Homeಅಂತರಾಷ್ಟ್ರೀಯಕೆನಡಾದ ಸಾರ್ವತ್ರಿಕ ಚುನಾವಣೆಗೆ ಭಾರತದಿಂದ 'ಆಯ್ಧ ಅಭ್ಯರ್ಥಿಗಳಿಗೆ' ರಹಸ್ಯವಾಗಿ ಹಣಕಾಸಿನ ನೆರವು: ವರದಿ

ಕೆನಡಾದ ಸಾರ್ವತ್ರಿಕ ಚುನಾವಣೆಗೆ ಭಾರತದಿಂದ ‘ಆಯ್ಧ ಅಭ್ಯರ್ಥಿಗಳಿಗೆ’ ರಹಸ್ಯವಾಗಿ ಹಣಕಾಸಿನ ನೆರವು: ವರದಿ

- Advertisement -
- Advertisement -

2021ರ ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಆಯ್ದ ಅಭ್ಯರ್ಥಿಗಳಿಗೆ ರಹಸ್ಯವಾಗಿ ಹಣಕಾಸಿನ ನೆರವು ನೀಡಲು ಭಾರತ ಸರ್ಕಾರವು ತನ್ನ ಪ್ರಾಕ್ಸಿ ಏಜೆಂಟ್‌ಗಳ ಮೂಲಕ ಪ್ರಯತ್ನಿಸಿರಬಹುದು ಎಂದು ಕೆನಡಾದಲ್ಲಿ ವಿದೇಶಿ ಹಸ್ತಕ್ಷೇಪದ ಕುರಿತು ತನಿಖೆ ನಡೆಸುತ್ತಿರುವ ಕೆನಡಾದ ವಿದೇಶಿ ಹಸ್ತಕ್ಷೇಪ ಆಯೋಗದ ವರದಿಯು ತಿಳಿಸಿದೆ.

ಕೆನಡಾದ ವಿದೇಶಿ ಹಸ್ತಕ್ಷೇಪ ಆಯೋಗದ ವರದಿಯು 2019 ಮತ್ತು 2021ರ ನಡುವೆ ಕೆನಡಾದಲ್ಲಿ ರಾಜಕೀಯ ಪ್ರಕ್ರಿಯೆಗಳಲ್ಲಿ ವಿದೇಶಿ ಹಸ್ತಕ್ಷೇಪದ ಘಟನೆಗಳನ್ನು ವಿವರಿಸುತ್ತದೆ. ವರದಿಯಲ್ಲಿ ಕೆನಡಾದ ರಾಜಕಾರಣಿಗಳು ಭಾರತದಿಂದ “ಅಕ್ರಮ ಆರ್ಥಿಕ ಬೆಂಬಲ” ವನ್ನು ಗೌಪ್ಯವಾಗಿ ಸ್ವೀಕರಿಸಿರುವ ಬಗ್ಗೆ ಉಲ್ಲೇಖಿತವಾಗಿದೆ.

ಸೆಕ್ಯೂರಿಟಿ ಆ್ಯಂಡ್ ಇಂಟೆಲಿಜನ್ಸ್ ಥ್ರೆಟ್ಸ್ ಟು ಎಲೆಕ್ಷನ್ಸ್ ಟಾಸ್ಕ್‌ಫೋರ್ಸ್ (ಎಸ್‌ಐಟಿಇ) ಚುನಾವಣೆಗೆ ಸಂಬಂಧಿಸಿದಂತೆ ಕೆಲವು ಕ್ಷೇತ್ರಗಳು ಮತ್ತು ಅಭ್ಯರ್ಥಿಗಳನ್ನು ಗುರಿಯಾಗಿಸಿಕೊಂಡು ವಿದೇಶಿ ಹಸ್ತಕ್ಷೇಪ ಚಟುವಟಿಕೆಗಳನ್ನು ಗಮನಿಸಿದೆ. ಇವುಗಳಲ್ಲಿ ಚೀನಾ ಹೆಚ್ಚು ಪಾಲು  ಹೊಂದಿದ್ದು, ಸ್ವಲ್ಪಮಟ್ಟಿಗೆ ಭಾರತ ಮತ್ತು ಪಾಕಿಸ್ತಾನದ ಕೈವಾಡ ಕಂಡು ಬಂದಿದೆ ಮತ್ತು ಇದನ್ನು ಏಜೆಂಟ್‌ಗಳ ಮೂಲಕ ನಡೆಸಲಾಗಿತ್ತು ಎಂದು ತಿಳಿಸಿದೆ. ಆದರೆ ಈ ಹಸ್ತಕ್ಷೇಪಗಳು ಕ್ರಿಮಿನಲ್ ತನಿಖೆಯನ್ನು ಅಗತ್ಯವಾಗಿಸುವ ಮಟ್ಟದಲ್ಲಿ ನಡೆದಿರಲಿಲ್ಲ ಎಂದು ವರದಿ ಹೇಳಿದೆ.

ತಿಂಗಳ ಕಾಲ ಈ ಕುರಿತು ತನಿಖೆ ನಡೆಸಲಾಗಿದ್ದು, 21 ದಿನಗಳ ವಿಚಾರಣೆಯ ಸಮಯದಲ್ಲಿ 60ಕ್ಕೂ ಹೆಚ್ಚು ಸಾಕ್ಷಿಗಳ ವಿಚಾರಣೆ ಬಳಿಕ ‘ಫೆಡರಲ್ ಚುನಾವಣಾ ಪ್ರಕ್ರಿಯೆಗಳು ಮತ್ತು ಪ್ರಜಾಪ್ರಭುತ್ವ ಸಂಸ್ಥೆಗಳಲ್ಲಿ ವಿದೇಶಿ ಹಸ್ತಕ್ಷೇಪದ ಸಾರ್ವಜನಿಕ ವಿಚಾರಣೆ’ ತನ್ನ ಆರಂಭಿಕ ವರದಿಯನ್ನು ಬಿಡುಗಡೆ ಮಾಡಿದೆ, ಇದು 2019 ಮತ್ತು 2021ರ ಚುನಾವಣೆಗಳಲ್ಲಿ ವಿದೇಶಿ ಹಸ್ತಕ್ಷೇಪವನ್ನು ಕೇಂದ್ರೀಕರಿಸಿ ತನಿಖೆಯನ್ನು ನಡೆಸಿ ವರದಿಯನ್ನು ಸಿದ್ದಪಡಿಸಿದೆ.

ಸಂಶೋಧನೆಯ ಪ್ರಕಾರ, ಕೆನಡಾದಲ್ಲಿ ದಕ್ಷಿಣ ಏಶ್ಯನ್ ಸಮುದಾಯಕ್ಕೆ ಸೇರಿದವರು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಕೆನಡಾದಲ್ಲಿ ಭಾರತವು ಹಿತಾಸಕ್ತಿಯನ್ನು ಹೊಂದಿದೆ. ಆ ದೇಶದಲ್ಲಿರುವ ಖಲಿಸ್ತಾನಿ ಬೆಂಬಲಿಗರ ವಿಷಯದಲ್ಲಿ ಕೆನಡಾದ ನಿಲುವನ್ನು ಭಾರತದ ಹಿತಾಸಕ್ತಿಗೆ ಅನುಗುಣವಾಗಿಸುವ ಉದ್ದೇಶವನ್ನು ಈ ಹಸ್ತಕ್ಷೇಪವು ಹೊಂದಿದೆ ಎಂದು ವರದಿಯು ಹೇಳಿದೆ. ದಕ್ಷಿಣ ಏಷ್ಯಾದ ಸಮುದಾಯದ ಕೆಲವು ಸದಸ್ಯರನ್ನು ಭಾರತ ಸರ್ಕಾರವು ಭಾರತ ವಿರೋಧಿ ಭಾವನೆಯನ್ನು ಪ್ರೋತ್ಸಾಹಿಸುತ್ತಿದೆ ಎಂದು ನೋಡುತ್ತದೆ. ಖಾಲಿಸ್ತಾನಿ ಪ್ರತ್ಯೇಕತಾವಾದದೊಂದಿಗೆ ಸೇರಿದವರನ್ನು ಭಾರತಕ್ಕೆ ಬೆದರಿಕೆ ಎಂದು ಭಾರತವು ನೋಡುತ್ತದೆ ಎಂದು ವರದಿ ಹೇಳಿದೆ.

ವರದಿಯ ಪ್ರಕಾರ, ಭಾರತವು ತನ್ನ ವಿದೇಶಿ ಹಸ್ತಕ್ಷೇಪದಿಂದ ಇಂಡೋ-ಕೆನಡಿಯನ್ ಸಮುದಾಯದ ಸದಸ್ಯರನ್ನು ಗುರಿಯಾಗಿಸುವ ಜೊತೆಗೆ ಇಂಡೋ-ಕೆನಡಿಯನ್ನರಲ್ಲದವರನ್ನು ಕೂಡ ಗುರಿಯಾಗಿಸುತ್ತದೆ. ಈ ಕ್ರಮಗಳು ಕೆನಡಾದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲೆ ನೇರವಾಗಿ ಪ್ರಭಾವ ಬೀರುವ ಉದ್ದೇಶವನ್ನು ಹೊಂದಿರದಿದ್ದರೂ, ಅವು ಆತಂಕಕಾರಿಯಾಗಿವೆ ಎಂದು ವರದಿ ಹೇಳಿದೆ.

ಸಿಖ್ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾಗಿಯಾಗಿರುವ ಶಂಕೆಯ ಮೇಲೆ ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸರು ಮೂವರು ಭಾರತೀಯರಾದ ಕರಣ್‌ಪ್ರೀತ್ ಸಿಂಗ್, ಕಮಲ್‌ಪ್ರೀತ್ ಸಿಂಗ್ ಮತ್ತು ಕರಣ್ ಬ್ರಾರ್ ಅವರನ್ನು ಆಲ್ಬರ್ಟಾದ ಎಡ್ಮಂಟನ್‌ನಿಂದ ಬಂಧಿಸಿದ್ದಾರೆ. ಇದರ ಬೆನ್ನಲ್ಲಿ ಈ ಹಸ್ತಕ್ಷೇಪದ ವರದಿ ಹೊರ ಬಿದ್ದಿದೆ.

ಇದನ್ನು ಓದಿ: ರೋಹಿತ್ ವೇಮುಲಾ ಪ್ರಕರಣ: ಪೊಲೀಸರ ವರದಿ ಸಂಪೂರ್ಣವಾಗಿ ಸುಳ್ಳಿನಿಂದ ಕೂಡಿದೆ; ಪ್ರತಿಕ್ರಿಯಿಸಿದ ಕುಟುಂಬ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...