Homeಅಂತರಾಷ್ಟ್ರೀಯಭಾರತ-ಚೀನಾ: ಗಡಿಯಲ್ಲಿ ಚೀನೀ ಸೈನಿಕನೊಬ್ಬನನ್ನು ಸೆರೆಹಿಡಿದ ಭಾರತೀಯ ಪಡೆ!

ಭಾರತ-ಚೀನಾ: ಗಡಿಯಲ್ಲಿ ಚೀನೀ ಸೈನಿಕನೊಬ್ಬನನ್ನು ಸೆರೆಹಿಡಿದ ಭಾರತೀಯ ಪಡೆ!

ಸಿಕ್ಕಿಬಿದ್ದ ಸೈನಿಕ, ನಾಗರಿಕ ಮತ್ತು ಮಿಲಿಟರಿ ದಾಖಲೆಗಳನ್ನು ಹೊತ್ತೊಯ್ಯುತ್ತಿದ್ದನೆಂದು ಕೆಲವು ವರದಿಗಳು ಬಂದಿವೆ

- Advertisement -
- Advertisement -

ಭಾರತೀಯ ಪಡೆ ಇಂದು ಚೀನಾ ಸೈನಿಕನೊಬ್ಬನನ್ನು ಲಡಾಖ್ ಬಳಿ ಸೆರೆಹಿಡಿದಿದ್ದು, ಕಾರ್ಪೋರಲ್ ವಾಂಗ್ ಯಾ ಲಾಂಗ್ ಎಂದು ಗುರುತಿಸಲಾಗಿರುವ ಈತನನ್ನು ಚುಮರ್-ಡೆಮ್ಚೋಕ್ ಪ್ರದೇಶದಲ್ಲಿ ಸೆರೆಹಿಡಿಯಲಾಗಿದೆ.

ಸೈನಿಕನಿಗೆ ಆಮ್ಲಜನಕ, ಆಹಾರ ಮತ್ತು ಬೆಚ್ಚಗಿನ ಬಟ್ಟೆಗಳು ಸೇರಿದಂತೆ ಅಗತ್ಯ ವೈದ್ಯಕೀಯ ನೆರವು ನೀಡಲಾಗಿದೆ. ಸರಿಯಾದ ಕಾರ್ಯವಿಧಾನವನ್ನು ಅನುಸರಿಸಿ ಪ್ರೋಟೋಕಾಲ್ ಪ್ರಕಾರ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಸೈನಿಕನನ್ನು ಚೀನೀ ಸೈನ್ಯಕ್ಕೆ ಹಿಂತಿರುಗಿಸಲಾಗುತ್ತದೆ ಎಂದು ಸೇನೆಯು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

“ನಾಪತ್ತೆಯಾದ ಸೈನಿಕ ಎಲ್ಲಿದ್ದಾನೆ ಎಂಬ ಬಗ್ಗೆ ಚೀನಾದ ಸೈನ್ಯದಿಂದ ಮನವಿ ಬಂದಿದ್ದು, ಔಪಚಾರಿಕ ಕಾರ್ಯಗಳು ಪೂರ್ಣಗೊಂಡ ನಂತರ ಅವರನ್ನು ಚುಶುಲ್-ಮೊಲ್ಡೊ ಮೀಟಿಂಗ್ ಪಾಯಿಂಟ್‌ನಲ್ಲಿ ಚೀನಾದ ಅಧಿಕಾರಿಗಳಿಗೆ ಹಿಂತಿರುಗಿಸಲಾಗುವುದು” ಎಂದು ಸೇನೆಯು ತಿಳಿಸಿದೆ.

ಸಿಕ್ಕಿಬಿದ್ದ ಸೈನಿಕ, ನಾಗರಿಕ ಮತ್ತು ಮಿಲಿಟರಿ ದಾಖಲೆಗಳನ್ನು ಹೊತ್ತೊಯ್ಯುತ್ತಿದ್ದನೆಂದು ಕೆಲವು ವರದಿಗಳು ಬಂದಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಚೀನಾ ಮತ್ತು ನಮ್ಮ ನಡುವೆ ನಡೆಯುತ್ತಿರುವ ಚರ್ಚೆ ಗೌಪ್ಯವಾದದ್ದು: ಭಾರತದ ವಿದೇಶಾಂಗ ಸಚಿವ!

ಗಾಲ್ವಾನ್ ಕಣಿವೆಯಲ್ಲಿ ಚೀನಿಯರೊಂದಿಗಿನ ಘರ್ಷಣೆಯಲ್ಲಿ ಕರ್ತವ್ಯದಲ್ಲಿದ್ದ 20 ಭಾರತೀಯ ಸೈನಿಕರು ಜೂನ್‌ನಲ್ಲಿ ಸಾವನ್ನಪ್ಪಿದ್ದರು. ಆಗ ಉಭಯ ದೇಶಗಳಲ್ಲಿ ಉದ್ವಿಗ್ನತೆ ಉತ್ತುಂಗಕ್ಕೇರಿತ್ತು. ಕಳೆದ ತಿಂಗಳು, ಪ್ಯಾಂಗೊಂಗ್ ತ್ಸೊದಲ್ಲಿ ಎರಡೂ ಪಡೆ ಮುಖಾಮುಖಿಯಾಗುತ್ತಿದ್ದಂತೆ ಒಂದಕ್ಕಿಂತ ಹೆಚ್ಚು ಬಾರಿ ಗಾಳಿಯಲ್ಲಿ ಗುಂಡು ಹಾರಿಸಲಾಗಿತ್ತು.

ಇತ್ತೀಚೆಗೆ ಭಾರತ-ಚೀನಾ ನಡುವಿನ ಸಂಬಂಧ ಚಿಂತಾಜನಕವಾಗಿದ್ದು, ಯಾವ ಸಂಧರ್ಭದಲ್ಲಿ ಏನುಬೇಕಾದರೂ ನಡೆಯಬಹುದು ಎಂಬ ಭೀತಿಯುಂಟಾಗಿದೆ. ಎರಡೂ ದೇಶಗಳೂ ಗಡಿಯಲ್ಲಿ ಸೇನೆಯನ್ನು ಜಮಾವಣೆ ಮಾಡಿವೆ.

ಈ ಪ್ರಕ್ಷುಬ್ದ ವಾತಾವರಣಕ್ಕೆ ಕೇಂದ್ರ ಸರ್ಕಾರವೇ ಕಾರಣ ಎಂದು ವಿರೋಧ ಪಕ್ಷಗಳು ಟೀಕಿಸುತ್ತಿದ್ದು, ಚೀನಾ ವಿರುದ್ಧ ಕೇಂದ್ರ ಸರ್ಕಾರದ ಪ್ರತಿಯೊಬ್ಬರೂ ಒಂದೊಂದು ಮಾಹಿತಿ ನೀಡುತ್ತಿದ್ದಾರೆ. ಒಬ್ಬರು ಯಾವುದೇ ತೊಂದರೆಯಿಲ್ಲ ಎಂದರೆ, ಮತ್ತೊಬ್ಬರು ತೊಂದರೆಯಿದೆ ಎನ್ನುತ್ತಾರೆ. ಇನ್ನೊಬ್ಬರು ಭೂಪ್ರದೇಶವನ್ನು ಆಕ್ರಮಿಸಿಕೊಂಡಿಲ್ಲ ಎಂದರೆ, ಮತ್ತೊಬ್ಬರು ಆಕ್ರಮಿಸಿಕೊಂಡಿದೆ ಎನ್ನುತ್ತಾರೆ. ಒಬ್ಬರು ಗೌಪ್ಯ ಮಾತುಕತೆ ನಡೆಸುತ್ತಿದ್ದೇವೆ ಎನ್ನುತ್ತಾರೆ, ಮತ್ತೊಬ್ಬರು ಚೀನಾದೊಟ್ಟಿಗೆ ಯುದ್ಧ ಮಾಡಲು ಸಿದ್ಧ ಎನ್ನುತ್ತಾರೆ.

ಒಟ್ಟಾರೆಯಾಗಿ, ಕೇಂದ್ರ ಸರ್ಕಾರ ಪ್ರಜೆಗಳಿಂದ ಸತ್ಯವನ್ನು ಮುಚ್ಚಿಡುತ್ತಿದೆ ಎಂದು ಹಲವರು ಆರೋಪಿಸಿದ್ದು, ನರೇಂದ್ರ ಮೋದಿಯವರು ಚೀನಾ ಹೆಸರನ್ನು ಹೇಳಲು ಭಯಪಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ಭಾರತ-ಚೀನಾ: ಗಡಿಯಲ್ಲಿ ಜಮಾವಣೆಗೊಂಡ ಚೀನಿ ಯುದ್ಧ ಟ್ಯಾಂಕ್‌‌ಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...