Homeಅಂತರಾಷ್ಟ್ರೀಯಕೆನಡಾದ ಸಾರ್ವತ್ರಿಕ ಚುನಾವಣೆಗೆ ಭಾರತದಿಂದ 'ಆಯ್ಧ ಅಭ್ಯರ್ಥಿಗಳಿಗೆ' ರಹಸ್ಯವಾಗಿ ಹಣಕಾಸಿನ ನೆರವು: ವರದಿ

ಕೆನಡಾದ ಸಾರ್ವತ್ರಿಕ ಚುನಾವಣೆಗೆ ಭಾರತದಿಂದ ‘ಆಯ್ಧ ಅಭ್ಯರ್ಥಿಗಳಿಗೆ’ ರಹಸ್ಯವಾಗಿ ಹಣಕಾಸಿನ ನೆರವು: ವರದಿ

- Advertisement -
- Advertisement -

2021ರ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಆಯ್ದ ಅಭ್ಯರ್ಥಿಗಳಿಗೆ ರಹಸ್ಯವಾಗಿ ಹಣಕಾಸಿನ ನೆರವು ನೀಡಲು ಭಾರತ ಸರ್ಕಾರವು ತನ್ನ ಪ್ರಾಕ್ಸಿ ಏಜೆಂಟ್‌ಗಳ ಮೂಲಕ ಪ್ರಯತ್ನಿಸಿರಬಹುದು ಎಂದು ಕೆನಡಾದಲ್ಲಿ ವಿದೇಶಿ ಹಸ್ತಕ್ಷೇಪದ ಕುರಿತು ತನಿಖೆ ನಡೆಸುತ್ತಿರುವ ಕೆನಡಾದ ವಿದೇಶಿ ಹಸ್ತಕ್ಷೇಪ ಆಯೋಗದ ವರದಿಯು ತಿಳಿಸಿದೆ.

ಕೆನಡಾದ ವಿದೇಶಿ ಹಸ್ತಕ್ಷೇಪ ಆಯೋಗದ ವರದಿಯು 2019 ಮತ್ತು 2021ರ ನಡುವೆ ಕೆನಡಾದಲ್ಲಿ ರಾಜಕೀಯ ಪ್ರಕ್ರಿಯೆಗಳಲ್ಲಿ ವಿದೇಶಿ ಹಸ್ತಕ್ಷೇಪದ ಘಟನೆಗಳನ್ನು ವಿವರಿಸುತ್ತದೆ. ವರದಿಯಲ್ಲಿ ಕೆನಡಾದ ರಾಜಕಾರಣಿಗಳು ಭಾರತದಿಂದ “ಅಕ್ರಮ ಆರ್ಥಿಕ ಬೆಂಬಲ” ವನ್ನು ಗೌಪ್ಯವಾಗಿ ಸ್ವೀಕರಿಸಿರುವ ಬಗ್ಗೆ ಉಲ್ಲೇಖಿತವಾಗಿದೆ.

ಸೆಕ್ಯೂರಿಟಿ ಆ್ಯಂಡ್ ಇಂಟೆಲಿಜನ್ಸ್ ಥ್ರೆಟ್ಸ್ ಟು ಎಲೆಕ್ಷನ್ಸ್ ಟಾಸ್ಕ್‌ಫೋರ್ಸ್ (ಎಸ್‌ಐಟಿಇ) ಚುನಾವಣೆಗೆ ಸಂಬಂಧಿಸಿದಂತೆ ಕೆಲವು ಕ್ಷೇತ್ರಗಳು ಮತ್ತು ಅಭ್ಯರ್ಥಿಗಳನ್ನು ಗುರಿಯಾಗಿಸಿಕೊಂಡು ವಿದೇಶಿ ಹಸ್ತಕ್ಷೇಪ ಚಟುವಟಿಕೆಗಳನ್ನು ಗಮನಿಸಿದೆ. ಇವುಗಳಲ್ಲಿ ಚೀನಾ ಹೆಚ್ಚು ಪಾಲು  ಹೊಂದಿದ್ದು, ಸ್ವಲ್ಪಮಟ್ಟಿಗೆ ಭಾರತ ಮತ್ತು ಪಾಕಿಸ್ತಾನದ ಕೈವಾಡ ಕಂಡು ಬಂದಿದೆ ಮತ್ತು ಇದನ್ನು ಏಜೆಂಟ್‌ಗಳ ಮೂಲಕ ನಡೆಸಲಾಗಿತ್ತು ಎಂದು ತಿಳಿಸಿದೆ. ಆದರೆ ಈ ಹಸ್ತಕ್ಷೇಪಗಳು ಕ್ರಿಮಿನಲ್ ತನಿಖೆಯನ್ನು ಅಗತ್ಯವಾಗಿಸುವ ಮಟ್ಟದಲ್ಲಿ ನಡೆದಿರಲಿಲ್ಲ ಎಂದು ವರದಿ ಹೇಳಿದೆ.

ತಿಂಗಳ ಕಾಲ ಈ ಕುರಿತು ತನಿಖೆ ನಡೆಸಲಾಗಿದ್ದು, 21 ದಿನಗಳ ವಿಚಾರಣೆಯ ಸಮಯದಲ್ಲಿ 60ಕ್ಕೂ ಹೆಚ್ಚು ಸಾಕ್ಷಿಗಳ ವಿಚಾರಣೆ ಬಳಿಕ ‘ಫೆಡರಲ್ ಚುನಾವಣಾ ಪ್ರಕ್ರಿಯೆಗಳು ಮತ್ತು ಪ್ರಜಾಪ್ರಭುತ್ವ ಸಂಸ್ಥೆಗಳಲ್ಲಿ ವಿದೇಶಿ ಹಸ್ತಕ್ಷೇಪದ ಸಾರ್ವಜನಿಕ ವಿಚಾರಣೆ’ ತನ್ನ ಆರಂಭಿಕ ವರದಿಯನ್ನು ಬಿಡುಗಡೆ ಮಾಡಿದೆ, ಇದು 2019 ಮತ್ತು 2021ರ ಚುನಾವಣೆಗಳಲ್ಲಿ ವಿದೇಶಿ ಹಸ್ತಕ್ಷೇಪವನ್ನು ಕೇಂದ್ರೀಕರಿಸಿ ತನಿಖೆಯನ್ನು ನಡೆಸಿ ವರದಿಯನ್ನು ಸಿದ್ದಪಡಿಸಿದೆ.

ಸಂಶೋಧನೆಯ ಪ್ರಕಾರ, ಕೆನಡಾದಲ್ಲಿ ದಕ್ಷಿಣ ಏಶ್ಯನ್ ಸಮುದಾಯಕ್ಕೆ ಸೇರಿದವರು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಕೆನಡಾದಲ್ಲಿ ಭಾರತವು ಹಿತಾಸಕ್ತಿಯನ್ನು ಹೊಂದಿದೆ. ಆ ದೇಶದಲ್ಲಿರುವ ಖಲಿಸ್ತಾನಿ ಬೆಂಬಲಿಗರ ವಿಷಯದಲ್ಲಿ ಕೆನಡಾದ ನಿಲುವನ್ನು ಭಾರತದ ಹಿತಾಸಕ್ತಿಗೆ ಅನುಗುಣವಾಗಿಸುವ ಉದ್ದೇಶವನ್ನು ಈ ಹಸ್ತಕ್ಷೇಪವು ಹೊಂದಿದೆ ಎಂದು ವರದಿಯು ಹೇಳಿದೆ. ದಕ್ಷಿಣ ಏಷ್ಯಾದ ಸಮುದಾಯದ ಕೆಲವು ಸದಸ್ಯರನ್ನು ಭಾರತ ಸರ್ಕಾರವು ಭಾರತ ವಿರೋಧಿ ಭಾವನೆಯನ್ನು ಪ್ರೋತ್ಸಾಹಿಸುತ್ತಿದೆ ಎಂದು ನೋಡುತ್ತದೆ. ಖಾಲಿಸ್ತಾನಿ ಪ್ರತ್ಯೇಕತಾವಾದದೊಂದಿಗೆ ಸೇರಿದವರನ್ನು ಭಾರತಕ್ಕೆ ಬೆದರಿಕೆ ಎಂದು ಭಾರತವು ನೋಡುತ್ತದೆ ಎಂದು ವರದಿ ಹೇಳಿದೆ.

ವರದಿಯ ಪ್ರಕಾರ, ಭಾರತವು ತನ್ನ ವಿದೇಶಿ ಹಸ್ತಕ್ಷೇಪದಿಂದ ಇಂಡೋ-ಕೆನಡಿಯನ್ ಸಮುದಾಯದ ಸದಸ್ಯರನ್ನು ಗುರಿಯಾಗಿಸುವ ಜೊತೆಗೆ ಇಂಡೋ-ಕೆನಡಿಯನ್ನರಲ್ಲದವರನ್ನು ಕೂಡ ಗುರಿಯಾಗಿಸುತ್ತದೆ. ಈ ಕ್ರಮಗಳು ಕೆನಡಾದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲೆ ನೇರವಾಗಿ ಪ್ರಭಾವ ಬೀರುವ ಉದ್ದೇಶವನ್ನು ಹೊಂದಿರದಿದ್ದರೂ, ಅವು ಆತಂಕಕಾರಿಯಾಗಿವೆ ಎಂದು ವರದಿ ಹೇಳಿದೆ.

ಸಿಖ್ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾಗಿಯಾಗಿರುವ ಶಂಕೆಯ ಮೇಲೆ ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸರು ಮೂವರು ಭಾರತೀಯರಾದ ಕರಣ್‌ಪ್ರೀತ್ ಸಿಂಗ್, ಕಮಲ್‌ಪ್ರೀತ್ ಸಿಂಗ್ ಮತ್ತು ಕರಣ್ ಬ್ರಾರ್ ಅವರನ್ನು ಆಲ್ಬರ್ಟಾದ ಎಡ್ಮಂಟನ್‌ನಿಂದ ಬಂಧಿಸಿದ್ದಾರೆ. ಇದರ ಬೆನ್ನಲ್ಲಿ ಈ ಹಸ್ತಕ್ಷೇಪದ ವರದಿ ಹೊರ ಬಿದ್ದಿದೆ.

ಇದನ್ನು ಓದಿ: ರೋಹಿತ್ ವೇಮುಲಾ ಪ್ರಕರಣ: ಪೊಲೀಸರ ವರದಿ ಸಂಪೂರ್ಣವಾಗಿ ಸುಳ್ಳಿನಿಂದ ಕೂಡಿದೆ; ಪ್ರತಿಕ್ರಿಯಿಸಿದ ಕುಟುಂಬ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...