Homeಮುಖಪುಟಅರುಣಾಚಲ ಪ್ರದೇಶ ಗಡಿಯಲ್ಲಿ ಭಾರತ-ಚೀನಾ ಸೈನಿಕರ ಘರ್ಷಣೆ: ಇದುವರೆಗೂ ನಡೆದಿದ್ದೇನು?

ಅರುಣಾಚಲ ಪ್ರದೇಶ ಗಡಿಯಲ್ಲಿ ಭಾರತ-ಚೀನಾ ಸೈನಿಕರ ಘರ್ಷಣೆ: ಇದುವರೆಗೂ ನಡೆದಿದ್ದೇನು?

ಮೋದಿ ಸರ್ಕಾರದ "ಕೆಂಪು ಕಣ್ಣು" ಚೀನಾದ ಕನ್ನಡಕದಿಂದ ಮುಚ್ಚಲ್ಪಟ್ಟಿದೆ. ಭಾರತದ ಸಂಸತ್ತಿನಲ್ಲಿ ಚೀನಾದ ವಿರುದ್ಧ ಮಾತನಾಡಲು ಅವಕಾಶವಿಲ್ಲವೇ? ಎಂದು ಖರ್ಗೆ ಪ್ರಶ್ನಿಸಿದ್ದಾರೆ.

- Advertisement -
- Advertisement -

ಮತ್ತೊಮ್ಮೆ ಗಡಿಯಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಸಂಘರ್ಷ ಏರ್ಪಟ್ಟಿದೆ. ಭಾರತದ ಗಡಿ ದಾಟಿ ಚೀನಿ ಸೈನಿಕರು ಒಳನುಗ್ಗಿದ್ದನ್ನು ಭಾರತದ ಸೈನಿಕರು ಹಿಮ್ಮೆಟ್ಟಿಸಿದ್ದಾರೆ. ಈ ಸಂದರ್ಭದಲ್ಲಿ ಸಂಘರ್ಷ ಏರ್ಪಟ್ಟು ಹಲವು ಸೈನಿಕರಿಗೆ ಗಾಯಗಳಾಗಿವೆ. ಘಟನೆ ನಡೆದ ಎರಡು ದಿನಗಳ ನಂತರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಈ ಮಾಹಿತಿ ನೀಡಿದ್ದಾರೆ. ಇದರ ಬಗ್ಗೆ ಸಂಸತ್ತಿನಲ್ಲಿ ಚರ್ಚೆ ನಡೆಸಬೇಕೆಂದು ವಿರೋಧ ಪಕ್ಷಗಳು ಒತ್ತಾಯಿಸಿದರೆ ಆಡಳಿತ ಪಕ್ಷ ಅದಕ್ಕೆ ಅವಕಾಶ ಮಾಡಿಕೊಟ್ಟಿಲ್ಲ.

ಡಿಸೆಂಬರ್ 9 ರ ಶುಕ್ರವಾರದಂದು, ಅರುಣಾಚಲ ಪ್ರದೇಶದ ತವಾಂಗ್‌ನ ಯಾಂಗ್ಟ್ಸೆಯಲ್ಲಿನ ಲೈನ್ ಆಫ್ ಕಂಟ್ರೋಲ್ (ಎಲ್‌ಎಸಿ) ಬಳಿ ಚೀನೀ ಸೈನಿಕರು ಭಾರತದ ಭೂಪ್ರದೇಶ ಆಕ್ರಮಿಸಲು ಯತ್ನಿಸಿದ್ದಾರೆ. ಅವರು ಒಳನುಗ್ಗಿದ್ದಾಗ ಭಾರತೀಯ ಸೈನಿಕರು ಹಿಮ್ಮೆಟ್ಟಿಸಿದ್ದಾರೆ.

ಈ ಕುರಿತು ಸರ್ಕಾರ ಯಾವುದೇ ಮಾಹಿತಿ ನೀಡಿರಲಿಲ್ಲ. ಆದರೆ ಪ್ರತಿಪಕ್ಷಗಳು ಈ ಬಗ್ಗೆ ಪ್ರಶ್ನೆ ಎತ್ತಿವೆ. ಮುಖ್ಯವಾಗಿ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ‘ವಿಪಕ್ಷಗಳು ದೇಶ ಮತ್ತು ಸೇನೆಯ ಬೆಂಬಲಕ್ಕಿವೆ. ಆದರೆ ನಮ್ಮ ಸೈನಿಕರ ಕಾಳಜಿಯ ಬಗ್ಗೆ ಸರ್ಕಾರ ಮಾಹಿತಿ ನೀಡಬೇಕು. ಗಡಿಯಲ್ಲಿ ತಂಟೆ ನಿಲ್ಲಿಸುವಂತೆ ಚೀನಾದ ಮೇಲೆ ಒತ್ತಡ ಹೇರಬೇಕೆಂದು” ಒತ್ತಾಯಿಸಿದ್ದರು.

ಅಲ್ಲದೆ ಗಡಿ ಚರ್ಚೆಗೆ ಸದನದಲ್ಲಿ ಅವಕಾಶ ನೀಡಬೇಕೆಂದು ವಿಪಕ್ಷಗಳ ಸಭೆ ಕರೆದಿದ್ದರು. ಈ ಸಭೆಗೆ ಆಪ್ ಮತ್ತು ತೆಲಂಗಾಣ ರಾಷ್ಟ್ರ ಸಮಿತಿ ಸೇರಿ ಹಲವು ಪಕ್ಷಗಳು ಭಾಗವಹಿಸಿದ್ದವು.

ತದನಂತರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಸಂಸತ್ತಿನಲ್ಲಿ ಮಾತನಾಡಿ, ಚೀನಿಯರು “ಯಥಾಸ್ಥಿತಿಯನ್ನು ಏಕಪಕ್ಷೀಯವಾಗಿ ಬದಲಾಯಿಸಲು ಪ್ರಯತ್ನಿಸಿದರು. ಆದರೆ ಭಾರತೀಯ ಸೇನಾ ಕಮಾಂಡರ್‌ಗಳ ಸಮಯೋಚಿತ ಹಸ್ತಕ್ಷೇಪದಿಂದಾಗಿ, ಚೀನಾದ ಸೈನಿಕರು ತಮ್ಮ ಸ್ಥಳಗಳಿಗೆ ಮರಳಿದರು. ಕಮಾಂಡರ್‌ಗಳ ಸಭೆಯಲ್ಲಿ ಇಂತಹ ಕ್ರಮಗಳಿಂದ ದೂರವಿರಿ ಮತ್ತು ಗಡಿಯಲ್ಲಿ ಶಾಂತಿ ಮತ್ತು ನೆಮ್ಮದಿಯನ್ನು ಕಾಪಾಡುವಂತೆ ಚೀನೀಯರನ್ನು ಕೇಳಲಾಯಿತು. ಘಟನೆಯನ್ನು ರಾಜತಾಂತ್ರಿಕ ಮಾರ್ಗಗಳ ಮೂಲಕವೂ ಪರಿಹರಿಸಲು ಯತ್ನಿಸಲಾಗುತ್ತಿದೆ” ಎಂದು ಹೇಳಿದ್ದರು.

ಈ ಕುರಿತು ಸಂಪೂರ್ಣ ಮಾಹಿತಿ ನೀಡುವಂತೆ, ಗಡಿಯಲ್ಲಿನ ಚೀನಾದ ಆಕ್ರಮಣದ ಬಗ್ಗೆ ಚರ್ಚೆ ನಡೆಸುವಂತೆ ವಿಪಕ್ಷಗಳು ಒತ್ತಾಯಿಸಿದವು. ಆದರೆ ಉಪಸಭಾಪತಿ ಹರಿವಂಶ್ ಅದಕ್ಕೆ ಆಸ್ಪದ ಕೊಡಲಿಲ್ಲ. ಹಾಗಾಗಿ ಸೋನಿಯಾ ಗಾಂಧಿಯವರ ನೇತೃತ್ವದಲ್ಲಿ ಕಾಂಗ್ರೆಸ್ ಸದ್ಯಸರು ಸಭಾತ್ಯಾಗ ಮಾಡಿದರು. ಅಲ್ಲದೆ ಎನ್‌ಸಿಪಿ, ಟಿಎಂಸಿ, ಆರ್‌ಜೆಡಿ, ಜೆಎಂಎಂ, ಶಿವಸೇನೆ, ಸಮಾಜವಾದಿ ಪಕ್ಷದ ಸಂಸದರು ಸಹ ಅಧಿವೇಶನ ಬಹಿಷ್ಕರಿದ್ದಾರೆ.

ಮೋದಿ ಸರ್ಕಾರ ಚರ್ಚೆಗೆ ಅವಕಾಶ ಮಾಡಿಕೊಡದಿರುವುದನ್ನು ಮಲ್ಲಿಕಾರ್ಜುನ ಖರ್ಗೆಯವರು ಕಟುವಾಗಿ ಟೀಕಿಸಿದ್ದಾರೆ. ಮೋದಿ ಸರ್ಕಾರದ “ಕೆಂಪು ಕಣ್ಣು” ಚೀನಾದ ಕನ್ನಡಕದಿಂದ ಮುಚ್ಚಲ್ಪಟ್ಟಿದೆ ಎಂದು ತೋರುತ್ತದೆ. ಭಾರತದ ಸಂಸತ್ತಿನಲ್ಲಿ ಚೀನಾದ ವಿರುದ್ಧ ಮಾತನಾಡಲು ಅವಕಾಶವಿಲ್ಲವೇ? ಎಂದು ಇಂದು ಬೆಳಿಗ್ಗೆ ಟ್ವೀಟ್ ಮಾಡಿದ್ದಾರೆ. ಈ ಹಿಂದೆ ಮೋದಿ ಸರ್ಕಾರ ಕೆಂಪು ಕಣ್ಣು ಬಿಟ್ಟು ಚೀನಾವನ್ನು ಎದುರಿಸುತ್ತಿದೆ ಎನ್ನುವ ಬಿಜೆಪಿ ಹೇಳಿಕೆಯನ್ನು ಖರ್ಗೆಯವರು ವ್ಯಂಗ್ಯವಾಡಿದ್ದಾರೆ.

2020ರಲ್ಲಿ ಗಲ್ವಾನ್ ಕಣಿವೆಯಲ್ಲಿ ಮತ್ತು ಲಡಾಖ್‌ನ ಪಾಂಗಾಂಗ್ ಸರೋವರದ ಬಳಿ ಭಾರತ ಮತ್ತು ಚೀನಿ ಸೈನಿಕರ ನಡುವೆ ಸಂಘರ್ಷ ಏರ್ಪಟ್ಟಿತ್ತು. ಅಲ್ಲಿ ಮತ್ತು ಅರುಣಾಚಲ ಪ್ರದೇಶದಲ್ಲಿ ಗಡಿ ಪ್ರವೇಶಿಸಿರುವ ಚೀನಾ ಸೇನೆ ಕೆಲ ಹಳ್ಳಿಗಳನ್ನು, ಸೇತುವೆಗಳನ್ನು ನಿರ್ಮಾಣ ಮಾಡಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಅರುಣಾಚಲ ಪ್ರದೇಶದಲ್ಲಿ ಮತ್ತೊಂದು ಗ್ರಾಮ ನಿರ್ಮಿಸಿರುವ ಚೀನಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...