Homeಮುಖಪುಟಗೂಡಾಚರ್ಯೆಯ ಪೆಗಾಸಸ್‌‌ ಸ್ಪೈವೇರ್‌‌ಅನ್ನು ಭಾರತ ಖರೀದಿಸಿದೆ: ನ್ಯೂಯಾರ್ಕ್ ಟೈಮ್ಸ್‌ ವರದಿ

ಗೂಡಾಚರ್ಯೆಯ ಪೆಗಾಸಸ್‌‌ ಸ್ಪೈವೇರ್‌‌ಅನ್ನು ಭಾರತ ಖರೀದಿಸಿದೆ: ನ್ಯೂಯಾರ್ಕ್ ಟೈಮ್ಸ್‌ ವರದಿ

- Advertisement -
- Advertisement -

ಕ್ಷಿಪಣಿ ವ್ಯವಸ್ಥೆ ಸೇರಿದಂತೆ ಶಸ್ತ್ರಾಸ್ತ್ರಗಳಿಗಾಗಿ ಮಾಡಿಕೊಂಡ 2-ಬಿಲಿಯನ್ ಡಾಲರ್‌‌ ಪ್ಯಾಕೇಜ್‌ನ ಭಾಗವಾಗಿ 2017ರಲ್ಲಿ ಭಾರತ ಸರ್ಕಾರ ಇಸ್ರೇಲಿ ಸ್ಪೈವೇರ್ ಪೆಗಾಸಸ್ ಅನ್ನೂ ಖರೀದಿಸಿತು ಎಂದು ನ್ಯೂಯಾರ್ಕ್ ಟೈಮ್ಸ್ ಶುಕ್ರವಾರ ವರದಿ ಮಾಡಿದೆ.

ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ ಕೂಡ ಸ್ಪೈವೇರ್ ಅನ್ನು ಖರೀದಿಸಿದೆ ಹಾಗೂ ಪರೀಕ್ಷಿಸಿದೆ ಎಂದು ವರ್ಷವಿಡೀ ನಡೆಸಿದ ತನಿಖೆಯಲ್ಲಿ ತಿಳಿದುಬಂದಿದೆ.

ಪತ್ರಕರ್ತರು, ಭಿನ್ನಮತೀಯರನ್ನು ಗುರಿಯಾಗಿಸಲು ಮೆಕ್ಸಿಕೋ ದೇಶ ಪೆಗಾಸಸ್ ಬಳಸಿದೆ. ಸೌದಿ ಅರೇಬಿಯಾ ದೇಶಯು ಮಹಿಳಾ ಹಕ್ಕುಗಳ ಕಾರ್ಯಕರ್ತರು ಮತ್ತು ಸೌದಿ ಕಾರ್ಯಕರ್ತರಿಂದ ಕೊಲ್ಲಲ್ಪಟ್ಟ ಅಂಕಣಕಾರ ಜಮಾಲ್ ಖಶೋಗಿಯ ಸಹಚರರ ವಿರುದ್ಧ ಸ್ಪೈವೇರ್ ಬಳಸಿದೆ ಎಂದು ವರದಿ ಹೇಳಿದೆ. ಇಸ್ರೇಲಿ ರಕ್ಷಣಾ ಸಚಿವಾಲಯದಿಂದ ಪರವಾನಗಿ ಪಡೆದ ಹೊಸ ಒಪ್ಪಂದಗಳ ಅಡಿಯಲ್ಲಿ, ಪೋಲೆಂಡ್, ಹಂಗೇರಿ, ಭಾರತ ಮತ್ತು ಇತರ ದೇಶಗಳಿಗೆ ಪೆಗಾಸಸ್ ಅನ್ನು ಒದಗಿಸಲಾಗಿದೆ ಎಂದು ತನಿಖಾ ವರದಿ ಮಾಡಿದೆ.

ಜುಲೈ 2017ರಲ್ಲಿ ಇಸ್ರೇಲ್‌ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದರು. ಆಗಿನ ಒಪ್ಪಂದಗಳತ್ತ ತನಿಖಾ ವರದಿ ಬೆರಳು ತೋರಿದೆ.

ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಭೇಟಿಯು ಐತಿಹಾಸಿಕವಾಗಿ ಗಮನ ಸೆಳೆಯಿತು. ಅಲ್ಲದೆ ಸೌಹಾರ್ದಯುತವಾಗಿತ್ತು. ಮೋದಿ ಹಾಗೂ ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಸ್ಥಳೀಯ ಕಡಲತೀರದಲ್ಲಿ ಬರಿಗಾಲಿನಲ್ಲಿ ತಿರುಗಾಡಿದ್ದರು. ಸುಮಾರು 2 ಬಿಲಿಯನ್ ಡಾಲರ್‌ ಮೌಲ್ಯದ ಅತ್ಯಾಧುನಿಕ ಶಸ್ತ್ರಾಸ್ತ್ರಗಳು ಮತ್ತು ಗುಪ್ತಚರ ಸಾಧನಗಳ ಪ್ಯಾಕೇಜ್ ಅನ್ನು ಮಾರಾಟ ಮಾಡಲು ಉಭಯ ದೇಶಗಳು ಒಪ್ಪಿಕೊಂಡವು ಎಂದು ವರದಿ ಹೇಳುತ್ತದೆ.

ತಿಂಗಳುಗಳ ನಂತರ ಆ ಸಮಯದಲ್ಲಿ ಇಸ್ರೇಲಿ ಪ್ರಧಾನಿ ನೆತನ್ಯಾಹು ಅವರು ಭಾರತಕ್ಕೆ ಅಪರೂಪದ ಭೇಟಿ ನೀಡಿದರು. ಜೂನ್ 2019ರಲ್ಲಿ ಭಾರತವು ಯುಎನ್‌ನ ಆರ್ಥಿಕ ಮತ್ತು ಸಾಮಾಜಿಕ ಮಂಡಳಿಯಲ್ಲಿ ವೀಕ್ಷಕ ಸ್ಥಾನಮಾನವನ್ನು ನಿರಾಕರಿಸಲು ಇಸ್ರೇಲ್‌ಗೆ ಬೆಂಬಲವಾಗಿ ಮತ ಹಾಕಿತು ಎಂದು ವರದಿ ಉಲ್ಲೇಖಿಸಿದೆ.

ಭಾರತ ಸರ್ಕಾರ ಅಥವಾ ಇಸ್ರೇಲ್ ಸರ್ಕಾರವು ಪೆಗಾಸಸ್ ಅನ್ನು ಭಾರತ ಖರೀದಿಸಿದೆ ಎಂದು ಇಲ್ಲಿಯವರೆಗೆ ಒಪ್ಪಿಕೊಂಡಿಲ್ಲ.

ತಮ್ಮ ವಿರೋಧಿಗಳು, ಪತ್ರಕರ್ತರು, ಉದ್ಯಮಿಗಳು ಇತ್ಯಾದಿಗಳ ಮೇಲೆ ಕಣ್ಣಿಡಲು ಸ್ಪೈವೇರ್ ಅನ್ನು ವಿಶ್ವದಾದ್ಯಂತ ಹಲವಾರು ಸರ್ಕಾರಗಳು ಬಳಸಿರುವ ಕುರಿತು ಮಾಧ್ಯಮ ಗುಂಪುಗಳ ಜಾಗತಿಕ ಒಕ್ಕೂಟವು ಎಚ್ಚರಿಸಿದೆ.

ಭಾರತ ಪ್ರಖ್ಯಾತ ಸುದ್ದಿ ಜಾಲತಾಣ ದಿ ವೈರ್ ನಡೆಸಿದ ತನಿಖೆಯಲ್ಲಿ ಪೆಗಾಸಸ್ ಗೂಡಾಚರ್ಯೆ ನಡೆಸಿರುವ ಸಂಭಾವ್ಯ ಪ್ರಖ್ಯಾತರ ಪಟ್ಟಿ ಹೊರಬಿದ್ದಿತ್ತು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್, ಆಗಿನ ಚುನಾವಣಾ ಆಯುಕ್ತ ಅಶೋಕ್ ಲಾವಾಸಾ, ಸೇರಿದಂತೆ ಹಲವಾರು ಇತರ ಪ್ರಮುಖರ ಹೆಸರುಗಳಿದ್ದವು.

ಪೆಗಾಸಸ್ ಬಗ್ಗೆ ಮೊದಲ ವರದಿಗಳು ಹೊರಬಂದ ನಂತರ, ಈ ವಿಷಯವನ್ನು ಸಂಸತ್ತಿನಲ್ಲಿ ಪ್ರತಿಪಕ್ಷಗಳು ಮಂಡಿಸಿದವು. ತೀವ್ರ ಪ್ರತಿಭಟನೆಯನ್ನು ಸರ್ಕಾರದ ವಿರುದ್ಧ ನಡೆಸಲಾಯಿತು. ಪ್ರಕರಣ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತು. ಸುಪ್ರೀಂ ಕೋರ್ಟ್ ಆರೋಪಗಳನ್ನು ಪರಿಶೀಲಿಸಲು ಸಮಿತಿಯನ್ನು ರಚಿಸಿತು. ಅದರ ವಿಚಾರಣೆ ನಡೆಯುತ್ತಿದೆ. ವಿಚಾರಣೆಯ ಸಂದರ್ಭದಲ್ಲಿ, ಸುಪ್ರೀಂ ಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿ‌ದೆ.

ಭಾರತ ಪೆಗಾಸಸ್ ಸ್ಪೈವೇರ್‌ ಖರೀದಿಸಿದೆ ಎಂಬ ತನಿಖಾ ವರದಿ ಹೊರಬಿದ್ದ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಟ್ವೀಟ್ ಮಾಡಿದ್ದಾರೆ.

“ನಮ್ಮ ಪ್ರಜಾಪ್ರಭುತ್ವದ ಪ್ರಾಥಮಿಕ ಸಂಸ್ಥೆಗಳು, ರಾಷ್ಟ್ರ ನಾಯಕರು ಮತ್ತು ಸಾರ್ವಜನಿಕರ ಮೇಲೆ ಕಣ್ಣಿಡಲು ಮೋದಿ ಸರ್ಕಾರ ಪೆಗಾಸಸ್ ಖರೀದಿಸಿತು. ಫೋನ್ ಕದ್ದಾಲಿಕೆ ಮಾಡುವ ಮೂಲಕ ಆಡಳಿತ ಪಕ್ಷ, ವಿರೋಧ ಪಕ್ಷ, ಸೇನೆ, ನ್ಯಾಯಾಂಗ ಎಲ್ಲರ ಮೇಲೂ ಕಣ್ಣು ಇಡಲಾಗಿದೆ. ಇದು ದೇಶದ್ರೋಹ” ಎಂದಿದ್ದಾರೆ.


ಇದನ್ನೂ ಓದಿರಿ: ಪೆಗಾಸಸ್ ಫೋನ್‌ ಹ್ಯಾಕ್‌ಗೆ ಒಳಗಾದವರು ಯಾರು ಯಾರು? ಪ್ರಮುಖ 30 ಜನರ ಪಟ್ಟಿ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...