Homeಮುಖಪುಟ‘10 ಸಾವಿರ ಕೋಟಿ ಡಾಲರ್‌‌’ ತಲುಪಲಿರುವ ಭಾರತ-ಚೀನಾ ವ್ಯಾಪಾರ!

‘10 ಸಾವಿರ ಕೋಟಿ ಡಾಲರ್‌‌’ ತಲುಪಲಿರುವ ಭಾರತ-ಚೀನಾ ವ್ಯಾಪಾರ!

ಹಲವಾರು ವರ್ಷಗಳಿಂದ ಚೀನಾ ವಸ್ತುಗಳನ್ನು ಬ್ಯಾನ್‌ ಮಾಡಲು ಕರೆ ನೀಡುತ್ತಿರುವ ಬಿಜೆಪಿ ಆಡಳಿತದಲ್ಲೇ ಚೀನಾದೊಂದಿಗೆ ವ್ಯಾಪಾರ ಹೆಚ್ಚುತ್ತಿರುವುದು ಗಮನಾರ್ಹವಾಗಿದೆ

- Advertisement -
- Advertisement -

ಭಾರತ ಮತ್ತು ಚೀನಾ ನಡುವೆ ಪೂರ್ವ ಲಡಾಖ್‌ನಲ್ಲಿ ನಡೆದ ಸೇನಾ ಸಂಘರ್ಷದಿಂದಾಗಿ ದ್ವಿಪಕ್ಷೀಯ ಸಂಬಂಧಗಳಲ್ಲಿ ಬಿರುಕು ಬಿಟ್ಟಿದ್ದರೂ, ಉಭಯ ದೇಶಗಳ ವ್ಯಾಪಾರದ ಪ್ರಮಾಣವು ಈ ವರ್ಷ ದಾಖಲೆ ಮೊತ್ತ 10 ಸಾವಿರ ಕೋಟಿ ಡಾಲರ್ ದಾಟಲಿದೆ ಎಂದು ಅಂದಾಜಿಸಲಾಗಿದೆ. ಈ ವರ್ಷದ ಒಂಬತ್ತು ತಿಂಗಳಲ್ಲಿ ವ್ಯಾಪಾರದ ಒಟ್ಟು ಮೊತ್ತವು ಈಗಾಗಲೇ 9 ಸಾವಿರ ಕೋಟಿ ಡಾಲರ್ ತಲುಪಿದೆ ಎಂದು ವರದಿಗಳು ತಿಳಿಸಿದೆ.

2021 ರ ಮೊದಲ ಮೂರು ತ್ರೈಮಾಸಿಕಗಳಲ್ಲಿ ಚೀನಾದ ಒಟ್ಟು ಆಮದು ಮತ್ತು ರಫ್ತುಗಳು ವರ್ಷದಿಂದ ವರ್ಷಕ್ಕೆ 22.7% ಹೆಚ್ಚಾಗಿದ್ದು 28.33 ಟ್ರಿಲಿಯನ್ ಯುವಾನ್‌ಗೆ (ಸುಮಾರು 4.38 ಲಕ್ಷ ಕೋಟಿ ಡಾಲರ್‌) ತಲುಪಿದೆ ಎಂದು ಅಧಿಕೃತ ಅಂಕಿಅಂಶಗಳು ಬುಧವಾರ ಹೇಳಿವೆ.

ಇದನ್ನೂ ಓದಿ: ಪೂರ್ವ ಲಡಾಖ್‌‌ನಲ್ಲಿ ಸೇನಾ ನಿಯೋಜನೆ ಹೆಚ್ಚಿಸಿದ ಚೀನಾ: ಭಾರತೀಯ ಸೇನಾ ಮುಖ್ಯಸ್ಥರ ಹೇಳಿಕೆ

ಈ ಅಂಕಿ-ಅಂಶವು 2019 ರ ಸಾಂಕ್ರಾಮಿಕದ ಮುಂಚಿನ ಮಟ್ಟಕ್ಕಿಂತ 23.4% ದಷ್ಟು ಹೆಚ್ಚಳವಾಗಿದೆ ಎಂದು ಜನರಲ್ ಅಡ್ಮಿನಿಸ್ಟ್ರೇಷನ್ ಆಫ್ ಕಸ್ಟಮ್ಸ್ ಹೇಳಿದೆ.

ಸೆಪ್ಟೆಂಬರ್ ಅಂತ್ಯದ ವೇಳೆಗೆ ಭಾರತ ಮತ್ತು ಚೀನಾ ನಡುವಿನ ದ್ವಿಪಕ್ಷೀಯ ವ್ಯಾಪಾರವು 9 ಸಾವಿರ ಕೋಟಿ ಡಾಲರ್ ತಲುಪಿದ್ದು, ಇದು ಕಳದೆ ವರ್ಷಕ್ಕಿಂತ 49.3% ಹೆಚ್ಚಾಗಿದೆ ಎಂದು ಚೀನಾ ಕಸ್ಟಮ್ಸ್ ಬಿಡುಗಡೆ ಮಾಡಿದ ಒಂಬತ್ತು ತಿಂಗಳ ಅಂಕಿಅಂಶಗಳು ಹೇಳಿದೆ.

ಭಾರತಕ್ಕೆ ಚೀನಾದ ರಫ್ತುಗಳು 6,846 ಕೋಟಿ ಡಾಲರ್‌ಗೆ ಏರಿಕೆಯಾಗಿದ್ದು, ಈ ಏರಿಕೆ 51.7% ರಷ್ಟಾಗುತ್ತದೆ. ಭಾರತೀಯ ರಫ್ತುಗಳು ಒಟ್ಟು 2,191 ಕೋಟಿ ಡಾಲರ್‌ಗೆ ತಲುಪಿದ್ದು, 42.5% ಏರಿಕೆಯೊಂದಿಗೆ ಗಮನಾರ್ಹ ಹೆಚ್ಚಳವನ್ನು ದಾಖಲಿಸಿದೆ.

ಬಿಜೆಪಿ ಆಡಳಿತ ಮತ್ತು ಅವರ ಬೆಂಬಲಿಗರು ಹಲವಾರು ವರ್ಷದಿಂದಲೂ ಚೀನಾ ವಸ್ತುಗಳನ್ನು ಬ್ಯಾನ್ ಮಾಡುವಂತೆ ಕರೆನೀಡುತ್ತಿದ್ದರೂ, ಬಿಜೆಪಿ ಆಡಳಿತದಲ್ಲೇ ಚೀನಾದೊಂದಿಗೆ ವ್ಯಾಪಾರ ಹೆಚ್ಚುತ್ತಿರುವುದು ಗಮನಾರ್ಹವಾಗಿದೆ.

ಇದನ್ನೂ ಓದಿ: ಚೀನಾ+ಪಾಕಿಸ್ತಾನ+ಮಿ.56″= ಭಾರತದ ಪ್ರದೇಶಗಳ ಮೇಲೆ ಚೀನಾ ಅತಿಕ್ರಮಣ: ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...