Homeಮುಖಪುಟಅರುಣಾಚಲ ಪ್ರದೇಶ ಗಡಿಯಲ್ಲಿ ಭಾರತ-ಚೀನಾ ಸೈನಿಕರ ಘರ್ಷಣೆ: ಇದುವರೆಗೂ ನಡೆದಿದ್ದೇನು?

ಅರುಣಾಚಲ ಪ್ರದೇಶ ಗಡಿಯಲ್ಲಿ ಭಾರತ-ಚೀನಾ ಸೈನಿಕರ ಘರ್ಷಣೆ: ಇದುವರೆಗೂ ನಡೆದಿದ್ದೇನು?

ಮೋದಿ ಸರ್ಕಾರದ "ಕೆಂಪು ಕಣ್ಣು" ಚೀನಾದ ಕನ್ನಡಕದಿಂದ ಮುಚ್ಚಲ್ಪಟ್ಟಿದೆ. ಭಾರತದ ಸಂಸತ್ತಿನಲ್ಲಿ ಚೀನಾದ ವಿರುದ್ಧ ಮಾತನಾಡಲು ಅವಕಾಶವಿಲ್ಲವೇ? ಎಂದು ಖರ್ಗೆ ಪ್ರಶ್ನಿಸಿದ್ದಾರೆ.

- Advertisement -
- Advertisement -

ಮತ್ತೊಮ್ಮೆ ಗಡಿಯಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಸಂಘರ್ಷ ಏರ್ಪಟ್ಟಿದೆ. ಭಾರತದ ಗಡಿ ದಾಟಿ ಚೀನಿ ಸೈನಿಕರು ಒಳನುಗ್ಗಿದ್ದನ್ನು ಭಾರತದ ಸೈನಿಕರು ಹಿಮ್ಮೆಟ್ಟಿಸಿದ್ದಾರೆ. ಈ ಸಂದರ್ಭದಲ್ಲಿ ಸಂಘರ್ಷ ಏರ್ಪಟ್ಟು ಹಲವು ಸೈನಿಕರಿಗೆ ಗಾಯಗಳಾಗಿವೆ. ಘಟನೆ ನಡೆದ ಎರಡು ದಿನಗಳ ನಂತರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಈ ಮಾಹಿತಿ ನೀಡಿದ್ದಾರೆ. ಇದರ ಬಗ್ಗೆ ಸಂಸತ್ತಿನಲ್ಲಿ ಚರ್ಚೆ ನಡೆಸಬೇಕೆಂದು ವಿರೋಧ ಪಕ್ಷಗಳು ಒತ್ತಾಯಿಸಿದರೆ ಆಡಳಿತ ಪಕ್ಷ ಅದಕ್ಕೆ ಅವಕಾಶ ಮಾಡಿಕೊಟ್ಟಿಲ್ಲ.

ಡಿಸೆಂಬರ್ 9 ರ ಶುಕ್ರವಾರದಂದು, ಅರುಣಾಚಲ ಪ್ರದೇಶದ ತವಾಂಗ್‌ನ ಯಾಂಗ್ಟ್ಸೆಯಲ್ಲಿನ ಲೈನ್ ಆಫ್ ಕಂಟ್ರೋಲ್ (ಎಲ್‌ಎಸಿ) ಬಳಿ ಚೀನೀ ಸೈನಿಕರು ಭಾರತದ ಭೂಪ್ರದೇಶ ಆಕ್ರಮಿಸಲು ಯತ್ನಿಸಿದ್ದಾರೆ. ಅವರು ಒಳನುಗ್ಗಿದ್ದಾಗ ಭಾರತೀಯ ಸೈನಿಕರು ಹಿಮ್ಮೆಟ್ಟಿಸಿದ್ದಾರೆ.

ಈ ಕುರಿತು ಸರ್ಕಾರ ಯಾವುದೇ ಮಾಹಿತಿ ನೀಡಿರಲಿಲ್ಲ. ಆದರೆ ಪ್ರತಿಪಕ್ಷಗಳು ಈ ಬಗ್ಗೆ ಪ್ರಶ್ನೆ ಎತ್ತಿವೆ. ಮುಖ್ಯವಾಗಿ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ‘ವಿಪಕ್ಷಗಳು ದೇಶ ಮತ್ತು ಸೇನೆಯ ಬೆಂಬಲಕ್ಕಿವೆ. ಆದರೆ ನಮ್ಮ ಸೈನಿಕರ ಕಾಳಜಿಯ ಬಗ್ಗೆ ಸರ್ಕಾರ ಮಾಹಿತಿ ನೀಡಬೇಕು. ಗಡಿಯಲ್ಲಿ ತಂಟೆ ನಿಲ್ಲಿಸುವಂತೆ ಚೀನಾದ ಮೇಲೆ ಒತ್ತಡ ಹೇರಬೇಕೆಂದು” ಒತ್ತಾಯಿಸಿದ್ದರು.

ಅಲ್ಲದೆ ಗಡಿ ಚರ್ಚೆಗೆ ಸದನದಲ್ಲಿ ಅವಕಾಶ ನೀಡಬೇಕೆಂದು ವಿಪಕ್ಷಗಳ ಸಭೆ ಕರೆದಿದ್ದರು. ಈ ಸಭೆಗೆ ಆಪ್ ಮತ್ತು ತೆಲಂಗಾಣ ರಾಷ್ಟ್ರ ಸಮಿತಿ ಸೇರಿ ಹಲವು ಪಕ್ಷಗಳು ಭಾಗವಹಿಸಿದ್ದವು.

ತದನಂತರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಸಂಸತ್ತಿನಲ್ಲಿ ಮಾತನಾಡಿ, ಚೀನಿಯರು “ಯಥಾಸ್ಥಿತಿಯನ್ನು ಏಕಪಕ್ಷೀಯವಾಗಿ ಬದಲಾಯಿಸಲು ಪ್ರಯತ್ನಿಸಿದರು. ಆದರೆ ಭಾರತೀಯ ಸೇನಾ ಕಮಾಂಡರ್‌ಗಳ ಸಮಯೋಚಿತ ಹಸ್ತಕ್ಷೇಪದಿಂದಾಗಿ, ಚೀನಾದ ಸೈನಿಕರು ತಮ್ಮ ಸ್ಥಳಗಳಿಗೆ ಮರಳಿದರು. ಕಮಾಂಡರ್‌ಗಳ ಸಭೆಯಲ್ಲಿ ಇಂತಹ ಕ್ರಮಗಳಿಂದ ದೂರವಿರಿ ಮತ್ತು ಗಡಿಯಲ್ಲಿ ಶಾಂತಿ ಮತ್ತು ನೆಮ್ಮದಿಯನ್ನು ಕಾಪಾಡುವಂತೆ ಚೀನೀಯರನ್ನು ಕೇಳಲಾಯಿತು. ಘಟನೆಯನ್ನು ರಾಜತಾಂತ್ರಿಕ ಮಾರ್ಗಗಳ ಮೂಲಕವೂ ಪರಿಹರಿಸಲು ಯತ್ನಿಸಲಾಗುತ್ತಿದೆ” ಎಂದು ಹೇಳಿದ್ದರು.

ಈ ಕುರಿತು ಸಂಪೂರ್ಣ ಮಾಹಿತಿ ನೀಡುವಂತೆ, ಗಡಿಯಲ್ಲಿನ ಚೀನಾದ ಆಕ್ರಮಣದ ಬಗ್ಗೆ ಚರ್ಚೆ ನಡೆಸುವಂತೆ ವಿಪಕ್ಷಗಳು ಒತ್ತಾಯಿಸಿದವು. ಆದರೆ ಉಪಸಭಾಪತಿ ಹರಿವಂಶ್ ಅದಕ್ಕೆ ಆಸ್ಪದ ಕೊಡಲಿಲ್ಲ. ಹಾಗಾಗಿ ಸೋನಿಯಾ ಗಾಂಧಿಯವರ ನೇತೃತ್ವದಲ್ಲಿ ಕಾಂಗ್ರೆಸ್ ಸದ್ಯಸರು ಸಭಾತ್ಯಾಗ ಮಾಡಿದರು. ಅಲ್ಲದೆ ಎನ್‌ಸಿಪಿ, ಟಿಎಂಸಿ, ಆರ್‌ಜೆಡಿ, ಜೆಎಂಎಂ, ಶಿವಸೇನೆ, ಸಮಾಜವಾದಿ ಪಕ್ಷದ ಸಂಸದರು ಸಹ ಅಧಿವೇಶನ ಬಹಿಷ್ಕರಿದ್ದಾರೆ.

ಮೋದಿ ಸರ್ಕಾರ ಚರ್ಚೆಗೆ ಅವಕಾಶ ಮಾಡಿಕೊಡದಿರುವುದನ್ನು ಮಲ್ಲಿಕಾರ್ಜುನ ಖರ್ಗೆಯವರು ಕಟುವಾಗಿ ಟೀಕಿಸಿದ್ದಾರೆ. ಮೋದಿ ಸರ್ಕಾರದ “ಕೆಂಪು ಕಣ್ಣು” ಚೀನಾದ ಕನ್ನಡಕದಿಂದ ಮುಚ್ಚಲ್ಪಟ್ಟಿದೆ ಎಂದು ತೋರುತ್ತದೆ. ಭಾರತದ ಸಂಸತ್ತಿನಲ್ಲಿ ಚೀನಾದ ವಿರುದ್ಧ ಮಾತನಾಡಲು ಅವಕಾಶವಿಲ್ಲವೇ? ಎಂದು ಇಂದು ಬೆಳಿಗ್ಗೆ ಟ್ವೀಟ್ ಮಾಡಿದ್ದಾರೆ. ಈ ಹಿಂದೆ ಮೋದಿ ಸರ್ಕಾರ ಕೆಂಪು ಕಣ್ಣು ಬಿಟ್ಟು ಚೀನಾವನ್ನು ಎದುರಿಸುತ್ತಿದೆ ಎನ್ನುವ ಬಿಜೆಪಿ ಹೇಳಿಕೆಯನ್ನು ಖರ್ಗೆಯವರು ವ್ಯಂಗ್ಯವಾಡಿದ್ದಾರೆ.

2020ರಲ್ಲಿ ಗಲ್ವಾನ್ ಕಣಿವೆಯಲ್ಲಿ ಮತ್ತು ಲಡಾಖ್‌ನ ಪಾಂಗಾಂಗ್ ಸರೋವರದ ಬಳಿ ಭಾರತ ಮತ್ತು ಚೀನಿ ಸೈನಿಕರ ನಡುವೆ ಸಂಘರ್ಷ ಏರ್ಪಟ್ಟಿತ್ತು. ಅಲ್ಲಿ ಮತ್ತು ಅರುಣಾಚಲ ಪ್ರದೇಶದಲ್ಲಿ ಗಡಿ ಪ್ರವೇಶಿಸಿರುವ ಚೀನಾ ಸೇನೆ ಕೆಲ ಹಳ್ಳಿಗಳನ್ನು, ಸೇತುವೆಗಳನ್ನು ನಿರ್ಮಾಣ ಮಾಡಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಅರುಣಾಚಲ ಪ್ರದೇಶದಲ್ಲಿ ಮತ್ತೊಂದು ಗ್ರಾಮ ನಿರ್ಮಿಸಿರುವ ಚೀನಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...