Homeಮುಖಪುಟ‘10 ಸಾವಿರ ಕೋಟಿ ಡಾಲರ್‌‌’ ತಲುಪಲಿರುವ ಭಾರತ-ಚೀನಾ ವ್ಯಾಪಾರ!

‘10 ಸಾವಿರ ಕೋಟಿ ಡಾಲರ್‌‌’ ತಲುಪಲಿರುವ ಭಾರತ-ಚೀನಾ ವ್ಯಾಪಾರ!

ಹಲವಾರು ವರ್ಷಗಳಿಂದ ಚೀನಾ ವಸ್ತುಗಳನ್ನು ಬ್ಯಾನ್‌ ಮಾಡಲು ಕರೆ ನೀಡುತ್ತಿರುವ ಬಿಜೆಪಿ ಆಡಳಿತದಲ್ಲೇ ಚೀನಾದೊಂದಿಗೆ ವ್ಯಾಪಾರ ಹೆಚ್ಚುತ್ತಿರುವುದು ಗಮನಾರ್ಹವಾಗಿದೆ

- Advertisement -
- Advertisement -

ಭಾರತ ಮತ್ತು ಚೀನಾ ನಡುವೆ ಪೂರ್ವ ಲಡಾಖ್‌ನಲ್ಲಿ ನಡೆದ ಸೇನಾ ಸಂಘರ್ಷದಿಂದಾಗಿ ದ್ವಿಪಕ್ಷೀಯ ಸಂಬಂಧಗಳಲ್ಲಿ ಬಿರುಕು ಬಿಟ್ಟಿದ್ದರೂ, ಉಭಯ ದೇಶಗಳ ವ್ಯಾಪಾರದ ಪ್ರಮಾಣವು ಈ ವರ್ಷ ದಾಖಲೆ ಮೊತ್ತ 10 ಸಾವಿರ ಕೋಟಿ ಡಾಲರ್ ದಾಟಲಿದೆ ಎಂದು ಅಂದಾಜಿಸಲಾಗಿದೆ. ಈ ವರ್ಷದ ಒಂಬತ್ತು ತಿಂಗಳಲ್ಲಿ ವ್ಯಾಪಾರದ ಒಟ್ಟು ಮೊತ್ತವು ಈಗಾಗಲೇ 9 ಸಾವಿರ ಕೋಟಿ ಡಾಲರ್ ತಲುಪಿದೆ ಎಂದು ವರದಿಗಳು ತಿಳಿಸಿದೆ.

2021 ರ ಮೊದಲ ಮೂರು ತ್ರೈಮಾಸಿಕಗಳಲ್ಲಿ ಚೀನಾದ ಒಟ್ಟು ಆಮದು ಮತ್ತು ರಫ್ತುಗಳು ವರ್ಷದಿಂದ ವರ್ಷಕ್ಕೆ 22.7% ಹೆಚ್ಚಾಗಿದ್ದು 28.33 ಟ್ರಿಲಿಯನ್ ಯುವಾನ್‌ಗೆ (ಸುಮಾರು 4.38 ಲಕ್ಷ ಕೋಟಿ ಡಾಲರ್‌) ತಲುಪಿದೆ ಎಂದು ಅಧಿಕೃತ ಅಂಕಿಅಂಶಗಳು ಬುಧವಾರ ಹೇಳಿವೆ.

ಇದನ್ನೂ ಓದಿ: ಪೂರ್ವ ಲಡಾಖ್‌‌ನಲ್ಲಿ ಸೇನಾ ನಿಯೋಜನೆ ಹೆಚ್ಚಿಸಿದ ಚೀನಾ: ಭಾರತೀಯ ಸೇನಾ ಮುಖ್ಯಸ್ಥರ ಹೇಳಿಕೆ

ಈ ಅಂಕಿ-ಅಂಶವು 2019 ರ ಸಾಂಕ್ರಾಮಿಕದ ಮುಂಚಿನ ಮಟ್ಟಕ್ಕಿಂತ 23.4% ದಷ್ಟು ಹೆಚ್ಚಳವಾಗಿದೆ ಎಂದು ಜನರಲ್ ಅಡ್ಮಿನಿಸ್ಟ್ರೇಷನ್ ಆಫ್ ಕಸ್ಟಮ್ಸ್ ಹೇಳಿದೆ.

ಸೆಪ್ಟೆಂಬರ್ ಅಂತ್ಯದ ವೇಳೆಗೆ ಭಾರತ ಮತ್ತು ಚೀನಾ ನಡುವಿನ ದ್ವಿಪಕ್ಷೀಯ ವ್ಯಾಪಾರವು 9 ಸಾವಿರ ಕೋಟಿ ಡಾಲರ್ ತಲುಪಿದ್ದು, ಇದು ಕಳದೆ ವರ್ಷಕ್ಕಿಂತ 49.3% ಹೆಚ್ಚಾಗಿದೆ ಎಂದು ಚೀನಾ ಕಸ್ಟಮ್ಸ್ ಬಿಡುಗಡೆ ಮಾಡಿದ ಒಂಬತ್ತು ತಿಂಗಳ ಅಂಕಿಅಂಶಗಳು ಹೇಳಿದೆ.

ಭಾರತಕ್ಕೆ ಚೀನಾದ ರಫ್ತುಗಳು 6,846 ಕೋಟಿ ಡಾಲರ್‌ಗೆ ಏರಿಕೆಯಾಗಿದ್ದು, ಈ ಏರಿಕೆ 51.7% ರಷ್ಟಾಗುತ್ತದೆ. ಭಾರತೀಯ ರಫ್ತುಗಳು ಒಟ್ಟು 2,191 ಕೋಟಿ ಡಾಲರ್‌ಗೆ ತಲುಪಿದ್ದು, 42.5% ಏರಿಕೆಯೊಂದಿಗೆ ಗಮನಾರ್ಹ ಹೆಚ್ಚಳವನ್ನು ದಾಖಲಿಸಿದೆ.

ಬಿಜೆಪಿ ಆಡಳಿತ ಮತ್ತು ಅವರ ಬೆಂಬಲಿಗರು ಹಲವಾರು ವರ್ಷದಿಂದಲೂ ಚೀನಾ ವಸ್ತುಗಳನ್ನು ಬ್ಯಾನ್ ಮಾಡುವಂತೆ ಕರೆನೀಡುತ್ತಿದ್ದರೂ, ಬಿಜೆಪಿ ಆಡಳಿತದಲ್ಲೇ ಚೀನಾದೊಂದಿಗೆ ವ್ಯಾಪಾರ ಹೆಚ್ಚುತ್ತಿರುವುದು ಗಮನಾರ್ಹವಾಗಿದೆ.

ಇದನ್ನೂ ಓದಿ: ಚೀನಾ+ಪಾಕಿಸ್ತಾನ+ಮಿ.56″= ಭಾರತದ ಪ್ರದೇಶಗಳ ಮೇಲೆ ಚೀನಾ ಅತಿಕ್ರಮಣ: ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...