Homeಮುಖಪುಟ‘10 ಸಾವಿರ ಕೋಟಿ ಡಾಲರ್‌‌’ ತಲುಪಲಿರುವ ಭಾರತ-ಚೀನಾ ವ್ಯಾಪಾರ!

‘10 ಸಾವಿರ ಕೋಟಿ ಡಾಲರ್‌‌’ ತಲುಪಲಿರುವ ಭಾರತ-ಚೀನಾ ವ್ಯಾಪಾರ!

ಹಲವಾರು ವರ್ಷಗಳಿಂದ ಚೀನಾ ವಸ್ತುಗಳನ್ನು ಬ್ಯಾನ್‌ ಮಾಡಲು ಕರೆ ನೀಡುತ್ತಿರುವ ಬಿಜೆಪಿ ಆಡಳಿತದಲ್ಲೇ ಚೀನಾದೊಂದಿಗೆ ವ್ಯಾಪಾರ ಹೆಚ್ಚುತ್ತಿರುವುದು ಗಮನಾರ್ಹವಾಗಿದೆ

- Advertisement -
- Advertisement -

ಭಾರತ ಮತ್ತು ಚೀನಾ ನಡುವೆ ಪೂರ್ವ ಲಡಾಖ್‌ನಲ್ಲಿ ನಡೆದ ಸೇನಾ ಸಂಘರ್ಷದಿಂದಾಗಿ ದ್ವಿಪಕ್ಷೀಯ ಸಂಬಂಧಗಳಲ್ಲಿ ಬಿರುಕು ಬಿಟ್ಟಿದ್ದರೂ, ಉಭಯ ದೇಶಗಳ ವ್ಯಾಪಾರದ ಪ್ರಮಾಣವು ಈ ವರ್ಷ ದಾಖಲೆ ಮೊತ್ತ 10 ಸಾವಿರ ಕೋಟಿ ಡಾಲರ್ ದಾಟಲಿದೆ ಎಂದು ಅಂದಾಜಿಸಲಾಗಿದೆ. ಈ ವರ್ಷದ ಒಂಬತ್ತು ತಿಂಗಳಲ್ಲಿ ವ್ಯಾಪಾರದ ಒಟ್ಟು ಮೊತ್ತವು ಈಗಾಗಲೇ 9 ಸಾವಿರ ಕೋಟಿ ಡಾಲರ್ ತಲುಪಿದೆ ಎಂದು ವರದಿಗಳು ತಿಳಿಸಿದೆ.

2021 ರ ಮೊದಲ ಮೂರು ತ್ರೈಮಾಸಿಕಗಳಲ್ಲಿ ಚೀನಾದ ಒಟ್ಟು ಆಮದು ಮತ್ತು ರಫ್ತುಗಳು ವರ್ಷದಿಂದ ವರ್ಷಕ್ಕೆ 22.7% ಹೆಚ್ಚಾಗಿದ್ದು 28.33 ಟ್ರಿಲಿಯನ್ ಯುವಾನ್‌ಗೆ (ಸುಮಾರು 4.38 ಲಕ್ಷ ಕೋಟಿ ಡಾಲರ್‌) ತಲುಪಿದೆ ಎಂದು ಅಧಿಕೃತ ಅಂಕಿಅಂಶಗಳು ಬುಧವಾರ ಹೇಳಿವೆ.

ಇದನ್ನೂ ಓದಿ: ಪೂರ್ವ ಲಡಾಖ್‌‌ನಲ್ಲಿ ಸೇನಾ ನಿಯೋಜನೆ ಹೆಚ್ಚಿಸಿದ ಚೀನಾ: ಭಾರತೀಯ ಸೇನಾ ಮುಖ್ಯಸ್ಥರ ಹೇಳಿಕೆ

ಈ ಅಂಕಿ-ಅಂಶವು 2019 ರ ಸಾಂಕ್ರಾಮಿಕದ ಮುಂಚಿನ ಮಟ್ಟಕ್ಕಿಂತ 23.4% ದಷ್ಟು ಹೆಚ್ಚಳವಾಗಿದೆ ಎಂದು ಜನರಲ್ ಅಡ್ಮಿನಿಸ್ಟ್ರೇಷನ್ ಆಫ್ ಕಸ್ಟಮ್ಸ್ ಹೇಳಿದೆ.

ಸೆಪ್ಟೆಂಬರ್ ಅಂತ್ಯದ ವೇಳೆಗೆ ಭಾರತ ಮತ್ತು ಚೀನಾ ನಡುವಿನ ದ್ವಿಪಕ್ಷೀಯ ವ್ಯಾಪಾರವು 9 ಸಾವಿರ ಕೋಟಿ ಡಾಲರ್ ತಲುಪಿದ್ದು, ಇದು ಕಳದೆ ವರ್ಷಕ್ಕಿಂತ 49.3% ಹೆಚ್ಚಾಗಿದೆ ಎಂದು ಚೀನಾ ಕಸ್ಟಮ್ಸ್ ಬಿಡುಗಡೆ ಮಾಡಿದ ಒಂಬತ್ತು ತಿಂಗಳ ಅಂಕಿಅಂಶಗಳು ಹೇಳಿದೆ.

ಭಾರತಕ್ಕೆ ಚೀನಾದ ರಫ್ತುಗಳು 6,846 ಕೋಟಿ ಡಾಲರ್‌ಗೆ ಏರಿಕೆಯಾಗಿದ್ದು, ಈ ಏರಿಕೆ 51.7% ರಷ್ಟಾಗುತ್ತದೆ. ಭಾರತೀಯ ರಫ್ತುಗಳು ಒಟ್ಟು 2,191 ಕೋಟಿ ಡಾಲರ್‌ಗೆ ತಲುಪಿದ್ದು, 42.5% ಏರಿಕೆಯೊಂದಿಗೆ ಗಮನಾರ್ಹ ಹೆಚ್ಚಳವನ್ನು ದಾಖಲಿಸಿದೆ.

ಬಿಜೆಪಿ ಆಡಳಿತ ಮತ್ತು ಅವರ ಬೆಂಬಲಿಗರು ಹಲವಾರು ವರ್ಷದಿಂದಲೂ ಚೀನಾ ವಸ್ತುಗಳನ್ನು ಬ್ಯಾನ್ ಮಾಡುವಂತೆ ಕರೆನೀಡುತ್ತಿದ್ದರೂ, ಬಿಜೆಪಿ ಆಡಳಿತದಲ್ಲೇ ಚೀನಾದೊಂದಿಗೆ ವ್ಯಾಪಾರ ಹೆಚ್ಚುತ್ತಿರುವುದು ಗಮನಾರ್ಹವಾಗಿದೆ.

ಇದನ್ನೂ ಓದಿ: ಚೀನಾ+ಪಾಕಿಸ್ತಾನ+ಮಿ.56″= ಭಾರತದ ಪ್ರದೇಶಗಳ ಮೇಲೆ ಚೀನಾ ಅತಿಕ್ರಮಣ: ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...