Homeಮುಖಪುಟಪಾಕಿಸ್ತಾನದ ಮೇಲೆ ಮತ್ತೆ ಸರ್ಜಿಕಲ್ ಸ್ಟ್ರೈಕ್; ಸುಳ್ಳು ಸುದ್ದಿ ಎಂದ ರಕ್ಷಣಾ ಸಚಿವಾಲಯ

ಪಾಕಿಸ್ತಾನದ ಮೇಲೆ ಮತ್ತೆ ಸರ್ಜಿಕಲ್ ಸ್ಟ್ರೈಕ್; ಸುಳ್ಳು ಸುದ್ದಿ ಎಂದ ರಕ್ಷಣಾ ಸಚಿವಾಲಯ

- Advertisement -
- Advertisement -

ಪಾಕಿಸ್ತಾನದ ಮೇಲೆ ಮತ್ತೊಂದು ಸರ್ಜಿಕಲ್ ಸ್ಟ್ರೈಕ್ ಮಾಡಲಾಗಿದೆ ಎಂದು ಮಾದ್ಯಮವೊಂದರ ವರದಿ ಬಗ್ಗೆ ಪ್ರತಿಕ್ರಿಯಿಸಿದ ರಕ್ಷಣಾ ಸಚಿವಾಲಯ ಇಂತಹ ಯಾವುದೇ ಸರ್ಜಿಕಲ್ ಸ್ಟ್ರೈಕ್ ಮಾಡಿಲ್ಲ ಎಂದು ಸ್ಪಷ್ಟ ಪಡಿಸಿದೆ.

ಈ ಕುರಿತು ಹಿಂದಿ ಪತ್ರಿಕೆಯೊಂದು ವರದಿ ಮಾಡಿ, ಭಾರತ ಮತ್ತೆ ಪಾಕ್ ಆಕ್ರಮಿತ ಕಾಶ್ಮೀರ(ಪಿಒಕೆ) ಭಾಗದ  ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದು ಕನಿಷ್ಠ 8 ಮಂದಿ ಉಗ್ರರ ಹತ್ಯೆ ಮಾಡಿದೆ ಎಂದು ಹೇಳಿತ್ತು.ಇದರ ಜೊತೆಗೆ ಭಾರತೀಯ ಸೇನೆ ಪಿಒಕೆಯ ಪೂಂಚ್ ಮತ್ತು ರಾಜೋರಿ ಸೆಕ್ಟರ್ ನಲ್ಲಿ  2.5ಕಿ.ಮೀ ಮುಂದೆ ಸಾಗಿದೆ ಮತ್ತು ನಾಲ್ಕು ಉಗ್ರರ ತಾಂಡವನ್ನು ಹೊಡೆದುರುಳಿಸಿದೆ ಎಂದು ವರದಿ ಮಾಡಿತ್ತು.

ಸರ್ಜಿಕಲ್ ಸ್ಟ್ರೈಕ್ 3.0 ನಲ್ಲಿ ಭಾಗಿಯಾಗಿದ್ದ ಭಾರತೀಯ ಸೇನೆಯು ತಮ್ಮ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರ ಸುರಕ್ಷಿತವಾಗಿ ಭಾರತದ ನೆಲೆಗೆ ಮರಳಿದೆ ಎಂದು ವರದಿಯು ಹೇಳಿಕೊಂಡಿದೆ. ಭಾರತದ ಸರ್ಜಿಕಲ್ ಸ್ಟ್ರೈಕ್ 3.0 ಸಾಮಾಜಿಕ ಮಾಧ್ಯಮದಲ್ಲಿ ಸದ್ದು ಮಾಡುತ್ತಿದ್ದರೆ, ಭಾರತದ ರಕ್ಷಣಾ ಸಚಿವಾಲಯ ಅದನ್ನು ಸುಳ್ಳು ಎಂದು ಹೇಳಿದೆ.

ಈ ವರದಿಯನ್ನು ತಳ್ಳಿಹಾಕಿದ ಭಾರತೀಯ ಸೇನೆ ಇಂತಹ ಯಾವುದೇ ಸರ್ಜಕಲ್ ಸ್ಟ್ರೈಕ್ ನಡೆದಿಲ್ಲ ಎಂದು ಸ್ಪಷ್ಟ ಪಡಿಸಿದೆ.

ಜೊತೆಗೆ ಬಾಲಾಕೋಟ್ ಸೆಕ್ಟರ್‌ನಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕರು ಒಳನುಸುಳಲು  ಪ್ರಯತ್ನವನ್ನು ಮಾಡಿದ್ದು, ಭಾರತೀಯ ಸೇನೆ  ಅದನ್ನು ವಿಫಲಗೊಳಿಸಿದೆ ಎಂದು ಸಚಿವಾಲಯ  ತಿಳಿಸಿದೆ.

ಭಾರತೀಯ ಸೇನೆಯ ಶೋಧ ಕಾರ್ಯಾಚರಣೆಯ ಸಮಯದಲ್ಲಿ, ಭಾರತೀಯ ಸೇನೆಯು   AK 47 ರೈಫಲ್, ಎರಡು ಮ್ಯಾಗಜೀನ್‌ಗಳು, ಗ್ರೆನೇಡ್‌ಗಳು ಮತ್ತು ಪಾಕ್ ಮೂಲದ ಔಷಧಿಗಳನ್ನು ವಶಪಡಿಸಿಕೊಂಡಿದೆ.

ಇನ್ನು  ಸೋಮವಾರ ಪೂಂಚ್ ಜಿಲ್ಲೆಯ ಎಲ್‌ಒಸಿ ಬಳಿ  ನುಸುಳಲು ಪ್ರಯತ್ನಿಸುತ್ತಿದ್ದಾಗ ಇಬ್ಬರು ಭಯೋತ್ಪಾದಕರು ಕೊಲ್ಲಲ್ಪಟ್ಟರು ಎಂದು ಭಾರತೀಯ ಸೇನೆಯ ವಕ್ತಾರರನ್ನು ಉಲ್ಲೇಖಿಸಿ ಸುದ್ದಿವಾಹಿನಿಯೊಂದು ವರದಿ ಮಾಡಿದೆ.

ಇದನ್ನು ಓದಿ: ದೆಹಲಿ: ‘ಜೈ ಶ್ರೀರಾಮ್’ ಘೋಷಣೆ ಕೂಗುತ್ತಾ ಚರ್ಚ್ ಗೆ ನುಗ್ಗಿ ದಾಂಧಲೆ

 

 

 

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...