Homeಅಂತರಾಷ್ಟ್ರೀಯಭಾರತ, ಬ್ರಿಟನ್‌ನ ಹೊಸ ರೂಪಾಂತರಿ ಕೊರೋನಾ ವೈರಸ್‌ ಗಾಳಿಯಲ್ಲಿ ಅತಿ ಬೇಗ ಹರಡಬಲ್ಲದು: ವಿಯೆಟ್ನಾಮ್‌

ಭಾರತ, ಬ್ರಿಟನ್‌ನ ಹೊಸ ರೂಪಾಂತರಿ ಕೊರೋನಾ ವೈರಸ್‌ ಗಾಳಿಯಲ್ಲಿ ಅತಿ ಬೇಗ ಹರಡಬಲ್ಲದು: ವಿಯೆಟ್ನಾಮ್‌

- Advertisement -
- Advertisement -

ಭಾರತ ಮತ್ತು ಬ್ರಿಟನ್‌ನಲ್ಲಿ ಪತ್ತೆಯಾಗಿರುವ ಹೊಸ ರೂಪಾಂತರಿ ಕೊರೋನಾ ವೈರೈಸ್‌ ಈಗ ವಿಯೆಟ್ನಾಂ ದೇಶದಲ್ಲೂ ಕಾಣಿಸಿಕೊಂಡಿದೆ. ಈ ಮಾದರಿಯ ವೈರಸ್‌ಗಳು ಗಾಳಿಯಲ್ಲಿ ಅತಿ ಶೀಘ್ರವಾಗಿ ಹರಡಬಲ್ಲದು ಎಂದು ವಿಯೆಟ್ನಾಂ ತನ್ನ ಸಂಶೋಧನೆಯ ಮೂಲಕ ತಿಳಿಸಿದೆ. ಗಂಟಲ ದ್ರವದಲ್ಲಿ ಸೇರಿರುವ ಹೊಸ ರೂಪಾಂತರಿ ವೈರಸ್‌ ಶೀಘ್ರವಾಗಿ ಸುತ್ತಲಿನ ವಾತಾವರಣಕ್ಕೆ ಹರಡುವ ಶಕ್ತಿ ಹೊಂದಿದೆ ಎಂದು ಹೇಳಿದೆ.

ವಿಯೆಟ್ನಾಂ ದೇಶದಲ್ಲಿ ಇದುವರೆಗೆ 6800 ಜನರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು 47 ಜನರು ಈ ವೈರಸ್‌ ಗೆ ಬಲಿಯಾಗಿದ್ದಾರೆ ಎಂದು ವಿಯೆಟ್ನಾಂ ಸರ್ಕಾರ ತಿಳಿಸಿದೆ. ವಿಯೆಟ್ನಾಂ ನಲ್ಲಿ ಇದು ವರೆಗೆ 10 ಲಕ್ಷ ಜನರಿಗೆ ಕೋವಿಡ್‌ ವ್ಯಾಕ್ಸಿನ್‌ ನೀಡಲಾಗಿದೆ ಎಂದು ಅಲ್ಲಿನ ಸರ್ಕಾರ ತಿಳಿಸಿದೆ.

ಬ್ರಿಟನ್‌ ಮತ್ತು ಭಾರತದಲ್ಲಿ ರೂಪಾಂತರಗೊಂಡ ಹೊಸ ಕೋರೋನಾ ವೈರಸ್‌ ತಳಿ ವಿಯೆಟ್ನಾಂ ನಲ್ಲಿ ತೀವ್ರವಾಗಿ ಹರಡುತ್ತಿದೆ ಇದೆ ಎಂದು ವಿಯೆಟ್ನಾಂ ಆರೋಗ್ಯ ಸಚಿವಾಲಯ ತಿಳಿಸಿದೆ. ಕೊರೋನಾ ಎರಡನೇಯ ಅಲೆಯ ಸಂದರ್ಭದಲ್ಲಿ ವಿಯೆಟ್ನಾಂ ನ ಅರ್ಧದಷ್ಟು ಭಾಗಕ್ಕೆ ಕೊರೋನಾ ವೈರಸ್‌ ಹರಡಿದೆ. ಹನೋಯಿ ಮತ್ತು ಹೋ ಚಿನ್‌ ಮಿನ್ಹ್‌ ನಂತಹ ಕೈಗಾರಿಕಾ ನಗರಗಳಲ್ಲಿ ಕೊರೋನಾ ಹೊಸ ರೂಪಾಂತರಿ ತಳಿ ವೈರಸ್‌ ತೀವ್ರವಾಗಿ ಹರಡುತ್ತಿದೆ. ಕೊರೋನಾ ಸೋಂಕಿನ ಹರಡುವಿಕೆ ಕಳೆದ ವರ್ಷಕ್ಕಿಂತ ಈ ವರ್ಷ ತೀವ್ರವಾಗಿದೆ ಎಂದು ವಿಯೆಟ್ನಾಂ ಸರ್ಕಾರ ತಿಳಿಸಿದೆ.

ನಾವು ಭಾರತ ಮತ್ತು ಬ್ರಿಟನ್‌ ನಲ್ಲಿ ಮೊತ್ತ ಮೊದಲಿಗೆ ಕಾಣಿಸಿಕೊಂಡ ಕೊರೋನಾ ಹೊಸ ರೂಪಾಂತರಿಯನ್ನು ವಿಯಾಟ್ನಾಂ ನಲ್ಲಿಯೂ ಪತ್ತೆ ಹಚ್ಚಿದ್ದೇವೆ. ಗಂಟಲುದ್ರವದಲ್ಲಿ ಸೇರಿರುವ ಈ ಹೊಸ ತಳಿ ವೈರಸ್‌ಗಳು ಅತ್ಯಂತ ಶೀಘ್ರವಾಗಿ ಮತ್ತು ತೀವ್ರ ಸ್ವರೂಪದಲ್ಲಿ ಗಾಳಿಯ ಮೂಲಕ ಸುತ್ತಲಿನ ಪರಿಸರಕ್ಕೆ ಹರಡುತ್ತಿರುವುದನ್ನು ಕಂಡುಕೊಂಡಿದ್ದೇವೆ ಎಂದು ವಿಯೆಟ್ನಾಂ ಆರೋಗ್ಯ ಸಚಿವ ನುಗುಯೆನ್‌ ಥಾನ್‌ ಲಾಂಗ್‌ ಶನಿವಾರ ಅಲ್ಲಿನ ಮಾಧ್ಯಮಗಳಿಗೆ ತಿಳಿಸಿದ್ದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ವಿಯೆಟ್ನಾಂನ ವಿಜ್ಞಾನಿಗಳು ಇತ್ತೀಚೆಗೆ ಪರೀಕ್ಷಿಸಲಾದ 32 ಜನರಲ್ಲಿ 4 ಜನರಲ್ಲಿ ಹೊಸ ರೂಪಾಂತರಿ ಕೊರೋನಾ ವೈರಸ್‌ ಅಂಶಗಳು ಕಂಡುಬಂದಿವೆ ಎಂದು ತಿಳಿಸಿದೆ.
ವಿಯೇಟ್ನಾಂ ಆರೋಗ್ಯ ಮಂತ್ರಿ ಶನಿವಾರ ಮೇ 29 ರಂದು ಹೊಸ ತಳಿಯನ್ನು ಘೋಷಿಸುವ ಮೊದಲು ಇದುವರೆಗೆ ಏಳು ಮಾದರಿಯ ಕೊರೋನಾ ರೂಪಾಂತರಿ ತಳಿಗಳು ವಿಯೆಟ್ನಾಂ ನಲ್ಲಿ ಕಂಡುಬಂದಿದ್ದವು ಎಂದು ಹೇಳಲಾಗಿದೆ.

ಈ ಹಿಂದೆ ವಿಯೆಟ್ನಾಂ ಸರ್ಕಾರದ ಕೊರೋನಾ ನಿರ್ವಹಣೆಯ ಕುರಿತು ಜಗತ್ತಿನಾದ್ಯಂತ ಮೆಚ್ಚುಗೆಗಳು ಕೇಳಿ ಬಂದಿದ್ದವು. ಸೋಂಕಿತರ ಪತ್ತೆ ಮತ್ತು ಮಾಸ್‌ ಕ್ವಾರಂಟೈನ್‌ನಿಂದಾಗಿ ವಿಯೆಟ್ನಾಂ ನಲ್ಲಿ ಸೋಕಿಂಗೆ ತುತ್ತಾಗುವವರ ಶೇಕಡಾ ಪ್ರಮಾಣ ಅತ್ಯಂತ ಕಡಿಮೆಯಾಗಿತ್ತು.

ಹೊಸ ಮಾದರಿಯ ಕೊರೋನಾ ರೂಪಾಂತರಿ ತಳಿ ಮತ್ತು ಕೊರೋನಾ ಎರಡನೆ ಅಲೆಯು ವಿಯೆಟ್ನಾಂ ಸರ್ಕಾರ ಮತ್ತು ಜನರಲ್ಲಿ ಭೀತಿಯನ್ನು ಹುಟ್ಟಿಸಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಅಲ್ಲಿನ ಸರ್ಕಾರ ಜನರ ಓಡಾಟದ ಮೇಲೆ ನಿರ್ಭಂದವನ್ನು ಹೇರಿದ್ದು ಹೊಟೇಲ್‌, ರೆಸ್ಟೋರೆಂಟ್, ಶಾಲಾ ಕಾಲೇಜು ಮತ್ತು ಇತರ ವಾಣಿಜ್ಯ, ಶೈಕ್ಷಣಿಕ, ಸಾಂಸ್ಕೃತಿಕ ಚಟುವಟಿಕೆಗಳನ್ನು ಅಲ್ಲಿನ ಸರ್ಕಾರ ನಿಷೇಧಿಸಿದೆ.

ವಿಯೆಟ್ನಾಂ ಸರಿಸುಮಾರು 9.7 ಕೋಟಿ ಜನಸಂಖ್ಯೆಯನ್ನು ಹೊಂದಿದೆ. ಇವರಲ್ಲಿ 10 ಲಕ್ಷ ಜನರಿಗೆ ಕೊರೋನಾ ಲಸಿಕೆಯನ್ನು ನೀಡಲಾಗಿದೆ. ಈ ದೇಶದ ಅಂತ್ಯಕ್ಕೆ ಕೊರೋನಾ ವ್ಯಾಕ್ಸಿನೇಷನ್ ಪ್ರಕ್ರಿಯೆಯನ್ನು ಸಂಪೂರ್ಣಗೊಳಿಸುವ ಗುರಿಯನ್ನು ಅಲ್ಲಿನ ಸರ್ಕಾರ ಇಟ್ಟುಕೊಂಡಿದೆ.

ವಿಯೆಟ್ನಾಂ ಸರ್ಕಾರ ಉದ್ಯಮಿಗಳು ಮತ್ತು ಇತರ ಶ್ರೀಮಂತರಲ್ಲಿ ಕೊರೋನಾ ನಿರ್ವಹಣೆಗೆ ತಮ್ಮ ಕೊಡುಗೆಗಳನ್ನು ನೀಡುವಂತೆ ಮನವಿ ಮಾಡಿಕೊಂಡಿದೆ.

ವಿಯೆಟ್ನಾಂ ಗೆ ಅತ್ಯಂತ ಸಮೀಪದಲ್ಲಿರುವ ಥಾಯ್ಲೆಂಡ್‌ ನಲ್ಲಿ ಕೊರೋನಾ ಹೊಸ ರೂಪಾಂತರಿ ತಳಿ ವೈರಸ್‌ಗಳು ಕಾಣಿಸಿಕೊಂಡಿವೆ. ಥಾಯ್ಲೆಂಡ್‌ ಸರ್ಕಾರ ಶನಿವಾರ ಸುದ್ದಿಗೋಷ್ಠಿಯನ್ನು ನಡೆಸಿ ಹೊಸ ತಳಿಯ ವೈರಸ್ ಅನ್ನು ಮಾಧ್ಯಮಗಳು ʼಥಾಯ್‌ ವೇರಿಯೆಂಟ್‌ʼ ಎಂದು ಬಿಂಬಿಸುತ್ತಿರುವುದನ್ನು ವ್ಯಾಪಕವಾಗಿ ಖಂಡಿಸಿದೆ. ಈ ರೀತಿಯ ಆಧಾರ ರಹಿತವಾದ ಸುದ್ದಿ ಅಪಪ್ರಚಾರಗಳನ್ನು ನಿಲ್ಲಿಸುವಂತೆ ಮಾಧ್ಯಮಗಳಲ್ಲಿ ಥಾಯ್ಲೆಂಡ್‌ ಸರ್ಕಾರ ಮನವಿಯನ್ನು ಮಾಡಿಕೊಂಡಿದೆ.

ಚರ್ಚೆಯಾಗುತ್ತಿರುವ ಹೊಸ ಕೊರೋನಾ ರೂಪಾಂತರಿ ತಳಿ ಮೊಟ್ಟಮೊದಲ ಬಾರಿಗೆ ಥಾಯ್ಲೆಂಡಿನಲ್ಲಿ 33 ವರ್ಷದ ಈಜಿಪ್ಟ್‌ ದೇಶದ ಪ್ರವಾಸಿಯೊಬ್ಬರಲ್ಲಿ ಕಾಣಿಸಿಕೊಂಡಿತ್ತು. ನಂತರ ಬ್ರಿಟನ್‌ ನಲ್ಲಿ ಈ ಹೊಸ ರೂಪಾಂತರಿ ಕೊರೋನಾ ವೈರಸ್‌ ಸಂಬಂಧಿಸಿದ 109 ಪ್ರಕರಣಗಳು ವರದಿಯಾಗಿವೆ ಎಂದು ಬ್ರಿಟನ್‌ ದೇಶದ ಅಧಿಕಾರಿಗಳು ತಿಳಿಸಿವೆ.


ಇದನ್ನೂ ಓದಿ: ಖಾಸಗಿ ಆಸ್ಪತ್ರೆಗಳು ಹೊಟೇಲ್‌ಗಳ ಜೊತೆ ಸೇರಿ ಲಸಿಕೆ ಪ್ಯಾಕೇಜ್ ನೀಡುವಂತಿಲ್ಲ: ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...