Homeಮುಖಪುಟಹಳಸಿದ ಭಾರತ-ಕೆನಡಾ ಸಂಬಂಧ ಸರಿಪಡಿಸುವುದು ಒಂದು ದೀರ್ಘ ಪ್ರಕ್ರಿಯೆ: ವರದಿ

ಹಳಸಿದ ಭಾರತ-ಕೆನಡಾ ಸಂಬಂಧ ಸರಿಪಡಿಸುವುದು ಒಂದು ದೀರ್ಘ ಪ್ರಕ್ರಿಯೆ: ವರದಿ

- Advertisement -
- Advertisement -

ಕೆನಡಿಯನ್ನರ ಮೇಲಿನ ಕೆಲವು ವೀಸಾ ನಿರ್ಬಂಧಗಳನ್ನು ಭಾರತವು ಇತ್ತೀಚೆಗೆ ಸಡಿಲಗೊಳಿಸಿದೆ. ಈ ನಿರ್ಧಾರ ಅಚ್ಚರಿಯ ಬೆಳವಣಿಗೆಯಾಗಿದ್ದರೂ ಭಾರತ ಮತ್ತು ಕೆನಡಾ ನಡುವಿನ ಹಳಸಿದ ರಾಜತಾಂತ್ರಿಕ ಸಂಬಂಧಗಳನ್ನು ಸರಿಪಡಿಸುವುದು ದೀರ್ಘ ಪ್ರಕ್ರಿಯೆಯಾಗಬಹುದು ಎಂದು ಅಧಿಕಾರಿಗಳು ಮತ್ತು ತಜ್ಞರು ಹೇಳುತ್ತಾರೆ.

ಸಿಖ್ ಪ್ರತ್ಯೇಕವಾದಿ ನಾಯಕ ಹರ್‌ದೀಪ್ ಸಿಂಗ್ ನಿಜ್ಜಾರ್ ಹತ್ಯೆ ಹಿಂದೆ ಭಾರತೀಯ ಏಜೆಂಟರ ಕೈವಾಡವಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೊ ಆರೋಪಿಸಿದ್ದರು. ತದನಂತರ ಉಭಯ ದೇಶಗಳ ನಡುವೆ ರಾಜತಾಂತ್ರಿಕ ಬಾಂಧವ್ಯವು ಹದಗೆಟ್ಟಿತ್ತು.

ಕೆನಡಾ ಪ್ರಧಾನಿಯವರ ಆರೋಪದ ಬೆನ್ನಲ್ಲೇ ಟ್ರುಡೊ ಅವರ ಆರೋಪಗಳನ್ನು ಭಾರತವು ಅಸಂಬದ್ಧ ಮತ್ತು ಪ್ರಚೋದಿತ ಎಂದು ತಿರಸ್ಕರಿಸಿತ್ತು. ಈ ಮಧ್ಯೆ ಭಾರತದ ಅಧಿಕಾರಿಯನ್ನು ಕೆನಡಾ ಉಚ್ಚಾಟಿಸಿತ್ತು. ಇದರ ಬೆನ್ನಲ್ಲೇ ಭಾರತ ಕೂಡ ಹಿರಿಯ ರಾಜತಾಂತ್ರಿಕ ಅಧಿಕಾರಿಯನ್ನು ಉಚ್ಚಾಟಿಸಿದೆ. ಅಲ್ಲದೆ ದೇಶದಲ್ಲಿರುವ ತನ್ನ ರಾಜತಾಂತ್ರಿಕ ಸಿಬ್ಬಂದಿಯ ಗಾತ್ರವನ್ನು ಕಡಿತಗೊಳಿಸಲು ಸೂಚಿಸಿತ್ತು. ಅದರನುಸಾರ ಕೆನಡಾ ಈಗಾಗಲೇ 41 ರಾಜತಾಂತ್ರಿಕ ಅಧಿಕಾರಿಗಳನ್ನು ವಾಪಸು ಕರೆಸಿಕೊಂಡಿದೆ.

ಈ ಎಲ್ಲಾ ಬೆಳವಣಿಗೆಗೆಳ ತಿಂಗಳುಗಳ ಬಳಿಕ ವೀಸಾ ಸೇವೆಗಳನ್ನು ಭಾಗಶಃ ಮರುಸ್ಥಾಪಿಸಲು ಭಾರತವು ಇತ್ತೀಚೆಗೆ ನಿರ್ಧರಿಸಿದೆ. ವೀಸಾಗಳ ಮೇಲಿನ ಭಾರತದ ಸಡಿಲಿಕೆಯು ಸುಧಾರಿತ ಸಂಬಂಧಗಳ ಕೆಲವು ನಿರೀಕ್ಷೆಗಳನ್ನು ಹೆಚ್ಚಿಸಿದ್ದರೂ, ಇದು ಪ್ರಗತಿಯಾಗಿಲ್ಲ. ಏಕೆಂದರೆ ಎರಡೂ ದೇಶಗಳು ಸಂಬಂಧ ಉತ್ತಮಗೊಳಿಸಲು ಹೆಚ್ಚಿನ ಆಸಕ್ತಿ ತೋರಿಸಿಲ್ಲ ಎಂದು ತಜ್ಞರು ಹೇಳಿದ್ದಾರೆ.

ಒಂದು ಕಡೆ ಹರ್‌ದೀಪ್ ಸಿಂಗ್ ನಿಜ್ಜಾರ್ ಹತ್ಯೆ ಕುರಿತು ಕೆನಡಾದ ತನಿಖೆ ಮುಂದುವರಿಯುತ್ತಿದೆ. ಇನ್ನೊಂದು ಕಡೆ ಭಾರತ ಲೋಕಸಭೆ ಚುನಾವಣೆಗೆ ತಯಾರಿ ನಡೆಸುತ್ತಿರುವಾಗ ಭಾರತ ಅಥವಾ ಕೆನಡಾ ಶೀಘ್ರದಲ್ಲೇ ರಾಜಿ ಮಾಡಿಕೊಳ್ಳಲು ಕ್ರಮಗಳನ್ನು ತೆಗೆದುಕೊಳ್ಳುವ ಸಾಧ್ಯತೆಯಿಲ್ಲ ಎನ್ನುವುದು ತಜ್ಞರ ಅಭಿಪ್ರಾಯ.

ವಾಷಿಂಗ್ಟನ್‌ನ ವಿಲ್ಸನ್ ಸೆಂಟರ್‌ನಲ್ಲಿರುವ ದಕ್ಷಿಣ ಏಷ್ಯಾ ಸಂಸ್ಥೆಯ ನಿರ್ದೇಶಕ ಮೈಕೆಲ್ ಕುಗೆಲ್‌ಮನ್, ಭಾರತ ಕೆನಡಾ ಸಂಬಂಧವು ಆಳವಾದ ಬಿಕ್ಕಟ್ಟಿನಲ್ಲಿದೆ, ಬಹುಶಃ ಇದು ಹಿಂದೆಂದಿಗಿಂತಲೂ ಕೆಟ್ಟದಾಗಿದೆ. ಬಿಕ್ಕಟ್ಟು ಹೆಚ್ಚಾಗಬಾರದು ಎಂಬ ಬಗ್ಗೆ ಎರಡು ದೇಶಕ್ಕೂ ಕಾಳಜಿ ಇರಬಹುದು. ಇದು ಸಮಸ್ಯೆ ಬಗೆಹರಿಸಲು ಪ್ರತ್ಸಾಹಕವಾಗಿದೆ ಎಂದು ಅರ್ಥವಲ್ಲ ಎಂದು ಹೇಳಿದ್ದಾರೆ.

2020ರಿಂದ 2022ರವರೆಗೆ ಕೆನಡಾದಲ್ಲಿ ಭಾರತದ ರಾಯಭಾರಿಯಾಗಿರುವ ಅಜಯ್ ಬಿಸಾರಿಯಾ, ಎರಡೂ ದೇಶಗಳ ಸಂಬಂಧವೂ ಉತ್ಕರ್ಷದ ಹಂತದಲ್ಲಿದೆ ಎಂದು ಹೇಳಿದ್ದಾರೆ.

ವೀಸಾ ನಿರ್ಬಂಧಗಳು ಕೆನಡಾದಲ್ಲಿ ವಾಸಿಸುವ ಅಥವಾ ಅಲ್ಲಿ ಅಧ್ಯಯನ ಮಾಡಲು ಯೋಜಿಸಿರುವ ಹತ್ತಾರು ಭಾರತೀಯರು ಮತ್ತು ಭಾರತೀಯ ಮೂಲದ ಜನರಿಗೆ ಅಡ್ಡಿಯಾಗಬಹುದು ಎಂದು ನಿರೀಕ್ಷಿಸಲಾಗಿದೆ. ಇದಲ್ಲದೆ ಎರಡೂ ಸರ್ಕಾರಗಳು ವ್ಯಾಪಾರ ಸಂಬಂಧಗಳನ್ನು ಉಳಿಸಿಕೊಂಡಿದ್ದರೂ, ಮುಕ್ತ-ವ್ಯಾಪಾರ ಒಪ್ಪಂದದ ಚರ್ಚೆಗಳನ್ನು ವಿಳಂಬಗೊಳಿಸಿದೆ ಎನ್ನಲಾಗಿದೆ.

ಒಟ್ಟಾವಾದಲ್ಲಿನ ಭಾರತದ ಗುಪ್ತಚರ ಮುಖ್ಯಸ್ಥರನ್ನು ಕೆನಡಾ ಹೊರಹಾಕಿತ್ತು. ಕೆನಡಿಯನ್ನರಿಗೆ ವೀಸಾಗಳನ್ನು ಭಾರತ ನಿಲ್ಲಿಸಿತು. ಈ ಕ್ರಮವು ವಿಯೆನ್ನಾ ಒಪ್ಪಂದಗಳನ್ನು ಉಲ್ಲಂಘಿಸಿದೆ ಎಂದು ಕೆನಡಾ ಹೇಳಿದೆ.

ಅ.25ರಂದು ನಾಲ್ಕು ವಿಭಾಗಗಳ ಅಡಿಯಲ್ಲಿ ವೀಸಾಗಳನ್ನು ನೀಡುವುದನ್ನು ಪುನರಾರಂಭಿಸುವುದಾಗಿ ಭಾರತ ಹೇಳಿದೆ. ಆದರೆ ಈ ಬೆಳವಣಿಗೆಯ ಮೂಲಕ ಹಳಸಿದ ಕೆನಡಾ ಮತ್ತು ಭಾರತದ ಸಂಬಂಧವನ್ನು ಸುಲಭವಾಗಿ ಸರಿಪಡಿಸುವುದು ಕಷ್ಟ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನು ಓದಿ: ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆದ ಆರೋಪಿಗಿತ್ತು ಗೌರಿ ಲಂಕೇಶ್ ಹತ್ಯೆ ಆರೋಪಿ ಜೊತೆ ನಂಟು

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...