Homeಅಂತರಾಷ್ಟ್ರೀಯ'ನಮ್ಮ ಸಾರ್ವತ್ರಿಕ ಚುನಾವಣೆಯಲ್ಲಿ ಭಾರತ, ಚೀನಾ ಹಸ್ತಕ್ಷೇಪ ಮಾಡುವ ಸಾಧ್ಯತೆ ಇದೆ': ಮತ್ತೆ ಆರೋಪಿಸಿದ ಕೆನಡಾ

‘ನಮ್ಮ ಸಾರ್ವತ್ರಿಕ ಚುನಾವಣೆಯಲ್ಲಿ ಭಾರತ, ಚೀನಾ ಹಸ್ತಕ್ಷೇಪ ಮಾಡುವ ಸಾಧ್ಯತೆ ಇದೆ’: ಮತ್ತೆ ಆರೋಪಿಸಿದ ಕೆನಡಾ

- Advertisement -
- Advertisement -

ಏಪ್ರಿಲ್ 28ರಂದು ನಡೆಯಲಿರುವ ಕೆನಡಾದ ಸಾರ್ವತ್ರಿಕ ಚುನಾವಣೆಯಲ್ಲಿ ಭಾರತ ಮತ್ತು ಚೀನಾ ಹಸ್ತಕ್ಷೇಪ ಮಾಡುವ ಸಾಧ್ಯತೆಯಿದೆ ಎಂದು ಕೆನಡಾದ ಗುಪ್ತಚರ ಸೇವೆ ಸೋಮವಾರ (ಮಾ.25) ಹೇಳಿದೆ.

ಭಾರತ ಮತ್ತು ಚೀನಾ ನಮ್ಮ ಚುನಾವಣಾ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಲು ಕೃತಕ ಬುದ್ಧಿಮತ್ತೆಯನ್ನು ಹೆಚ್ಚಾಗಿ ಬಳಸುತ್ತಿವೆ ಎಂದು ಚುನಾವಣೆಗೆ ಸಂಬಂಧಿಸಿದ ಪತ್ರಿಕಾಗೋಷ್ಠಿಯಲ್ಲಿ ಕೆನಡಾದ ಭದ್ರತಾ ಗುಪ್ತಚರ ಸೇವೆಯ (CSIS)ಕಾರ್ಯಾಚರಣೆಗಳ ಉಪ ನಿರ್ದೇಶಕಿ ವನೆಸ್ಸಾ ಲಾಯ್ಡ್ ಆರೋಪಿಸಿದ್ದಾರೆ.

ಭಾನುವಾರ (ಮಾ.23) ಪ್ರಧಾನಿ ಮಾರ್ಕ್ ಕಾರ್ನಿ ಅವರು ಸಾರ್ವತ್ರಿಕ ಚುನಾವಣೆ ಘೋಷಣೆ ಮಾಡಿದ್ದು, ಈ ಬೆನ್ನಲ್ಲೇ ಗಂಭೀರ ಆರೋಪ ಕೇಳಿ ಬಂದಿದೆ.

ಭಾರತ ಸರ್ಕಾರವು ತನ್ನ ಭೌಗೋಳಿಕ ರಾಜಕೀಯ ಪ್ರಭಾವವನ್ನು ಹೆಚ್ಚಿಸಲು ಕೆನಡಾದ ಸಮುದಾಯಗಳು ಮತ್ತು ಪ್ರಜಾಪ್ರಭುತ್ವ ಪ್ರಕ್ರಿಯೆಗಳಲ್ಲಿ ಹಸ್ತಕ್ಷೇಪ ಮಾಡುವ ಉದ್ದೇಶ ಮತ್ತು ಸಾಮರ್ಥ್ಯವನ್ನು ಹೊಂದಿದೆ ಎಂದು ಲಾಯ್ಡ್ ಹೇಳಿದ್ದಾರೆ.

ಈ ಚುನಾವಣೆಯ ಸಮಯದಲ್ಲಿ ಕೆನಡಾದ ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಲು ಚೀನಾ, ವಿಶೇಷವಾಗಿ ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾ (PRC)ಎಐ-ಚಾಲಿತ ಸಾಧನಗಳನ್ನು ಬಳಸುವ ಸಾಧ್ಯತೆ ಹೆಚ್ಚಿದೆ ಎಂದು ಅವರು ಉಲ್ಲೇಖಿಸಿದ್ದಾರೆ.

ಲಾಯ್ಡ್ ಪ್ರಕಾರ, ಚೀನಾ ತನ್ನ ಹಿತಾಸಕ್ತಿಗಳಿಗೆ ಹೊಂದಿಕೆಯಾಗುವ ನರೇಟಿವ್‌ಗಳನ್ನು ಉತ್ತೇಜಿಸಲು ಸಾಮಾಜಿಕ ಮಾಧ್ಯಮವನ್ನು ಬಳಸುವ ಸಾಧ್ಯತೆಯಿದೆ. ಕೆನಡಾದಲ್ಲಿರುವ ಚೀನೀ ಜನಾಂಗೀಯ, ಸಾಂಸ್ಕೃತಿಕ ಮತ್ತು ಧಾರ್ಮಿಕ ಸಮುದಾಯಗಳನ್ನು ‘ರಹಸ್ಯ ಮತ್ತು ವಂಚನೆಯ ತಂತ್ರಗಳೊಂದಿಗೆ ಚೀನಾ ಗುರಿಯಾಗಿಸಬಹುದು.

ಭಾರತ ಮತ್ತು ಚೀನಾ ಎರಡೂ ಕೆನಡಾ ಈ ಹಿಂದೆ ಮಾಡಿದ್ದ ಇದೇ ರೀತಿಯ ಆರೋಪವನ್ನು ನಿರಾಕರಿಸಿತ್ತು. ಆದರೆ, ಇತ್ತೀಚಿನ ಆರೋಪದ ಬಗ್ಗೆ ಪ್ರತಿಕ್ರಿಯಿಸಿಲ್ಲ.

ವಿದೇಶಿ ಸರ್ಕಾರಗಳು ನಮ್ಮ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡುತ್ತಿವೆ ಎಂದು ಆರೋಪಿಸಿ ಕೆನಡಾ ಆಯೋಗ ನೀಡಿದ್ದ ವರದಿಯ ಆರೋಪಗಳನ್ನು ಭಾರತ ಈ ವರ್ಷದ ಜನವರಿಯಲ್ಲಿ ತಿರಸ್ಕರಿಸಿತ್ತು.

ವಿದೇಶಾಂಗ ಸಚಿವಾಲಯ (MEA)ಹೇಳಿಕೆ ನೀಡಿ, ಕೆನಡಾದ ಆರೋಪಗಳನ್ನು ತಳ್ಳಿಹಾಕಿತ್ತು. ಕೆನಡಾ ಭಾರತದ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುವುದನ್ನು ನಿಲ್ಲಿಸಬೇಕು ಎಂದು ಹೇಳಿತ್ತು.

ಕೆನಡಾದ ಪತ್ರಿಕೆಯಾದ ಗ್ಲೋಬ್ ಅಂಡ್ ಮೇಲ್, ಫೆಡರಲ್ ಚುನಾವಣೆಯ ಸಮಯದಲ್ಲಿ ಮೂರು ರಾಜಕೀಯ ಪಕ್ಷಗಳ ಅಭ್ಯರ್ಥಿಗಳಿಗೆ ರಹಸ್ಯ ಹಣಕಾಸು ಬೆಂಬಲ ಒದಗಿಸಲು ಭಾರತವು ಪ್ರಾಕ್ಸಿ ಏಜೆಂಟ್‌ಗಳನ್ನು ಬಳಸಿಕೊಂಡಿರಬಹುದು ಎಂದು ವರದಿ ಮಾಡಿತ್ತು.

ಕೆನಡಾದ ಸಾರ್ವತ್ರಿಕ ಚುನಾವಣೆಯಲ್ಲಿ ರಷ್ಯಾ ಮತ್ತು ಪಾಕಿಸ್ತಾನ ಕೂಡ ಹಸ್ತಕ್ಷೇಪ ಮಾಡಲು ಪ್ರಯತ್ನಿಸಬಹುದು ಎಂದು ಲಾಯ್ಡ್ ಎಚ್ಚರಿಸಿದ್ದಾರೆ.

ಕ್ರೆಮ್ಲಿನ್ (ರಷ್ಯಾ) ಚರ್ಚಾ ಅಂಶಗಳನ್ನು ಉತ್ತೇಜಿಸುವ ಸಾಮಾಜಿಕ ಮಾಧ್ಯಮ ಮತ್ತು ಸುದ್ದಿ ವೆಬ್‌ಸೈಟ್‌ಗಳಲ್ಲಿ ‘ಪ್ರಸರಣ ಜಾಲಗಳನ್ನು’ ರಚಿಸಲು ರಷ್ಯಾ ಕೆಲಸ ಮಾಡಿದೆ ಎಂದು ಲಾಯ್ಡ್ ಆರೋಪಿಸಿದ್ದು, ಕೆನಡಿಯನ್ನರನ್ನು ಗುರಿಯಾಗಿಸಿಕೊಂಡು ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಲು ರಷ್ಯಾ ಈ ಆನ್‌ಲೈನ್ ನೆಟ್‌ವರ್ಕ್‌ಗಳನ್ನು ಬಳಸುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.

ಭಾರತದ ಜಾಗತಿಕ ಶಕ್ತಿಯಾಗಿ ಬೆಳೆಯುವಾಗ, ಅದನ್ನು ಎದುರಿಸಿ ರಾಜಕೀಯ, ಭದ್ರತೆ ಮತ್ತು ಆರ್ಥಿಕ ಸ್ಥಿರತೆಯನ್ನು ಕಾಪಾಡುವ ತನ್ನ ಕಾರ್ಯತಂತ್ರವನ್ನು ಸಾಧಿಸಲು ಪಾಕಿಸ್ತಾನ ವಿದೇಶಿ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡುವ ಕಾರ್ಯ ಮಾಡಬಹುದು ಎಂದು ಲಾಯ್ಡ್ ಹೇಳಿದ್ದಾರೆ.

ಖಲಿಸ್ತಾನಿ ಪ್ರತ್ಯೇಕತವಾದಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತ ಸರ್ಕಾರ ಭಾಗಿಯಾಗಿದೆ ಎಂದು ಕೆನಡಾದ ಮಾಜಿ ಪ್ರಧಾನಿ ಜಸ್ಟಿನ್ ಟ್ರುಡೊ ಸೆಪ್ಟೆಂಬರ್ 2023ರಲ್ಲಿ ಆರೋಪಿಸಿದ್ದರು. ನಂತರ ಭಾರತ ಮತ್ತು ಕೆನಡಾ ನಡುವೆ ಈ ವಿಚಾರವಾಗಿ ರಾಜತಾಂತ್ರಿಕ ಬಿಕ್ಕಟ್ಟು ಉಂಟಾಗಿತ್ತು. ಭಾರತ ತನ್ನ ಮೇಲಿನ ಆರೋಪವನ್ನು ಬಲವಾಗಿ ನಿರಾಕರಿಸಿತ್ತು.

ದಕ್ಷಿಣ ಗಾಝಾದ ಅತಿದೊಡ್ಡ ನಾಸರ್ ಆಸ್ಪತ್ರೆ ಮೇಲೆ ದಾಳಿ ನಡೆಸಿದ ಇಸ್ರೇಲ್: ಹಮಾಸ್ ನಾಯಕನ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...