Homeಅಂತರಾಷ್ಟ್ರೀಯಭಾರತ, ಬ್ರಿಟನ್‌ನ ಹೊಸ ರೂಪಾಂತರಿ ಕೊರೋನಾ ವೈರಸ್‌ ಗಾಳಿಯಲ್ಲಿ ಅತಿ ಬೇಗ ಹರಡಬಲ್ಲದು: ವಿಯೆಟ್ನಾಮ್‌

ಭಾರತ, ಬ್ರಿಟನ್‌ನ ಹೊಸ ರೂಪಾಂತರಿ ಕೊರೋನಾ ವೈರಸ್‌ ಗಾಳಿಯಲ್ಲಿ ಅತಿ ಬೇಗ ಹರಡಬಲ್ಲದು: ವಿಯೆಟ್ನಾಮ್‌

- Advertisement -
- Advertisement -

ಭಾರತ ಮತ್ತು ಬ್ರಿಟನ್‌ನಲ್ಲಿ ಪತ್ತೆಯಾಗಿರುವ ಹೊಸ ರೂಪಾಂತರಿ ಕೊರೋನಾ ವೈರೈಸ್‌ ಈಗ ವಿಯೆಟ್ನಾಂ ದೇಶದಲ್ಲೂ ಕಾಣಿಸಿಕೊಂಡಿದೆ. ಈ ಮಾದರಿಯ ವೈರಸ್‌ಗಳು ಗಾಳಿಯಲ್ಲಿ ಅತಿ ಶೀಘ್ರವಾಗಿ ಹರಡಬಲ್ಲದು ಎಂದು ವಿಯೆಟ್ನಾಂ ತನ್ನ ಸಂಶೋಧನೆಯ ಮೂಲಕ ತಿಳಿಸಿದೆ. ಗಂಟಲ ದ್ರವದಲ್ಲಿ ಸೇರಿರುವ ಹೊಸ ರೂಪಾಂತರಿ ವೈರಸ್‌ ಶೀಘ್ರವಾಗಿ ಸುತ್ತಲಿನ ವಾತಾವರಣಕ್ಕೆ ಹರಡುವ ಶಕ್ತಿ ಹೊಂದಿದೆ ಎಂದು ಹೇಳಿದೆ.

ವಿಯೆಟ್ನಾಂ ದೇಶದಲ್ಲಿ ಇದುವರೆಗೆ 6800 ಜನರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು 47 ಜನರು ಈ ವೈರಸ್‌ ಗೆ ಬಲಿಯಾಗಿದ್ದಾರೆ ಎಂದು ವಿಯೆಟ್ನಾಂ ಸರ್ಕಾರ ತಿಳಿಸಿದೆ. ವಿಯೆಟ್ನಾಂ ನಲ್ಲಿ ಇದು ವರೆಗೆ 10 ಲಕ್ಷ ಜನರಿಗೆ ಕೋವಿಡ್‌ ವ್ಯಾಕ್ಸಿನ್‌ ನೀಡಲಾಗಿದೆ ಎಂದು ಅಲ್ಲಿನ ಸರ್ಕಾರ ತಿಳಿಸಿದೆ.

ಬ್ರಿಟನ್‌ ಮತ್ತು ಭಾರತದಲ್ಲಿ ರೂಪಾಂತರಗೊಂಡ ಹೊಸ ಕೋರೋನಾ ವೈರಸ್‌ ತಳಿ ವಿಯೆಟ್ನಾಂ ನಲ್ಲಿ ತೀವ್ರವಾಗಿ ಹರಡುತ್ತಿದೆ ಇದೆ ಎಂದು ವಿಯೆಟ್ನಾಂ ಆರೋಗ್ಯ ಸಚಿವಾಲಯ ತಿಳಿಸಿದೆ. ಕೊರೋನಾ ಎರಡನೇಯ ಅಲೆಯ ಸಂದರ್ಭದಲ್ಲಿ ವಿಯೆಟ್ನಾಂ ನ ಅರ್ಧದಷ್ಟು ಭಾಗಕ್ಕೆ ಕೊರೋನಾ ವೈರಸ್‌ ಹರಡಿದೆ. ಹನೋಯಿ ಮತ್ತು ಹೋ ಚಿನ್‌ ಮಿನ್ಹ್‌ ನಂತಹ ಕೈಗಾರಿಕಾ ನಗರಗಳಲ್ಲಿ ಕೊರೋನಾ ಹೊಸ ರೂಪಾಂತರಿ ತಳಿ ವೈರಸ್‌ ತೀವ್ರವಾಗಿ ಹರಡುತ್ತಿದೆ. ಕೊರೋನಾ ಸೋಂಕಿನ ಹರಡುವಿಕೆ ಕಳೆದ ವರ್ಷಕ್ಕಿಂತ ಈ ವರ್ಷ ತೀವ್ರವಾಗಿದೆ ಎಂದು ವಿಯೆಟ್ನಾಂ ಸರ್ಕಾರ ತಿಳಿಸಿದೆ.

ನಾವು ಭಾರತ ಮತ್ತು ಬ್ರಿಟನ್‌ ನಲ್ಲಿ ಮೊತ್ತ ಮೊದಲಿಗೆ ಕಾಣಿಸಿಕೊಂಡ ಕೊರೋನಾ ಹೊಸ ರೂಪಾಂತರಿಯನ್ನು ವಿಯಾಟ್ನಾಂ ನಲ್ಲಿಯೂ ಪತ್ತೆ ಹಚ್ಚಿದ್ದೇವೆ. ಗಂಟಲುದ್ರವದಲ್ಲಿ ಸೇರಿರುವ ಈ ಹೊಸ ತಳಿ ವೈರಸ್‌ಗಳು ಅತ್ಯಂತ ಶೀಘ್ರವಾಗಿ ಮತ್ತು ತೀವ್ರ ಸ್ವರೂಪದಲ್ಲಿ ಗಾಳಿಯ ಮೂಲಕ ಸುತ್ತಲಿನ ಪರಿಸರಕ್ಕೆ ಹರಡುತ್ತಿರುವುದನ್ನು ಕಂಡುಕೊಂಡಿದ್ದೇವೆ ಎಂದು ವಿಯೆಟ್ನಾಂ ಆರೋಗ್ಯ ಸಚಿವ ನುಗುಯೆನ್‌ ಥಾನ್‌ ಲಾಂಗ್‌ ಶನಿವಾರ ಅಲ್ಲಿನ ಮಾಧ್ಯಮಗಳಿಗೆ ತಿಳಿಸಿದ್ದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ವಿಯೆಟ್ನಾಂನ ವಿಜ್ಞಾನಿಗಳು ಇತ್ತೀಚೆಗೆ ಪರೀಕ್ಷಿಸಲಾದ 32 ಜನರಲ್ಲಿ 4 ಜನರಲ್ಲಿ ಹೊಸ ರೂಪಾಂತರಿ ಕೊರೋನಾ ವೈರಸ್‌ ಅಂಶಗಳು ಕಂಡುಬಂದಿವೆ ಎಂದು ತಿಳಿಸಿದೆ.
ವಿಯೇಟ್ನಾಂ ಆರೋಗ್ಯ ಮಂತ್ರಿ ಶನಿವಾರ ಮೇ 29 ರಂದು ಹೊಸ ತಳಿಯನ್ನು ಘೋಷಿಸುವ ಮೊದಲು ಇದುವರೆಗೆ ಏಳು ಮಾದರಿಯ ಕೊರೋನಾ ರೂಪಾಂತರಿ ತಳಿಗಳು ವಿಯೆಟ್ನಾಂ ನಲ್ಲಿ ಕಂಡುಬಂದಿದ್ದವು ಎಂದು ಹೇಳಲಾಗಿದೆ.

ಈ ಹಿಂದೆ ವಿಯೆಟ್ನಾಂ ಸರ್ಕಾರದ ಕೊರೋನಾ ನಿರ್ವಹಣೆಯ ಕುರಿತು ಜಗತ್ತಿನಾದ್ಯಂತ ಮೆಚ್ಚುಗೆಗಳು ಕೇಳಿ ಬಂದಿದ್ದವು. ಸೋಂಕಿತರ ಪತ್ತೆ ಮತ್ತು ಮಾಸ್‌ ಕ್ವಾರಂಟೈನ್‌ನಿಂದಾಗಿ ವಿಯೆಟ್ನಾಂ ನಲ್ಲಿ ಸೋಕಿಂಗೆ ತುತ್ತಾಗುವವರ ಶೇಕಡಾ ಪ್ರಮಾಣ ಅತ್ಯಂತ ಕಡಿಮೆಯಾಗಿತ್ತು.

ಹೊಸ ಮಾದರಿಯ ಕೊರೋನಾ ರೂಪಾಂತರಿ ತಳಿ ಮತ್ತು ಕೊರೋನಾ ಎರಡನೆ ಅಲೆಯು ವಿಯೆಟ್ನಾಂ ಸರ್ಕಾರ ಮತ್ತು ಜನರಲ್ಲಿ ಭೀತಿಯನ್ನು ಹುಟ್ಟಿಸಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಅಲ್ಲಿನ ಸರ್ಕಾರ ಜನರ ಓಡಾಟದ ಮೇಲೆ ನಿರ್ಭಂದವನ್ನು ಹೇರಿದ್ದು ಹೊಟೇಲ್‌, ರೆಸ್ಟೋರೆಂಟ್, ಶಾಲಾ ಕಾಲೇಜು ಮತ್ತು ಇತರ ವಾಣಿಜ್ಯ, ಶೈಕ್ಷಣಿಕ, ಸಾಂಸ್ಕೃತಿಕ ಚಟುವಟಿಕೆಗಳನ್ನು ಅಲ್ಲಿನ ಸರ್ಕಾರ ನಿಷೇಧಿಸಿದೆ.

ವಿಯೆಟ್ನಾಂ ಸರಿಸುಮಾರು 9.7 ಕೋಟಿ ಜನಸಂಖ್ಯೆಯನ್ನು ಹೊಂದಿದೆ. ಇವರಲ್ಲಿ 10 ಲಕ್ಷ ಜನರಿಗೆ ಕೊರೋನಾ ಲಸಿಕೆಯನ್ನು ನೀಡಲಾಗಿದೆ. ಈ ದೇಶದ ಅಂತ್ಯಕ್ಕೆ ಕೊರೋನಾ ವ್ಯಾಕ್ಸಿನೇಷನ್ ಪ್ರಕ್ರಿಯೆಯನ್ನು ಸಂಪೂರ್ಣಗೊಳಿಸುವ ಗುರಿಯನ್ನು ಅಲ್ಲಿನ ಸರ್ಕಾರ ಇಟ್ಟುಕೊಂಡಿದೆ.

ವಿಯೆಟ್ನಾಂ ಸರ್ಕಾರ ಉದ್ಯಮಿಗಳು ಮತ್ತು ಇತರ ಶ್ರೀಮಂತರಲ್ಲಿ ಕೊರೋನಾ ನಿರ್ವಹಣೆಗೆ ತಮ್ಮ ಕೊಡುಗೆಗಳನ್ನು ನೀಡುವಂತೆ ಮನವಿ ಮಾಡಿಕೊಂಡಿದೆ.

ವಿಯೆಟ್ನಾಂ ಗೆ ಅತ್ಯಂತ ಸಮೀಪದಲ್ಲಿರುವ ಥಾಯ್ಲೆಂಡ್‌ ನಲ್ಲಿ ಕೊರೋನಾ ಹೊಸ ರೂಪಾಂತರಿ ತಳಿ ವೈರಸ್‌ಗಳು ಕಾಣಿಸಿಕೊಂಡಿವೆ. ಥಾಯ್ಲೆಂಡ್‌ ಸರ್ಕಾರ ಶನಿವಾರ ಸುದ್ದಿಗೋಷ್ಠಿಯನ್ನು ನಡೆಸಿ ಹೊಸ ತಳಿಯ ವೈರಸ್ ಅನ್ನು ಮಾಧ್ಯಮಗಳು ʼಥಾಯ್‌ ವೇರಿಯೆಂಟ್‌ʼ ಎಂದು ಬಿಂಬಿಸುತ್ತಿರುವುದನ್ನು ವ್ಯಾಪಕವಾಗಿ ಖಂಡಿಸಿದೆ. ಈ ರೀತಿಯ ಆಧಾರ ರಹಿತವಾದ ಸುದ್ದಿ ಅಪಪ್ರಚಾರಗಳನ್ನು ನಿಲ್ಲಿಸುವಂತೆ ಮಾಧ್ಯಮಗಳಲ್ಲಿ ಥಾಯ್ಲೆಂಡ್‌ ಸರ್ಕಾರ ಮನವಿಯನ್ನು ಮಾಡಿಕೊಂಡಿದೆ.

ಚರ್ಚೆಯಾಗುತ್ತಿರುವ ಹೊಸ ಕೊರೋನಾ ರೂಪಾಂತರಿ ತಳಿ ಮೊಟ್ಟಮೊದಲ ಬಾರಿಗೆ ಥಾಯ್ಲೆಂಡಿನಲ್ಲಿ 33 ವರ್ಷದ ಈಜಿಪ್ಟ್‌ ದೇಶದ ಪ್ರವಾಸಿಯೊಬ್ಬರಲ್ಲಿ ಕಾಣಿಸಿಕೊಂಡಿತ್ತು. ನಂತರ ಬ್ರಿಟನ್‌ ನಲ್ಲಿ ಈ ಹೊಸ ರೂಪಾಂತರಿ ಕೊರೋನಾ ವೈರಸ್‌ ಸಂಬಂಧಿಸಿದ 109 ಪ್ರಕರಣಗಳು ವರದಿಯಾಗಿವೆ ಎಂದು ಬ್ರಿಟನ್‌ ದೇಶದ ಅಧಿಕಾರಿಗಳು ತಿಳಿಸಿವೆ.


ಇದನ್ನೂ ಓದಿ: ಖಾಸಗಿ ಆಸ್ಪತ್ರೆಗಳು ಹೊಟೇಲ್‌ಗಳ ಜೊತೆ ಸೇರಿ ಲಸಿಕೆ ಪ್ಯಾಕೇಜ್ ನೀಡುವಂತಿಲ್ಲ: ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...