HomeಮುಖಪುಟINDIA ಒಕ್ಕೂಟವು ಯಾವುದೇ ಪತ್ರಕರ್ತರನ್ನು ಬಹಿಷ್ಕರಿಸಿಲ್ಲ: ಪವನ್ ಖೇರಾ ಸ್ಪಷ್ಟನೆ

INDIA ಒಕ್ಕೂಟವು ಯಾವುದೇ ಪತ್ರಕರ್ತರನ್ನು ಬಹಿಷ್ಕರಿಸಿಲ್ಲ: ಪವನ್ ಖೇರಾ ಸ್ಪಷ್ಟನೆ

- Advertisement -
- Advertisement -

INDIA ಒಕ್ಕೂಟದ ನಾಯಕರು 14 ಸುದ್ದಿ ನಿರೂಪಕರು ಆಯೋಜಿಸುವ ಟಿವಿ ಸಂವಾದ ಕಾರ್ಯಕ್ರಮಗಳನ್ನು ಬಹಿಷ್ಕರಿಸುವುದಾಗಿ ಬುಧವಾರ ಪ್ರಕಟಿಸಿತ್ತು. ಇದೀಗ ಕಾಂಗ್ರೆಸ್ ವಕ್ತಾರ ಪವನ್ ಖೇರಾ ಅವರು ಮೈತ್ರಿಕೂಟವು ಯಾವುದೇ ಪತ್ರಕರ್ತರನ್ನು ಬಹಿಷ್ಕರಿಸಿಲ್ಲ ಅಥವಾ ನಿಷೇಧಿಸಿಲ್ಲ ಎಂದು ಶನಿವಾರ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ”ಅವರು ನಮ್ಮ ಶತ್ರುಗಳಲ್ಲ … ಅವರು ತಮ್ಮ ವಿರುದ್ಧದ ನಿಲುವುಗಳನ್ನು ಹೊಂದಿರಬಹುದು ಆದರೆ ಯಾವುದೂ ಶಾಶ್ವತವಲ್ಲ… ಅವರು ಮಾಡುತ್ತಿರುವುದು ಭಾರತಕ್ಕೆ ಒಳ್ಳೆಯದಲ್ಲ ಎಂದು ಅವರು ಅರಿತುಕೊಂಡರೆ, ನಾವು ಮತ್ತೆ ಅವರ ಕಾರ್ಯಕ್ರಮಗಳಿಗೆ ಹಾಜರಾಗಲು ಪ್ರಾರಂಭಿಸುತ್ತೇವೆ” ಎಂದು ಹೇಳಿದರು.

ಆಡಳಿತಾರೂಢ ಬಿಜೆಪಿಗೆ ನಿಕಟವಾಗಿರುವ ಸುದ್ದಿ ನಿರೂಪಕರ ಪಟ್ಟಿಯನ್ನು ಒಕ್ಕೂಟವು ಬುಧವಾರ ಬಿಡುಗಡೆ ಮಾಡಿದ ನಂತರ ಕಾಂಗ್ರೆಸ್ ವಕ್ತಾರ ಪವನ್ ಖೇರಾ  ಈ ಮಾತುಗಳನ್ನು ಹೇಳಿದ್ದಾರೆ.

ಅದಿತಿ ತ್ಯಾಗಿ, ಅಮನ್ ಚೋಪ್ರಾ, ಅಮಿದ್ ದೇವಗನ್, ಆನಂದ್ ನರಸಿಂಹನ್, ಅರ್ನಾಬ್ ಗೋಸ್ವಾಮಿ, ಅಶೋಕ್ ಶ್ರೀವಾಸ್ತವ್, ಚಿತ್ರಾ ತ್ರಿಪಾಠಿ, ಗೌರವ್ ಸಾವಂತ್, ನಾವಿಕ ಕುಮಾರ್, ಪ್ರಾಚಿ ಪರಾಶರ್, ರುಬಿಕಾ ಲಿಯಾಕತ್, ಶಿವ ಆರೂರ್, ಸುಧೀರ್ ಚೌಧರಿ ಮತ್ತು ಸುಶಾಂತ್ ಸಿನ್ಹಾ ನಡೆಸಿಕೊಡುವ ದೂರದರ್ಶನ ಚರ್ಚೆಗಳಿಗೆ ತನ್ನ ಪ್ರತಿನಿಧಿಗಳನ್ನು ಕಳುಹಿಸುವುದಿಲ್ಲ ಎಂದು ಹೇಳಲಾಗಿತ್ತು.

ಈ ಬಗ್ಗೆ ಶುಕ್ರವಾರ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು, ”ಈ ಆಂಕರ್‌ಗಳು ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕಾಗಿ ”ಪ್ರಾಯೋಜಿತ ಪತ್ರಿಕೋದ್ಯಮ”ದಲ್ಲಿ ತೊಡಗಿಕೊಂಡಿದ್ದಾರೆ. ಹಾಗಾಗಿ INDIA ಒಕ್ಕೂಟವು ಈ ನಿರ್ಧಾರ ತೆಗೆದುಕೊಂಡಿದೆ” ಎಂದು ಹೇಳಿದರು.

”ಮಾಧ್ಯಮವು ಪ್ರಜಾಪ್ರಭುತ್ವದ ರಕ್ಷಕ, ಸರ್ಕಾರದ ತಪ್ಪುಗಳನ್ನು ಸರಿಪಡಿಸುವುದು ಮಾಧ್ಯಮಗಳ ಪಾತ್ರ ಮುಖ್ಯವಾಗಿರುತ್ತದೆ. ಅದೇ ರೀತಿ ಮಾಧ್ಯಮಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಪ್ರತಿಪಕ್ಷಗಳನ್ನು ಬೆಂಬಲಿಸುತ್ತಿದ್ದರು. ಆದರೆ ದುರದೃಷ್ಟವಶಾತ್, ಮಾಧ್ಯಮದ ಕೆಲವರು ಸರ್ಕಾರವನ್ನು ಬೆಂಬಲಿಸುತ್ತಿದ್ದಾರೆ ಮತ್ತು ಪ್ರತಿಪಕ್ಷವನ್ನು ನಾಶಪಡಿಸುತ್ತಿದ್ದಾರೆ” ಎಂದು ವೇಣುಗೋಪಾಲ್ ಹೇಳಿದ್ದರು.

INDIA ಒಕ್ಕೂಟದ ಈ ಕ್ರಮಕ್ಕೆ ಬಿಜೆಪಿ ಟೀಕೆ ಮಾಡಿತ್ತು. ಕಾಂಗ್ರೆಸ್ ”ತುರ್ತು ಕಾಲದ ಮನಸ್ಥಿತಿ” ಹೊಂದಿದೆ ಎಂದು ಆರೋಪಿಸಿತು.

ಇದನ್ನೂ ಓದಿ: ಅರ್ನಬ್ ಗೋಸ್ವಾಮಿ ಸೇರಿ 14 ಸುದ್ದಿ ನಿರೂಪಕರನ್ನು ಬಹಿಷ್ಕರಿಸಿದ I.N.D.I.A.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...