Homeಮುಖಪುಟಅರುಣಾಚಲ ಪ್ರದೇಶ ಗಡಿಯಲ್ಲಿ ಭಾರತ-ಚೀನಾ ಸೈನಿಕರ ಘರ್ಷಣೆ: ಇದುವರೆಗೂ ನಡೆದಿದ್ದೇನು?

ಅರುಣಾಚಲ ಪ್ರದೇಶ ಗಡಿಯಲ್ಲಿ ಭಾರತ-ಚೀನಾ ಸೈನಿಕರ ಘರ್ಷಣೆ: ಇದುವರೆಗೂ ನಡೆದಿದ್ದೇನು?

ಮೋದಿ ಸರ್ಕಾರದ "ಕೆಂಪು ಕಣ್ಣು" ಚೀನಾದ ಕನ್ನಡಕದಿಂದ ಮುಚ್ಚಲ್ಪಟ್ಟಿದೆ. ಭಾರತದ ಸಂಸತ್ತಿನಲ್ಲಿ ಚೀನಾದ ವಿರುದ್ಧ ಮಾತನಾಡಲು ಅವಕಾಶವಿಲ್ಲವೇ? ಎಂದು ಖರ್ಗೆ ಪ್ರಶ್ನಿಸಿದ್ದಾರೆ.

- Advertisement -
- Advertisement -

ಮತ್ತೊಮ್ಮೆ ಗಡಿಯಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಸಂಘರ್ಷ ಏರ್ಪಟ್ಟಿದೆ. ಭಾರತದ ಗಡಿ ದಾಟಿ ಚೀನಿ ಸೈನಿಕರು ಒಳನುಗ್ಗಿದ್ದನ್ನು ಭಾರತದ ಸೈನಿಕರು ಹಿಮ್ಮೆಟ್ಟಿಸಿದ್ದಾರೆ. ಈ ಸಂದರ್ಭದಲ್ಲಿ ಸಂಘರ್ಷ ಏರ್ಪಟ್ಟು ಹಲವು ಸೈನಿಕರಿಗೆ ಗಾಯಗಳಾಗಿವೆ. ಘಟನೆ ನಡೆದ ಎರಡು ದಿನಗಳ ನಂತರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಈ ಮಾಹಿತಿ ನೀಡಿದ್ದಾರೆ. ಇದರ ಬಗ್ಗೆ ಸಂಸತ್ತಿನಲ್ಲಿ ಚರ್ಚೆ ನಡೆಸಬೇಕೆಂದು ವಿರೋಧ ಪಕ್ಷಗಳು ಒತ್ತಾಯಿಸಿದರೆ ಆಡಳಿತ ಪಕ್ಷ ಅದಕ್ಕೆ ಅವಕಾಶ ಮಾಡಿಕೊಟ್ಟಿಲ್ಲ.

ಡಿಸೆಂಬರ್ 9 ರ ಶುಕ್ರವಾರದಂದು, ಅರುಣಾಚಲ ಪ್ರದೇಶದ ತವಾಂಗ್‌ನ ಯಾಂಗ್ಟ್ಸೆಯಲ್ಲಿನ ಲೈನ್ ಆಫ್ ಕಂಟ್ರೋಲ್ (ಎಲ್‌ಎಸಿ) ಬಳಿ ಚೀನೀ ಸೈನಿಕರು ಭಾರತದ ಭೂಪ್ರದೇಶ ಆಕ್ರಮಿಸಲು ಯತ್ನಿಸಿದ್ದಾರೆ. ಅವರು ಒಳನುಗ್ಗಿದ್ದಾಗ ಭಾರತೀಯ ಸೈನಿಕರು ಹಿಮ್ಮೆಟ್ಟಿಸಿದ್ದಾರೆ.

ಈ ಕುರಿತು ಸರ್ಕಾರ ಯಾವುದೇ ಮಾಹಿತಿ ನೀಡಿರಲಿಲ್ಲ. ಆದರೆ ಪ್ರತಿಪಕ್ಷಗಳು ಈ ಬಗ್ಗೆ ಪ್ರಶ್ನೆ ಎತ್ತಿವೆ. ಮುಖ್ಯವಾಗಿ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ‘ವಿಪಕ್ಷಗಳು ದೇಶ ಮತ್ತು ಸೇನೆಯ ಬೆಂಬಲಕ್ಕಿವೆ. ಆದರೆ ನಮ್ಮ ಸೈನಿಕರ ಕಾಳಜಿಯ ಬಗ್ಗೆ ಸರ್ಕಾರ ಮಾಹಿತಿ ನೀಡಬೇಕು. ಗಡಿಯಲ್ಲಿ ತಂಟೆ ನಿಲ್ಲಿಸುವಂತೆ ಚೀನಾದ ಮೇಲೆ ಒತ್ತಡ ಹೇರಬೇಕೆಂದು” ಒತ್ತಾಯಿಸಿದ್ದರು.

ಅಲ್ಲದೆ ಗಡಿ ಚರ್ಚೆಗೆ ಸದನದಲ್ಲಿ ಅವಕಾಶ ನೀಡಬೇಕೆಂದು ವಿಪಕ್ಷಗಳ ಸಭೆ ಕರೆದಿದ್ದರು. ಈ ಸಭೆಗೆ ಆಪ್ ಮತ್ತು ತೆಲಂಗಾಣ ರಾಷ್ಟ್ರ ಸಮಿತಿ ಸೇರಿ ಹಲವು ಪಕ್ಷಗಳು ಭಾಗವಹಿಸಿದ್ದವು.

ತದನಂತರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಸಂಸತ್ತಿನಲ್ಲಿ ಮಾತನಾಡಿ, ಚೀನಿಯರು “ಯಥಾಸ್ಥಿತಿಯನ್ನು ಏಕಪಕ್ಷೀಯವಾಗಿ ಬದಲಾಯಿಸಲು ಪ್ರಯತ್ನಿಸಿದರು. ಆದರೆ ಭಾರತೀಯ ಸೇನಾ ಕಮಾಂಡರ್‌ಗಳ ಸಮಯೋಚಿತ ಹಸ್ತಕ್ಷೇಪದಿಂದಾಗಿ, ಚೀನಾದ ಸೈನಿಕರು ತಮ್ಮ ಸ್ಥಳಗಳಿಗೆ ಮರಳಿದರು. ಕಮಾಂಡರ್‌ಗಳ ಸಭೆಯಲ್ಲಿ ಇಂತಹ ಕ್ರಮಗಳಿಂದ ದೂರವಿರಿ ಮತ್ತು ಗಡಿಯಲ್ಲಿ ಶಾಂತಿ ಮತ್ತು ನೆಮ್ಮದಿಯನ್ನು ಕಾಪಾಡುವಂತೆ ಚೀನೀಯರನ್ನು ಕೇಳಲಾಯಿತು. ಘಟನೆಯನ್ನು ರಾಜತಾಂತ್ರಿಕ ಮಾರ್ಗಗಳ ಮೂಲಕವೂ ಪರಿಹರಿಸಲು ಯತ್ನಿಸಲಾಗುತ್ತಿದೆ” ಎಂದು ಹೇಳಿದ್ದರು.

ಈ ಕುರಿತು ಸಂಪೂರ್ಣ ಮಾಹಿತಿ ನೀಡುವಂತೆ, ಗಡಿಯಲ್ಲಿನ ಚೀನಾದ ಆಕ್ರಮಣದ ಬಗ್ಗೆ ಚರ್ಚೆ ನಡೆಸುವಂತೆ ವಿಪಕ್ಷಗಳು ಒತ್ತಾಯಿಸಿದವು. ಆದರೆ ಉಪಸಭಾಪತಿ ಹರಿವಂಶ್ ಅದಕ್ಕೆ ಆಸ್ಪದ ಕೊಡಲಿಲ್ಲ. ಹಾಗಾಗಿ ಸೋನಿಯಾ ಗಾಂಧಿಯವರ ನೇತೃತ್ವದಲ್ಲಿ ಕಾಂಗ್ರೆಸ್ ಸದ್ಯಸರು ಸಭಾತ್ಯಾಗ ಮಾಡಿದರು. ಅಲ್ಲದೆ ಎನ್‌ಸಿಪಿ, ಟಿಎಂಸಿ, ಆರ್‌ಜೆಡಿ, ಜೆಎಂಎಂ, ಶಿವಸೇನೆ, ಸಮಾಜವಾದಿ ಪಕ್ಷದ ಸಂಸದರು ಸಹ ಅಧಿವೇಶನ ಬಹಿಷ್ಕರಿದ್ದಾರೆ.

ಮೋದಿ ಸರ್ಕಾರ ಚರ್ಚೆಗೆ ಅವಕಾಶ ಮಾಡಿಕೊಡದಿರುವುದನ್ನು ಮಲ್ಲಿಕಾರ್ಜುನ ಖರ್ಗೆಯವರು ಕಟುವಾಗಿ ಟೀಕಿಸಿದ್ದಾರೆ. ಮೋದಿ ಸರ್ಕಾರದ “ಕೆಂಪು ಕಣ್ಣು” ಚೀನಾದ ಕನ್ನಡಕದಿಂದ ಮುಚ್ಚಲ್ಪಟ್ಟಿದೆ ಎಂದು ತೋರುತ್ತದೆ. ಭಾರತದ ಸಂಸತ್ತಿನಲ್ಲಿ ಚೀನಾದ ವಿರುದ್ಧ ಮಾತನಾಡಲು ಅವಕಾಶವಿಲ್ಲವೇ? ಎಂದು ಇಂದು ಬೆಳಿಗ್ಗೆ ಟ್ವೀಟ್ ಮಾಡಿದ್ದಾರೆ. ಈ ಹಿಂದೆ ಮೋದಿ ಸರ್ಕಾರ ಕೆಂಪು ಕಣ್ಣು ಬಿಟ್ಟು ಚೀನಾವನ್ನು ಎದುರಿಸುತ್ತಿದೆ ಎನ್ನುವ ಬಿಜೆಪಿ ಹೇಳಿಕೆಯನ್ನು ಖರ್ಗೆಯವರು ವ್ಯಂಗ್ಯವಾಡಿದ್ದಾರೆ.

2020ರಲ್ಲಿ ಗಲ್ವಾನ್ ಕಣಿವೆಯಲ್ಲಿ ಮತ್ತು ಲಡಾಖ್‌ನ ಪಾಂಗಾಂಗ್ ಸರೋವರದ ಬಳಿ ಭಾರತ ಮತ್ತು ಚೀನಿ ಸೈನಿಕರ ನಡುವೆ ಸಂಘರ್ಷ ಏರ್ಪಟ್ಟಿತ್ತು. ಅಲ್ಲಿ ಮತ್ತು ಅರುಣಾಚಲ ಪ್ರದೇಶದಲ್ಲಿ ಗಡಿ ಪ್ರವೇಶಿಸಿರುವ ಚೀನಾ ಸೇನೆ ಕೆಲ ಹಳ್ಳಿಗಳನ್ನು, ಸೇತುವೆಗಳನ್ನು ನಿರ್ಮಾಣ ಮಾಡಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಅರುಣಾಚಲ ಪ್ರದೇಶದಲ್ಲಿ ಮತ್ತೊಂದು ಗ್ರಾಮ ನಿರ್ಮಿಸಿರುವ ಚೀನಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...