Homeಮುಖಪುಟಭಾರತ-ಚೀನಾ ಗಡಿ ಬಿಕ್ಕಟ್ಟು: ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷಗಳ ವಾಗ್ದಾಳಿ

ಭಾರತ-ಚೀನಾ ಗಡಿ ಬಿಕ್ಕಟ್ಟು: ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷಗಳ ವಾಗ್ದಾಳಿ

- Advertisement -
- Advertisement -

ಚೀನಾದೊಂದಿಗಿನ ಗಡಿ ಬಿಕ್ಕಟ್ಟಿನ ಕುರಿತು ವಿರೋಧ ಪಕ್ಷಗಳ ನಾಯಕರು ಕೇಂದ್ರದ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬಿಕ್ಕಟ್ಟಿಗೆ ಪ್ರಧಾನಿ ಮೋದಿ ನೇತೃತ್ವದ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡಿ ತೀವ್ರವಾಗಿ ಟೀಕಿಸಿದ್ದಾರೆ.

ಗಾಲ್ವಾನ್ ಕಣಿವೆಯ ಸಂಘರ್ಷದ ಕುರಿತು ಪ್ರಧಾನಮಂತ್ರಿಯ ಹೇಳಿಕೆಗಳ ಕುರಿತು ರಾಹುಲ್ ಗಾಂಧಿ ಸರಣಿ ಟ್ವೀಟ್‌ಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು ‘ಸುರೇಂದರ್ ಮೋದಿ’ ಎಂದು ಕರೆದಿದ್ದಾರೆ. ರಾಹುಲ್ ಗಾಂಧಿ ತನ್ನ ಸರಣಿ ಪ್ರಶ್ನೆಗಳಲ್ಲಿ, ‘ಪ್ರಧಾನಿ ಏಕೆ ಮೌನವಾಗಿದ್ದಾರೆ?’, ‘ಅವರು ಯಾಕೆ ತಲೆಮರೆಸಿಕೊಂಡಿದ್ದಾರೆ?’ ಭಾರತ ಸರ್ಕಾರವು ನಿದ್ರಿಸುತ್ತಿದೆ ಮತ್ತು ಸಮಸ್ಯೆಯನ್ನು ನಿರಾಕರಿಸುತ್ತಿದೆ ಎಂದು ಆರೋಪಿಸಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ನಿಲುವುಗಳ ಕುರಿತು ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ಭಾರತೀಯ ಸೇನೆಗೆ ರಾಜ್‌ನಾಥ್ ಸಿಂಗ್ ಏಕೆ ಅವಮಾನಿಸುತ್ತಿದ್ದಾರೆ ಎಂದು ಕೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡಾ ಗಾಲ್ವಾನ್ ವ್ಯಾಲಿಯ ಪರಿಸ್ಥಿತಿಯ ಬಗ್ಗೆ ಸತ್ಯವನ್ನು ಬಹಿರಂಗಪಡಿಸುವಂತೆ ಪ್ರಧಾನಿ ಮೋದಿಯವರನ್ನು ಆಗ್ರಹಿಸಿದ್ದಾರೆ. ಅಲ್ಲದೆ ಚೀನಾ ಆಕ್ರಮಿಸಿದ ಭಾರತದ ಭಾಗಗಳ ಬಗ್ಗೆ ಮಾಹಿತಿ ನೀಡಲು ಪ್ರಧಾನಿಯವರನ್ನು ಕೇಳಿಕೊಂಡಿದ್ದಾರೆ.

ಕಾಂಗ್ರೆಸ್ ಪಕ್ಷದ ಮುಖ್ಯ ವಕ್ತಾರ ರಂದೀಪ್ ಸಿಂಗ್ ಸುರ್ಜೆವಾಲಾ ಗಡಿ ಸಂಘರ್ಷದ ಸಂಭಂದಿಸಿ ಪ್ರಧಾನಿ ಮೋದಿಯವರ ಪ್ರತಿಕ್ರಿಯೆಯನ್ನು ಖಂಡಿಸಿದ್ದಾರೆ.

 

ತೃಣಮೂಲ ಕಾಂಗ್ರೆಸ್ ನ ಯುವ ವಿಂಗ್ ಅಧ್ಯಕ್ಷ ಅಭಿಷೇಕ್ ಬ್ಯಾನರ್ಜಿ, ಚೀನಿಯರು ಭಾರತೀಯ ಭೂಪ್ರದೇಶವನ್ನು ಆಕ್ರಮಿಸಿಕೊಂಡಿದ್ದಾರೆಯೇ ಇಲ್ಲವೇ ಎಂದು ಕೇಳಿದ್ದಾರೆ.

ಭಾರತದ ಭೂಪ್ರದೇಶಕ್ಕೆ ಯಾರೂ ಪ್ರವೇಶಿಸದಿದ್ದರೆ 20 ಸೈನಿಕರು ಹೇಗೆ ಸತ್ತರು ಎಂದು ಎಂದು ಕಾಂಗ್ರೆಸ್ ಹಿರಿಯ ಮುಖಂಡ ಕಪಿಲ್ ಸಿಬಲ್ ಪ್ರಶ್ನಿಸಿದ್ದಾರೆ.

ಜೂನ್ 15 ರಂದು ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ಚೀನಾದ ಸೈನ್ಯದೊಂದಿಗೆ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಪ್ರಾಣ ಕಳೆದುಕೊಂಡಿದ್ದಾರೆ.


ಓದಿ: ತಮ್ಮ ಮಾತಿನಿಂದಾಗುವ ಪರಿಣಾಮವನ್ನು ಮೋದಿ ಅರಿಯಬೇಕು: ಮನಮೋಹನ್ ಸಿಂಗ್


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...