Homeಅಂತರಾಷ್ಟ್ರೀಯ'ನಮ್ಮ ಸಾರ್ವತ್ರಿಕ ಚುನಾವಣೆಯಲ್ಲಿ ಭಾರತ, ಚೀನಾ ಹಸ್ತಕ್ಷೇಪ ಮಾಡುವ ಸಾಧ್ಯತೆ ಇದೆ': ಮತ್ತೆ ಆರೋಪಿಸಿದ ಕೆನಡಾ

‘ನಮ್ಮ ಸಾರ್ವತ್ರಿಕ ಚುನಾವಣೆಯಲ್ಲಿ ಭಾರತ, ಚೀನಾ ಹಸ್ತಕ್ಷೇಪ ಮಾಡುವ ಸಾಧ್ಯತೆ ಇದೆ’: ಮತ್ತೆ ಆರೋಪಿಸಿದ ಕೆನಡಾ

- Advertisement -
- Advertisement -

ಏಪ್ರಿಲ್ 28ರಂದು ನಡೆಯಲಿರುವ ಕೆನಡಾದ ಸಾರ್ವತ್ರಿಕ ಚುನಾವಣೆಯಲ್ಲಿ ಭಾರತ ಮತ್ತು ಚೀನಾ ಹಸ್ತಕ್ಷೇಪ ಮಾಡುವ ಸಾಧ್ಯತೆಯಿದೆ ಎಂದು ಕೆನಡಾದ ಗುಪ್ತಚರ ಸೇವೆ ಸೋಮವಾರ (ಮಾ.25) ಹೇಳಿದೆ.

ಭಾರತ ಮತ್ತು ಚೀನಾ ನಮ್ಮ ಚುನಾವಣಾ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಲು ಕೃತಕ ಬುದ್ಧಿಮತ್ತೆಯನ್ನು ಹೆಚ್ಚಾಗಿ ಬಳಸುತ್ತಿವೆ ಎಂದು ಚುನಾವಣೆಗೆ ಸಂಬಂಧಿಸಿದ ಪತ್ರಿಕಾಗೋಷ್ಠಿಯಲ್ಲಿ ಕೆನಡಾದ ಭದ್ರತಾ ಗುಪ್ತಚರ ಸೇವೆಯ (CSIS)ಕಾರ್ಯಾಚರಣೆಗಳ ಉಪ ನಿರ್ದೇಶಕಿ ವನೆಸ್ಸಾ ಲಾಯ್ಡ್ ಆರೋಪಿಸಿದ್ದಾರೆ.

ಭಾನುವಾರ (ಮಾ.23) ಪ್ರಧಾನಿ ಮಾರ್ಕ್ ಕಾರ್ನಿ ಅವರು ಸಾರ್ವತ್ರಿಕ ಚುನಾವಣೆ ಘೋಷಣೆ ಮಾಡಿದ್ದು, ಈ ಬೆನ್ನಲ್ಲೇ ಗಂಭೀರ ಆರೋಪ ಕೇಳಿ ಬಂದಿದೆ.

ಭಾರತ ಸರ್ಕಾರವು ತನ್ನ ಭೌಗೋಳಿಕ ರಾಜಕೀಯ ಪ್ರಭಾವವನ್ನು ಹೆಚ್ಚಿಸಲು ಕೆನಡಾದ ಸಮುದಾಯಗಳು ಮತ್ತು ಪ್ರಜಾಪ್ರಭುತ್ವ ಪ್ರಕ್ರಿಯೆಗಳಲ್ಲಿ ಹಸ್ತಕ್ಷೇಪ ಮಾಡುವ ಉದ್ದೇಶ ಮತ್ತು ಸಾಮರ್ಥ್ಯವನ್ನು ಹೊಂದಿದೆ ಎಂದು ಲಾಯ್ಡ್ ಹೇಳಿದ್ದಾರೆ.

ಈ ಚುನಾವಣೆಯ ಸಮಯದಲ್ಲಿ ಕೆನಡಾದ ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಲು ಚೀನಾ, ವಿಶೇಷವಾಗಿ ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾ (PRC)ಎಐ-ಚಾಲಿತ ಸಾಧನಗಳನ್ನು ಬಳಸುವ ಸಾಧ್ಯತೆ ಹೆಚ್ಚಿದೆ ಎಂದು ಅವರು ಉಲ್ಲೇಖಿಸಿದ್ದಾರೆ.

ಲಾಯ್ಡ್ ಪ್ರಕಾರ, ಚೀನಾ ತನ್ನ ಹಿತಾಸಕ್ತಿಗಳಿಗೆ ಹೊಂದಿಕೆಯಾಗುವ ನರೇಟಿವ್‌ಗಳನ್ನು ಉತ್ತೇಜಿಸಲು ಸಾಮಾಜಿಕ ಮಾಧ್ಯಮವನ್ನು ಬಳಸುವ ಸಾಧ್ಯತೆಯಿದೆ. ಕೆನಡಾದಲ್ಲಿರುವ ಚೀನೀ ಜನಾಂಗೀಯ, ಸಾಂಸ್ಕೃತಿಕ ಮತ್ತು ಧಾರ್ಮಿಕ ಸಮುದಾಯಗಳನ್ನು ‘ರಹಸ್ಯ ಮತ್ತು ವಂಚನೆಯ ತಂತ್ರಗಳೊಂದಿಗೆ ಚೀನಾ ಗುರಿಯಾಗಿಸಬಹುದು.

ಭಾರತ ಮತ್ತು ಚೀನಾ ಎರಡೂ ಕೆನಡಾ ಈ ಹಿಂದೆ ಮಾಡಿದ್ದ ಇದೇ ರೀತಿಯ ಆರೋಪವನ್ನು ನಿರಾಕರಿಸಿತ್ತು. ಆದರೆ, ಇತ್ತೀಚಿನ ಆರೋಪದ ಬಗ್ಗೆ ಪ್ರತಿಕ್ರಿಯಿಸಿಲ್ಲ.

ವಿದೇಶಿ ಸರ್ಕಾರಗಳು ನಮ್ಮ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡುತ್ತಿವೆ ಎಂದು ಆರೋಪಿಸಿ ಕೆನಡಾ ಆಯೋಗ ನೀಡಿದ್ದ ವರದಿಯ ಆರೋಪಗಳನ್ನು ಭಾರತ ಈ ವರ್ಷದ ಜನವರಿಯಲ್ಲಿ ತಿರಸ್ಕರಿಸಿತ್ತು.

ವಿದೇಶಾಂಗ ಸಚಿವಾಲಯ (MEA)ಹೇಳಿಕೆ ನೀಡಿ, ಕೆನಡಾದ ಆರೋಪಗಳನ್ನು ತಳ್ಳಿಹಾಕಿತ್ತು. ಕೆನಡಾ ಭಾರತದ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುವುದನ್ನು ನಿಲ್ಲಿಸಬೇಕು ಎಂದು ಹೇಳಿತ್ತು.

ಕೆನಡಾದ ಪತ್ರಿಕೆಯಾದ ಗ್ಲೋಬ್ ಅಂಡ್ ಮೇಲ್, ಫೆಡರಲ್ ಚುನಾವಣೆಯ ಸಮಯದಲ್ಲಿ ಮೂರು ರಾಜಕೀಯ ಪಕ್ಷಗಳ ಅಭ್ಯರ್ಥಿಗಳಿಗೆ ರಹಸ್ಯ ಹಣಕಾಸು ಬೆಂಬಲ ಒದಗಿಸಲು ಭಾರತವು ಪ್ರಾಕ್ಸಿ ಏಜೆಂಟ್‌ಗಳನ್ನು ಬಳಸಿಕೊಂಡಿರಬಹುದು ಎಂದು ವರದಿ ಮಾಡಿತ್ತು.

ಕೆನಡಾದ ಸಾರ್ವತ್ರಿಕ ಚುನಾವಣೆಯಲ್ಲಿ ರಷ್ಯಾ ಮತ್ತು ಪಾಕಿಸ್ತಾನ ಕೂಡ ಹಸ್ತಕ್ಷೇಪ ಮಾಡಲು ಪ್ರಯತ್ನಿಸಬಹುದು ಎಂದು ಲಾಯ್ಡ್ ಎಚ್ಚರಿಸಿದ್ದಾರೆ.

ಕ್ರೆಮ್ಲಿನ್ (ರಷ್ಯಾ) ಚರ್ಚಾ ಅಂಶಗಳನ್ನು ಉತ್ತೇಜಿಸುವ ಸಾಮಾಜಿಕ ಮಾಧ್ಯಮ ಮತ್ತು ಸುದ್ದಿ ವೆಬ್‌ಸೈಟ್‌ಗಳಲ್ಲಿ ‘ಪ್ರಸರಣ ಜಾಲಗಳನ್ನು’ ರಚಿಸಲು ರಷ್ಯಾ ಕೆಲಸ ಮಾಡಿದೆ ಎಂದು ಲಾಯ್ಡ್ ಆರೋಪಿಸಿದ್ದು, ಕೆನಡಿಯನ್ನರನ್ನು ಗುರಿಯಾಗಿಸಿಕೊಂಡು ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡಲು ರಷ್ಯಾ ಈ ಆನ್‌ಲೈನ್ ನೆಟ್‌ವರ್ಕ್‌ಗಳನ್ನು ಬಳಸುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.

ಭಾರತದ ಜಾಗತಿಕ ಶಕ್ತಿಯಾಗಿ ಬೆಳೆಯುವಾಗ, ಅದನ್ನು ಎದುರಿಸಿ ರಾಜಕೀಯ, ಭದ್ರತೆ ಮತ್ತು ಆರ್ಥಿಕ ಸ್ಥಿರತೆಯನ್ನು ಕಾಪಾಡುವ ತನ್ನ ಕಾರ್ಯತಂತ್ರವನ್ನು ಸಾಧಿಸಲು ಪಾಕಿಸ್ತಾನ ವಿದೇಶಿ ಚುನಾವಣೆಯಲ್ಲಿ ಹಸ್ತಕ್ಷೇಪ ಮಾಡುವ ಕಾರ್ಯ ಮಾಡಬಹುದು ಎಂದು ಲಾಯ್ಡ್ ಹೇಳಿದ್ದಾರೆ.

ಖಲಿಸ್ತಾನಿ ಪ್ರತ್ಯೇಕತವಾದಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತ ಸರ್ಕಾರ ಭಾಗಿಯಾಗಿದೆ ಎಂದು ಕೆನಡಾದ ಮಾಜಿ ಪ್ರಧಾನಿ ಜಸ್ಟಿನ್ ಟ್ರುಡೊ ಸೆಪ್ಟೆಂಬರ್ 2023ರಲ್ಲಿ ಆರೋಪಿಸಿದ್ದರು. ನಂತರ ಭಾರತ ಮತ್ತು ಕೆನಡಾ ನಡುವೆ ಈ ವಿಚಾರವಾಗಿ ರಾಜತಾಂತ್ರಿಕ ಬಿಕ್ಕಟ್ಟು ಉಂಟಾಗಿತ್ತು. ಭಾರತ ತನ್ನ ಮೇಲಿನ ಆರೋಪವನ್ನು ಬಲವಾಗಿ ನಿರಾಕರಿಸಿತ್ತು.

ದಕ್ಷಿಣ ಗಾಝಾದ ಅತಿದೊಡ್ಡ ನಾಸರ್ ಆಸ್ಪತ್ರೆ ಮೇಲೆ ದಾಳಿ ನಡೆಸಿದ ಇಸ್ರೇಲ್: ಹಮಾಸ್ ನಾಯಕನ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...