Homeಅಂತರಾಷ್ಟ್ರೀಯಭಾರತ, ಬ್ರಿಟನ್‌ನ ಹೊಸ ರೂಪಾಂತರಿ ಕೊರೋನಾ ವೈರಸ್‌ ಗಾಳಿಯಲ್ಲಿ ಅತಿ ಬೇಗ ಹರಡಬಲ್ಲದು: ವಿಯೆಟ್ನಾಮ್‌

ಭಾರತ, ಬ್ರಿಟನ್‌ನ ಹೊಸ ರೂಪಾಂತರಿ ಕೊರೋನಾ ವೈರಸ್‌ ಗಾಳಿಯಲ್ಲಿ ಅತಿ ಬೇಗ ಹರಡಬಲ್ಲದು: ವಿಯೆಟ್ನಾಮ್‌

- Advertisement -
- Advertisement -

ಭಾರತ ಮತ್ತು ಬ್ರಿಟನ್‌ನಲ್ಲಿ ಪತ್ತೆಯಾಗಿರುವ ಹೊಸ ರೂಪಾಂತರಿ ಕೊರೋನಾ ವೈರೈಸ್‌ ಈಗ ವಿಯೆಟ್ನಾಂ ದೇಶದಲ್ಲೂ ಕಾಣಿಸಿಕೊಂಡಿದೆ. ಈ ಮಾದರಿಯ ವೈರಸ್‌ಗಳು ಗಾಳಿಯಲ್ಲಿ ಅತಿ ಶೀಘ್ರವಾಗಿ ಹರಡಬಲ್ಲದು ಎಂದು ವಿಯೆಟ್ನಾಂ ತನ್ನ ಸಂಶೋಧನೆಯ ಮೂಲಕ ತಿಳಿಸಿದೆ. ಗಂಟಲ ದ್ರವದಲ್ಲಿ ಸೇರಿರುವ ಹೊಸ ರೂಪಾಂತರಿ ವೈರಸ್‌ ಶೀಘ್ರವಾಗಿ ಸುತ್ತಲಿನ ವಾತಾವರಣಕ್ಕೆ ಹರಡುವ ಶಕ್ತಿ ಹೊಂದಿದೆ ಎಂದು ಹೇಳಿದೆ.

ವಿಯೆಟ್ನಾಂ ದೇಶದಲ್ಲಿ ಇದುವರೆಗೆ 6800 ಜನರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು 47 ಜನರು ಈ ವೈರಸ್‌ ಗೆ ಬಲಿಯಾಗಿದ್ದಾರೆ ಎಂದು ವಿಯೆಟ್ನಾಂ ಸರ್ಕಾರ ತಿಳಿಸಿದೆ. ವಿಯೆಟ್ನಾಂ ನಲ್ಲಿ ಇದು ವರೆಗೆ 10 ಲಕ್ಷ ಜನರಿಗೆ ಕೋವಿಡ್‌ ವ್ಯಾಕ್ಸಿನ್‌ ನೀಡಲಾಗಿದೆ ಎಂದು ಅಲ್ಲಿನ ಸರ್ಕಾರ ತಿಳಿಸಿದೆ.

ಬ್ರಿಟನ್‌ ಮತ್ತು ಭಾರತದಲ್ಲಿ ರೂಪಾಂತರಗೊಂಡ ಹೊಸ ಕೋರೋನಾ ವೈರಸ್‌ ತಳಿ ವಿಯೆಟ್ನಾಂ ನಲ್ಲಿ ತೀವ್ರವಾಗಿ ಹರಡುತ್ತಿದೆ ಇದೆ ಎಂದು ವಿಯೆಟ್ನಾಂ ಆರೋಗ್ಯ ಸಚಿವಾಲಯ ತಿಳಿಸಿದೆ. ಕೊರೋನಾ ಎರಡನೇಯ ಅಲೆಯ ಸಂದರ್ಭದಲ್ಲಿ ವಿಯೆಟ್ನಾಂ ನ ಅರ್ಧದಷ್ಟು ಭಾಗಕ್ಕೆ ಕೊರೋನಾ ವೈರಸ್‌ ಹರಡಿದೆ. ಹನೋಯಿ ಮತ್ತು ಹೋ ಚಿನ್‌ ಮಿನ್ಹ್‌ ನಂತಹ ಕೈಗಾರಿಕಾ ನಗರಗಳಲ್ಲಿ ಕೊರೋನಾ ಹೊಸ ರೂಪಾಂತರಿ ತಳಿ ವೈರಸ್‌ ತೀವ್ರವಾಗಿ ಹರಡುತ್ತಿದೆ. ಕೊರೋನಾ ಸೋಂಕಿನ ಹರಡುವಿಕೆ ಕಳೆದ ವರ್ಷಕ್ಕಿಂತ ಈ ವರ್ಷ ತೀವ್ರವಾಗಿದೆ ಎಂದು ವಿಯೆಟ್ನಾಂ ಸರ್ಕಾರ ತಿಳಿಸಿದೆ.

ನಾವು ಭಾರತ ಮತ್ತು ಬ್ರಿಟನ್‌ ನಲ್ಲಿ ಮೊತ್ತ ಮೊದಲಿಗೆ ಕಾಣಿಸಿಕೊಂಡ ಕೊರೋನಾ ಹೊಸ ರೂಪಾಂತರಿಯನ್ನು ವಿಯಾಟ್ನಾಂ ನಲ್ಲಿಯೂ ಪತ್ತೆ ಹಚ್ಚಿದ್ದೇವೆ. ಗಂಟಲುದ್ರವದಲ್ಲಿ ಸೇರಿರುವ ಈ ಹೊಸ ತಳಿ ವೈರಸ್‌ಗಳು ಅತ್ಯಂತ ಶೀಘ್ರವಾಗಿ ಮತ್ತು ತೀವ್ರ ಸ್ವರೂಪದಲ್ಲಿ ಗಾಳಿಯ ಮೂಲಕ ಸುತ್ತಲಿನ ಪರಿಸರಕ್ಕೆ ಹರಡುತ್ತಿರುವುದನ್ನು ಕಂಡುಕೊಂಡಿದ್ದೇವೆ ಎಂದು ವಿಯೆಟ್ನಾಂ ಆರೋಗ್ಯ ಸಚಿವ ನುಗುಯೆನ್‌ ಥಾನ್‌ ಲಾಂಗ್‌ ಶನಿವಾರ ಅಲ್ಲಿನ ಮಾಧ್ಯಮಗಳಿಗೆ ತಿಳಿಸಿದ್ದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ವಿಯೆಟ್ನಾಂನ ವಿಜ್ಞಾನಿಗಳು ಇತ್ತೀಚೆಗೆ ಪರೀಕ್ಷಿಸಲಾದ 32 ಜನರಲ್ಲಿ 4 ಜನರಲ್ಲಿ ಹೊಸ ರೂಪಾಂತರಿ ಕೊರೋನಾ ವೈರಸ್‌ ಅಂಶಗಳು ಕಂಡುಬಂದಿವೆ ಎಂದು ತಿಳಿಸಿದೆ.
ವಿಯೇಟ್ನಾಂ ಆರೋಗ್ಯ ಮಂತ್ರಿ ಶನಿವಾರ ಮೇ 29 ರಂದು ಹೊಸ ತಳಿಯನ್ನು ಘೋಷಿಸುವ ಮೊದಲು ಇದುವರೆಗೆ ಏಳು ಮಾದರಿಯ ಕೊರೋನಾ ರೂಪಾಂತರಿ ತಳಿಗಳು ವಿಯೆಟ್ನಾಂ ನಲ್ಲಿ ಕಂಡುಬಂದಿದ್ದವು ಎಂದು ಹೇಳಲಾಗಿದೆ.

ಈ ಹಿಂದೆ ವಿಯೆಟ್ನಾಂ ಸರ್ಕಾರದ ಕೊರೋನಾ ನಿರ್ವಹಣೆಯ ಕುರಿತು ಜಗತ್ತಿನಾದ್ಯಂತ ಮೆಚ್ಚುಗೆಗಳು ಕೇಳಿ ಬಂದಿದ್ದವು. ಸೋಂಕಿತರ ಪತ್ತೆ ಮತ್ತು ಮಾಸ್‌ ಕ್ವಾರಂಟೈನ್‌ನಿಂದಾಗಿ ವಿಯೆಟ್ನಾಂ ನಲ್ಲಿ ಸೋಕಿಂಗೆ ತುತ್ತಾಗುವವರ ಶೇಕಡಾ ಪ್ರಮಾಣ ಅತ್ಯಂತ ಕಡಿಮೆಯಾಗಿತ್ತು.

ಹೊಸ ಮಾದರಿಯ ಕೊರೋನಾ ರೂಪಾಂತರಿ ತಳಿ ಮತ್ತು ಕೊರೋನಾ ಎರಡನೆ ಅಲೆಯು ವಿಯೆಟ್ನಾಂ ಸರ್ಕಾರ ಮತ್ತು ಜನರಲ್ಲಿ ಭೀತಿಯನ್ನು ಹುಟ್ಟಿಸಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಅಲ್ಲಿನ ಸರ್ಕಾರ ಜನರ ಓಡಾಟದ ಮೇಲೆ ನಿರ್ಭಂದವನ್ನು ಹೇರಿದ್ದು ಹೊಟೇಲ್‌, ರೆಸ್ಟೋರೆಂಟ್, ಶಾಲಾ ಕಾಲೇಜು ಮತ್ತು ಇತರ ವಾಣಿಜ್ಯ, ಶೈಕ್ಷಣಿಕ, ಸಾಂಸ್ಕೃತಿಕ ಚಟುವಟಿಕೆಗಳನ್ನು ಅಲ್ಲಿನ ಸರ್ಕಾರ ನಿಷೇಧಿಸಿದೆ.

ವಿಯೆಟ್ನಾಂ ಸರಿಸುಮಾರು 9.7 ಕೋಟಿ ಜನಸಂಖ್ಯೆಯನ್ನು ಹೊಂದಿದೆ. ಇವರಲ್ಲಿ 10 ಲಕ್ಷ ಜನರಿಗೆ ಕೊರೋನಾ ಲಸಿಕೆಯನ್ನು ನೀಡಲಾಗಿದೆ. ಈ ದೇಶದ ಅಂತ್ಯಕ್ಕೆ ಕೊರೋನಾ ವ್ಯಾಕ್ಸಿನೇಷನ್ ಪ್ರಕ್ರಿಯೆಯನ್ನು ಸಂಪೂರ್ಣಗೊಳಿಸುವ ಗುರಿಯನ್ನು ಅಲ್ಲಿನ ಸರ್ಕಾರ ಇಟ್ಟುಕೊಂಡಿದೆ.

ವಿಯೆಟ್ನಾಂ ಸರ್ಕಾರ ಉದ್ಯಮಿಗಳು ಮತ್ತು ಇತರ ಶ್ರೀಮಂತರಲ್ಲಿ ಕೊರೋನಾ ನಿರ್ವಹಣೆಗೆ ತಮ್ಮ ಕೊಡುಗೆಗಳನ್ನು ನೀಡುವಂತೆ ಮನವಿ ಮಾಡಿಕೊಂಡಿದೆ.

ವಿಯೆಟ್ನಾಂ ಗೆ ಅತ್ಯಂತ ಸಮೀಪದಲ್ಲಿರುವ ಥಾಯ್ಲೆಂಡ್‌ ನಲ್ಲಿ ಕೊರೋನಾ ಹೊಸ ರೂಪಾಂತರಿ ತಳಿ ವೈರಸ್‌ಗಳು ಕಾಣಿಸಿಕೊಂಡಿವೆ. ಥಾಯ್ಲೆಂಡ್‌ ಸರ್ಕಾರ ಶನಿವಾರ ಸುದ್ದಿಗೋಷ್ಠಿಯನ್ನು ನಡೆಸಿ ಹೊಸ ತಳಿಯ ವೈರಸ್ ಅನ್ನು ಮಾಧ್ಯಮಗಳು ʼಥಾಯ್‌ ವೇರಿಯೆಂಟ್‌ʼ ಎಂದು ಬಿಂಬಿಸುತ್ತಿರುವುದನ್ನು ವ್ಯಾಪಕವಾಗಿ ಖಂಡಿಸಿದೆ. ಈ ರೀತಿಯ ಆಧಾರ ರಹಿತವಾದ ಸುದ್ದಿ ಅಪಪ್ರಚಾರಗಳನ್ನು ನಿಲ್ಲಿಸುವಂತೆ ಮಾಧ್ಯಮಗಳಲ್ಲಿ ಥಾಯ್ಲೆಂಡ್‌ ಸರ್ಕಾರ ಮನವಿಯನ್ನು ಮಾಡಿಕೊಂಡಿದೆ.

ಚರ್ಚೆಯಾಗುತ್ತಿರುವ ಹೊಸ ಕೊರೋನಾ ರೂಪಾಂತರಿ ತಳಿ ಮೊಟ್ಟಮೊದಲ ಬಾರಿಗೆ ಥಾಯ್ಲೆಂಡಿನಲ್ಲಿ 33 ವರ್ಷದ ಈಜಿಪ್ಟ್‌ ದೇಶದ ಪ್ರವಾಸಿಯೊಬ್ಬರಲ್ಲಿ ಕಾಣಿಸಿಕೊಂಡಿತ್ತು. ನಂತರ ಬ್ರಿಟನ್‌ ನಲ್ಲಿ ಈ ಹೊಸ ರೂಪಾಂತರಿ ಕೊರೋನಾ ವೈರಸ್‌ ಸಂಬಂಧಿಸಿದ 109 ಪ್ರಕರಣಗಳು ವರದಿಯಾಗಿವೆ ಎಂದು ಬ್ರಿಟನ್‌ ದೇಶದ ಅಧಿಕಾರಿಗಳು ತಿಳಿಸಿವೆ.


ಇದನ್ನೂ ಓದಿ: ಖಾಸಗಿ ಆಸ್ಪತ್ರೆಗಳು ಹೊಟೇಲ್‌ಗಳ ಜೊತೆ ಸೇರಿ ಲಸಿಕೆ ಪ್ಯಾಕೇಜ್ ನೀಡುವಂತಿಲ್ಲ: ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...