Homeಅಂತರಾಷ್ಟ್ರೀಯಭಾರತ-ಚೀನಾ ಗಡಿ ಸಂಘರ್ಷ: ಲಡಾಖ್‌ನಲ್ಲಿ ಗಂಭೀರ ಪರಿಸ್ಥಿತಿ

ಭಾರತ-ಚೀನಾ ಗಡಿ ಸಂಘರ್ಷ: ಲಡಾಖ್‌ನಲ್ಲಿ ಗಂಭೀರ ಪರಿಸ್ಥಿತಿ

ಪ್ರಸ್ತುತ ಲಡಾಖ್‌ನ 1,597 ಕಿ.ಮೀ ವಾಸ್ತವಿಕ ನಿಯಂತ್ರಣ ರೇಖೆಯ (ಎಲ್‌ಎಸಿ) ಉದ್ದಕ್ಕೂ ಚೀನಾದ ಯಾವುದೇ ಆಕ್ರಮಣವನ್ನು ಹಿಮ್ಮೆಟ್ಟಿಸಲು ಭಾರತೀಯ ಸೇನೆ ತಯಾರಾಗಿದೆ ಎನ್ನಲಾಗಿದೆ.

- Advertisement -
- Advertisement -

ಆಗಸ್ಟ್ 29 ಮತ್ತು 30 ರ ರಾತ್ರಿ ಚೀನಾ ಸೈನ್ಯದ ಚುಶುಲ್‌ನಲ್ಲಿನ ಆಕ್ರಮಣಕಾರಿ ಪ್ರಯತ್ನಗಳನ್ನು ಭಾರತೀಯ ಸೈನ್ಯ ತಡೆದ ನಂತರ ಪೂರ್ವ ಲಡಾಖ್‌ನಲ್ಲಿ ಪರಿಸ್ಥಿತಿ ಗಂಭೀರವಾಗಿದೆ.

“ಚುಶುಲ್ ಪ್ರದೇಶದಲ್ಲಿ ಪರಿಸ್ಥಿತಿ ತುಂಬಾ ಉದ್ವಿಗ್ನವಾಗಿದ್ದು, ಚೀನಾ ಸೇನೆ ಸಂಪೂರ್ಣವಾಗಿ ಆಕ್ರಮಣಕಾರಿಯಾಗಿ ವರ್ತಿಸುತ್ತಿದೆ. ಭಾರತದ ಸೈನ್ಯ ಪ್ರತ್ಯುತ್ತರ ನೀಡುವಂತೆ ಹೆವಿ-ಕ್ಯಾಲಿಬರ್ ಶಸ್ತ್ರಾಸ್ತ್ರಗಳನ್ನು ಪ್ರದರ್ಶಿಸುತ್ತದೆ. ಭಾರತೀಯ ಸೇನೆಯು ಶಸ್ತ್ರಾಸ್ತ್ರಗಳನ್ನು ಹೊಂದಿಸಿ, ದಕ್ಷಿಣ ಪ್ಯಾಂಗಾಗ್‌ತ್ಸೋ ಮತ್ತು ರೆಂಜನ್‌ಲಾದ ಚೀನಾದ ಆಕ್ರಮಣವನ್ನು ವಿಶೇಷ ಗಡಿರಕ್ಷಣಾ ಪಡೆಗಳು ಪ್ರತಿ-ಆಕ್ರಮಣ ಮಾಡಿದೆ” ಎಂದು ಹಿರಿಯ ಮಿಲಿಟರಿ ಅಧಿಕಾರಿಯೊಬ್ಬರು ಹೇಳಿದ್ದಾಗಿ ಹಿಂದೂಸ್ಥಾನ್ ಟೈಂಮ್ಸ್‌ ವರದಿ ಮಾಡಿದೆ.

ಇದನ್ನೂ ಓದಿ: ಭಾರತ-ಚೀನಾ ಗಡಿ ಉದ್ವಿಗ್ನತೆ: ಮತ್ತೆ ಲಡಾಖ್ ಗಡಿ ಅತಿಕ್ರಮಿಸಿದ ಚೀನಾ ಪಡೆಗಳು

ಪ್ರಸ್ತುತ ಲಡಾಖ್‌ನ 1,597 ಕಿ.ಮೀ ವಾಸ್ತವಿಕ ನಿಯಂತ್ರಣ ರೇಖೆಯ (ಎಲ್‌ಎಸಿ) ಉದ್ದಕ್ಕೂ ಚೀನಾದ ಯಾವುದೇ ಆಕ್ರಮಣವನ್ನು ಹಿಮ್ಮೆಟ್ಟಿಸಲು ಭಾರತೀಯ ಸೇನೆ ತಯಾರಾಗಿದೆ ಎನ್ನಲಾಗಿದೆ.

ಭಾರತದ ಪ್ರತಿದಾಳಿಯು ವಾಸ್ತವಿಕ ನಿಯಂತ್ರಣ ರೇಖೆಯಯಲ್ಲಿ ಪ್ರಾಬಲ್ಯ ಸಾಧಿಸುತ್ತಿದೆ ಮತ್ತು ಚೀನಾದ ನಡೆಯನ್ನು ಮೇಲ್ವಿಚಾರಣೆ ಮಾಡುತ್ತಿದೆ ಎಂದು ಖಚಿತಪಡಿಸಿದೆ. “ಪರಿಸ್ಥಿತಿ ಭೀಕರವಾಗಿದೆ ಮತ್ತು ಚೀನಾದ ಸೂಚನೆಯ ಮೇರೆಗೆ ಚೀನೀ ಸೈನ್ಯ ಭಾರತೀಯ ಸೈನ್ಯವನ್ನು ಹಿಮ್ಮೆಟ್ಟಿಸಲು ಹೊರಟಿದೆ, ಪರಿಸ್ಥಿತಿ ಉಲ್ಬಣಗೊಳ್ಳುವ ಸಾಧ್ಯತೆಯನ್ನು ತಳ್ಳಿಹಾಕಲಾಗುವುದಿಲ್ಲ” ಎಂದು ಎರಡನೇ ಹಿರಿಯ ಮಿಲಿಟರಿ ಕಮಾಂಡರ್ ಹೇಳಿದ್ದಾರೆ.

ಮಾಸ್ಕೋದಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಘಟನೆಯ ಸಭೆಯ ಸನಿಹದಲ್ಲೇ ವಿದೇಶಾಂಗ ಸಚಿವ ಎಸ್.ಜೈಶಂಕರ್ ಮತ್ತು ಚೀನಾದ ವಿದೇಶಾಂಗ ಸಚಿವ ವಾಂಗ್‌ಯಿ ನಡುವಿನ ಸಭೆ ನಡೆದರೆ ಶಾಂತಿ ಮರುಸ್ಥಾಪನೆಗೊಳ್ಳುವ ಭರವಸೆ ಇದೆ. ಆದರೆ ಚೀನಾ ಸೈನ್ಯದ ಆಕ್ರಮಣಕಾರಿ ನಡೆಯು ಈ ರಾಜತಾಂತ್ರಿಕ ಉಪಕ್ರಮವನ್ನು ತಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ಲಡಾಖ್‌ನಲ್ಲಿ ಚೀನಾ ಸೈನ್ಯದ ಆಕ್ರಮಣ ನಡೆಯುತ್ತಿರುವಾಗಲೂ, ಭಾರತದ ರಾಷ್ಟ್ರೀಯ ಭದ್ರತಾ ಯೋಜಕರು ಲಡಾಖ್‌ನಲ್ಲಿ ಅಥವಾ 3,488 ಕಿ.ಮೀ ವಾಸ್ತವಿಕ ನಿಯಂತ್ರಣ ರೇಖೆಯ ಉದ್ದಕ್ಕೂ ಎಲ್ಲಿಯೂ ಯಾವುದೇ ಪ್ರಾದೇಶಿಕ ರಾಜಿ ಮಾಡಿಕೊಳ್ಳಬಾರದು ಎಂಬ ಸ್ಪಷ್ಟ ನಿರ್ದೇಶನಗಳೊಂದಿಗೆ ಎಲ್ಲಾ ನಡೆಗಳನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ಹಿಂದುಸ್ಥಾನ್ ಟೈಮ್ಸ್‌ ವರದಿ ಮಾಡಿದೆ.


ಇದನ್ನೂ ಓದಿ: ಲಡಾಖ್‌‌ನಲ್ಲಿನ ಇತ್ತೀಚಿನ ಉದ್ವಿಗ್ನತೆಗೆ ಭಾರತವೇ ಕಾರಣ; ಚೀನಾ ಸೇನೆ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...