Homeಮುಖಪುಟಹಳಸಿದ ಭಾರತ-ಕೆನಡಾ ಸಂಬಂಧ ಸರಿಪಡಿಸುವುದು ಒಂದು ದೀರ್ಘ ಪ್ರಕ್ರಿಯೆ: ವರದಿ

ಹಳಸಿದ ಭಾರತ-ಕೆನಡಾ ಸಂಬಂಧ ಸರಿಪಡಿಸುವುದು ಒಂದು ದೀರ್ಘ ಪ್ರಕ್ರಿಯೆ: ವರದಿ

- Advertisement -
- Advertisement -

ಕೆನಡಿಯನ್ನರ ಮೇಲಿನ ಕೆಲವು ವೀಸಾ ನಿರ್ಬಂಧಗಳನ್ನು ಭಾರತವು ಇತ್ತೀಚೆಗೆ ಸಡಿಲಗೊಳಿಸಿದೆ. ಈ ನಿರ್ಧಾರ ಅಚ್ಚರಿಯ ಬೆಳವಣಿಗೆಯಾಗಿದ್ದರೂ ಭಾರತ ಮತ್ತು ಕೆನಡಾ ನಡುವಿನ ಹಳಸಿದ ರಾಜತಾಂತ್ರಿಕ ಸಂಬಂಧಗಳನ್ನು ಸರಿಪಡಿಸುವುದು ದೀರ್ಘ ಪ್ರಕ್ರಿಯೆಯಾಗಬಹುದು ಎಂದು ಅಧಿಕಾರಿಗಳು ಮತ್ತು ತಜ್ಞರು ಹೇಳುತ್ತಾರೆ.

ಸಿಖ್ ಪ್ರತ್ಯೇಕವಾದಿ ನಾಯಕ ಹರ್‌ದೀಪ್ ಸಿಂಗ್ ನಿಜ್ಜಾರ್ ಹತ್ಯೆ ಹಿಂದೆ ಭಾರತೀಯ ಏಜೆಂಟರ ಕೈವಾಡವಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೊ ಆರೋಪಿಸಿದ್ದರು. ತದನಂತರ ಉಭಯ ದೇಶಗಳ ನಡುವೆ ರಾಜತಾಂತ್ರಿಕ ಬಾಂಧವ್ಯವು ಹದಗೆಟ್ಟಿತ್ತು.

ಕೆನಡಾ ಪ್ರಧಾನಿಯವರ ಆರೋಪದ ಬೆನ್ನಲ್ಲೇ ಟ್ರುಡೊ ಅವರ ಆರೋಪಗಳನ್ನು ಭಾರತವು ಅಸಂಬದ್ಧ ಮತ್ತು ಪ್ರಚೋದಿತ ಎಂದು ತಿರಸ್ಕರಿಸಿತ್ತು. ಈ ಮಧ್ಯೆ ಭಾರತದ ಅಧಿಕಾರಿಯನ್ನು ಕೆನಡಾ ಉಚ್ಚಾಟಿಸಿತ್ತು. ಇದರ ಬೆನ್ನಲ್ಲೇ ಭಾರತ ಕೂಡ ಹಿರಿಯ ರಾಜತಾಂತ್ರಿಕ ಅಧಿಕಾರಿಯನ್ನು ಉಚ್ಚಾಟಿಸಿದೆ. ಅಲ್ಲದೆ ದೇಶದಲ್ಲಿರುವ ತನ್ನ ರಾಜತಾಂತ್ರಿಕ ಸಿಬ್ಬಂದಿಯ ಗಾತ್ರವನ್ನು ಕಡಿತಗೊಳಿಸಲು ಸೂಚಿಸಿತ್ತು. ಅದರನುಸಾರ ಕೆನಡಾ ಈಗಾಗಲೇ 41 ರಾಜತಾಂತ್ರಿಕ ಅಧಿಕಾರಿಗಳನ್ನು ವಾಪಸು ಕರೆಸಿಕೊಂಡಿದೆ.

ಈ ಎಲ್ಲಾ ಬೆಳವಣಿಗೆಗೆಳ ತಿಂಗಳುಗಳ ಬಳಿಕ ವೀಸಾ ಸೇವೆಗಳನ್ನು ಭಾಗಶಃ ಮರುಸ್ಥಾಪಿಸಲು ಭಾರತವು ಇತ್ತೀಚೆಗೆ ನಿರ್ಧರಿಸಿದೆ. ವೀಸಾಗಳ ಮೇಲಿನ ಭಾರತದ ಸಡಿಲಿಕೆಯು ಸುಧಾರಿತ ಸಂಬಂಧಗಳ ಕೆಲವು ನಿರೀಕ್ಷೆಗಳನ್ನು ಹೆಚ್ಚಿಸಿದ್ದರೂ, ಇದು ಪ್ರಗತಿಯಾಗಿಲ್ಲ. ಏಕೆಂದರೆ ಎರಡೂ ದೇಶಗಳು ಸಂಬಂಧ ಉತ್ತಮಗೊಳಿಸಲು ಹೆಚ್ಚಿನ ಆಸಕ್ತಿ ತೋರಿಸಿಲ್ಲ ಎಂದು ತಜ್ಞರು ಹೇಳಿದ್ದಾರೆ.

ಒಂದು ಕಡೆ ಹರ್‌ದೀಪ್ ಸಿಂಗ್ ನಿಜ್ಜಾರ್ ಹತ್ಯೆ ಕುರಿತು ಕೆನಡಾದ ತನಿಖೆ ಮುಂದುವರಿಯುತ್ತಿದೆ. ಇನ್ನೊಂದು ಕಡೆ ಭಾರತ ಲೋಕಸಭೆ ಚುನಾವಣೆಗೆ ತಯಾರಿ ನಡೆಸುತ್ತಿರುವಾಗ ಭಾರತ ಅಥವಾ ಕೆನಡಾ ಶೀಘ್ರದಲ್ಲೇ ರಾಜಿ ಮಾಡಿಕೊಳ್ಳಲು ಕ್ರಮಗಳನ್ನು ತೆಗೆದುಕೊಳ್ಳುವ ಸಾಧ್ಯತೆಯಿಲ್ಲ ಎನ್ನುವುದು ತಜ್ಞರ ಅಭಿಪ್ರಾಯ.

ವಾಷಿಂಗ್ಟನ್‌ನ ವಿಲ್ಸನ್ ಸೆಂಟರ್‌ನಲ್ಲಿರುವ ದಕ್ಷಿಣ ಏಷ್ಯಾ ಸಂಸ್ಥೆಯ ನಿರ್ದೇಶಕ ಮೈಕೆಲ್ ಕುಗೆಲ್‌ಮನ್, ಭಾರತ ಕೆನಡಾ ಸಂಬಂಧವು ಆಳವಾದ ಬಿಕ್ಕಟ್ಟಿನಲ್ಲಿದೆ, ಬಹುಶಃ ಇದು ಹಿಂದೆಂದಿಗಿಂತಲೂ ಕೆಟ್ಟದಾಗಿದೆ. ಬಿಕ್ಕಟ್ಟು ಹೆಚ್ಚಾಗಬಾರದು ಎಂಬ ಬಗ್ಗೆ ಎರಡು ದೇಶಕ್ಕೂ ಕಾಳಜಿ ಇರಬಹುದು. ಇದು ಸಮಸ್ಯೆ ಬಗೆಹರಿಸಲು ಪ್ರತ್ಸಾಹಕವಾಗಿದೆ ಎಂದು ಅರ್ಥವಲ್ಲ ಎಂದು ಹೇಳಿದ್ದಾರೆ.

2020ರಿಂದ 2022ರವರೆಗೆ ಕೆನಡಾದಲ್ಲಿ ಭಾರತದ ರಾಯಭಾರಿಯಾಗಿರುವ ಅಜಯ್ ಬಿಸಾರಿಯಾ, ಎರಡೂ ದೇಶಗಳ ಸಂಬಂಧವೂ ಉತ್ಕರ್ಷದ ಹಂತದಲ್ಲಿದೆ ಎಂದು ಹೇಳಿದ್ದಾರೆ.

ವೀಸಾ ನಿರ್ಬಂಧಗಳು ಕೆನಡಾದಲ್ಲಿ ವಾಸಿಸುವ ಅಥವಾ ಅಲ್ಲಿ ಅಧ್ಯಯನ ಮಾಡಲು ಯೋಜಿಸಿರುವ ಹತ್ತಾರು ಭಾರತೀಯರು ಮತ್ತು ಭಾರತೀಯ ಮೂಲದ ಜನರಿಗೆ ಅಡ್ಡಿಯಾಗಬಹುದು ಎಂದು ನಿರೀಕ್ಷಿಸಲಾಗಿದೆ. ಇದಲ್ಲದೆ ಎರಡೂ ಸರ್ಕಾರಗಳು ವ್ಯಾಪಾರ ಸಂಬಂಧಗಳನ್ನು ಉಳಿಸಿಕೊಂಡಿದ್ದರೂ, ಮುಕ್ತ-ವ್ಯಾಪಾರ ಒಪ್ಪಂದದ ಚರ್ಚೆಗಳನ್ನು ವಿಳಂಬಗೊಳಿಸಿದೆ ಎನ್ನಲಾಗಿದೆ.

ಒಟ್ಟಾವಾದಲ್ಲಿನ ಭಾರತದ ಗುಪ್ತಚರ ಮುಖ್ಯಸ್ಥರನ್ನು ಕೆನಡಾ ಹೊರಹಾಕಿತ್ತು. ಕೆನಡಿಯನ್ನರಿಗೆ ವೀಸಾಗಳನ್ನು ಭಾರತ ನಿಲ್ಲಿಸಿತು. ಈ ಕ್ರಮವು ವಿಯೆನ್ನಾ ಒಪ್ಪಂದಗಳನ್ನು ಉಲ್ಲಂಘಿಸಿದೆ ಎಂದು ಕೆನಡಾ ಹೇಳಿದೆ.

ಅ.25ರಂದು ನಾಲ್ಕು ವಿಭಾಗಗಳ ಅಡಿಯಲ್ಲಿ ವೀಸಾಗಳನ್ನು ನೀಡುವುದನ್ನು ಪುನರಾರಂಭಿಸುವುದಾಗಿ ಭಾರತ ಹೇಳಿದೆ. ಆದರೆ ಈ ಬೆಳವಣಿಗೆಯ ಮೂಲಕ ಹಳಸಿದ ಕೆನಡಾ ಮತ್ತು ಭಾರತದ ಸಂಬಂಧವನ್ನು ಸುಲಭವಾಗಿ ಸರಿಪಡಿಸುವುದು ಕಷ್ಟ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನು ಓದಿ: ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆದ ಆರೋಪಿಗಿತ್ತು ಗೌರಿ ಲಂಕೇಶ್ ಹತ್ಯೆ ಆರೋಪಿ ಜೊತೆ ನಂಟು

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...