರೋನಾ ಹೊಸ ರೂಪಾಂತರಿಯನ್ನು ವಿಯಾಟ್ನಾಂ ನಲ್ಲಿಯೂ ಪತ್ತೆ ಹಚ್ಚಿದ್ದೇವೆ. ಗಂಟಲುದ್ರವದಲ್ಲಿ ಸೇರಿರುವ ಈ ಹೊಸ ತಳಿ ವೈರಸ್‌ಗಳು ಅತ್ಯಂತ ಶೀಘ್ರವಾಗಿ ಮತ್ತು ತೀವ್ರ ಸ್ವರೂಪದಲ್ಲಿ ಗಾಳಿಯ ಮೂಲಕ ಸುತ್ತಲಿನ ಪರಿಸರಕ್ಕೆ ಹರಡುತ್ತಿರುವುದನ್ನು ಕಂಡುಕೊಂಡಿದ್ದೇವೆ ಎಂದು ವಿಯೆಟ್ನಾಂ ಆರೋಗ್ಯ ಸಚಿವ ನುಗುಯೆನ್‌ ಥಾನ್‌ ಲಾಂಗ್‌ ಶನಿವಾರ ಅಲ್ಲಿನ ಮಾಧ್ಯಮಗಳಿಗೆ ತಿಳಿಸಿದ್ದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ವಿಯೆಟ್ನಾಂನ ವಿಜ್ಞಾನಿಗಳು ಇತ್ತೀಚೆಗೆ ಪರೀಕ್ಷಿಸಲಾದ 32 ಜನರಲ್ಲಿ 4 ಜನರಲ್ಲಿ ಹೊಸ ರೂಪಾಂತರಿ ಕೊರೋನಾ ವೈರಸ್‌ ಅಂಶಗಳು ಕಂಡುಬಂದಿವೆ ಎಂದು ತಿಳಿಸಿದೆ.
ವಿಯೇಟ್ನಾಂ ಆರೋಗ್ಯ ಮಂತ್ರಿ ಶನಿವಾರ ಮೇ 29 ರಂದು ಹೊಸ ತಳಿಯನ್ನು ಘೋಷಿಸುವ ಮೊದಲು ಇದುವರೆಗೆ ಏಳು ಮಾದರಿಯ ಕೊರೋನಾ ರೂಪಾಂತರಿ ತಳಿಗಳು ವಿಯೆಟ್ನಾಂ ನಲ್ಲಿ ಕಂಡುಬಂದಿದ್ದವು ಎಂದು ಹೇಳಲಾಗಿದೆ.

ಈ ಹಿಂದೆ ವಿಯೆಟ್ನಾಂ ಸರ್ಕಾರದ ಕೊರೋನಾ ನಿರ್ವಹಣೆಯ ಕುರಿತು ಜಗತ್ತಿನಾದ್ಯಂತ ಮೆಚ್ಚುಗೆಗಳು ಕೇಳಿ ಬಂದಿದ್ದವು. ಸೋಂಕಿತರ ಪತ್ತೆ ಮತ್ತು ಮಾಸ್‌ ಕ್ವಾರಂಟೈನ್‌ನಿಂದಾಗಿ ವಿಯೆಟ್ನಾಂ ನಲ್ಲಿ ಸೋಕಿಂಗೆ ತುತ್ತಾಗುವವರ ಶೇಕಡಾ ಪ್ರಮಾಣ ಅತ್ಯಂತ ಕಡಿಮೆಯಾಗಿತ್ತು.

ಹೊಸ ಮಾದರಿಯ ಕೊರೋನಾ ರೂಪಾಂತರಿ ತಳಿ ಮತ್ತು ಕೊರೋನಾ ಎರಡನೆ ಅಲೆಯು ವಿಯೆಟ್ನಾಂ ಸರ್ಕಾರ ಮತ್ತು ಜನರಲ್ಲಿ ಭೀತಿಯನ್ನು ಹುಟ್ಟಿಸಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಅಲ್ಲಿನ ಸರ್ಕಾರ ಜನರ ಓಡಾಟದ ಮೇಲೆ ನಿರ್ಭಂದವನ್ನು ಹೇರಿದ್ದು ಹೊಟೇಲ್‌, ರೆಸ್ಟೋರೆಂಟ್, ಶಾಲಾ ಕಾಲೇಜು ಮತ್ತು ಇತರ ವಾಣಿಜ್ಯ, ಶೈಕ್ಷಣಿಕ, ಸಾಂಸ್ಕೃತಿಕ ಚಟುವಟಿಕೆಗಳನ್ನು ಅಲ್ಲಿನ ಸರ್ಕಾರ ನಿಷೇಧಿಸಿದೆ.

ವಿಯೆಟ್ನಾಂ ಸರಿಸುಮಾರು 9.7 ಕೋಟಿ ಜನಸಂಖ್ಯೆಯನ್ನು ಹೊಂದಿದೆ. ಇವರಲ್ಲಿ 10 ಲಕ್ಷ ಜನರಿಗೆ ಕೊರೋನಾ ಲಸಿಕೆಯನ್ನು ನೀಡಲಾಗಿದೆ. ಈ ದೇಶದ ಅಂತ್ಯಕ್ಕೆ ಕೊರೋನಾ ವ್ಯಾಕ್ಸಿನೇಷನ್ ಪ್ರಕ್ರಿಯೆಯನ್ನು ಸಂಪೂರ್ಣಗೊಳಿಸುವ ಗುರಿಯನ್ನು ಅಲ್ಲಿನ ಸರ್ಕಾರ ಇಟ್ಟುಕೊಂಡಿದೆ.

ವಿಯೆಟ್ನಾಂ ಸರ್ಕಾರ ಉದ್ಯಮಿಗಳು ಮತ್ತು ಇತರ ಶ್ರೀಮಂತರಲ್ಲಿ ಕೊರೋನಾ ನಿರ್ವಹಣೆಗೆ ತಮ್ಮ ಕೊಡುಗೆಗಳನ್ನು ನೀಡುವಂತೆ ಮನವಿ ಮಾಡಿಕೊಂಡಿದೆ.

ವಿಯೆಟ್ನಾಂ ಗೆ ಅತ್ಯಂತ ಸಮೀಪದಲ್ಲಿರುವ ಥಾಯ್ಲೆಂಡ್‌ ನಲ್ಲಿ ಕೊರೋನಾ ಹೊಸ ರೂಪಾಂತರಿ ತಳಿ ವೈರಸ್‌ಗಳು ಕಾಣಿಸಿಕೊಂಡಿವೆ. ಥಾಯ್ಲೆಂಡ್‌ ಸರ್ಕಾರ ಶನಿವಾರ ಸುದ್ದಿಗೋಷ್ಠಿಯನ್ನು ನಡೆಸಿ ಹೊಸ ತಳಿಯ ವೈರಸ್ ಅನ್ನು ಮಾಧ್ಯಮಗಳು ʼಥಾಯ್‌ ವೇರಿಯೆಂಟ್‌ʼ ಎಂದು ಬಿಂಬಿಸುತ್ತಿರುವುದನ್ನು ವ್ಯಾಪಕವಾಗಿ ಖಂಡಿಸಿದೆ. ಈ ರೀತಿಯ ಆಧಾರ ರಹಿತವಾದ ಸುದ್ದಿ ಅಪಪ್ರಚಾರಗಳನ್ನು ನಿಲ್ಲಿಸುವಂತೆ ಮಾಧ್ಯಮಗಳಲ್ಲಿ ಥಾಯ್ಲೆಂಡ್‌ ಸರ್ಕಾರ ಮನವಿಯನ್ನು ಮಾಡಿಕೊಂಡಿದೆ.

ಚರ್ಚೆಯಾಗುತ್ತಿರುವ ಹೊಸ ಕೊರೋನಾ ರೂಪಾಂತರಿ ತಳಿ ಮೊಟ್ಟಮೊದಲ ಬಾರಿಗೆ ಥಾಯ್ಲೆಂಡಿನಲ್ಲಿ 33 ವರ್ಷದ ಈಜಿಪ್ಟ್‌ ದೇಶದ ಪ್ರವಾಸಿಯೊಬ್ಬರಲ್ಲಿ ಕಾಣಿಸಿಕೊಂಡಿತ್ತು. ನಂತರ ಬ್ರಿಟನ್‌ ನಲ್ಲಿ ಈ ಹೊಸ ರೂಪಾಂತರಿ ಕೊರೋನಾ ವೈರಸ್‌ ಸಂಬಂಧಿಸಿದ 109 ಪ್ರಕರಣಗಳು ವರದಿಯಾಗಿವೆ ಎಂದು ಬ್ರಿಟನ್‌ ದೇಶದ ಅಧಿಕಾರಿಗಳು ತಿಳಿಸಿವೆ.


ಇದನ್ನೂ ಓದಿ: ಖಾಸಗಿ ಆಸ್ಪತ್ರೆಗಳು ಹೊಟೇಲ್‌ಗಳ ಜೊತೆ ಸೇರಿ ಲಸಿಕೆ ಪ್ಯಾಕೇಜ್ ನೀಡುವಂತಿಲ್ಲ: ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...