Homeಮುಖಪುಟಗೂಡಾಚರ್ಯೆಯ ಪೆಗಾಸಸ್‌‌ ಸ್ಪೈವೇರ್‌‌ಅನ್ನು ಭಾರತ ಖರೀದಿಸಿದೆ: ನ್ಯೂಯಾರ್ಕ್ ಟೈಮ್ಸ್‌ ವರದಿ

ಗೂಡಾಚರ್ಯೆಯ ಪೆಗಾಸಸ್‌‌ ಸ್ಪೈವೇರ್‌‌ಅನ್ನು ಭಾರತ ಖರೀದಿಸಿದೆ: ನ್ಯೂಯಾರ್ಕ್ ಟೈಮ್ಸ್‌ ವರದಿ

- Advertisement -
- Advertisement -

ಕ್ಷಿಪಣಿ ವ್ಯವಸ್ಥೆ ಸೇರಿದಂತೆ ಶಸ್ತ್ರಾಸ್ತ್ರಗಳಿಗಾಗಿ ಮಾಡಿಕೊಂಡ 2-ಬಿಲಿಯನ್ ಡಾಲರ್‌‌ ಪ್ಯಾಕೇಜ್‌ನ ಭಾಗವಾಗಿ 2017ರಲ್ಲಿ ಭಾರತ ಸರ್ಕಾರ ಇಸ್ರೇಲಿ ಸ್ಪೈವೇರ್ ಪೆಗಾಸಸ್ ಅನ್ನೂ ಖರೀದಿಸಿತು ಎಂದು ನ್ಯೂಯಾರ್ಕ್ ಟೈಮ್ಸ್ ಶುಕ್ರವಾರ ವರದಿ ಮಾಡಿದೆ.

ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ ಕೂಡ ಸ್ಪೈವೇರ್ ಅನ್ನು ಖರೀದಿಸಿದೆ ಹಾಗೂ ಪರೀಕ್ಷಿಸಿದೆ ಎಂದು ವರ್ಷವಿಡೀ ನಡೆಸಿದ ತನಿಖೆಯಲ್ಲಿ ತಿಳಿದುಬಂದಿದೆ.

ಪತ್ರಕರ್ತರು, ಭಿನ್ನಮತೀಯರನ್ನು ಗುರಿಯಾಗಿಸಲು ಮೆಕ್ಸಿಕೋ ದೇಶ ಪೆಗಾಸಸ್ ಬಳಸಿದೆ. ಸೌದಿ ಅರೇಬಿಯಾ ದೇಶಯು ಮಹಿಳಾ ಹಕ್ಕುಗಳ ಕಾರ್ಯಕರ್ತರು ಮತ್ತು ಸೌದಿ ಕಾರ್ಯಕರ್ತರಿಂದ ಕೊಲ್ಲಲ್ಪಟ್ಟ ಅಂಕಣಕಾರ ಜಮಾಲ್ ಖಶೋಗಿಯ ಸಹಚರರ ವಿರುದ್ಧ ಸ್ಪೈವೇರ್ ಬಳಸಿದೆ ಎಂದು ವರದಿ ಹೇಳಿದೆ. ಇಸ್ರೇಲಿ ರಕ್ಷಣಾ ಸಚಿವಾಲಯದಿಂದ ಪರವಾನಗಿ ಪಡೆದ ಹೊಸ ಒಪ್ಪಂದಗಳ ಅಡಿಯಲ್ಲಿ, ಪೋಲೆಂಡ್, ಹಂಗೇರಿ, ಭಾರತ ಮತ್ತು ಇತರ ದೇಶಗಳಿಗೆ ಪೆಗಾಸಸ್ ಅನ್ನು ಒದಗಿಸಲಾಗಿದೆ ಎಂದು ತನಿಖಾ ವರದಿ ಮಾಡಿದೆ.

ಜುಲೈ 2017ರಲ್ಲಿ ಇಸ್ರೇಲ್‌ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದರು. ಆಗಿನ ಒಪ್ಪಂದಗಳತ್ತ ತನಿಖಾ ವರದಿ ಬೆರಳು ತೋರಿದೆ.

ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಭೇಟಿಯು ಐತಿಹಾಸಿಕವಾಗಿ ಗಮನ ಸೆಳೆಯಿತು. ಅಲ್ಲದೆ ಸೌಹಾರ್ದಯುತವಾಗಿತ್ತು. ಮೋದಿ ಹಾಗೂ ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಸ್ಥಳೀಯ ಕಡಲತೀರದಲ್ಲಿ ಬರಿಗಾಲಿನಲ್ಲಿ ತಿರುಗಾಡಿದ್ದರು. ಸುಮಾರು 2 ಬಿಲಿಯನ್ ಡಾಲರ್‌ ಮೌಲ್ಯದ ಅತ್ಯಾಧುನಿಕ ಶಸ್ತ್ರಾಸ್ತ್ರಗಳು ಮತ್ತು ಗುಪ್ತಚರ ಸಾಧನಗಳ ಪ್ಯಾಕೇಜ್ ಅನ್ನು ಮಾರಾಟ ಮಾಡಲು ಉಭಯ ದೇಶಗಳು ಒಪ್ಪಿಕೊಂಡವು ಎಂದು ವರದಿ ಹೇಳುತ್ತದೆ.

ತಿಂಗಳುಗಳ ನಂತರ ಆ ಸಮಯದಲ್ಲಿ ಇಸ್ರೇಲಿ ಪ್ರಧಾನಿ ನೆತನ್ಯಾಹು ಅವರು ಭಾರತಕ್ಕೆ ಅಪರೂಪದ ಭೇಟಿ ನೀಡಿದರು. ಜೂನ್ 2019ರಲ್ಲಿ ಭಾರತವು ಯುಎನ್‌ನ ಆರ್ಥಿಕ ಮತ್ತು ಸಾಮಾಜಿಕ ಮಂಡಳಿಯಲ್ಲಿ ವೀಕ್ಷಕ ಸ್ಥಾನಮಾನವನ್ನು ನಿರಾಕರಿಸಲು ಇಸ್ರೇಲ್‌ಗೆ ಬೆಂಬಲವಾಗಿ ಮತ ಹಾಕಿತು ಎಂದು ವರದಿ ಉಲ್ಲೇಖಿಸಿದೆ.

ಭಾರತ ಸರ್ಕಾರ ಅಥವಾ ಇಸ್ರೇಲ್ ಸರ್ಕಾರವು ಪೆಗಾಸಸ್ ಅನ್ನು ಭಾರತ ಖರೀದಿಸಿದೆ ಎಂದು ಇಲ್ಲಿಯವರೆಗೆ ಒಪ್ಪಿಕೊಂಡಿಲ್ಲ.

ತಮ್ಮ ವಿರೋಧಿಗಳು, ಪತ್ರಕರ್ತರು, ಉದ್ಯಮಿಗಳು ಇತ್ಯಾದಿಗಳ ಮೇಲೆ ಕಣ್ಣಿಡಲು ಸ್ಪೈವೇರ್ ಅನ್ನು ವಿಶ್ವದಾದ್ಯಂತ ಹಲವಾರು ಸರ್ಕಾರಗಳು ಬಳಸಿರುವ ಕುರಿತು ಮಾಧ್ಯಮ ಗುಂಪುಗಳ ಜಾಗತಿಕ ಒಕ್ಕೂಟವು ಎಚ್ಚರಿಸಿದೆ.

ಭಾರತ ಪ್ರಖ್ಯಾತ ಸುದ್ದಿ ಜಾಲತಾಣ ದಿ ವೈರ್ ನಡೆಸಿದ ತನಿಖೆಯಲ್ಲಿ ಪೆಗಾಸಸ್ ಗೂಡಾಚರ್ಯೆ ನಡೆಸಿರುವ ಸಂಭಾವ್ಯ ಪ್ರಖ್ಯಾತರ ಪಟ್ಟಿ ಹೊರಬಿದ್ದಿತ್ತು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್, ಆಗಿನ ಚುನಾವಣಾ ಆಯುಕ್ತ ಅಶೋಕ್ ಲಾವಾಸಾ, ಸೇರಿದಂತೆ ಹಲವಾರು ಇತರ ಪ್ರಮುಖರ ಹೆಸರುಗಳಿದ್ದವು.

ಪೆಗಾಸಸ್ ಬಗ್ಗೆ ಮೊದಲ ವರದಿಗಳು ಹೊರಬಂದ ನಂತರ, ಈ ವಿಷಯವನ್ನು ಸಂಸತ್ತಿನಲ್ಲಿ ಪ್ರತಿಪಕ್ಷಗಳು ಮಂಡಿಸಿದವು. ತೀವ್ರ ಪ್ರತಿಭಟನೆಯನ್ನು ಸರ್ಕಾರದ ವಿರುದ್ಧ ನಡೆಸಲಾಯಿತು. ಪ್ರಕರಣ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತು. ಸುಪ್ರೀಂ ಕೋರ್ಟ್ ಆರೋಪಗಳನ್ನು ಪರಿಶೀಲಿಸಲು ಸಮಿತಿಯನ್ನು ರಚಿಸಿತು. ಅದರ ವಿಚಾರಣೆ ನಡೆಯುತ್ತಿದೆ. ವಿಚಾರಣೆಯ ಸಂದರ್ಭದಲ್ಲಿ, ಸುಪ್ರೀಂ ಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿ‌ದೆ.

ಭಾರತ ಪೆಗಾಸಸ್ ಸ್ಪೈವೇರ್‌ ಖರೀದಿಸಿದೆ ಎಂಬ ತನಿಖಾ ವರದಿ ಹೊರಬಿದ್ದ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಟ್ವೀಟ್ ಮಾಡಿದ್ದಾರೆ.

“ನಮ್ಮ ಪ್ರಜಾಪ್ರಭುತ್ವದ ಪ್ರಾಥಮಿಕ ಸಂಸ್ಥೆಗಳು, ರಾಷ್ಟ್ರ ನಾಯಕರು ಮತ್ತು ಸಾರ್ವಜನಿಕರ ಮೇಲೆ ಕಣ್ಣಿಡಲು ಮೋದಿ ಸರ್ಕಾರ ಪೆಗಾಸಸ್ ಖರೀದಿಸಿತು. ಫೋನ್ ಕದ್ದಾಲಿಕೆ ಮಾಡುವ ಮೂಲಕ ಆಡಳಿತ ಪಕ್ಷ, ವಿರೋಧ ಪಕ್ಷ, ಸೇನೆ, ನ್ಯಾಯಾಂಗ ಎಲ್ಲರ ಮೇಲೂ ಕಣ್ಣು ಇಡಲಾಗಿದೆ. ಇದು ದೇಶದ್ರೋಹ” ಎಂದಿದ್ದಾರೆ.


ಇದನ್ನೂ ಓದಿರಿ: ಪೆಗಾಸಸ್ ಫೋನ್‌ ಹ್ಯಾಕ್‌ಗೆ ಒಳಗಾದವರು ಯಾರು ಯಾರು? ಪ್ರಮುಖ 30 ಜನರ ಪಟ್ಟಿ ಇಲ್ಲಿದೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಅಧಿಕಾರಕ್ಕೆ ಬಂದರೆ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಹೇಳಿಲ್ಲ

0
ಕಳೆದ ಎರಡು ದಿನಗಳಿಂದ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' (Inheritance Tax) ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' ಜಾರಿಗೆ ತರಲಿದೆ. ಈ...