Homeಅಂತರಾಷ್ಟ್ರೀಯಕೆನಡಾದ ಸಾರ್ವತ್ರಿಕ ಚುನಾವಣೆಗೆ ಭಾರತದಿಂದ 'ಆಯ್ಧ ಅಭ್ಯರ್ಥಿಗಳಿಗೆ' ರಹಸ್ಯವಾಗಿ ಹಣಕಾಸಿನ ನೆರವು: ವರದಿ

ಕೆನಡಾದ ಸಾರ್ವತ್ರಿಕ ಚುನಾವಣೆಗೆ ಭಾರತದಿಂದ ‘ಆಯ್ಧ ಅಭ್ಯರ್ಥಿಗಳಿಗೆ’ ರಹಸ್ಯವಾಗಿ ಹಣಕಾಸಿನ ನೆರವು: ವರದಿ

- Advertisement -
- Advertisement -

2021ರ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಆಯ್ದ ಅಭ್ಯರ್ಥಿಗಳಿಗೆ ರಹಸ್ಯವಾಗಿ ಹಣಕಾಸಿನ ನೆರವು ನೀಡಲು ಭಾರತ ಸರ್ಕಾರವು ತನ್ನ ಪ್ರಾಕ್ಸಿ ಏಜೆಂಟ್‌ಗಳ ಮೂಲಕ ಪ್ರಯತ್ನಿಸಿರಬಹುದು ಎಂದು ಕೆನಡಾದಲ್ಲಿ ವಿದೇಶಿ ಹಸ್ತಕ್ಷೇಪದ ಕುರಿತು ತನಿಖೆ ನಡೆಸುತ್ತಿರುವ ಕೆನಡಾದ ವಿದೇಶಿ ಹಸ್ತಕ್ಷೇಪ ಆಯೋಗದ ವರದಿಯು ತಿಳಿಸಿದೆ.

ಕೆನಡಾದ ವಿದೇಶಿ ಹಸ್ತಕ್ಷೇಪ ಆಯೋಗದ ವರದಿಯು 2019 ಮತ್ತು 2021ರ ನಡುವೆ ಕೆನಡಾದಲ್ಲಿ ರಾಜಕೀಯ ಪ್ರಕ್ರಿಯೆಗಳಲ್ಲಿ ವಿದೇಶಿ ಹಸ್ತಕ್ಷೇಪದ ಘಟನೆಗಳನ್ನು ವಿವರಿಸುತ್ತದೆ. ವರದಿಯಲ್ಲಿ ಕೆನಡಾದ ರಾಜಕಾರಣಿಗಳು ಭಾರತದಿಂದ “ಅಕ್ರಮ ಆರ್ಥಿಕ ಬೆಂಬಲ” ವನ್ನು ಗೌಪ್ಯವಾಗಿ ಸ್ವೀಕರಿಸಿರುವ ಬಗ್ಗೆ ಉಲ್ಲೇಖಿತವಾಗಿದೆ.

ಸೆಕ್ಯೂರಿಟಿ ಆ್ಯಂಡ್ ಇಂಟೆಲಿಜನ್ಸ್ ಥ್ರೆಟ್ಸ್ ಟು ಎಲೆಕ್ಷನ್ಸ್ ಟಾಸ್ಕ್‌ಫೋರ್ಸ್ (ಎಸ್‌ಐಟಿಇ) ಚುನಾವಣೆಗೆ ಸಂಬಂಧಿಸಿದಂತೆ ಕೆಲವು ಕ್ಷೇತ್ರಗಳು ಮತ್ತು ಅಭ್ಯರ್ಥಿಗಳನ್ನು ಗುರಿಯಾಗಿಸಿಕೊಂಡು ವಿದೇಶಿ ಹಸ್ತಕ್ಷೇಪ ಚಟುವಟಿಕೆಗಳನ್ನು ಗಮನಿಸಿದೆ. ಇವುಗಳಲ್ಲಿ ಚೀನಾ ಹೆಚ್ಚು ಪಾಲು  ಹೊಂದಿದ್ದು, ಸ್ವಲ್ಪಮಟ್ಟಿಗೆ ಭಾರತ ಮತ್ತು ಪಾಕಿಸ್ತಾನದ ಕೈವಾಡ ಕಂಡು ಬಂದಿದೆ ಮತ್ತು ಇದನ್ನು ಏಜೆಂಟ್‌ಗಳ ಮೂಲಕ ನಡೆಸಲಾಗಿತ್ತು ಎಂದು ತಿಳಿಸಿದೆ. ಆದರೆ ಈ ಹಸ್ತಕ್ಷೇಪಗಳು ಕ್ರಿಮಿನಲ್ ತನಿಖೆಯನ್ನು ಅಗತ್ಯವಾಗಿಸುವ ಮಟ್ಟದಲ್ಲಿ ನಡೆದಿರಲಿಲ್ಲ ಎಂದು ವರದಿ ಹೇಳಿದೆ.

ತಿಂಗಳ ಕಾಲ ಈ ಕುರಿತು ತನಿಖೆ ನಡೆಸಲಾಗಿದ್ದು, 21 ದಿನಗಳ ವಿಚಾರಣೆಯ ಸಮಯದಲ್ಲಿ 60ಕ್ಕೂ ಹೆಚ್ಚು ಸಾಕ್ಷಿಗಳ ವಿಚಾರಣೆ ಬಳಿಕ ‘ಫೆಡರಲ್ ಚುನಾವಣಾ ಪ್ರಕ್ರಿಯೆಗಳು ಮತ್ತು ಪ್ರಜಾಪ್ರಭುತ್ವ ಸಂಸ್ಥೆಗಳಲ್ಲಿ ವಿದೇಶಿ ಹಸ್ತಕ್ಷೇಪದ ಸಾರ್ವಜನಿಕ ವಿಚಾರಣೆ’ ತನ್ನ ಆರಂಭಿಕ ವರದಿಯನ್ನು ಬಿಡುಗಡೆ ಮಾಡಿದೆ, ಇದು 2019 ಮತ್ತು 2021ರ ಚುನಾವಣೆಗಳಲ್ಲಿ ವಿದೇಶಿ ಹಸ್ತಕ್ಷೇಪವನ್ನು ಕೇಂದ್ರೀಕರಿಸಿ ತನಿಖೆಯನ್ನು ನಡೆಸಿ ವರದಿಯನ್ನು ಸಿದ್ದಪಡಿಸಿದೆ.

ಸಂಶೋಧನೆಯ ಪ್ರಕಾರ, ಕೆನಡಾದಲ್ಲಿ ದಕ್ಷಿಣ ಏಶ್ಯನ್ ಸಮುದಾಯಕ್ಕೆ ಸೇರಿದವರು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಕೆನಡಾದಲ್ಲಿ ಭಾರತವು ಹಿತಾಸಕ್ತಿಯನ್ನು ಹೊಂದಿದೆ. ಆ ದೇಶದಲ್ಲಿರುವ ಖಲಿಸ್ತಾನಿ ಬೆಂಬಲಿಗರ ವಿಷಯದಲ್ಲಿ ಕೆನಡಾದ ನಿಲುವನ್ನು ಭಾರತದ ಹಿತಾಸಕ್ತಿಗೆ ಅನುಗುಣವಾಗಿಸುವ ಉದ್ದೇಶವನ್ನು ಈ ಹಸ್ತಕ್ಷೇಪವು ಹೊಂದಿದೆ ಎಂದು ವರದಿಯು ಹೇಳಿದೆ. ದಕ್ಷಿಣ ಏಷ್ಯಾದ ಸಮುದಾಯದ ಕೆಲವು ಸದಸ್ಯರನ್ನು ಭಾರತ ಸರ್ಕಾರವು ಭಾರತ ವಿರೋಧಿ ಭಾವನೆಯನ್ನು ಪ್ರೋತ್ಸಾಹಿಸುತ್ತಿದೆ ಎಂದು ನೋಡುತ್ತದೆ. ಖಾಲಿಸ್ತಾನಿ ಪ್ರತ್ಯೇಕತಾವಾದದೊಂದಿಗೆ ಸೇರಿದವರನ್ನು ಭಾರತಕ್ಕೆ ಬೆದರಿಕೆ ಎಂದು ಭಾರತವು ನೋಡುತ್ತದೆ ಎಂದು ವರದಿ ಹೇಳಿದೆ.

ವರದಿಯ ಪ್ರಕಾರ, ಭಾರತವು ತನ್ನ ವಿದೇಶಿ ಹಸ್ತಕ್ಷೇಪದಿಂದ ಇಂಡೋ-ಕೆನಡಿಯನ್ ಸಮುದಾಯದ ಸದಸ್ಯರನ್ನು ಗುರಿಯಾಗಿಸುವ ಜೊತೆಗೆ ಇಂಡೋ-ಕೆನಡಿಯನ್ನರಲ್ಲದವರನ್ನು ಕೂಡ ಗುರಿಯಾಗಿಸುತ್ತದೆ. ಈ ಕ್ರಮಗಳು ಕೆನಡಾದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲೆ ನೇರವಾಗಿ ಪ್ರಭಾವ ಬೀರುವ ಉದ್ದೇಶವನ್ನು ಹೊಂದಿರದಿದ್ದರೂ, ಅವು ಆತಂಕಕಾರಿಯಾಗಿವೆ ಎಂದು ವರದಿ ಹೇಳಿದೆ.

ಸಿಖ್ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾಗಿಯಾಗಿರುವ ಶಂಕೆಯ ಮೇಲೆ ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸರು ಮೂವರು ಭಾರತೀಯರಾದ ಕರಣ್‌ಪ್ರೀತ್ ಸಿಂಗ್, ಕಮಲ್‌ಪ್ರೀತ್ ಸಿಂಗ್ ಮತ್ತು ಕರಣ್ ಬ್ರಾರ್ ಅವರನ್ನು ಆಲ್ಬರ್ಟಾದ ಎಡ್ಮಂಟನ್‌ನಿಂದ ಬಂಧಿಸಿದ್ದಾರೆ. ಇದರ ಬೆನ್ನಲ್ಲಿ ಈ ಹಸ್ತಕ್ಷೇಪದ ವರದಿ ಹೊರ ಬಿದ್ದಿದೆ.

ಇದನ್ನು ಓದಿ: ರೋಹಿತ್ ವೇಮುಲಾ ಪ್ರಕರಣ: ಪೊಲೀಸರ ವರದಿ ಸಂಪೂರ್ಣವಾಗಿ ಸುಳ್ಳಿನಿಂದ ಕೂಡಿದೆ; ಪ್ರತಿಕ್ರಿಯಿಸಿದ ಕುಟುಂಬ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...