Homeಅಂತರಾಷ್ಟ್ರೀಯಭಾರತ-ಚೀನಾ: ಗಡಿಯಲ್ಲಿ ಚೀನೀ ಸೈನಿಕನೊಬ್ಬನನ್ನು ಸೆರೆಹಿಡಿದ ಭಾರತೀಯ ಪಡೆ!

ಭಾರತ-ಚೀನಾ: ಗಡಿಯಲ್ಲಿ ಚೀನೀ ಸೈನಿಕನೊಬ್ಬನನ್ನು ಸೆರೆಹಿಡಿದ ಭಾರತೀಯ ಪಡೆ!

ಸಿಕ್ಕಿಬಿದ್ದ ಸೈನಿಕ, ನಾಗರಿಕ ಮತ್ತು ಮಿಲಿಟರಿ ದಾಖಲೆಗಳನ್ನು ಹೊತ್ತೊಯ್ಯುತ್ತಿದ್ದನೆಂದು ಕೆಲವು ವರದಿಗಳು ಬಂದಿವೆ

- Advertisement -
- Advertisement -

ಭಾರತೀಯ ಪಡೆ ಇಂದು ಚೀನಾ ಸೈನಿಕನೊಬ್ಬನನ್ನು ಲಡಾಖ್ ಬಳಿ ಸೆರೆಹಿಡಿದಿದ್ದು, ಕಾರ್ಪೋರಲ್ ವಾಂಗ್ ಯಾ ಲಾಂಗ್ ಎಂದು ಗುರುತಿಸಲಾಗಿರುವ ಈತನನ್ನು ಚುಮರ್-ಡೆಮ್ಚೋಕ್ ಪ್ರದೇಶದಲ್ಲಿ ಸೆರೆಹಿಡಿಯಲಾಗಿದೆ.

ಸೈನಿಕನಿಗೆ ಆಮ್ಲಜನಕ, ಆಹಾರ ಮತ್ತು ಬೆಚ್ಚಗಿನ ಬಟ್ಟೆಗಳು ಸೇರಿದಂತೆ ಅಗತ್ಯ ವೈದ್ಯಕೀಯ ನೆರವು ನೀಡಲಾಗಿದೆ. ಸರಿಯಾದ ಕಾರ್ಯವಿಧಾನವನ್ನು ಅನುಸರಿಸಿ ಪ್ರೋಟೋಕಾಲ್ ಪ್ರಕಾರ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಸೈನಿಕನನ್ನು ಚೀನೀ ಸೈನ್ಯಕ್ಕೆ ಹಿಂತಿರುಗಿಸಲಾಗುತ್ತದೆ ಎಂದು ಸೇನೆಯು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

“ನಾಪತ್ತೆಯಾದ ಸೈನಿಕ ಎಲ್ಲಿದ್ದಾನೆ ಎಂಬ ಬಗ್ಗೆ ಚೀನಾದ ಸೈನ್ಯದಿಂದ ಮನವಿ ಬಂದಿದ್ದು, ಔಪಚಾರಿಕ ಕಾರ್ಯಗಳು ಪೂರ್ಣಗೊಂಡ ನಂತರ ಅವರನ್ನು ಚುಶುಲ್-ಮೊಲ್ಡೊ ಮೀಟಿಂಗ್ ಪಾಯಿಂಟ್‌ನಲ್ಲಿ ಚೀನಾದ ಅಧಿಕಾರಿಗಳಿಗೆ ಹಿಂತಿರುಗಿಸಲಾಗುವುದು” ಎಂದು ಸೇನೆಯು ತಿಳಿಸಿದೆ.

ಸಿಕ್ಕಿಬಿದ್ದ ಸೈನಿಕ, ನಾಗರಿಕ ಮತ್ತು ಮಿಲಿಟರಿ ದಾಖಲೆಗಳನ್ನು ಹೊತ್ತೊಯ್ಯುತ್ತಿದ್ದನೆಂದು ಕೆಲವು ವರದಿಗಳು ಬಂದಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಚೀನಾ ಮತ್ತು ನಮ್ಮ ನಡುವೆ ನಡೆಯುತ್ತಿರುವ ಚರ್ಚೆ ಗೌಪ್ಯವಾದದ್ದು: ಭಾರತದ ವಿದೇಶಾಂಗ ಸಚಿವ!

ಗಾಲ್ವಾನ್ ಕಣಿವೆಯಲ್ಲಿ ಚೀನಿಯರೊಂದಿಗಿನ ಘರ್ಷಣೆಯಲ್ಲಿ ಕರ್ತವ್ಯದಲ್ಲಿದ್ದ 20 ಭಾರತೀಯ ಸೈನಿಕರು ಜೂನ್‌ನಲ್ಲಿ ಸಾವನ್ನಪ್ಪಿದ್ದರು. ಆಗ ಉಭಯ ದೇಶಗಳಲ್ಲಿ ಉದ್ವಿಗ್ನತೆ ಉತ್ತುಂಗಕ್ಕೇರಿತ್ತು. ಕಳೆದ ತಿಂಗಳು, ಪ್ಯಾಂಗೊಂಗ್ ತ್ಸೊದಲ್ಲಿ ಎರಡೂ ಪಡೆ ಮುಖಾಮುಖಿಯಾಗುತ್ತಿದ್ದಂತೆ ಒಂದಕ್ಕಿಂತ ಹೆಚ್ಚು ಬಾರಿ ಗಾಳಿಯಲ್ಲಿ ಗುಂಡು ಹಾರಿಸಲಾಗಿತ್ತು.

ಇತ್ತೀಚೆಗೆ ಭಾರತ-ಚೀನಾ ನಡುವಿನ ಸಂಬಂಧ ಚಿಂತಾಜನಕವಾಗಿದ್ದು, ಯಾವ ಸಂಧರ್ಭದಲ್ಲಿ ಏನುಬೇಕಾದರೂ ನಡೆಯಬಹುದು ಎಂಬ ಭೀತಿಯುಂಟಾಗಿದೆ. ಎರಡೂ ದೇಶಗಳೂ ಗಡಿಯಲ್ಲಿ ಸೇನೆಯನ್ನು ಜಮಾವಣೆ ಮಾಡಿವೆ.

ಈ ಪ್ರಕ್ಷುಬ್ದ ವಾತಾವರಣಕ್ಕೆ ಕೇಂದ್ರ ಸರ್ಕಾರವೇ ಕಾರಣ ಎಂದು ವಿರೋಧ ಪಕ್ಷಗಳು ಟೀಕಿಸುತ್ತಿದ್ದು, ಚೀನಾ ವಿರುದ್ಧ ಕೇಂದ್ರ ಸರ್ಕಾರದ ಪ್ರತಿಯೊಬ್ಬರೂ ಒಂದೊಂದು ಮಾಹಿತಿ ನೀಡುತ್ತಿದ್ದಾರೆ. ಒಬ್ಬರು ಯಾವುದೇ ತೊಂದರೆಯಿಲ್ಲ ಎಂದರೆ, ಮತ್ತೊಬ್ಬರು ತೊಂದರೆಯಿದೆ ಎನ್ನುತ್ತಾರೆ. ಇನ್ನೊಬ್ಬರು ಭೂಪ್ರದೇಶವನ್ನು ಆಕ್ರಮಿಸಿಕೊಂಡಿಲ್ಲ ಎಂದರೆ, ಮತ್ತೊಬ್ಬರು ಆಕ್ರಮಿಸಿಕೊಂಡಿದೆ ಎನ್ನುತ್ತಾರೆ. ಒಬ್ಬರು ಗೌಪ್ಯ ಮಾತುಕತೆ ನಡೆಸುತ್ತಿದ್ದೇವೆ ಎನ್ನುತ್ತಾರೆ, ಮತ್ತೊಬ್ಬರು ಚೀನಾದೊಟ್ಟಿಗೆ ಯುದ್ಧ ಮಾಡಲು ಸಿದ್ಧ ಎನ್ನುತ್ತಾರೆ.

ಒಟ್ಟಾರೆಯಾಗಿ, ಕೇಂದ್ರ ಸರ್ಕಾರ ಪ್ರಜೆಗಳಿಂದ ಸತ್ಯವನ್ನು ಮುಚ್ಚಿಡುತ್ತಿದೆ ಎಂದು ಹಲವರು ಆರೋಪಿಸಿದ್ದು, ನರೇಂದ್ರ ಮೋದಿಯವರು ಚೀನಾ ಹೆಸರನ್ನು ಹೇಳಲು ಭಯಪಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ಭಾರತ-ಚೀನಾ: ಗಡಿಯಲ್ಲಿ ಜಮಾವಣೆಗೊಂಡ ಚೀನಿ ಯುದ್ಧ ಟ್ಯಾಂಕ್‌‌ಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...