Homeಮುಖಪುಟಗೂಡಾಚರ್ಯೆಯ ಪೆಗಾಸಸ್‌‌ ಸ್ಪೈವೇರ್‌‌ಅನ್ನು ಭಾರತ ಖರೀದಿಸಿದೆ: ನ್ಯೂಯಾರ್ಕ್ ಟೈಮ್ಸ್‌ ವರದಿ

ಗೂಡಾಚರ್ಯೆಯ ಪೆಗಾಸಸ್‌‌ ಸ್ಪೈವೇರ್‌‌ಅನ್ನು ಭಾರತ ಖರೀದಿಸಿದೆ: ನ್ಯೂಯಾರ್ಕ್ ಟೈಮ್ಸ್‌ ವರದಿ

- Advertisement -
- Advertisement -

ಕ್ಷಿಪಣಿ ವ್ಯವಸ್ಥೆ ಸೇರಿದಂತೆ ಶಸ್ತ್ರಾಸ್ತ್ರಗಳಿಗಾಗಿ ಮಾಡಿಕೊಂಡ 2-ಬಿಲಿಯನ್ ಡಾಲರ್‌‌ ಪ್ಯಾಕೇಜ್‌ನ ಭಾಗವಾಗಿ 2017ರಲ್ಲಿ ಭಾರತ ಸರ್ಕಾರ ಇಸ್ರೇಲಿ ಸ್ಪೈವೇರ್ ಪೆಗಾಸಸ್ ಅನ್ನೂ ಖರೀದಿಸಿತು ಎಂದು ನ್ಯೂಯಾರ್ಕ್ ಟೈಮ್ಸ್ ಶುಕ್ರವಾರ ವರದಿ ಮಾಡಿದೆ.

ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ ಕೂಡ ಸ್ಪೈವೇರ್ ಅನ್ನು ಖರೀದಿಸಿದೆ ಹಾಗೂ ಪರೀಕ್ಷಿಸಿದೆ ಎಂದು ವರ್ಷವಿಡೀ ನಡೆಸಿದ ತನಿಖೆಯಲ್ಲಿ ತಿಳಿದುಬಂದಿದೆ.

ಪತ್ರಕರ್ತರು, ಭಿನ್ನಮತೀಯರನ್ನು ಗುರಿಯಾಗಿಸಲು ಮೆಕ್ಸಿಕೋ ದೇಶ ಪೆಗಾಸಸ್ ಬಳಸಿದೆ. ಸೌದಿ ಅರೇಬಿಯಾ ದೇಶಯು ಮಹಿಳಾ ಹಕ್ಕುಗಳ ಕಾರ್ಯಕರ್ತರು ಮತ್ತು ಸೌದಿ ಕಾರ್ಯಕರ್ತರಿಂದ ಕೊಲ್ಲಲ್ಪಟ್ಟ ಅಂಕಣಕಾರ ಜಮಾಲ್ ಖಶೋಗಿಯ ಸಹಚರರ ವಿರುದ್ಧ ಸ್ಪೈವೇರ್ ಬಳಸಿದೆ ಎಂದು ವರದಿ ಹೇಳಿದೆ. ಇಸ್ರೇಲಿ ರಕ್ಷಣಾ ಸಚಿವಾಲಯದಿಂದ ಪರವಾನಗಿ ಪಡೆದ ಹೊಸ ಒಪ್ಪಂದಗಳ ಅಡಿಯಲ್ಲಿ, ಪೋಲೆಂಡ್, ಹಂಗೇರಿ, ಭಾರತ ಮತ್ತು ಇತರ ದೇಶಗಳಿಗೆ ಪೆಗಾಸಸ್ ಅನ್ನು ಒದಗಿಸಲಾಗಿದೆ ಎಂದು ತನಿಖಾ ವರದಿ ಮಾಡಿದೆ.

ಜುಲೈ 2017ರಲ್ಲಿ ಇಸ್ರೇಲ್‌ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದರು. ಆಗಿನ ಒಪ್ಪಂದಗಳತ್ತ ತನಿಖಾ ವರದಿ ಬೆರಳು ತೋರಿದೆ.

ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಭೇಟಿಯು ಐತಿಹಾಸಿಕವಾಗಿ ಗಮನ ಸೆಳೆಯಿತು. ಅಲ್ಲದೆ ಸೌಹಾರ್ದಯುತವಾಗಿತ್ತು. ಮೋದಿ ಹಾಗೂ ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಸ್ಥಳೀಯ ಕಡಲತೀರದಲ್ಲಿ ಬರಿಗಾಲಿನಲ್ಲಿ ತಿರುಗಾಡಿದ್ದರು. ಸುಮಾರು 2 ಬಿಲಿಯನ್ ಡಾಲರ್‌ ಮೌಲ್ಯದ ಅತ್ಯಾಧುನಿಕ ಶಸ್ತ್ರಾಸ್ತ್ರಗಳು ಮತ್ತು ಗುಪ್ತಚರ ಸಾಧನಗಳ ಪ್ಯಾಕೇಜ್ ಅನ್ನು ಮಾರಾಟ ಮಾಡಲು ಉಭಯ ದೇಶಗಳು ಒಪ್ಪಿಕೊಂಡವು ಎಂದು ವರದಿ ಹೇಳುತ್ತದೆ.

ತಿಂಗಳುಗಳ ನಂತರ ಆ ಸಮಯದಲ್ಲಿ ಇಸ್ರೇಲಿ ಪ್ರಧಾನಿ ನೆತನ್ಯಾಹು ಅವರು ಭಾರತಕ್ಕೆ ಅಪರೂಪದ ಭೇಟಿ ನೀಡಿದರು. ಜೂನ್ 2019ರಲ್ಲಿ ಭಾರತವು ಯುಎನ್‌ನ ಆರ್ಥಿಕ ಮತ್ತು ಸಾಮಾಜಿಕ ಮಂಡಳಿಯಲ್ಲಿ ವೀಕ್ಷಕ ಸ್ಥಾನಮಾನವನ್ನು ನಿರಾಕರಿಸಲು ಇಸ್ರೇಲ್‌ಗೆ ಬೆಂಬಲವಾಗಿ ಮತ ಹಾಕಿತು ಎಂದು ವರದಿ ಉಲ್ಲೇಖಿಸಿದೆ.

ಭಾರತ ಸರ್ಕಾರ ಅಥವಾ ಇಸ್ರೇಲ್ ಸರ್ಕಾರವು ಪೆಗಾಸಸ್ ಅನ್ನು ಭಾರತ ಖರೀದಿಸಿದೆ ಎಂದು ಇಲ್ಲಿಯವರೆಗೆ ಒಪ್ಪಿಕೊಂಡಿಲ್ಲ.

ತಮ್ಮ ವಿರೋಧಿಗಳು, ಪತ್ರಕರ್ತರು, ಉದ್ಯಮಿಗಳು ಇತ್ಯಾದಿಗಳ ಮೇಲೆ ಕಣ್ಣಿಡಲು ಸ್ಪೈವೇರ್ ಅನ್ನು ವಿಶ್ವದಾದ್ಯಂತ ಹಲವಾರು ಸರ್ಕಾರಗಳು ಬಳಸಿರುವ ಕುರಿತು ಮಾಧ್ಯಮ ಗುಂಪುಗಳ ಜಾಗತಿಕ ಒಕ್ಕೂಟವು ಎಚ್ಚರಿಸಿದೆ.

ಭಾರತ ಪ್ರಖ್ಯಾತ ಸುದ್ದಿ ಜಾಲತಾಣ ದಿ ವೈರ್ ನಡೆಸಿದ ತನಿಖೆಯಲ್ಲಿ ಪೆಗಾಸಸ್ ಗೂಡಾಚರ್ಯೆ ನಡೆಸಿರುವ ಸಂಭಾವ್ಯ ಪ್ರಖ್ಯಾತರ ಪಟ್ಟಿ ಹೊರಬಿದ್ದಿತ್ತು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್, ಆಗಿನ ಚುನಾವಣಾ ಆಯುಕ್ತ ಅಶೋಕ್ ಲಾವಾಸಾ, ಸೇರಿದಂತೆ ಹಲವಾರು ಇತರ ಪ್ರಮುಖರ ಹೆಸರುಗಳಿದ್ದವು.

ಪೆಗಾಸಸ್ ಬಗ್ಗೆ ಮೊದಲ ವರದಿಗಳು ಹೊರಬಂದ ನಂತರ, ಈ ವಿಷಯವನ್ನು ಸಂಸತ್ತಿನಲ್ಲಿ ಪ್ರತಿಪಕ್ಷಗಳು ಮಂಡಿಸಿದವು. ತೀವ್ರ ಪ್ರತಿಭಟನೆಯನ್ನು ಸರ್ಕಾರದ ವಿರುದ್ಧ ನಡೆಸಲಾಯಿತು. ಪ್ರಕರಣ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತು. ಸುಪ್ರೀಂ ಕೋರ್ಟ್ ಆರೋಪಗಳನ್ನು ಪರಿಶೀಲಿಸಲು ಸಮಿತಿಯನ್ನು ರಚಿಸಿತು. ಅದರ ವಿಚಾರಣೆ ನಡೆಯುತ್ತಿದೆ. ವಿಚಾರಣೆಯ ಸಂದರ್ಭದಲ್ಲಿ, ಸುಪ್ರೀಂ ಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿ‌ದೆ.

ಭಾರತ ಪೆಗಾಸಸ್ ಸ್ಪೈವೇರ್‌ ಖರೀದಿಸಿದೆ ಎಂಬ ತನಿಖಾ ವರದಿ ಹೊರಬಿದ್ದ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಟ್ವೀಟ್ ಮಾಡಿದ್ದಾರೆ.

“ನಮ್ಮ ಪ್ರಜಾಪ್ರಭುತ್ವದ ಪ್ರಾಥಮಿಕ ಸಂಸ್ಥೆಗಳು, ರಾಷ್ಟ್ರ ನಾಯಕರು ಮತ್ತು ಸಾರ್ವಜನಿಕರ ಮೇಲೆ ಕಣ್ಣಿಡಲು ಮೋದಿ ಸರ್ಕಾರ ಪೆಗಾಸಸ್ ಖರೀದಿಸಿತು. ಫೋನ್ ಕದ್ದಾಲಿಕೆ ಮಾಡುವ ಮೂಲಕ ಆಡಳಿತ ಪಕ್ಷ, ವಿರೋಧ ಪಕ್ಷ, ಸೇನೆ, ನ್ಯಾಯಾಂಗ ಎಲ್ಲರ ಮೇಲೂ ಕಣ್ಣು ಇಡಲಾಗಿದೆ. ಇದು ದೇಶದ್ರೋಹ” ಎಂದಿದ್ದಾರೆ.


ಇದನ್ನೂ ಓದಿರಿ: ಪೆಗಾಸಸ್ ಫೋನ್‌ ಹ್ಯಾಕ್‌ಗೆ ಒಳಗಾದವರು ಯಾರು ಯಾರು? ಪ್ರಮುಖ 30 ಜನರ ಪಟ್ಟಿ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...