Homeಅಂತರಾಷ್ಟ್ರೀಯಭಾರತ, ಬ್ರಿಟನ್‌ನ ಹೊಸ ರೂಪಾಂತರಿ ಕೊರೋನಾ ವೈರಸ್‌ ಗಾಳಿಯಲ್ಲಿ ಅತಿ ಬೇಗ ಹರಡಬಲ್ಲದು: ವಿಯೆಟ್ನಾಮ್‌

ಭಾರತ, ಬ್ರಿಟನ್‌ನ ಹೊಸ ರೂಪಾಂತರಿ ಕೊರೋನಾ ವೈರಸ್‌ ಗಾಳಿಯಲ್ಲಿ ಅತಿ ಬೇಗ ಹರಡಬಲ್ಲದು: ವಿಯೆಟ್ನಾಮ್‌

- Advertisement -
- Advertisement -

ಭಾರತ ಮತ್ತು ಬ್ರಿಟನ್‌ನಲ್ಲಿ ಪತ್ತೆಯಾಗಿರುವ ಹೊಸ ರೂಪಾಂತರಿ ಕೊರೋನಾ ವೈರೈಸ್‌ ಈಗ ವಿಯೆಟ್ನಾಂ ದೇಶದಲ್ಲೂ ಕಾಣಿಸಿಕೊಂಡಿದೆ. ಈ ಮಾದರಿಯ ವೈರಸ್‌ಗಳು ಗಾಳಿಯಲ್ಲಿ ಅತಿ ಶೀಘ್ರವಾಗಿ ಹರಡಬಲ್ಲದು ಎಂದು ವಿಯೆಟ್ನಾಂ ತನ್ನ ಸಂಶೋಧನೆಯ ಮೂಲಕ ತಿಳಿಸಿದೆ. ಗಂಟಲ ದ್ರವದಲ್ಲಿ ಸೇರಿರುವ ಹೊಸ ರೂಪಾಂತರಿ ವೈರಸ್‌ ಶೀಘ್ರವಾಗಿ ಸುತ್ತಲಿನ ವಾತಾವರಣಕ್ಕೆ ಹರಡುವ ಶಕ್ತಿ ಹೊಂದಿದೆ ಎಂದು ಹೇಳಿದೆ.

ವಿಯೆಟ್ನಾಂ ದೇಶದಲ್ಲಿ ಇದುವರೆಗೆ 6800 ಜನರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು 47 ಜನರು ಈ ವೈರಸ್‌ ಗೆ ಬಲಿಯಾಗಿದ್ದಾರೆ ಎಂದು ವಿಯೆಟ್ನಾಂ ಸರ್ಕಾರ ತಿಳಿಸಿದೆ. ವಿಯೆಟ್ನಾಂ ನಲ್ಲಿ ಇದು ವರೆಗೆ 10 ಲಕ್ಷ ಜನರಿಗೆ ಕೋವಿಡ್‌ ವ್ಯಾಕ್ಸಿನ್‌ ನೀಡಲಾಗಿದೆ ಎಂದು ಅಲ್ಲಿನ ಸರ್ಕಾರ ತಿಳಿಸಿದೆ.

ಬ್ರಿಟನ್‌ ಮತ್ತು ಭಾರತದಲ್ಲಿ ರೂಪಾಂತರಗೊಂಡ ಹೊಸ ಕೋರೋನಾ ವೈರಸ್‌ ತಳಿ ವಿಯೆಟ್ನಾಂ ನಲ್ಲಿ ತೀವ್ರವಾಗಿ ಹರಡುತ್ತಿದೆ ಇದೆ ಎಂದು ವಿಯೆಟ್ನಾಂ ಆರೋಗ್ಯ ಸಚಿವಾಲಯ ತಿಳಿಸಿದೆ. ಕೊರೋನಾ ಎರಡನೇಯ ಅಲೆಯ ಸಂದರ್ಭದಲ್ಲಿ ವಿಯೆಟ್ನಾಂ ನ ಅರ್ಧದಷ್ಟು ಭಾಗಕ್ಕೆ ಕೊರೋನಾ ವೈರಸ್‌ ಹರಡಿದೆ. ಹನೋಯಿ ಮತ್ತು ಹೋ ಚಿನ್‌ ಮಿನ್ಹ್‌ ನಂತಹ ಕೈಗಾರಿಕಾ ನಗರಗಳಲ್ಲಿ ಕೊರೋನಾ ಹೊಸ ರೂಪಾಂತರಿ ತಳಿ ವೈರಸ್‌ ತೀವ್ರವಾಗಿ ಹರಡುತ್ತಿದೆ. ಕೊರೋನಾ ಸೋಂಕಿನ ಹರಡುವಿಕೆ ಕಳೆದ ವರ್ಷಕ್ಕಿಂತ ಈ ವರ್ಷ ತೀವ್ರವಾಗಿದೆ ಎಂದು ವಿಯೆಟ್ನಾಂ ಸರ್ಕಾರ ತಿಳಿಸಿದೆ.

ನಾವು ಭಾರತ ಮತ್ತು ಬ್ರಿಟನ್‌ ನಲ್ಲಿ ಮೊತ್ತ ಮೊದಲಿಗೆ ಕಾಣಿಸಿಕೊಂಡ ಕೊರೋನಾ ಹೊಸ ರೂಪಾಂತರಿಯನ್ನು ವಿಯಾಟ್ನಾಂ ನಲ್ಲಿಯೂ ಪತ್ತೆ ಹಚ್ಚಿದ್ದೇವೆ. ಗಂಟಲುದ್ರವದಲ್ಲಿ ಸೇರಿರುವ ಈ ಹೊಸ ತಳಿ ವೈರಸ್‌ಗಳು ಅತ್ಯಂತ ಶೀಘ್ರವಾಗಿ ಮತ್ತು ತೀವ್ರ ಸ್ವರೂಪದಲ್ಲಿ ಗಾಳಿಯ ಮೂಲಕ ಸುತ್ತಲಿನ ಪರಿಸರಕ್ಕೆ ಹರಡುತ್ತಿರುವುದನ್ನು ಕಂಡುಕೊಂಡಿದ್ದೇವೆ ಎಂದು ವಿಯೆಟ್ನಾಂ ಆರೋಗ್ಯ ಸಚಿವ ನುಗುಯೆನ್‌ ಥಾನ್‌ ಲಾಂಗ್‌ ಶನಿವಾರ ಅಲ್ಲಿನ ಮಾಧ್ಯಮಗಳಿಗೆ ತಿಳಿಸಿದ್ದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ವಿಯೆಟ್ನಾಂನ ವಿಜ್ಞಾನಿಗಳು ಇತ್ತೀಚೆಗೆ ಪರೀಕ್ಷಿಸಲಾದ 32 ಜನರಲ್ಲಿ 4 ಜನರಲ್ಲಿ ಹೊಸ ರೂಪಾಂತರಿ ಕೊರೋನಾ ವೈರಸ್‌ ಅಂಶಗಳು ಕಂಡುಬಂದಿವೆ ಎಂದು ತಿಳಿಸಿದೆ.
ವಿಯೇಟ್ನಾಂ ಆರೋಗ್ಯ ಮಂತ್ರಿ ಶನಿವಾರ ಮೇ 29 ರಂದು ಹೊಸ ತಳಿಯನ್ನು ಘೋಷಿಸುವ ಮೊದಲು ಇದುವರೆಗೆ ಏಳು ಮಾದರಿಯ ಕೊರೋನಾ ರೂಪಾಂತರಿ ತಳಿಗಳು ವಿಯೆಟ್ನಾಂ ನಲ್ಲಿ ಕಂಡುಬಂದಿದ್ದವು ಎಂದು ಹೇಳಲಾಗಿದೆ.

ಈ ಹಿಂದೆ ವಿಯೆಟ್ನಾಂ ಸರ್ಕಾರದ ಕೊರೋನಾ ನಿರ್ವಹಣೆಯ ಕುರಿತು ಜಗತ್ತಿನಾದ್ಯಂತ ಮೆಚ್ಚುಗೆಗಳು ಕೇಳಿ ಬಂದಿದ್ದವು. ಸೋಂಕಿತರ ಪತ್ತೆ ಮತ್ತು ಮಾಸ್‌ ಕ್ವಾರಂಟೈನ್‌ನಿಂದಾಗಿ ವಿಯೆಟ್ನಾಂ ನಲ್ಲಿ ಸೋಕಿಂಗೆ ತುತ್ತಾಗುವವರ ಶೇಕಡಾ ಪ್ರಮಾಣ ಅತ್ಯಂತ ಕಡಿಮೆಯಾಗಿತ್ತು.

ಹೊಸ ಮಾದರಿಯ ಕೊರೋನಾ ರೂಪಾಂತರಿ ತಳಿ ಮತ್ತು ಕೊರೋನಾ ಎರಡನೆ ಅಲೆಯು ವಿಯೆಟ್ನಾಂ ಸರ್ಕಾರ ಮತ್ತು ಜನರಲ್ಲಿ ಭೀತಿಯನ್ನು ಹುಟ್ಟಿಸಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಅಲ್ಲಿನ ಸರ್ಕಾರ ಜನರ ಓಡಾಟದ ಮೇಲೆ ನಿರ್ಭಂದವನ್ನು ಹೇರಿದ್ದು ಹೊಟೇಲ್‌, ರೆಸ್ಟೋರೆಂಟ್, ಶಾಲಾ ಕಾಲೇಜು ಮತ್ತು ಇತರ ವಾಣಿಜ್ಯ, ಶೈಕ್ಷಣಿಕ, ಸಾಂಸ್ಕೃತಿಕ ಚಟುವಟಿಕೆಗಳನ್ನು ಅಲ್ಲಿನ ಸರ್ಕಾರ ನಿಷೇಧಿಸಿದೆ.

ವಿಯೆಟ್ನಾಂ ಸರಿಸುಮಾರು 9.7 ಕೋಟಿ ಜನಸಂಖ್ಯೆಯನ್ನು ಹೊಂದಿದೆ. ಇವರಲ್ಲಿ 10 ಲಕ್ಷ ಜನರಿಗೆ ಕೊರೋನಾ ಲಸಿಕೆಯನ್ನು ನೀಡಲಾಗಿದೆ. ಈ ದೇಶದ ಅಂತ್ಯಕ್ಕೆ ಕೊರೋನಾ ವ್ಯಾಕ್ಸಿನೇಷನ್ ಪ್ರಕ್ರಿಯೆಯನ್ನು ಸಂಪೂರ್ಣಗೊಳಿಸುವ ಗುರಿಯನ್ನು ಅಲ್ಲಿನ ಸರ್ಕಾರ ಇಟ್ಟುಕೊಂಡಿದೆ.

ವಿಯೆಟ್ನಾಂ ಸರ್ಕಾರ ಉದ್ಯಮಿಗಳು ಮತ್ತು ಇತರ ಶ್ರೀಮಂತರಲ್ಲಿ ಕೊರೋನಾ ನಿರ್ವಹಣೆಗೆ ತಮ್ಮ ಕೊಡುಗೆಗಳನ್ನು ನೀಡುವಂತೆ ಮನವಿ ಮಾಡಿಕೊಂಡಿದೆ.

ವಿಯೆಟ್ನಾಂ ಗೆ ಅತ್ಯಂತ ಸಮೀಪದಲ್ಲಿರುವ ಥಾಯ್ಲೆಂಡ್‌ ನಲ್ಲಿ ಕೊರೋನಾ ಹೊಸ ರೂಪಾಂತರಿ ತಳಿ ವೈರಸ್‌ಗಳು ಕಾಣಿಸಿಕೊಂಡಿವೆ. ಥಾಯ್ಲೆಂಡ್‌ ಸರ್ಕಾರ ಶನಿವಾರ ಸುದ್ದಿಗೋಷ್ಠಿಯನ್ನು ನಡೆಸಿ ಹೊಸ ತಳಿಯ ವೈರಸ್ ಅನ್ನು ಮಾಧ್ಯಮಗಳು ʼಥಾಯ್‌ ವೇರಿಯೆಂಟ್‌ʼ ಎಂದು ಬಿಂಬಿಸುತ್ತಿರುವುದನ್ನು ವ್ಯಾಪಕವಾಗಿ ಖಂಡಿಸಿದೆ. ಈ ರೀತಿಯ ಆಧಾರ ರಹಿತವಾದ ಸುದ್ದಿ ಅಪಪ್ರಚಾರಗಳನ್ನು ನಿಲ್ಲಿಸುವಂತೆ ಮಾಧ್ಯಮಗಳಲ್ಲಿ ಥಾಯ್ಲೆಂಡ್‌ ಸರ್ಕಾರ ಮನವಿಯನ್ನು ಮಾಡಿಕೊಂಡಿದೆ.

ಚರ್ಚೆಯಾಗುತ್ತಿರುವ ಹೊಸ ಕೊರೋನಾ ರೂಪಾಂತರಿ ತಳಿ ಮೊಟ್ಟಮೊದಲ ಬಾರಿಗೆ ಥಾಯ್ಲೆಂಡಿನಲ್ಲಿ 33 ವರ್ಷದ ಈಜಿಪ್ಟ್‌ ದೇಶದ ಪ್ರವಾಸಿಯೊಬ್ಬರಲ್ಲಿ ಕಾಣಿಸಿಕೊಂಡಿತ್ತು. ನಂತರ ಬ್ರಿಟನ್‌ ನಲ್ಲಿ ಈ ಹೊಸ ರೂಪಾಂತರಿ ಕೊರೋನಾ ವೈರಸ್‌ ಸಂಬಂಧಿಸಿದ 109 ಪ್ರಕರಣಗಳು ವರದಿಯಾಗಿವೆ ಎಂದು ಬ್ರಿಟನ್‌ ದೇಶದ ಅಧಿಕಾರಿಗಳು ತಿಳಿಸಿವೆ.


ಇದನ್ನೂ ಓದಿ: ಖಾಸಗಿ ಆಸ್ಪತ್ರೆಗಳು ಹೊಟೇಲ್‌ಗಳ ಜೊತೆ ಸೇರಿ ಲಸಿಕೆ ಪ್ಯಾಕೇಜ್ ನೀಡುವಂತಿಲ್ಲ: ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...