Homeಅಂತರಾಷ್ಟ್ರೀಯಭಾರತ-ಚೀನಾ: ಗಡಿಯಲ್ಲಿ ಚೀನೀ ಸೈನಿಕನೊಬ್ಬನನ್ನು ಸೆರೆಹಿಡಿದ ಭಾರತೀಯ ಪಡೆ!

ಭಾರತ-ಚೀನಾ: ಗಡಿಯಲ್ಲಿ ಚೀನೀ ಸೈನಿಕನೊಬ್ಬನನ್ನು ಸೆರೆಹಿಡಿದ ಭಾರತೀಯ ಪಡೆ!

ಸಿಕ್ಕಿಬಿದ್ದ ಸೈನಿಕ, ನಾಗರಿಕ ಮತ್ತು ಮಿಲಿಟರಿ ದಾಖಲೆಗಳನ್ನು ಹೊತ್ತೊಯ್ಯುತ್ತಿದ್ದನೆಂದು ಕೆಲವು ವರದಿಗಳು ಬಂದಿವೆ

- Advertisement -
- Advertisement -

ಭಾರತೀಯ ಪಡೆ ಇಂದು ಚೀನಾ ಸೈನಿಕನೊಬ್ಬನನ್ನು ಲಡಾಖ್ ಬಳಿ ಸೆರೆಹಿಡಿದಿದ್ದು, ಕಾರ್ಪೋರಲ್ ವಾಂಗ್ ಯಾ ಲಾಂಗ್ ಎಂದು ಗುರುತಿಸಲಾಗಿರುವ ಈತನನ್ನು ಚುಮರ್-ಡೆಮ್ಚೋಕ್ ಪ್ರದೇಶದಲ್ಲಿ ಸೆರೆಹಿಡಿಯಲಾಗಿದೆ.

ಸೈನಿಕನಿಗೆ ಆಮ್ಲಜನಕ, ಆಹಾರ ಮತ್ತು ಬೆಚ್ಚಗಿನ ಬಟ್ಟೆಗಳು ಸೇರಿದಂತೆ ಅಗತ್ಯ ವೈದ್ಯಕೀಯ ನೆರವು ನೀಡಲಾಗಿದೆ. ಸರಿಯಾದ ಕಾರ್ಯವಿಧಾನವನ್ನು ಅನುಸರಿಸಿ ಪ್ರೋಟೋಕಾಲ್ ಪ್ರಕಾರ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಸೈನಿಕನನ್ನು ಚೀನೀ ಸೈನ್ಯಕ್ಕೆ ಹಿಂತಿರುಗಿಸಲಾಗುತ್ತದೆ ಎಂದು ಸೇನೆಯು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

“ನಾಪತ್ತೆಯಾದ ಸೈನಿಕ ಎಲ್ಲಿದ್ದಾನೆ ಎಂಬ ಬಗ್ಗೆ ಚೀನಾದ ಸೈನ್ಯದಿಂದ ಮನವಿ ಬಂದಿದ್ದು, ಔಪಚಾರಿಕ ಕಾರ್ಯಗಳು ಪೂರ್ಣಗೊಂಡ ನಂತರ ಅವರನ್ನು ಚುಶುಲ್-ಮೊಲ್ಡೊ ಮೀಟಿಂಗ್ ಪಾಯಿಂಟ್‌ನಲ್ಲಿ ಚೀನಾದ ಅಧಿಕಾರಿಗಳಿಗೆ ಹಿಂತಿರುಗಿಸಲಾಗುವುದು” ಎಂದು ಸೇನೆಯು ತಿಳಿಸಿದೆ.

ಸಿಕ್ಕಿಬಿದ್ದ ಸೈನಿಕ, ನಾಗರಿಕ ಮತ್ತು ಮಿಲಿಟರಿ ದಾಖಲೆಗಳನ್ನು ಹೊತ್ತೊಯ್ಯುತ್ತಿದ್ದನೆಂದು ಕೆಲವು ವರದಿಗಳು ಬಂದಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಚೀನಾ ಮತ್ತು ನಮ್ಮ ನಡುವೆ ನಡೆಯುತ್ತಿರುವ ಚರ್ಚೆ ಗೌಪ್ಯವಾದದ್ದು: ಭಾರತದ ವಿದೇಶಾಂಗ ಸಚಿವ!

ಗಾಲ್ವಾನ್ ಕಣಿವೆಯಲ್ಲಿ ಚೀನಿಯರೊಂದಿಗಿನ ಘರ್ಷಣೆಯಲ್ಲಿ ಕರ್ತವ್ಯದಲ್ಲಿದ್ದ 20 ಭಾರತೀಯ ಸೈನಿಕರು ಜೂನ್‌ನಲ್ಲಿ ಸಾವನ್ನಪ್ಪಿದ್ದರು. ಆಗ ಉಭಯ ದೇಶಗಳಲ್ಲಿ ಉದ್ವಿಗ್ನತೆ ಉತ್ತುಂಗಕ್ಕೇರಿತ್ತು. ಕಳೆದ ತಿಂಗಳು, ಪ್ಯಾಂಗೊಂಗ್ ತ್ಸೊದಲ್ಲಿ ಎರಡೂ ಪಡೆ ಮುಖಾಮುಖಿಯಾಗುತ್ತಿದ್ದಂತೆ ಒಂದಕ್ಕಿಂತ ಹೆಚ್ಚು ಬಾರಿ ಗಾಳಿಯಲ್ಲಿ ಗುಂಡು ಹಾರಿಸಲಾಗಿತ್ತು.

ಇತ್ತೀಚೆಗೆ ಭಾರತ-ಚೀನಾ ನಡುವಿನ ಸಂಬಂಧ ಚಿಂತಾಜನಕವಾಗಿದ್ದು, ಯಾವ ಸಂಧರ್ಭದಲ್ಲಿ ಏನುಬೇಕಾದರೂ ನಡೆಯಬಹುದು ಎಂಬ ಭೀತಿಯುಂಟಾಗಿದೆ. ಎರಡೂ ದೇಶಗಳೂ ಗಡಿಯಲ್ಲಿ ಸೇನೆಯನ್ನು ಜಮಾವಣೆ ಮಾಡಿವೆ.

ಈ ಪ್ರಕ್ಷುಬ್ದ ವಾತಾವರಣಕ್ಕೆ ಕೇಂದ್ರ ಸರ್ಕಾರವೇ ಕಾರಣ ಎಂದು ವಿರೋಧ ಪಕ್ಷಗಳು ಟೀಕಿಸುತ್ತಿದ್ದು, ಚೀನಾ ವಿರುದ್ಧ ಕೇಂದ್ರ ಸರ್ಕಾರದ ಪ್ರತಿಯೊಬ್ಬರೂ ಒಂದೊಂದು ಮಾಹಿತಿ ನೀಡುತ್ತಿದ್ದಾರೆ. ಒಬ್ಬರು ಯಾವುದೇ ತೊಂದರೆಯಿಲ್ಲ ಎಂದರೆ, ಮತ್ತೊಬ್ಬರು ತೊಂದರೆಯಿದೆ ಎನ್ನುತ್ತಾರೆ. ಇನ್ನೊಬ್ಬರು ಭೂಪ್ರದೇಶವನ್ನು ಆಕ್ರಮಿಸಿಕೊಂಡಿಲ್ಲ ಎಂದರೆ, ಮತ್ತೊಬ್ಬರು ಆಕ್ರಮಿಸಿಕೊಂಡಿದೆ ಎನ್ನುತ್ತಾರೆ. ಒಬ್ಬರು ಗೌಪ್ಯ ಮಾತುಕತೆ ನಡೆಸುತ್ತಿದ್ದೇವೆ ಎನ್ನುತ್ತಾರೆ, ಮತ್ತೊಬ್ಬರು ಚೀನಾದೊಟ್ಟಿಗೆ ಯುದ್ಧ ಮಾಡಲು ಸಿದ್ಧ ಎನ್ನುತ್ತಾರೆ.

ಒಟ್ಟಾರೆಯಾಗಿ, ಕೇಂದ್ರ ಸರ್ಕಾರ ಪ್ರಜೆಗಳಿಂದ ಸತ್ಯವನ್ನು ಮುಚ್ಚಿಡುತ್ತಿದೆ ಎಂದು ಹಲವರು ಆರೋಪಿಸಿದ್ದು, ನರೇಂದ್ರ ಮೋದಿಯವರು ಚೀನಾ ಹೆಸರನ್ನು ಹೇಳಲು ಭಯಪಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ಭಾರತ-ಚೀನಾ: ಗಡಿಯಲ್ಲಿ ಜಮಾವಣೆಗೊಂಡ ಚೀನಿ ಯುದ್ಧ ಟ್ಯಾಂಕ್‌‌ಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...