Homeಮುಖಪುಟಅರುಣಾಚಲ ಪ್ರದೇಶ ಗಡಿಯಲ್ಲಿ ಭಾರತ-ಚೀನಾ ಸೈನಿಕರ ಘರ್ಷಣೆ: ಇದುವರೆಗೂ ನಡೆದಿದ್ದೇನು?

ಅರುಣಾಚಲ ಪ್ರದೇಶ ಗಡಿಯಲ್ಲಿ ಭಾರತ-ಚೀನಾ ಸೈನಿಕರ ಘರ್ಷಣೆ: ಇದುವರೆಗೂ ನಡೆದಿದ್ದೇನು?

ಮೋದಿ ಸರ್ಕಾರದ "ಕೆಂಪು ಕಣ್ಣು" ಚೀನಾದ ಕನ್ನಡಕದಿಂದ ಮುಚ್ಚಲ್ಪಟ್ಟಿದೆ. ಭಾರತದ ಸಂಸತ್ತಿನಲ್ಲಿ ಚೀನಾದ ವಿರುದ್ಧ ಮಾತನಾಡಲು ಅವಕಾಶವಿಲ್ಲವೇ? ಎಂದು ಖರ್ಗೆ ಪ್ರಶ್ನಿಸಿದ್ದಾರೆ.

- Advertisement -
- Advertisement -

ಮತ್ತೊಮ್ಮೆ ಗಡಿಯಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಸಂಘರ್ಷ ಏರ್ಪಟ್ಟಿದೆ. ಭಾರತದ ಗಡಿ ದಾಟಿ ಚೀನಿ ಸೈನಿಕರು ಒಳನುಗ್ಗಿದ್ದನ್ನು ಭಾರತದ ಸೈನಿಕರು ಹಿಮ್ಮೆಟ್ಟಿಸಿದ್ದಾರೆ. ಈ ಸಂದರ್ಭದಲ್ಲಿ ಸಂಘರ್ಷ ಏರ್ಪಟ್ಟು ಹಲವು ಸೈನಿಕರಿಗೆ ಗಾಯಗಳಾಗಿವೆ. ಘಟನೆ ನಡೆದ ಎರಡು ದಿನಗಳ ನಂತರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಈ ಮಾಹಿತಿ ನೀಡಿದ್ದಾರೆ. ಇದರ ಬಗ್ಗೆ ಸಂಸತ್ತಿನಲ್ಲಿ ಚರ್ಚೆ ನಡೆಸಬೇಕೆಂದು ವಿರೋಧ ಪಕ್ಷಗಳು ಒತ್ತಾಯಿಸಿದರೆ ಆಡಳಿತ ಪಕ್ಷ ಅದಕ್ಕೆ ಅವಕಾಶ ಮಾಡಿಕೊಟ್ಟಿಲ್ಲ.

ಡಿಸೆಂಬರ್ 9 ರ ಶುಕ್ರವಾರದಂದು, ಅರುಣಾಚಲ ಪ್ರದೇಶದ ತವಾಂಗ್‌ನ ಯಾಂಗ್ಟ್ಸೆಯಲ್ಲಿನ ಲೈನ್ ಆಫ್ ಕಂಟ್ರೋಲ್ (ಎಲ್‌ಎಸಿ) ಬಳಿ ಚೀನೀ ಸೈನಿಕರು ಭಾರತದ ಭೂಪ್ರದೇಶ ಆಕ್ರಮಿಸಲು ಯತ್ನಿಸಿದ್ದಾರೆ. ಅವರು ಒಳನುಗ್ಗಿದ್ದಾಗ ಭಾರತೀಯ ಸೈನಿಕರು ಹಿಮ್ಮೆಟ್ಟಿಸಿದ್ದಾರೆ.

ಈ ಕುರಿತು ಸರ್ಕಾರ ಯಾವುದೇ ಮಾಹಿತಿ ನೀಡಿರಲಿಲ್ಲ. ಆದರೆ ಪ್ರತಿಪಕ್ಷಗಳು ಈ ಬಗ್ಗೆ ಪ್ರಶ್ನೆ ಎತ್ತಿವೆ. ಮುಖ್ಯವಾಗಿ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ‘ವಿಪಕ್ಷಗಳು ದೇಶ ಮತ್ತು ಸೇನೆಯ ಬೆಂಬಲಕ್ಕಿವೆ. ಆದರೆ ನಮ್ಮ ಸೈನಿಕರ ಕಾಳಜಿಯ ಬಗ್ಗೆ ಸರ್ಕಾರ ಮಾಹಿತಿ ನೀಡಬೇಕು. ಗಡಿಯಲ್ಲಿ ತಂಟೆ ನಿಲ್ಲಿಸುವಂತೆ ಚೀನಾದ ಮೇಲೆ ಒತ್ತಡ ಹೇರಬೇಕೆಂದು” ಒತ್ತಾಯಿಸಿದ್ದರು.

ಅಲ್ಲದೆ ಗಡಿ ಚರ್ಚೆಗೆ ಸದನದಲ್ಲಿ ಅವಕಾಶ ನೀಡಬೇಕೆಂದು ವಿಪಕ್ಷಗಳ ಸಭೆ ಕರೆದಿದ್ದರು. ಈ ಸಭೆಗೆ ಆಪ್ ಮತ್ತು ತೆಲಂಗಾಣ ರಾಷ್ಟ್ರ ಸಮಿತಿ ಸೇರಿ ಹಲವು ಪಕ್ಷಗಳು ಭಾಗವಹಿಸಿದ್ದವು.

ತದನಂತರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಸಂಸತ್ತಿನಲ್ಲಿ ಮಾತನಾಡಿ, ಚೀನಿಯರು “ಯಥಾಸ್ಥಿತಿಯನ್ನು ಏಕಪಕ್ಷೀಯವಾಗಿ ಬದಲಾಯಿಸಲು ಪ್ರಯತ್ನಿಸಿದರು. ಆದರೆ ಭಾರತೀಯ ಸೇನಾ ಕಮಾಂಡರ್‌ಗಳ ಸಮಯೋಚಿತ ಹಸ್ತಕ್ಷೇಪದಿಂದಾಗಿ, ಚೀನಾದ ಸೈನಿಕರು ತಮ್ಮ ಸ್ಥಳಗಳಿಗೆ ಮರಳಿದರು. ಕಮಾಂಡರ್‌ಗಳ ಸಭೆಯಲ್ಲಿ ಇಂತಹ ಕ್ರಮಗಳಿಂದ ದೂರವಿರಿ ಮತ್ತು ಗಡಿಯಲ್ಲಿ ಶಾಂತಿ ಮತ್ತು ನೆಮ್ಮದಿಯನ್ನು ಕಾಪಾಡುವಂತೆ ಚೀನೀಯರನ್ನು ಕೇಳಲಾಯಿತು. ಘಟನೆಯನ್ನು ರಾಜತಾಂತ್ರಿಕ ಮಾರ್ಗಗಳ ಮೂಲಕವೂ ಪರಿಹರಿಸಲು ಯತ್ನಿಸಲಾಗುತ್ತಿದೆ” ಎಂದು ಹೇಳಿದ್ದರು.

ಈ ಕುರಿತು ಸಂಪೂರ್ಣ ಮಾಹಿತಿ ನೀಡುವಂತೆ, ಗಡಿಯಲ್ಲಿನ ಚೀನಾದ ಆಕ್ರಮಣದ ಬಗ್ಗೆ ಚರ್ಚೆ ನಡೆಸುವಂತೆ ವಿಪಕ್ಷಗಳು ಒತ್ತಾಯಿಸಿದವು. ಆದರೆ ಉಪಸಭಾಪತಿ ಹರಿವಂಶ್ ಅದಕ್ಕೆ ಆಸ್ಪದ ಕೊಡಲಿಲ್ಲ. ಹಾಗಾಗಿ ಸೋನಿಯಾ ಗಾಂಧಿಯವರ ನೇತೃತ್ವದಲ್ಲಿ ಕಾಂಗ್ರೆಸ್ ಸದ್ಯಸರು ಸಭಾತ್ಯಾಗ ಮಾಡಿದರು. ಅಲ್ಲದೆ ಎನ್‌ಸಿಪಿ, ಟಿಎಂಸಿ, ಆರ್‌ಜೆಡಿ, ಜೆಎಂಎಂ, ಶಿವಸೇನೆ, ಸಮಾಜವಾದಿ ಪಕ್ಷದ ಸಂಸದರು ಸಹ ಅಧಿವೇಶನ ಬಹಿಷ್ಕರಿದ್ದಾರೆ.

ಮೋದಿ ಸರ್ಕಾರ ಚರ್ಚೆಗೆ ಅವಕಾಶ ಮಾಡಿಕೊಡದಿರುವುದನ್ನು ಮಲ್ಲಿಕಾರ್ಜುನ ಖರ್ಗೆಯವರು ಕಟುವಾಗಿ ಟೀಕಿಸಿದ್ದಾರೆ. ಮೋದಿ ಸರ್ಕಾರದ “ಕೆಂಪು ಕಣ್ಣು” ಚೀನಾದ ಕನ್ನಡಕದಿಂದ ಮುಚ್ಚಲ್ಪಟ್ಟಿದೆ ಎಂದು ತೋರುತ್ತದೆ. ಭಾರತದ ಸಂಸತ್ತಿನಲ್ಲಿ ಚೀನಾದ ವಿರುದ್ಧ ಮಾತನಾಡಲು ಅವಕಾಶವಿಲ್ಲವೇ? ಎಂದು ಇಂದು ಬೆಳಿಗ್ಗೆ ಟ್ವೀಟ್ ಮಾಡಿದ್ದಾರೆ. ಈ ಹಿಂದೆ ಮೋದಿ ಸರ್ಕಾರ ಕೆಂಪು ಕಣ್ಣು ಬಿಟ್ಟು ಚೀನಾವನ್ನು ಎದುರಿಸುತ್ತಿದೆ ಎನ್ನುವ ಬಿಜೆಪಿ ಹೇಳಿಕೆಯನ್ನು ಖರ್ಗೆಯವರು ವ್ಯಂಗ್ಯವಾಡಿದ್ದಾರೆ.

2020ರಲ್ಲಿ ಗಲ್ವಾನ್ ಕಣಿವೆಯಲ್ಲಿ ಮತ್ತು ಲಡಾಖ್‌ನ ಪಾಂಗಾಂಗ್ ಸರೋವರದ ಬಳಿ ಭಾರತ ಮತ್ತು ಚೀನಿ ಸೈನಿಕರ ನಡುವೆ ಸಂಘರ್ಷ ಏರ್ಪಟ್ಟಿತ್ತು. ಅಲ್ಲಿ ಮತ್ತು ಅರುಣಾಚಲ ಪ್ರದೇಶದಲ್ಲಿ ಗಡಿ ಪ್ರವೇಶಿಸಿರುವ ಚೀನಾ ಸೇನೆ ಕೆಲ ಹಳ್ಳಿಗಳನ್ನು, ಸೇತುವೆಗಳನ್ನು ನಿರ್ಮಾಣ ಮಾಡಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಅರುಣಾಚಲ ಪ್ರದೇಶದಲ್ಲಿ ಮತ್ತೊಂದು ಗ್ರಾಮ ನಿರ್ಮಿಸಿರುವ ಚೀನಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...