Homeಮುಖಪುಟಗೂಡಾಚರ್ಯೆಯ ಪೆಗಾಸಸ್‌‌ ಸ್ಪೈವೇರ್‌‌ಅನ್ನು ಭಾರತ ಖರೀದಿಸಿದೆ: ನ್ಯೂಯಾರ್ಕ್ ಟೈಮ್ಸ್‌ ವರದಿ

ಗೂಡಾಚರ್ಯೆಯ ಪೆಗಾಸಸ್‌‌ ಸ್ಪೈವೇರ್‌‌ಅನ್ನು ಭಾರತ ಖರೀದಿಸಿದೆ: ನ್ಯೂಯಾರ್ಕ್ ಟೈಮ್ಸ್‌ ವರದಿ

- Advertisement -
- Advertisement -

ಕ್ಷಿಪಣಿ ವ್ಯವಸ್ಥೆ ಸೇರಿದಂತೆ ಶಸ್ತ್ರಾಸ್ತ್ರಗಳಿಗಾಗಿ ಮಾಡಿಕೊಂಡ 2-ಬಿಲಿಯನ್ ಡಾಲರ್‌‌ ಪ್ಯಾಕೇಜ್‌ನ ಭಾಗವಾಗಿ 2017ರಲ್ಲಿ ಭಾರತ ಸರ್ಕಾರ ಇಸ್ರೇಲಿ ಸ್ಪೈವೇರ್ ಪೆಗಾಸಸ್ ಅನ್ನೂ ಖರೀದಿಸಿತು ಎಂದು ನ್ಯೂಯಾರ್ಕ್ ಟೈಮ್ಸ್ ಶುಕ್ರವಾರ ವರದಿ ಮಾಡಿದೆ.

ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ ಕೂಡ ಸ್ಪೈವೇರ್ ಅನ್ನು ಖರೀದಿಸಿದೆ ಹಾಗೂ ಪರೀಕ್ಷಿಸಿದೆ ಎಂದು ವರ್ಷವಿಡೀ ನಡೆಸಿದ ತನಿಖೆಯಲ್ಲಿ ತಿಳಿದುಬಂದಿದೆ.

ಪತ್ರಕರ್ತರು, ಭಿನ್ನಮತೀಯರನ್ನು ಗುರಿಯಾಗಿಸಲು ಮೆಕ್ಸಿಕೋ ದೇಶ ಪೆಗಾಸಸ್ ಬಳಸಿದೆ. ಸೌದಿ ಅರೇಬಿಯಾ ದೇಶಯು ಮಹಿಳಾ ಹಕ್ಕುಗಳ ಕಾರ್ಯಕರ್ತರು ಮತ್ತು ಸೌದಿ ಕಾರ್ಯಕರ್ತರಿಂದ ಕೊಲ್ಲಲ್ಪಟ್ಟ ಅಂಕಣಕಾರ ಜಮಾಲ್ ಖಶೋಗಿಯ ಸಹಚರರ ವಿರುದ್ಧ ಸ್ಪೈವೇರ್ ಬಳಸಿದೆ ಎಂದು ವರದಿ ಹೇಳಿದೆ. ಇಸ್ರೇಲಿ ರಕ್ಷಣಾ ಸಚಿವಾಲಯದಿಂದ ಪರವಾನಗಿ ಪಡೆದ ಹೊಸ ಒಪ್ಪಂದಗಳ ಅಡಿಯಲ್ಲಿ, ಪೋಲೆಂಡ್, ಹಂಗೇರಿ, ಭಾರತ ಮತ್ತು ಇತರ ದೇಶಗಳಿಗೆ ಪೆಗಾಸಸ್ ಅನ್ನು ಒದಗಿಸಲಾಗಿದೆ ಎಂದು ತನಿಖಾ ವರದಿ ಮಾಡಿದೆ.

ಜುಲೈ 2017ರಲ್ಲಿ ಇಸ್ರೇಲ್‌ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದರು. ಆಗಿನ ಒಪ್ಪಂದಗಳತ್ತ ತನಿಖಾ ವರದಿ ಬೆರಳು ತೋರಿದೆ.

ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಭೇಟಿಯು ಐತಿಹಾಸಿಕವಾಗಿ ಗಮನ ಸೆಳೆಯಿತು. ಅಲ್ಲದೆ ಸೌಹಾರ್ದಯುತವಾಗಿತ್ತು. ಮೋದಿ ಹಾಗೂ ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಸ್ಥಳೀಯ ಕಡಲತೀರದಲ್ಲಿ ಬರಿಗಾಲಿನಲ್ಲಿ ತಿರುಗಾಡಿದ್ದರು. ಸುಮಾರು 2 ಬಿಲಿಯನ್ ಡಾಲರ್‌ ಮೌಲ್ಯದ ಅತ್ಯಾಧುನಿಕ ಶಸ್ತ್ರಾಸ್ತ್ರಗಳು ಮತ್ತು ಗುಪ್ತಚರ ಸಾಧನಗಳ ಪ್ಯಾಕೇಜ್ ಅನ್ನು ಮಾರಾಟ ಮಾಡಲು ಉಭಯ ದೇಶಗಳು ಒಪ್ಪಿಕೊಂಡವು ಎಂದು ವರದಿ ಹೇಳುತ್ತದೆ.

ತಿಂಗಳುಗಳ ನಂತರ ಆ ಸಮಯದಲ್ಲಿ ಇಸ್ರೇಲಿ ಪ್ರಧಾನಿ ನೆತನ್ಯಾಹು ಅವರು ಭಾರತಕ್ಕೆ ಅಪರೂಪದ ಭೇಟಿ ನೀಡಿದರು. ಜೂನ್ 2019ರಲ್ಲಿ ಭಾರತವು ಯುಎನ್‌ನ ಆರ್ಥಿಕ ಮತ್ತು ಸಾಮಾಜಿಕ ಮಂಡಳಿಯಲ್ಲಿ ವೀಕ್ಷಕ ಸ್ಥಾನಮಾನವನ್ನು ನಿರಾಕರಿಸಲು ಇಸ್ರೇಲ್‌ಗೆ ಬೆಂಬಲವಾಗಿ ಮತ ಹಾಕಿತು ಎಂದು ವರದಿ ಉಲ್ಲೇಖಿಸಿದೆ.

ಭಾರತ ಸರ್ಕಾರ ಅಥವಾ ಇಸ್ರೇಲ್ ಸರ್ಕಾರವು ಪೆಗಾಸಸ್ ಅನ್ನು ಭಾರತ ಖರೀದಿಸಿದೆ ಎಂದು ಇಲ್ಲಿಯವರೆಗೆ ಒಪ್ಪಿಕೊಂಡಿಲ್ಲ.

ತಮ್ಮ ವಿರೋಧಿಗಳು, ಪತ್ರಕರ್ತರು, ಉದ್ಯಮಿಗಳು ಇತ್ಯಾದಿಗಳ ಮೇಲೆ ಕಣ್ಣಿಡಲು ಸ್ಪೈವೇರ್ ಅನ್ನು ವಿಶ್ವದಾದ್ಯಂತ ಹಲವಾರು ಸರ್ಕಾರಗಳು ಬಳಸಿರುವ ಕುರಿತು ಮಾಧ್ಯಮ ಗುಂಪುಗಳ ಜಾಗತಿಕ ಒಕ್ಕೂಟವು ಎಚ್ಚರಿಸಿದೆ.

ಭಾರತ ಪ್ರಖ್ಯಾತ ಸುದ್ದಿ ಜಾಲತಾಣ ದಿ ವೈರ್ ನಡೆಸಿದ ತನಿಖೆಯಲ್ಲಿ ಪೆಗಾಸಸ್ ಗೂಡಾಚರ್ಯೆ ನಡೆಸಿರುವ ಸಂಭಾವ್ಯ ಪ್ರಖ್ಯಾತರ ಪಟ್ಟಿ ಹೊರಬಿದ್ದಿತ್ತು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್, ಆಗಿನ ಚುನಾವಣಾ ಆಯುಕ್ತ ಅಶೋಕ್ ಲಾವಾಸಾ, ಸೇರಿದಂತೆ ಹಲವಾರು ಇತರ ಪ್ರಮುಖರ ಹೆಸರುಗಳಿದ್ದವು.

ಪೆಗಾಸಸ್ ಬಗ್ಗೆ ಮೊದಲ ವರದಿಗಳು ಹೊರಬಂದ ನಂತರ, ಈ ವಿಷಯವನ್ನು ಸಂಸತ್ತಿನಲ್ಲಿ ಪ್ರತಿಪಕ್ಷಗಳು ಮಂಡಿಸಿದವು. ತೀವ್ರ ಪ್ರತಿಭಟನೆಯನ್ನು ಸರ್ಕಾರದ ವಿರುದ್ಧ ನಡೆಸಲಾಯಿತು. ಪ್ರಕರಣ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತು. ಸುಪ್ರೀಂ ಕೋರ್ಟ್ ಆರೋಪಗಳನ್ನು ಪರಿಶೀಲಿಸಲು ಸಮಿತಿಯನ್ನು ರಚಿಸಿತು. ಅದರ ವಿಚಾರಣೆ ನಡೆಯುತ್ತಿದೆ. ವಿಚಾರಣೆಯ ಸಂದರ್ಭದಲ್ಲಿ, ಸುಪ್ರೀಂ ಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿ‌ದೆ.

ಭಾರತ ಪೆಗಾಸಸ್ ಸ್ಪೈವೇರ್‌ ಖರೀದಿಸಿದೆ ಎಂಬ ತನಿಖಾ ವರದಿ ಹೊರಬಿದ್ದ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಟ್ವೀಟ್ ಮಾಡಿದ್ದಾರೆ.

“ನಮ್ಮ ಪ್ರಜಾಪ್ರಭುತ್ವದ ಪ್ರಾಥಮಿಕ ಸಂಸ್ಥೆಗಳು, ರಾಷ್ಟ್ರ ನಾಯಕರು ಮತ್ತು ಸಾರ್ವಜನಿಕರ ಮೇಲೆ ಕಣ್ಣಿಡಲು ಮೋದಿ ಸರ್ಕಾರ ಪೆಗಾಸಸ್ ಖರೀದಿಸಿತು. ಫೋನ್ ಕದ್ದಾಲಿಕೆ ಮಾಡುವ ಮೂಲಕ ಆಡಳಿತ ಪಕ್ಷ, ವಿರೋಧ ಪಕ್ಷ, ಸೇನೆ, ನ್ಯಾಯಾಂಗ ಎಲ್ಲರ ಮೇಲೂ ಕಣ್ಣು ಇಡಲಾಗಿದೆ. ಇದು ದೇಶದ್ರೋಹ” ಎಂದಿದ್ದಾರೆ.


ಇದನ್ನೂ ಓದಿರಿ: ಪೆಗಾಸಸ್ ಫೋನ್‌ ಹ್ಯಾಕ್‌ಗೆ ಒಳಗಾದವರು ಯಾರು ಯಾರು? ಪ್ರಮುಖ 30 ಜನರ ಪಟ್ಟಿ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...