Homeಮುಖಪುಟಹಳಸಿದ ಭಾರತ-ಕೆನಡಾ ಸಂಬಂಧ ಸರಿಪಡಿಸುವುದು ಒಂದು ದೀರ್ಘ ಪ್ರಕ್ರಿಯೆ: ವರದಿ

ಹಳಸಿದ ಭಾರತ-ಕೆನಡಾ ಸಂಬಂಧ ಸರಿಪಡಿಸುವುದು ಒಂದು ದೀರ್ಘ ಪ್ರಕ್ರಿಯೆ: ವರದಿ

- Advertisement -
- Advertisement -

ಕೆನಡಿಯನ್ನರ ಮೇಲಿನ ಕೆಲವು ವೀಸಾ ನಿರ್ಬಂಧಗಳನ್ನು ಭಾರತವು ಇತ್ತೀಚೆಗೆ ಸಡಿಲಗೊಳಿಸಿದೆ. ಈ ನಿರ್ಧಾರ ಅಚ್ಚರಿಯ ಬೆಳವಣಿಗೆಯಾಗಿದ್ದರೂ ಭಾರತ ಮತ್ತು ಕೆನಡಾ ನಡುವಿನ ಹಳಸಿದ ರಾಜತಾಂತ್ರಿಕ ಸಂಬಂಧಗಳನ್ನು ಸರಿಪಡಿಸುವುದು ದೀರ್ಘ ಪ್ರಕ್ರಿಯೆಯಾಗಬಹುದು ಎಂದು ಅಧಿಕಾರಿಗಳು ಮತ್ತು ತಜ್ಞರು ಹೇಳುತ್ತಾರೆ.

ಸಿಖ್ ಪ್ರತ್ಯೇಕವಾದಿ ನಾಯಕ ಹರ್‌ದೀಪ್ ಸಿಂಗ್ ನಿಜ್ಜಾರ್ ಹತ್ಯೆ ಹಿಂದೆ ಭಾರತೀಯ ಏಜೆಂಟರ ಕೈವಾಡವಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೊ ಆರೋಪಿಸಿದ್ದರು. ತದನಂತರ ಉಭಯ ದೇಶಗಳ ನಡುವೆ ರಾಜತಾಂತ್ರಿಕ ಬಾಂಧವ್ಯವು ಹದಗೆಟ್ಟಿತ್ತು.

ಕೆನಡಾ ಪ್ರಧಾನಿಯವರ ಆರೋಪದ ಬೆನ್ನಲ್ಲೇ ಟ್ರುಡೊ ಅವರ ಆರೋಪಗಳನ್ನು ಭಾರತವು ಅಸಂಬದ್ಧ ಮತ್ತು ಪ್ರಚೋದಿತ ಎಂದು ತಿರಸ್ಕರಿಸಿತ್ತು. ಈ ಮಧ್ಯೆ ಭಾರತದ ಅಧಿಕಾರಿಯನ್ನು ಕೆನಡಾ ಉಚ್ಚಾಟಿಸಿತ್ತು. ಇದರ ಬೆನ್ನಲ್ಲೇ ಭಾರತ ಕೂಡ ಹಿರಿಯ ರಾಜತಾಂತ್ರಿಕ ಅಧಿಕಾರಿಯನ್ನು ಉಚ್ಚಾಟಿಸಿದೆ. ಅಲ್ಲದೆ ದೇಶದಲ್ಲಿರುವ ತನ್ನ ರಾಜತಾಂತ್ರಿಕ ಸಿಬ್ಬಂದಿಯ ಗಾತ್ರವನ್ನು ಕಡಿತಗೊಳಿಸಲು ಸೂಚಿಸಿತ್ತು. ಅದರನುಸಾರ ಕೆನಡಾ ಈಗಾಗಲೇ 41 ರಾಜತಾಂತ್ರಿಕ ಅಧಿಕಾರಿಗಳನ್ನು ವಾಪಸು ಕರೆಸಿಕೊಂಡಿದೆ.

ಈ ಎಲ್ಲಾ ಬೆಳವಣಿಗೆಗೆಳ ತಿಂಗಳುಗಳ ಬಳಿಕ ವೀಸಾ ಸೇವೆಗಳನ್ನು ಭಾಗಶಃ ಮರುಸ್ಥಾಪಿಸಲು ಭಾರತವು ಇತ್ತೀಚೆಗೆ ನಿರ್ಧರಿಸಿದೆ. ವೀಸಾಗಳ ಮೇಲಿನ ಭಾರತದ ಸಡಿಲಿಕೆಯು ಸುಧಾರಿತ ಸಂಬಂಧಗಳ ಕೆಲವು ನಿರೀಕ್ಷೆಗಳನ್ನು ಹೆಚ್ಚಿಸಿದ್ದರೂ, ಇದು ಪ್ರಗತಿಯಾಗಿಲ್ಲ. ಏಕೆಂದರೆ ಎರಡೂ ದೇಶಗಳು ಸಂಬಂಧ ಉತ್ತಮಗೊಳಿಸಲು ಹೆಚ್ಚಿನ ಆಸಕ್ತಿ ತೋರಿಸಿಲ್ಲ ಎಂದು ತಜ್ಞರು ಹೇಳಿದ್ದಾರೆ.

ಒಂದು ಕಡೆ ಹರ್‌ದೀಪ್ ಸಿಂಗ್ ನಿಜ್ಜಾರ್ ಹತ್ಯೆ ಕುರಿತು ಕೆನಡಾದ ತನಿಖೆ ಮುಂದುವರಿಯುತ್ತಿದೆ. ಇನ್ನೊಂದು ಕಡೆ ಭಾರತ ಲೋಕಸಭೆ ಚುನಾವಣೆಗೆ ತಯಾರಿ ನಡೆಸುತ್ತಿರುವಾಗ ಭಾರತ ಅಥವಾ ಕೆನಡಾ ಶೀಘ್ರದಲ್ಲೇ ರಾಜಿ ಮಾಡಿಕೊಳ್ಳಲು ಕ್ರಮಗಳನ್ನು ತೆಗೆದುಕೊಳ್ಳುವ ಸಾಧ್ಯತೆಯಿಲ್ಲ ಎನ್ನುವುದು ತಜ್ಞರ ಅಭಿಪ್ರಾಯ.

ವಾಷಿಂಗ್ಟನ್‌ನ ವಿಲ್ಸನ್ ಸೆಂಟರ್‌ನಲ್ಲಿರುವ ದಕ್ಷಿಣ ಏಷ್ಯಾ ಸಂಸ್ಥೆಯ ನಿರ್ದೇಶಕ ಮೈಕೆಲ್ ಕುಗೆಲ್‌ಮನ್, ಭಾರತ ಕೆನಡಾ ಸಂಬಂಧವು ಆಳವಾದ ಬಿಕ್ಕಟ್ಟಿನಲ್ಲಿದೆ, ಬಹುಶಃ ಇದು ಹಿಂದೆಂದಿಗಿಂತಲೂ ಕೆಟ್ಟದಾಗಿದೆ. ಬಿಕ್ಕಟ್ಟು ಹೆಚ್ಚಾಗಬಾರದು ಎಂಬ ಬಗ್ಗೆ ಎರಡು ದೇಶಕ್ಕೂ ಕಾಳಜಿ ಇರಬಹುದು. ಇದು ಸಮಸ್ಯೆ ಬಗೆಹರಿಸಲು ಪ್ರತ್ಸಾಹಕವಾಗಿದೆ ಎಂದು ಅರ್ಥವಲ್ಲ ಎಂದು ಹೇಳಿದ್ದಾರೆ.

2020ರಿಂದ 2022ರವರೆಗೆ ಕೆನಡಾದಲ್ಲಿ ಭಾರತದ ರಾಯಭಾರಿಯಾಗಿರುವ ಅಜಯ್ ಬಿಸಾರಿಯಾ, ಎರಡೂ ದೇಶಗಳ ಸಂಬಂಧವೂ ಉತ್ಕರ್ಷದ ಹಂತದಲ್ಲಿದೆ ಎಂದು ಹೇಳಿದ್ದಾರೆ.

ವೀಸಾ ನಿರ್ಬಂಧಗಳು ಕೆನಡಾದಲ್ಲಿ ವಾಸಿಸುವ ಅಥವಾ ಅಲ್ಲಿ ಅಧ್ಯಯನ ಮಾಡಲು ಯೋಜಿಸಿರುವ ಹತ್ತಾರು ಭಾರತೀಯರು ಮತ್ತು ಭಾರತೀಯ ಮೂಲದ ಜನರಿಗೆ ಅಡ್ಡಿಯಾಗಬಹುದು ಎಂದು ನಿರೀಕ್ಷಿಸಲಾಗಿದೆ. ಇದಲ್ಲದೆ ಎರಡೂ ಸರ್ಕಾರಗಳು ವ್ಯಾಪಾರ ಸಂಬಂಧಗಳನ್ನು ಉಳಿಸಿಕೊಂಡಿದ್ದರೂ, ಮುಕ್ತ-ವ್ಯಾಪಾರ ಒಪ್ಪಂದದ ಚರ್ಚೆಗಳನ್ನು ವಿಳಂಬಗೊಳಿಸಿದೆ ಎನ್ನಲಾಗಿದೆ.

ಒಟ್ಟಾವಾದಲ್ಲಿನ ಭಾರತದ ಗುಪ್ತಚರ ಮುಖ್ಯಸ್ಥರನ್ನು ಕೆನಡಾ ಹೊರಹಾಕಿತ್ತು. ಕೆನಡಿಯನ್ನರಿಗೆ ವೀಸಾಗಳನ್ನು ಭಾರತ ನಿಲ್ಲಿಸಿತು. ಈ ಕ್ರಮವು ವಿಯೆನ್ನಾ ಒಪ್ಪಂದಗಳನ್ನು ಉಲ್ಲಂಘಿಸಿದೆ ಎಂದು ಕೆನಡಾ ಹೇಳಿದೆ.

ಅ.25ರಂದು ನಾಲ್ಕು ವಿಭಾಗಗಳ ಅಡಿಯಲ್ಲಿ ವೀಸಾಗಳನ್ನು ನೀಡುವುದನ್ನು ಪುನರಾರಂಭಿಸುವುದಾಗಿ ಭಾರತ ಹೇಳಿದೆ. ಆದರೆ ಈ ಬೆಳವಣಿಗೆಯ ಮೂಲಕ ಹಳಸಿದ ಕೆನಡಾ ಮತ್ತು ಭಾರತದ ಸಂಬಂಧವನ್ನು ಸುಲಭವಾಗಿ ಸರಿಪಡಿಸುವುದು ಕಷ್ಟ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನು ಓದಿ: ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆದ ಆರೋಪಿಗಿತ್ತು ಗೌರಿ ಲಂಕೇಶ್ ಹತ್ಯೆ ಆರೋಪಿ ಜೊತೆ ನಂಟು

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....