Homeಮುಖಪುಟಗೂಡಾಚರ್ಯೆಯ ಪೆಗಾಸಸ್‌‌ ಸ್ಪೈವೇರ್‌‌ಅನ್ನು ಭಾರತ ಖರೀದಿಸಿದೆ: ನ್ಯೂಯಾರ್ಕ್ ಟೈಮ್ಸ್‌ ವರದಿ

ಗೂಡಾಚರ್ಯೆಯ ಪೆಗಾಸಸ್‌‌ ಸ್ಪೈವೇರ್‌‌ಅನ್ನು ಭಾರತ ಖರೀದಿಸಿದೆ: ನ್ಯೂಯಾರ್ಕ್ ಟೈಮ್ಸ್‌ ವರದಿ

- Advertisement -
- Advertisement -

ಕ್ಷಿಪಣಿ ವ್ಯವಸ್ಥೆ ಸೇರಿದಂತೆ ಶಸ್ತ್ರಾಸ್ತ್ರಗಳಿಗಾಗಿ ಮಾಡಿಕೊಂಡ 2-ಬಿಲಿಯನ್ ಡಾಲರ್‌‌ ಪ್ಯಾಕೇಜ್‌ನ ಭಾಗವಾಗಿ 2017ರಲ್ಲಿ ಭಾರತ ಸರ್ಕಾರ ಇಸ್ರೇಲಿ ಸ್ಪೈವೇರ್ ಪೆಗಾಸಸ್ ಅನ್ನೂ ಖರೀದಿಸಿತು ಎಂದು ನ್ಯೂಯಾರ್ಕ್ ಟೈಮ್ಸ್ ಶುಕ್ರವಾರ ವರದಿ ಮಾಡಿದೆ.

ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ ಕೂಡ ಸ್ಪೈವೇರ್ ಅನ್ನು ಖರೀದಿಸಿದೆ ಹಾಗೂ ಪರೀಕ್ಷಿಸಿದೆ ಎಂದು ವರ್ಷವಿಡೀ ನಡೆಸಿದ ತನಿಖೆಯಲ್ಲಿ ತಿಳಿದುಬಂದಿದೆ.

ಪತ್ರಕರ್ತರು, ಭಿನ್ನಮತೀಯರನ್ನು ಗುರಿಯಾಗಿಸಲು ಮೆಕ್ಸಿಕೋ ದೇಶ ಪೆಗಾಸಸ್ ಬಳಸಿದೆ. ಸೌದಿ ಅರೇಬಿಯಾ ದೇಶಯು ಮಹಿಳಾ ಹಕ್ಕುಗಳ ಕಾರ್ಯಕರ್ತರು ಮತ್ತು ಸೌದಿ ಕಾರ್ಯಕರ್ತರಿಂದ ಕೊಲ್ಲಲ್ಪಟ್ಟ ಅಂಕಣಕಾರ ಜಮಾಲ್ ಖಶೋಗಿಯ ಸಹಚರರ ವಿರುದ್ಧ ಸ್ಪೈವೇರ್ ಬಳಸಿದೆ ಎಂದು ವರದಿ ಹೇಳಿದೆ. ಇಸ್ರೇಲಿ ರಕ್ಷಣಾ ಸಚಿವಾಲಯದಿಂದ ಪರವಾನಗಿ ಪಡೆದ ಹೊಸ ಒಪ್ಪಂದಗಳ ಅಡಿಯಲ್ಲಿ, ಪೋಲೆಂಡ್, ಹಂಗೇರಿ, ಭಾರತ ಮತ್ತು ಇತರ ದೇಶಗಳಿಗೆ ಪೆಗಾಸಸ್ ಅನ್ನು ಒದಗಿಸಲಾಗಿದೆ ಎಂದು ತನಿಖಾ ವರದಿ ಮಾಡಿದೆ.

ಜುಲೈ 2017ರಲ್ಲಿ ಇಸ್ರೇಲ್‌ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದರು. ಆಗಿನ ಒಪ್ಪಂದಗಳತ್ತ ತನಿಖಾ ವರದಿ ಬೆರಳು ತೋರಿದೆ.

ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಭೇಟಿಯು ಐತಿಹಾಸಿಕವಾಗಿ ಗಮನ ಸೆಳೆಯಿತು. ಅಲ್ಲದೆ ಸೌಹಾರ್ದಯುತವಾಗಿತ್ತು. ಮೋದಿ ಹಾಗೂ ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಸ್ಥಳೀಯ ಕಡಲತೀರದಲ್ಲಿ ಬರಿಗಾಲಿನಲ್ಲಿ ತಿರುಗಾಡಿದ್ದರು. ಸುಮಾರು 2 ಬಿಲಿಯನ್ ಡಾಲರ್‌ ಮೌಲ್ಯದ ಅತ್ಯಾಧುನಿಕ ಶಸ್ತ್ರಾಸ್ತ್ರಗಳು ಮತ್ತು ಗುಪ್ತಚರ ಸಾಧನಗಳ ಪ್ಯಾಕೇಜ್ ಅನ್ನು ಮಾರಾಟ ಮಾಡಲು ಉಭಯ ದೇಶಗಳು ಒಪ್ಪಿಕೊಂಡವು ಎಂದು ವರದಿ ಹೇಳುತ್ತದೆ.

ತಿಂಗಳುಗಳ ನಂತರ ಆ ಸಮಯದಲ್ಲಿ ಇಸ್ರೇಲಿ ಪ್ರಧಾನಿ ನೆತನ್ಯಾಹು ಅವರು ಭಾರತಕ್ಕೆ ಅಪರೂಪದ ಭೇಟಿ ನೀಡಿದರು. ಜೂನ್ 2019ರಲ್ಲಿ ಭಾರತವು ಯುಎನ್‌ನ ಆರ್ಥಿಕ ಮತ್ತು ಸಾಮಾಜಿಕ ಮಂಡಳಿಯಲ್ಲಿ ವೀಕ್ಷಕ ಸ್ಥಾನಮಾನವನ್ನು ನಿರಾಕರಿಸಲು ಇಸ್ರೇಲ್‌ಗೆ ಬೆಂಬಲವಾಗಿ ಮತ ಹಾಕಿತು ಎಂದು ವರದಿ ಉಲ್ಲೇಖಿಸಿದೆ.

ಭಾರತ ಸರ್ಕಾರ ಅಥವಾ ಇಸ್ರೇಲ್ ಸರ್ಕಾರವು ಪೆಗಾಸಸ್ ಅನ್ನು ಭಾರತ ಖರೀದಿಸಿದೆ ಎಂದು ಇಲ್ಲಿಯವರೆಗೆ ಒಪ್ಪಿಕೊಂಡಿಲ್ಲ.

ತಮ್ಮ ವಿರೋಧಿಗಳು, ಪತ್ರಕರ್ತರು, ಉದ್ಯಮಿಗಳು ಇತ್ಯಾದಿಗಳ ಮೇಲೆ ಕಣ್ಣಿಡಲು ಸ್ಪೈವೇರ್ ಅನ್ನು ವಿಶ್ವದಾದ್ಯಂತ ಹಲವಾರು ಸರ್ಕಾರಗಳು ಬಳಸಿರುವ ಕುರಿತು ಮಾಧ್ಯಮ ಗುಂಪುಗಳ ಜಾಗತಿಕ ಒಕ್ಕೂಟವು ಎಚ್ಚರಿಸಿದೆ.

ಭಾರತ ಪ್ರಖ್ಯಾತ ಸುದ್ದಿ ಜಾಲತಾಣ ದಿ ವೈರ್ ನಡೆಸಿದ ತನಿಖೆಯಲ್ಲಿ ಪೆಗಾಸಸ್ ಗೂಡಾಚರ್ಯೆ ನಡೆಸಿರುವ ಸಂಭಾವ್ಯ ಪ್ರಖ್ಯಾತರ ಪಟ್ಟಿ ಹೊರಬಿದ್ದಿತ್ತು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್, ಆಗಿನ ಚುನಾವಣಾ ಆಯುಕ್ತ ಅಶೋಕ್ ಲಾವಾಸಾ, ಸೇರಿದಂತೆ ಹಲವಾರು ಇತರ ಪ್ರಮುಖರ ಹೆಸರುಗಳಿದ್ದವು.

ಪೆಗಾಸಸ್ ಬಗ್ಗೆ ಮೊದಲ ವರದಿಗಳು ಹೊರಬಂದ ನಂತರ, ಈ ವಿಷಯವನ್ನು ಸಂಸತ್ತಿನಲ್ಲಿ ಪ್ರತಿಪಕ್ಷಗಳು ಮಂಡಿಸಿದವು. ತೀವ್ರ ಪ್ರತಿಭಟನೆಯನ್ನು ಸರ್ಕಾರದ ವಿರುದ್ಧ ನಡೆಸಲಾಯಿತು. ಪ್ರಕರಣ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತು. ಸುಪ್ರೀಂ ಕೋರ್ಟ್ ಆರೋಪಗಳನ್ನು ಪರಿಶೀಲಿಸಲು ಸಮಿತಿಯನ್ನು ರಚಿಸಿತು. ಅದರ ವಿಚಾರಣೆ ನಡೆಯುತ್ತಿದೆ. ವಿಚಾರಣೆಯ ಸಂದರ್ಭದಲ್ಲಿ, ಸುಪ್ರೀಂ ಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿ‌ದೆ.

ಭಾರತ ಪೆಗಾಸಸ್ ಸ್ಪೈವೇರ್‌ ಖರೀದಿಸಿದೆ ಎಂಬ ತನಿಖಾ ವರದಿ ಹೊರಬಿದ್ದ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಟ್ವೀಟ್ ಮಾಡಿದ್ದಾರೆ.

“ನಮ್ಮ ಪ್ರಜಾಪ್ರಭುತ್ವದ ಪ್ರಾಥಮಿಕ ಸಂಸ್ಥೆಗಳು, ರಾಷ್ಟ್ರ ನಾಯಕರು ಮತ್ತು ಸಾರ್ವಜನಿಕರ ಮೇಲೆ ಕಣ್ಣಿಡಲು ಮೋದಿ ಸರ್ಕಾರ ಪೆಗಾಸಸ್ ಖರೀದಿಸಿತು. ಫೋನ್ ಕದ್ದಾಲಿಕೆ ಮಾಡುವ ಮೂಲಕ ಆಡಳಿತ ಪಕ್ಷ, ವಿರೋಧ ಪಕ್ಷ, ಸೇನೆ, ನ್ಯಾಯಾಂಗ ಎಲ್ಲರ ಮೇಲೂ ಕಣ್ಣು ಇಡಲಾಗಿದೆ. ಇದು ದೇಶದ್ರೋಹ” ಎಂದಿದ್ದಾರೆ.


ಇದನ್ನೂ ಓದಿರಿ: ಪೆಗಾಸಸ್ ಫೋನ್‌ ಹ್ಯಾಕ್‌ಗೆ ಒಳಗಾದವರು ಯಾರು ಯಾರು? ಪ್ರಮುಖ 30 ಜನರ ಪಟ್ಟಿ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...