Homeಅಂತರಾಷ್ಟ್ರೀಯಭಾರತ, ಬ್ರಿಟನ್‌ನ ಹೊಸ ರೂಪಾಂತರಿ ಕೊರೋನಾ ವೈರಸ್‌ ಗಾಳಿಯಲ್ಲಿ ಅತಿ ಬೇಗ ಹರಡಬಲ್ಲದು: ವಿಯೆಟ್ನಾಮ್‌

ಭಾರತ, ಬ್ರಿಟನ್‌ನ ಹೊಸ ರೂಪಾಂತರಿ ಕೊರೋನಾ ವೈರಸ್‌ ಗಾಳಿಯಲ್ಲಿ ಅತಿ ಬೇಗ ಹರಡಬಲ್ಲದು: ವಿಯೆಟ್ನಾಮ್‌

- Advertisement -
- Advertisement -

ಭಾರತ ಮತ್ತು ಬ್ರಿಟನ್‌ನಲ್ಲಿ ಪತ್ತೆಯಾಗಿರುವ ಹೊಸ ರೂಪಾಂತರಿ ಕೊರೋನಾ ವೈರೈಸ್‌ ಈಗ ವಿಯೆಟ್ನಾಂ ದೇಶದಲ್ಲೂ ಕಾಣಿಸಿಕೊಂಡಿದೆ. ಈ ಮಾದರಿಯ ವೈರಸ್‌ಗಳು ಗಾಳಿಯಲ್ಲಿ ಅತಿ ಶೀಘ್ರವಾಗಿ ಹರಡಬಲ್ಲದು ಎಂದು ವಿಯೆಟ್ನಾಂ ತನ್ನ ಸಂಶೋಧನೆಯ ಮೂಲಕ ತಿಳಿಸಿದೆ. ಗಂಟಲ ದ್ರವದಲ್ಲಿ ಸೇರಿರುವ ಹೊಸ ರೂಪಾಂತರಿ ವೈರಸ್‌ ಶೀಘ್ರವಾಗಿ ಸುತ್ತಲಿನ ವಾತಾವರಣಕ್ಕೆ ಹರಡುವ ಶಕ್ತಿ ಹೊಂದಿದೆ ಎಂದು ಹೇಳಿದೆ.

ವಿಯೆಟ್ನಾಂ ದೇಶದಲ್ಲಿ ಇದುವರೆಗೆ 6800 ಜನರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು 47 ಜನರು ಈ ವೈರಸ್‌ ಗೆ ಬಲಿಯಾಗಿದ್ದಾರೆ ಎಂದು ವಿಯೆಟ್ನಾಂ ಸರ್ಕಾರ ತಿಳಿಸಿದೆ. ವಿಯೆಟ್ನಾಂ ನಲ್ಲಿ ಇದು ವರೆಗೆ 10 ಲಕ್ಷ ಜನರಿಗೆ ಕೋವಿಡ್‌ ವ್ಯಾಕ್ಸಿನ್‌ ನೀಡಲಾಗಿದೆ ಎಂದು ಅಲ್ಲಿನ ಸರ್ಕಾರ ತಿಳಿಸಿದೆ.

ಬ್ರಿಟನ್‌ ಮತ್ತು ಭಾರತದಲ್ಲಿ ರೂಪಾಂತರಗೊಂಡ ಹೊಸ ಕೋರೋನಾ ವೈರಸ್‌ ತಳಿ ವಿಯೆಟ್ನಾಂ ನಲ್ಲಿ ತೀವ್ರವಾಗಿ ಹರಡುತ್ತಿದೆ ಇದೆ ಎಂದು ವಿಯೆಟ್ನಾಂ ಆರೋಗ್ಯ ಸಚಿವಾಲಯ ತಿಳಿಸಿದೆ. ಕೊರೋನಾ ಎರಡನೇಯ ಅಲೆಯ ಸಂದರ್ಭದಲ್ಲಿ ವಿಯೆಟ್ನಾಂ ನ ಅರ್ಧದಷ್ಟು ಭಾಗಕ್ಕೆ ಕೊರೋನಾ ವೈರಸ್‌ ಹರಡಿದೆ. ಹನೋಯಿ ಮತ್ತು ಹೋ ಚಿನ್‌ ಮಿನ್ಹ್‌ ನಂತಹ ಕೈಗಾರಿಕಾ ನಗರಗಳಲ್ಲಿ ಕೊರೋನಾ ಹೊಸ ರೂಪಾಂತರಿ ತಳಿ ವೈರಸ್‌ ತೀವ್ರವಾಗಿ ಹರಡುತ್ತಿದೆ. ಕೊರೋನಾ ಸೋಂಕಿನ ಹರಡುವಿಕೆ ಕಳೆದ ವರ್ಷಕ್ಕಿಂತ ಈ ವರ್ಷ ತೀವ್ರವಾಗಿದೆ ಎಂದು ವಿಯೆಟ್ನಾಂ ಸರ್ಕಾರ ತಿಳಿಸಿದೆ.

ನಾವು ಭಾರತ ಮತ್ತು ಬ್ರಿಟನ್‌ ನಲ್ಲಿ ಮೊತ್ತ ಮೊದಲಿಗೆ ಕಾಣಿಸಿಕೊಂಡ ಕೊರೋನಾ ಹೊಸ ರೂಪಾಂತರಿಯನ್ನು ವಿಯಾಟ್ನಾಂ ನಲ್ಲಿಯೂ ಪತ್ತೆ ಹಚ್ಚಿದ್ದೇವೆ. ಗಂಟಲುದ್ರವದಲ್ಲಿ ಸೇರಿರುವ ಈ ಹೊಸ ತಳಿ ವೈರಸ್‌ಗಳು ಅತ್ಯಂತ ಶೀಘ್ರವಾಗಿ ಮತ್ತು ತೀವ್ರ ಸ್ವರೂಪದಲ್ಲಿ ಗಾಳಿಯ ಮೂಲಕ ಸುತ್ತಲಿನ ಪರಿಸರಕ್ಕೆ ಹರಡುತ್ತಿರುವುದನ್ನು ಕಂಡುಕೊಂಡಿದ್ದೇವೆ ಎಂದು ವಿಯೆಟ್ನಾಂ ಆರೋಗ್ಯ ಸಚಿವ ನುಗುಯೆನ್‌ ಥಾನ್‌ ಲಾಂಗ್‌ ಶನಿವಾರ ಅಲ್ಲಿನ ಮಾಧ್ಯಮಗಳಿಗೆ ತಿಳಿಸಿದ್ದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ವಿಯೆಟ್ನಾಂನ ವಿಜ್ಞಾನಿಗಳು ಇತ್ತೀಚೆಗೆ ಪರೀಕ್ಷಿಸಲಾದ 32 ಜನರಲ್ಲಿ 4 ಜನರಲ್ಲಿ ಹೊಸ ರೂಪಾಂತರಿ ಕೊರೋನಾ ವೈರಸ್‌ ಅಂಶಗಳು ಕಂಡುಬಂದಿವೆ ಎಂದು ತಿಳಿಸಿದೆ.
ವಿಯೇಟ್ನಾಂ ಆರೋಗ್ಯ ಮಂತ್ರಿ ಶನಿವಾರ ಮೇ 29 ರಂದು ಹೊಸ ತಳಿಯನ್ನು ಘೋಷಿಸುವ ಮೊದಲು ಇದುವರೆಗೆ ಏಳು ಮಾದರಿಯ ಕೊರೋನಾ ರೂಪಾಂತರಿ ತಳಿಗಳು ವಿಯೆಟ್ನಾಂ ನಲ್ಲಿ ಕಂಡುಬಂದಿದ್ದವು ಎಂದು ಹೇಳಲಾಗಿದೆ.

ಈ ಹಿಂದೆ ವಿಯೆಟ್ನಾಂ ಸರ್ಕಾರದ ಕೊರೋನಾ ನಿರ್ವಹಣೆಯ ಕುರಿತು ಜಗತ್ತಿನಾದ್ಯಂತ ಮೆಚ್ಚುಗೆಗಳು ಕೇಳಿ ಬಂದಿದ್ದವು. ಸೋಂಕಿತರ ಪತ್ತೆ ಮತ್ತು ಮಾಸ್‌ ಕ್ವಾರಂಟೈನ್‌ನಿಂದಾಗಿ ವಿಯೆಟ್ನಾಂ ನಲ್ಲಿ ಸೋಕಿಂಗೆ ತುತ್ತಾಗುವವರ ಶೇಕಡಾ ಪ್ರಮಾಣ ಅತ್ಯಂತ ಕಡಿಮೆಯಾಗಿತ್ತು.

ಹೊಸ ಮಾದರಿಯ ಕೊರೋನಾ ರೂಪಾಂತರಿ ತಳಿ ಮತ್ತು ಕೊರೋನಾ ಎರಡನೆ ಅಲೆಯು ವಿಯೆಟ್ನಾಂ ಸರ್ಕಾರ ಮತ್ತು ಜನರಲ್ಲಿ ಭೀತಿಯನ್ನು ಹುಟ್ಟಿಸಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಅಲ್ಲಿನ ಸರ್ಕಾರ ಜನರ ಓಡಾಟದ ಮೇಲೆ ನಿರ್ಭಂದವನ್ನು ಹೇರಿದ್ದು ಹೊಟೇಲ್‌, ರೆಸ್ಟೋರೆಂಟ್, ಶಾಲಾ ಕಾಲೇಜು ಮತ್ತು ಇತರ ವಾಣಿಜ್ಯ, ಶೈಕ್ಷಣಿಕ, ಸಾಂಸ್ಕೃತಿಕ ಚಟುವಟಿಕೆಗಳನ್ನು ಅಲ್ಲಿನ ಸರ್ಕಾರ ನಿಷೇಧಿಸಿದೆ.

ವಿಯೆಟ್ನಾಂ ಸರಿಸುಮಾರು 9.7 ಕೋಟಿ ಜನಸಂಖ್ಯೆಯನ್ನು ಹೊಂದಿದೆ. ಇವರಲ್ಲಿ 10 ಲಕ್ಷ ಜನರಿಗೆ ಕೊರೋನಾ ಲಸಿಕೆಯನ್ನು ನೀಡಲಾಗಿದೆ. ಈ ದೇಶದ ಅಂತ್ಯಕ್ಕೆ ಕೊರೋನಾ ವ್ಯಾಕ್ಸಿನೇಷನ್ ಪ್ರಕ್ರಿಯೆಯನ್ನು ಸಂಪೂರ್ಣಗೊಳಿಸುವ ಗುರಿಯನ್ನು ಅಲ್ಲಿನ ಸರ್ಕಾರ ಇಟ್ಟುಕೊಂಡಿದೆ.

ವಿಯೆಟ್ನಾಂ ಸರ್ಕಾರ ಉದ್ಯಮಿಗಳು ಮತ್ತು ಇತರ ಶ್ರೀಮಂತರಲ್ಲಿ ಕೊರೋನಾ ನಿರ್ವಹಣೆಗೆ ತಮ್ಮ ಕೊಡುಗೆಗಳನ್ನು ನೀಡುವಂತೆ ಮನವಿ ಮಾಡಿಕೊಂಡಿದೆ.

ವಿಯೆಟ್ನಾಂ ಗೆ ಅತ್ಯಂತ ಸಮೀಪದಲ್ಲಿರುವ ಥಾಯ್ಲೆಂಡ್‌ ನಲ್ಲಿ ಕೊರೋನಾ ಹೊಸ ರೂಪಾಂತರಿ ತಳಿ ವೈರಸ್‌ಗಳು ಕಾಣಿಸಿಕೊಂಡಿವೆ. ಥಾಯ್ಲೆಂಡ್‌ ಸರ್ಕಾರ ಶನಿವಾರ ಸುದ್ದಿಗೋಷ್ಠಿಯನ್ನು ನಡೆಸಿ ಹೊಸ ತಳಿಯ ವೈರಸ್ ಅನ್ನು ಮಾಧ್ಯಮಗಳು ʼಥಾಯ್‌ ವೇರಿಯೆಂಟ್‌ʼ ಎಂದು ಬಿಂಬಿಸುತ್ತಿರುವುದನ್ನು ವ್ಯಾಪಕವಾಗಿ ಖಂಡಿಸಿದೆ. ಈ ರೀತಿಯ ಆಧಾರ ರಹಿತವಾದ ಸುದ್ದಿ ಅಪಪ್ರಚಾರಗಳನ್ನು ನಿಲ್ಲಿಸುವಂತೆ ಮಾಧ್ಯಮಗಳಲ್ಲಿ ಥಾಯ್ಲೆಂಡ್‌ ಸರ್ಕಾರ ಮನವಿಯನ್ನು ಮಾಡಿಕೊಂಡಿದೆ.

ಚರ್ಚೆಯಾಗುತ್ತಿರುವ ಹೊಸ ಕೊರೋನಾ ರೂಪಾಂತರಿ ತಳಿ ಮೊಟ್ಟಮೊದಲ ಬಾರಿಗೆ ಥಾಯ್ಲೆಂಡಿನಲ್ಲಿ 33 ವರ್ಷದ ಈಜಿಪ್ಟ್‌ ದೇಶದ ಪ್ರವಾಸಿಯೊಬ್ಬರಲ್ಲಿ ಕಾಣಿಸಿಕೊಂಡಿತ್ತು. ನಂತರ ಬ್ರಿಟನ್‌ ನಲ್ಲಿ ಈ ಹೊಸ ರೂಪಾಂತರಿ ಕೊರೋನಾ ವೈರಸ್‌ ಸಂಬಂಧಿಸಿದ 109 ಪ್ರಕರಣಗಳು ವರದಿಯಾಗಿವೆ ಎಂದು ಬ್ರಿಟನ್‌ ದೇಶದ ಅಧಿಕಾರಿಗಳು ತಿಳಿಸಿವೆ.


ಇದನ್ನೂ ಓದಿ: ಖಾಸಗಿ ಆಸ್ಪತ್ರೆಗಳು ಹೊಟೇಲ್‌ಗಳ ಜೊತೆ ಸೇರಿ ಲಸಿಕೆ ಪ್ಯಾಕೇಜ್ ನೀಡುವಂತಿಲ್ಲ: ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...