Homeಮುಖಪುಟಅರುಣಾಚಲ ಪ್ರದೇಶ ಗಡಿಯಲ್ಲಿ ಭಾರತ-ಚೀನಾ ಸೈನಿಕರ ಘರ್ಷಣೆ: ಇದುವರೆಗೂ ನಡೆದಿದ್ದೇನು?

ಅರುಣಾಚಲ ಪ್ರದೇಶ ಗಡಿಯಲ್ಲಿ ಭಾರತ-ಚೀನಾ ಸೈನಿಕರ ಘರ್ಷಣೆ: ಇದುವರೆಗೂ ನಡೆದಿದ್ದೇನು?

ಮೋದಿ ಸರ್ಕಾರದ "ಕೆಂಪು ಕಣ್ಣು" ಚೀನಾದ ಕನ್ನಡಕದಿಂದ ಮುಚ್ಚಲ್ಪಟ್ಟಿದೆ. ಭಾರತದ ಸಂಸತ್ತಿನಲ್ಲಿ ಚೀನಾದ ವಿರುದ್ಧ ಮಾತನಾಡಲು ಅವಕಾಶವಿಲ್ಲವೇ? ಎಂದು ಖರ್ಗೆ ಪ್ರಶ್ನಿಸಿದ್ದಾರೆ.

- Advertisement -
- Advertisement -

ಮತ್ತೊಮ್ಮೆ ಗಡಿಯಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಸಂಘರ್ಷ ಏರ್ಪಟ್ಟಿದೆ. ಭಾರತದ ಗಡಿ ದಾಟಿ ಚೀನಿ ಸೈನಿಕರು ಒಳನುಗ್ಗಿದ್ದನ್ನು ಭಾರತದ ಸೈನಿಕರು ಹಿಮ್ಮೆಟ್ಟಿಸಿದ್ದಾರೆ. ಈ ಸಂದರ್ಭದಲ್ಲಿ ಸಂಘರ್ಷ ಏರ್ಪಟ್ಟು ಹಲವು ಸೈನಿಕರಿಗೆ ಗಾಯಗಳಾಗಿವೆ. ಘಟನೆ ನಡೆದ ಎರಡು ದಿನಗಳ ನಂತರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಈ ಮಾಹಿತಿ ನೀಡಿದ್ದಾರೆ. ಇದರ ಬಗ್ಗೆ ಸಂಸತ್ತಿನಲ್ಲಿ ಚರ್ಚೆ ನಡೆಸಬೇಕೆಂದು ವಿರೋಧ ಪಕ್ಷಗಳು ಒತ್ತಾಯಿಸಿದರೆ ಆಡಳಿತ ಪಕ್ಷ ಅದಕ್ಕೆ ಅವಕಾಶ ಮಾಡಿಕೊಟ್ಟಿಲ್ಲ.

ಡಿಸೆಂಬರ್ 9 ರ ಶುಕ್ರವಾರದಂದು, ಅರುಣಾಚಲ ಪ್ರದೇಶದ ತವಾಂಗ್‌ನ ಯಾಂಗ್ಟ್ಸೆಯಲ್ಲಿನ ಲೈನ್ ಆಫ್ ಕಂಟ್ರೋಲ್ (ಎಲ್‌ಎಸಿ) ಬಳಿ ಚೀನೀ ಸೈನಿಕರು ಭಾರತದ ಭೂಪ್ರದೇಶ ಆಕ್ರಮಿಸಲು ಯತ್ನಿಸಿದ್ದಾರೆ. ಅವರು ಒಳನುಗ್ಗಿದ್ದಾಗ ಭಾರತೀಯ ಸೈನಿಕರು ಹಿಮ್ಮೆಟ್ಟಿಸಿದ್ದಾರೆ.

ಈ ಕುರಿತು ಸರ್ಕಾರ ಯಾವುದೇ ಮಾಹಿತಿ ನೀಡಿರಲಿಲ್ಲ. ಆದರೆ ಪ್ರತಿಪಕ್ಷಗಳು ಈ ಬಗ್ಗೆ ಪ್ರಶ್ನೆ ಎತ್ತಿವೆ. ಮುಖ್ಯವಾಗಿ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ‘ವಿಪಕ್ಷಗಳು ದೇಶ ಮತ್ತು ಸೇನೆಯ ಬೆಂಬಲಕ್ಕಿವೆ. ಆದರೆ ನಮ್ಮ ಸೈನಿಕರ ಕಾಳಜಿಯ ಬಗ್ಗೆ ಸರ್ಕಾರ ಮಾಹಿತಿ ನೀಡಬೇಕು. ಗಡಿಯಲ್ಲಿ ತಂಟೆ ನಿಲ್ಲಿಸುವಂತೆ ಚೀನಾದ ಮೇಲೆ ಒತ್ತಡ ಹೇರಬೇಕೆಂದು” ಒತ್ತಾಯಿಸಿದ್ದರು.

ಅಲ್ಲದೆ ಗಡಿ ಚರ್ಚೆಗೆ ಸದನದಲ್ಲಿ ಅವಕಾಶ ನೀಡಬೇಕೆಂದು ವಿಪಕ್ಷಗಳ ಸಭೆ ಕರೆದಿದ್ದರು. ಈ ಸಭೆಗೆ ಆಪ್ ಮತ್ತು ತೆಲಂಗಾಣ ರಾಷ್ಟ್ರ ಸಮಿತಿ ಸೇರಿ ಹಲವು ಪಕ್ಷಗಳು ಭಾಗವಹಿಸಿದ್ದವು.

ತದನಂತರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಸಂಸತ್ತಿನಲ್ಲಿ ಮಾತನಾಡಿ, ಚೀನಿಯರು “ಯಥಾಸ್ಥಿತಿಯನ್ನು ಏಕಪಕ್ಷೀಯವಾಗಿ ಬದಲಾಯಿಸಲು ಪ್ರಯತ್ನಿಸಿದರು. ಆದರೆ ಭಾರತೀಯ ಸೇನಾ ಕಮಾಂಡರ್‌ಗಳ ಸಮಯೋಚಿತ ಹಸ್ತಕ್ಷೇಪದಿಂದಾಗಿ, ಚೀನಾದ ಸೈನಿಕರು ತಮ್ಮ ಸ್ಥಳಗಳಿಗೆ ಮರಳಿದರು. ಕಮಾಂಡರ್‌ಗಳ ಸಭೆಯಲ್ಲಿ ಇಂತಹ ಕ್ರಮಗಳಿಂದ ದೂರವಿರಿ ಮತ್ತು ಗಡಿಯಲ್ಲಿ ಶಾಂತಿ ಮತ್ತು ನೆಮ್ಮದಿಯನ್ನು ಕಾಪಾಡುವಂತೆ ಚೀನೀಯರನ್ನು ಕೇಳಲಾಯಿತು. ಘಟನೆಯನ್ನು ರಾಜತಾಂತ್ರಿಕ ಮಾರ್ಗಗಳ ಮೂಲಕವೂ ಪರಿಹರಿಸಲು ಯತ್ನಿಸಲಾಗುತ್ತಿದೆ” ಎಂದು ಹೇಳಿದ್ದರು.

ಈ ಕುರಿತು ಸಂಪೂರ್ಣ ಮಾಹಿತಿ ನೀಡುವಂತೆ, ಗಡಿಯಲ್ಲಿನ ಚೀನಾದ ಆಕ್ರಮಣದ ಬಗ್ಗೆ ಚರ್ಚೆ ನಡೆಸುವಂತೆ ವಿಪಕ್ಷಗಳು ಒತ್ತಾಯಿಸಿದವು. ಆದರೆ ಉಪಸಭಾಪತಿ ಹರಿವಂಶ್ ಅದಕ್ಕೆ ಆಸ್ಪದ ಕೊಡಲಿಲ್ಲ. ಹಾಗಾಗಿ ಸೋನಿಯಾ ಗಾಂಧಿಯವರ ನೇತೃತ್ವದಲ್ಲಿ ಕಾಂಗ್ರೆಸ್ ಸದ್ಯಸರು ಸಭಾತ್ಯಾಗ ಮಾಡಿದರು. ಅಲ್ಲದೆ ಎನ್‌ಸಿಪಿ, ಟಿಎಂಸಿ, ಆರ್‌ಜೆಡಿ, ಜೆಎಂಎಂ, ಶಿವಸೇನೆ, ಸಮಾಜವಾದಿ ಪಕ್ಷದ ಸಂಸದರು ಸಹ ಅಧಿವೇಶನ ಬಹಿಷ್ಕರಿದ್ದಾರೆ.

ಮೋದಿ ಸರ್ಕಾರ ಚರ್ಚೆಗೆ ಅವಕಾಶ ಮಾಡಿಕೊಡದಿರುವುದನ್ನು ಮಲ್ಲಿಕಾರ್ಜುನ ಖರ್ಗೆಯವರು ಕಟುವಾಗಿ ಟೀಕಿಸಿದ್ದಾರೆ. ಮೋದಿ ಸರ್ಕಾರದ “ಕೆಂಪು ಕಣ್ಣು” ಚೀನಾದ ಕನ್ನಡಕದಿಂದ ಮುಚ್ಚಲ್ಪಟ್ಟಿದೆ ಎಂದು ತೋರುತ್ತದೆ. ಭಾರತದ ಸಂಸತ್ತಿನಲ್ಲಿ ಚೀನಾದ ವಿರುದ್ಧ ಮಾತನಾಡಲು ಅವಕಾಶವಿಲ್ಲವೇ? ಎಂದು ಇಂದು ಬೆಳಿಗ್ಗೆ ಟ್ವೀಟ್ ಮಾಡಿದ್ದಾರೆ. ಈ ಹಿಂದೆ ಮೋದಿ ಸರ್ಕಾರ ಕೆಂಪು ಕಣ್ಣು ಬಿಟ್ಟು ಚೀನಾವನ್ನು ಎದುರಿಸುತ್ತಿದೆ ಎನ್ನುವ ಬಿಜೆಪಿ ಹೇಳಿಕೆಯನ್ನು ಖರ್ಗೆಯವರು ವ್ಯಂಗ್ಯವಾಡಿದ್ದಾರೆ.

2020ರಲ್ಲಿ ಗಲ್ವಾನ್ ಕಣಿವೆಯಲ್ಲಿ ಮತ್ತು ಲಡಾಖ್‌ನ ಪಾಂಗಾಂಗ್ ಸರೋವರದ ಬಳಿ ಭಾರತ ಮತ್ತು ಚೀನಿ ಸೈನಿಕರ ನಡುವೆ ಸಂಘರ್ಷ ಏರ್ಪಟ್ಟಿತ್ತು. ಅಲ್ಲಿ ಮತ್ತು ಅರುಣಾಚಲ ಪ್ರದೇಶದಲ್ಲಿ ಗಡಿ ಪ್ರವೇಶಿಸಿರುವ ಚೀನಾ ಸೇನೆ ಕೆಲ ಹಳ್ಳಿಗಳನ್ನು, ಸೇತುವೆಗಳನ್ನು ನಿರ್ಮಾಣ ಮಾಡಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಅರುಣಾಚಲ ಪ್ರದೇಶದಲ್ಲಿ ಮತ್ತೊಂದು ಗ್ರಾಮ ನಿರ್ಮಿಸಿರುವ ಚೀನಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...