Homeಮುಖಪುಟಹಳಸಿದ ಭಾರತ-ಕೆನಡಾ ಸಂಬಂಧ ಸರಿಪಡಿಸುವುದು ಒಂದು ದೀರ್ಘ ಪ್ರಕ್ರಿಯೆ: ವರದಿ

ಹಳಸಿದ ಭಾರತ-ಕೆನಡಾ ಸಂಬಂಧ ಸರಿಪಡಿಸುವುದು ಒಂದು ದೀರ್ಘ ಪ್ರಕ್ರಿಯೆ: ವರದಿ

- Advertisement -
- Advertisement -

ಕೆನಡಿಯನ್ನರ ಮೇಲಿನ ಕೆಲವು ವೀಸಾ ನಿರ್ಬಂಧಗಳನ್ನು ಭಾರತವು ಇತ್ತೀಚೆಗೆ ಸಡಿಲಗೊಳಿಸಿದೆ. ಈ ನಿರ್ಧಾರ ಅಚ್ಚರಿಯ ಬೆಳವಣಿಗೆಯಾಗಿದ್ದರೂ ಭಾರತ ಮತ್ತು ಕೆನಡಾ ನಡುವಿನ ಹಳಸಿದ ರಾಜತಾಂತ್ರಿಕ ಸಂಬಂಧಗಳನ್ನು ಸರಿಪಡಿಸುವುದು ದೀರ್ಘ ಪ್ರಕ್ರಿಯೆಯಾಗಬಹುದು ಎಂದು ಅಧಿಕಾರಿಗಳು ಮತ್ತು ತಜ್ಞರು ಹೇಳುತ್ತಾರೆ.

ಸಿಖ್ ಪ್ರತ್ಯೇಕವಾದಿ ನಾಯಕ ಹರ್‌ದೀಪ್ ಸಿಂಗ್ ನಿಜ್ಜಾರ್ ಹತ್ಯೆ ಹಿಂದೆ ಭಾರತೀಯ ಏಜೆಂಟರ ಕೈವಾಡವಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೊ ಆರೋಪಿಸಿದ್ದರು. ತದನಂತರ ಉಭಯ ದೇಶಗಳ ನಡುವೆ ರಾಜತಾಂತ್ರಿಕ ಬಾಂಧವ್ಯವು ಹದಗೆಟ್ಟಿತ್ತು.

ಕೆನಡಾ ಪ್ರಧಾನಿಯವರ ಆರೋಪದ ಬೆನ್ನಲ್ಲೇ ಟ್ರುಡೊ ಅವರ ಆರೋಪಗಳನ್ನು ಭಾರತವು ಅಸಂಬದ್ಧ ಮತ್ತು ಪ್ರಚೋದಿತ ಎಂದು ತಿರಸ್ಕರಿಸಿತ್ತು. ಈ ಮಧ್ಯೆ ಭಾರತದ ಅಧಿಕಾರಿಯನ್ನು ಕೆನಡಾ ಉಚ್ಚಾಟಿಸಿತ್ತು. ಇದರ ಬೆನ್ನಲ್ಲೇ ಭಾರತ ಕೂಡ ಹಿರಿಯ ರಾಜತಾಂತ್ರಿಕ ಅಧಿಕಾರಿಯನ್ನು ಉಚ್ಚಾಟಿಸಿದೆ. ಅಲ್ಲದೆ ದೇಶದಲ್ಲಿರುವ ತನ್ನ ರಾಜತಾಂತ್ರಿಕ ಸಿಬ್ಬಂದಿಯ ಗಾತ್ರವನ್ನು ಕಡಿತಗೊಳಿಸಲು ಸೂಚಿಸಿತ್ತು. ಅದರನುಸಾರ ಕೆನಡಾ ಈಗಾಗಲೇ 41 ರಾಜತಾಂತ್ರಿಕ ಅಧಿಕಾರಿಗಳನ್ನು ವಾಪಸು ಕರೆಸಿಕೊಂಡಿದೆ.

ಈ ಎಲ್ಲಾ ಬೆಳವಣಿಗೆಗೆಳ ತಿಂಗಳುಗಳ ಬಳಿಕ ವೀಸಾ ಸೇವೆಗಳನ್ನು ಭಾಗಶಃ ಮರುಸ್ಥಾಪಿಸಲು ಭಾರತವು ಇತ್ತೀಚೆಗೆ ನಿರ್ಧರಿಸಿದೆ. ವೀಸಾಗಳ ಮೇಲಿನ ಭಾರತದ ಸಡಿಲಿಕೆಯು ಸುಧಾರಿತ ಸಂಬಂಧಗಳ ಕೆಲವು ನಿರೀಕ್ಷೆಗಳನ್ನು ಹೆಚ್ಚಿಸಿದ್ದರೂ, ಇದು ಪ್ರಗತಿಯಾಗಿಲ್ಲ. ಏಕೆಂದರೆ ಎರಡೂ ದೇಶಗಳು ಸಂಬಂಧ ಉತ್ತಮಗೊಳಿಸಲು ಹೆಚ್ಚಿನ ಆಸಕ್ತಿ ತೋರಿಸಿಲ್ಲ ಎಂದು ತಜ್ಞರು ಹೇಳಿದ್ದಾರೆ.

ಒಂದು ಕಡೆ ಹರ್‌ದೀಪ್ ಸಿಂಗ್ ನಿಜ್ಜಾರ್ ಹತ್ಯೆ ಕುರಿತು ಕೆನಡಾದ ತನಿಖೆ ಮುಂದುವರಿಯುತ್ತಿದೆ. ಇನ್ನೊಂದು ಕಡೆ ಭಾರತ ಲೋಕಸಭೆ ಚುನಾವಣೆಗೆ ತಯಾರಿ ನಡೆಸುತ್ತಿರುವಾಗ ಭಾರತ ಅಥವಾ ಕೆನಡಾ ಶೀಘ್ರದಲ್ಲೇ ರಾಜಿ ಮಾಡಿಕೊಳ್ಳಲು ಕ್ರಮಗಳನ್ನು ತೆಗೆದುಕೊಳ್ಳುವ ಸಾಧ್ಯತೆಯಿಲ್ಲ ಎನ್ನುವುದು ತಜ್ಞರ ಅಭಿಪ್ರಾಯ.

ವಾಷಿಂಗ್ಟನ್‌ನ ವಿಲ್ಸನ್ ಸೆಂಟರ್‌ನಲ್ಲಿರುವ ದಕ್ಷಿಣ ಏಷ್ಯಾ ಸಂಸ್ಥೆಯ ನಿರ್ದೇಶಕ ಮೈಕೆಲ್ ಕುಗೆಲ್‌ಮನ್, ಭಾರತ ಕೆನಡಾ ಸಂಬಂಧವು ಆಳವಾದ ಬಿಕ್ಕಟ್ಟಿನಲ್ಲಿದೆ, ಬಹುಶಃ ಇದು ಹಿಂದೆಂದಿಗಿಂತಲೂ ಕೆಟ್ಟದಾಗಿದೆ. ಬಿಕ್ಕಟ್ಟು ಹೆಚ್ಚಾಗಬಾರದು ಎಂಬ ಬಗ್ಗೆ ಎರಡು ದೇಶಕ್ಕೂ ಕಾಳಜಿ ಇರಬಹುದು. ಇದು ಸಮಸ್ಯೆ ಬಗೆಹರಿಸಲು ಪ್ರತ್ಸಾಹಕವಾಗಿದೆ ಎಂದು ಅರ್ಥವಲ್ಲ ಎಂದು ಹೇಳಿದ್ದಾರೆ.

2020ರಿಂದ 2022ರವರೆಗೆ ಕೆನಡಾದಲ್ಲಿ ಭಾರತದ ರಾಯಭಾರಿಯಾಗಿರುವ ಅಜಯ್ ಬಿಸಾರಿಯಾ, ಎರಡೂ ದೇಶಗಳ ಸಂಬಂಧವೂ ಉತ್ಕರ್ಷದ ಹಂತದಲ್ಲಿದೆ ಎಂದು ಹೇಳಿದ್ದಾರೆ.

ವೀಸಾ ನಿರ್ಬಂಧಗಳು ಕೆನಡಾದಲ್ಲಿ ವಾಸಿಸುವ ಅಥವಾ ಅಲ್ಲಿ ಅಧ್ಯಯನ ಮಾಡಲು ಯೋಜಿಸಿರುವ ಹತ್ತಾರು ಭಾರತೀಯರು ಮತ್ತು ಭಾರತೀಯ ಮೂಲದ ಜನರಿಗೆ ಅಡ್ಡಿಯಾಗಬಹುದು ಎಂದು ನಿರೀಕ್ಷಿಸಲಾಗಿದೆ. ಇದಲ್ಲದೆ ಎರಡೂ ಸರ್ಕಾರಗಳು ವ್ಯಾಪಾರ ಸಂಬಂಧಗಳನ್ನು ಉಳಿಸಿಕೊಂಡಿದ್ದರೂ, ಮುಕ್ತ-ವ್ಯಾಪಾರ ಒಪ್ಪಂದದ ಚರ್ಚೆಗಳನ್ನು ವಿಳಂಬಗೊಳಿಸಿದೆ ಎನ್ನಲಾಗಿದೆ.

ಒಟ್ಟಾವಾದಲ್ಲಿನ ಭಾರತದ ಗುಪ್ತಚರ ಮುಖ್ಯಸ್ಥರನ್ನು ಕೆನಡಾ ಹೊರಹಾಕಿತ್ತು. ಕೆನಡಿಯನ್ನರಿಗೆ ವೀಸಾಗಳನ್ನು ಭಾರತ ನಿಲ್ಲಿಸಿತು. ಈ ಕ್ರಮವು ವಿಯೆನ್ನಾ ಒಪ್ಪಂದಗಳನ್ನು ಉಲ್ಲಂಘಿಸಿದೆ ಎಂದು ಕೆನಡಾ ಹೇಳಿದೆ.

ಅ.25ರಂದು ನಾಲ್ಕು ವಿಭಾಗಗಳ ಅಡಿಯಲ್ಲಿ ವೀಸಾಗಳನ್ನು ನೀಡುವುದನ್ನು ಪುನರಾರಂಭಿಸುವುದಾಗಿ ಭಾರತ ಹೇಳಿದೆ. ಆದರೆ ಈ ಬೆಳವಣಿಗೆಯ ಮೂಲಕ ಹಳಸಿದ ಕೆನಡಾ ಮತ್ತು ಭಾರತದ ಸಂಬಂಧವನ್ನು ಸುಲಭವಾಗಿ ಸರಿಪಡಿಸುವುದು ಕಷ್ಟ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನು ಓದಿ: ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆದ ಆರೋಪಿಗಿತ್ತು ಗೌರಿ ಲಂಕೇಶ್ ಹತ್ಯೆ ಆರೋಪಿ ಜೊತೆ ನಂಟು

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...