Homeಅಂತರಾಷ್ಟ್ರೀಯಕೆನಡಾದ ಸಾರ್ವತ್ರಿಕ ಚುನಾವಣೆಗೆ ಭಾರತದಿಂದ 'ಆಯ್ಧ ಅಭ್ಯರ್ಥಿಗಳಿಗೆ' ರಹಸ್ಯವಾಗಿ ಹಣಕಾಸಿನ ನೆರವು: ವರದಿ

ಕೆನಡಾದ ಸಾರ್ವತ್ರಿಕ ಚುನಾವಣೆಗೆ ಭಾರತದಿಂದ ‘ಆಯ್ಧ ಅಭ್ಯರ್ಥಿಗಳಿಗೆ’ ರಹಸ್ಯವಾಗಿ ಹಣಕಾಸಿನ ನೆರವು: ವರದಿ

- Advertisement -
- Advertisement -

2021ರ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಆಯ್ದ ಅಭ್ಯರ್ಥಿಗಳಿಗೆ ರಹಸ್ಯವಾಗಿ ಹಣಕಾಸಿನ ನೆರವು ನೀಡಲು ಭಾರತ ಸರ್ಕಾರವು ತನ್ನ ಪ್ರಾಕ್ಸಿ ಏಜೆಂಟ್‌ಗಳ ಮೂಲಕ ಪ್ರಯತ್ನಿಸಿರಬಹುದು ಎಂದು ಕೆನಡಾದಲ್ಲಿ ವಿದೇಶಿ ಹಸ್ತಕ್ಷೇಪದ ಕುರಿತು ತನಿಖೆ ನಡೆಸುತ್ತಿರುವ ಕೆನಡಾದ ವಿದೇಶಿ ಹಸ್ತಕ್ಷೇಪ ಆಯೋಗದ ವರದಿಯು ತಿಳಿಸಿದೆ.

ಕೆನಡಾದ ವಿದೇಶಿ ಹಸ್ತಕ್ಷೇಪ ಆಯೋಗದ ವರದಿಯು 2019 ಮತ್ತು 2021ರ ನಡುವೆ ಕೆನಡಾದಲ್ಲಿ ರಾಜಕೀಯ ಪ್ರಕ್ರಿಯೆಗಳಲ್ಲಿ ವಿದೇಶಿ ಹಸ್ತಕ್ಷೇಪದ ಘಟನೆಗಳನ್ನು ವಿವರಿಸುತ್ತದೆ. ವರದಿಯಲ್ಲಿ ಕೆನಡಾದ ರಾಜಕಾರಣಿಗಳು ಭಾರತದಿಂದ “ಅಕ್ರಮ ಆರ್ಥಿಕ ಬೆಂಬಲ” ವನ್ನು ಗೌಪ್ಯವಾಗಿ ಸ್ವೀಕರಿಸಿರುವ ಬಗ್ಗೆ ಉಲ್ಲೇಖಿತವಾಗಿದೆ.

ಸೆಕ್ಯೂರಿಟಿ ಆ್ಯಂಡ್ ಇಂಟೆಲಿಜನ್ಸ್ ಥ್ರೆಟ್ಸ್ ಟು ಎಲೆಕ್ಷನ್ಸ್ ಟಾಸ್ಕ್‌ಫೋರ್ಸ್ (ಎಸ್‌ಐಟಿಇ) ಚುನಾವಣೆಗೆ ಸಂಬಂಧಿಸಿದಂತೆ ಕೆಲವು ಕ್ಷೇತ್ರಗಳು ಮತ್ತು ಅಭ್ಯರ್ಥಿಗಳನ್ನು ಗುರಿಯಾಗಿಸಿಕೊಂಡು ವಿದೇಶಿ ಹಸ್ತಕ್ಷೇಪ ಚಟುವಟಿಕೆಗಳನ್ನು ಗಮನಿಸಿದೆ. ಇವುಗಳಲ್ಲಿ ಚೀನಾ ಹೆಚ್ಚು ಪಾಲು  ಹೊಂದಿದ್ದು, ಸ್ವಲ್ಪಮಟ್ಟಿಗೆ ಭಾರತ ಮತ್ತು ಪಾಕಿಸ್ತಾನದ ಕೈವಾಡ ಕಂಡು ಬಂದಿದೆ ಮತ್ತು ಇದನ್ನು ಏಜೆಂಟ್‌ಗಳ ಮೂಲಕ ನಡೆಸಲಾಗಿತ್ತು ಎಂದು ತಿಳಿಸಿದೆ. ಆದರೆ ಈ ಹಸ್ತಕ್ಷೇಪಗಳು ಕ್ರಿಮಿನಲ್ ತನಿಖೆಯನ್ನು ಅಗತ್ಯವಾಗಿಸುವ ಮಟ್ಟದಲ್ಲಿ ನಡೆದಿರಲಿಲ್ಲ ಎಂದು ವರದಿ ಹೇಳಿದೆ.

ತಿಂಗಳ ಕಾಲ ಈ ಕುರಿತು ತನಿಖೆ ನಡೆಸಲಾಗಿದ್ದು, 21 ದಿನಗಳ ವಿಚಾರಣೆಯ ಸಮಯದಲ್ಲಿ 60ಕ್ಕೂ ಹೆಚ್ಚು ಸಾಕ್ಷಿಗಳ ವಿಚಾರಣೆ ಬಳಿಕ ‘ಫೆಡರಲ್ ಚುನಾವಣಾ ಪ್ರಕ್ರಿಯೆಗಳು ಮತ್ತು ಪ್ರಜಾಪ್ರಭುತ್ವ ಸಂಸ್ಥೆಗಳಲ್ಲಿ ವಿದೇಶಿ ಹಸ್ತಕ್ಷೇಪದ ಸಾರ್ವಜನಿಕ ವಿಚಾರಣೆ’ ತನ್ನ ಆರಂಭಿಕ ವರದಿಯನ್ನು ಬಿಡುಗಡೆ ಮಾಡಿದೆ, ಇದು 2019 ಮತ್ತು 2021ರ ಚುನಾವಣೆಗಳಲ್ಲಿ ವಿದೇಶಿ ಹಸ್ತಕ್ಷೇಪವನ್ನು ಕೇಂದ್ರೀಕರಿಸಿ ತನಿಖೆಯನ್ನು ನಡೆಸಿ ವರದಿಯನ್ನು ಸಿದ್ದಪಡಿಸಿದೆ.

ಸಂಶೋಧನೆಯ ಪ್ರಕಾರ, ಕೆನಡಾದಲ್ಲಿ ದಕ್ಷಿಣ ಏಶ್ಯನ್ ಸಮುದಾಯಕ್ಕೆ ಸೇರಿದವರು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಕೆನಡಾದಲ್ಲಿ ಭಾರತವು ಹಿತಾಸಕ್ತಿಯನ್ನು ಹೊಂದಿದೆ. ಆ ದೇಶದಲ್ಲಿರುವ ಖಲಿಸ್ತಾನಿ ಬೆಂಬಲಿಗರ ವಿಷಯದಲ್ಲಿ ಕೆನಡಾದ ನಿಲುವನ್ನು ಭಾರತದ ಹಿತಾಸಕ್ತಿಗೆ ಅನುಗುಣವಾಗಿಸುವ ಉದ್ದೇಶವನ್ನು ಈ ಹಸ್ತಕ್ಷೇಪವು ಹೊಂದಿದೆ ಎಂದು ವರದಿಯು ಹೇಳಿದೆ. ದಕ್ಷಿಣ ಏಷ್ಯಾದ ಸಮುದಾಯದ ಕೆಲವು ಸದಸ್ಯರನ್ನು ಭಾರತ ಸರ್ಕಾರವು ಭಾರತ ವಿರೋಧಿ ಭಾವನೆಯನ್ನು ಪ್ರೋತ್ಸಾಹಿಸುತ್ತಿದೆ ಎಂದು ನೋಡುತ್ತದೆ. ಖಾಲಿಸ್ತಾನಿ ಪ್ರತ್ಯೇಕತಾವಾದದೊಂದಿಗೆ ಸೇರಿದವರನ್ನು ಭಾರತಕ್ಕೆ ಬೆದರಿಕೆ ಎಂದು ಭಾರತವು ನೋಡುತ್ತದೆ ಎಂದು ವರದಿ ಹೇಳಿದೆ.

ವರದಿಯ ಪ್ರಕಾರ, ಭಾರತವು ತನ್ನ ವಿದೇಶಿ ಹಸ್ತಕ್ಷೇಪದಿಂದ ಇಂಡೋ-ಕೆನಡಿಯನ್ ಸಮುದಾಯದ ಸದಸ್ಯರನ್ನು ಗುರಿಯಾಗಿಸುವ ಜೊತೆಗೆ ಇಂಡೋ-ಕೆನಡಿಯನ್ನರಲ್ಲದವರನ್ನು ಕೂಡ ಗುರಿಯಾಗಿಸುತ್ತದೆ. ಈ ಕ್ರಮಗಳು ಕೆನಡಾದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲೆ ನೇರವಾಗಿ ಪ್ರಭಾವ ಬೀರುವ ಉದ್ದೇಶವನ್ನು ಹೊಂದಿರದಿದ್ದರೂ, ಅವು ಆತಂಕಕಾರಿಯಾಗಿವೆ ಎಂದು ವರದಿ ಹೇಳಿದೆ.

ಸಿಖ್ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾಗಿಯಾಗಿರುವ ಶಂಕೆಯ ಮೇಲೆ ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸರು ಮೂವರು ಭಾರತೀಯರಾದ ಕರಣ್‌ಪ್ರೀತ್ ಸಿಂಗ್, ಕಮಲ್‌ಪ್ರೀತ್ ಸಿಂಗ್ ಮತ್ತು ಕರಣ್ ಬ್ರಾರ್ ಅವರನ್ನು ಆಲ್ಬರ್ಟಾದ ಎಡ್ಮಂಟನ್‌ನಿಂದ ಬಂಧಿಸಿದ್ದಾರೆ. ಇದರ ಬೆನ್ನಲ್ಲಿ ಈ ಹಸ್ತಕ್ಷೇಪದ ವರದಿ ಹೊರ ಬಿದ್ದಿದೆ.

ಇದನ್ನು ಓದಿ: ರೋಹಿತ್ ವೇಮುಲಾ ಪ್ರಕರಣ: ಪೊಲೀಸರ ವರದಿ ಸಂಪೂರ್ಣವಾಗಿ ಸುಳ್ಳಿನಿಂದ ಕೂಡಿದೆ; ಪ್ರತಿಕ್ರಿಯಿಸಿದ ಕುಟುಂಬ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....