Homeಮುಖಪುಟಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್‌ಗೆ ಇಡಿ ಸಮನ್ಸ್

ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್‌ಗೆ ಇಡಿ ಸಮನ್ಸ್

- Advertisement -
- Advertisement -

ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್‌(ಹೆಚ್‌ಸಿಎ)ನಲ್ಲಿ ನಡೆದ ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಭಾರತ ತಂಡದ ಮಾಜಿ ನಾಯಕ, ಕಾಂಗ್ರೆಸ್ ರಾಜಕಾರಣಿ ಮೊಹಮ್ಮದ್ ಅಜರುದ್ದೀನ್‌ ಅವರಿಗೆ ವಿಚಾರಣೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ ಎಂದು ಗುರುವಾರ ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅಕ್ಟೋಬರ್ 3 ರಂದು ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಕೇಳಲಾಗಿದೆ ಎಂದು ಮೂಲಗಳು ಉಲ್ಲೇಖಿಸಿವೆ. ಆದರೆ ಅವರು ಇಡಿ ಮುಂದೆ ಹಾಜರಾಗಿಲ್ಲ ಮತ್ತು ಹೆಚ್ಚಿನ ಸಮಯ ಕೇಳಿದ್ದಾರೆ ಎಂದು ವರದಿಯಾಗಿದೆ. ಕಳೆದ ವರ್ಷ ನವೆಂಬರ್‌ನಲ್ಲಿ ಇಡಿ ದಾಖಲಿಸಿದ್ದ ಹೈದರಾಬಾದ್ ಕ್ರಿಕೆಟ್ ಅಸೋಸಿಯೇಷನ್‌(ಹೆಚ್‌ಸಿಎ)ನಲ್ಲಿನ ಹಣಕಾಸು ಅವ್ಯವಹಾರಗಳಿಗೆ ಸಂಬಂಧಿಸಿದಂತೆ ಈ ತನಿಖೆಯು ಸಂಬಂಧಿಸಿದೆ.

ಇದನ್ನೂಓದಿ: ‘136 ಸ್ಥಾನ ಗೆದ್ದು ಸಿಎಂ ಆದವರು ರಾಜೀನಾಮೆ ಕೊಡಲು ಆಗುತ್ತಾ..’; ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ ಜೆಡಿಎಸ್ ಹಿರಿಯ ಶಾಸಕ

ಹೆಚ್‌ಸಿಎಯ 20 ಕೋಟಿ ರೂಪಾಯಿಗಳ ಹಣ ಕ್ರಿಮಿನಲ್ ದುರುಪಯೋಗಕ್ಕೊಳಗಾಗಿದೆ ಎಂದು ಆರೋಪಿಸಿ ತೆಲಂಗಾಣ ಭ್ರಷ್ಟಾಚಾರ ವಿರೋಧಿ ಬ್ಯೂರೋ (ಎಸಿಬಿ) ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮೂರು ಎಫ್‌ಐಆರ್‌ಗಳು ದಾಖಲಿಸಿ ಚಾರ್ಜ್ ಶೀಟ್‌ ಸಲ್ಲಿಸಿತ್ತು. ಈ ಮೂರು ಎಫ್‌ಐಆರ್‌ಗಳನ್ನು ಆಧರಿಸಿ ಇಡಿ ತನಿಖೆಯನ್ನು ಪ್ರಾರಂಭಿಸಿತ್ತು.

ಎಚ್‌ಸಿಎ ಮಾಜಿ ಅಧ್ಯಕ್ಷರೂ ಆಗಿರುವ ಅಜರ್ 2019 ರಿಂದ 2022 ರವರೆಗೆ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪ ಹೊರಿಸಲಾಗಿದೆ. ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರಿಕೆಟ್ ಸ್ಟೇಡಿಯಂಗಾಗಿ ಡೀಸೆಲ್ ಜನರೇಟರ್‌ಗಳು, ಅಗ್ನಿಶಾಮಕ ವ್ಯವಸ್ಥೆಗಳು ಮತ್ತು ಕ್ಯಾನೋಪಿಗಳ ಖರೀದಿಗೆ ಮಂಜೂರು ಮಾಡಿದ 20 ಕೋಟಿಯನ್ನು ದುರುಪಯೋಗಪಡಿಸಲಾಗಿದೆ ಎಂದು ಆರೋಪಿಸಲಾಗಿದೆ.

ಹೆಚ್‌ಸಿಎ ಪದಾಧಿಕಾರಿಗಳಾದ, ಅದರ ಆಗಿನ ಕಾರ್ಯದರ್ಶಿ, ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಇತರ ಖಾಸಗಿ ಜನರೊಂದಿಗೆ ಸೇರಿ ಏಕಪಕ್ಷೀಯವಾಗಿ ಹೆಚ್ಚಿನ ಮಾರುಕಟ್ಟೆ ದರದಲ್ಲಿ ಆದ್ಯತೆಯ ಗುತ್ತಿಗೆದಾರರಿಗೆ ವಿವಿಧ ಟೆಂಡರ್‌ಗಳನ್ನು ಮಂಜೂರು ಮಾಡಲಾಗಿದೆ ಎಂದು ಚಾರ್ಜ್‌ಶೀಟ್ ಬಹಿರಂಗಪಡಿಸಿದೆ. ಸಂಬಂಧಪಟ್ಟವರು ಸರಿಯಾದ ಟೆಂಡರ್ ಪ್ರಕ್ರಿಯೆಗಳನ್ನು ಅನುಸರಿಸದೆ ಮುಂದುವರೆದಿದ್ದು, ಮುಂಗಡ ಪಾವತಿಯನ್ನು ಸಹ ಕೆಲಸ ಮಾಡದೆಯೇ ಹಲವರಿಗೆ ನೀಡಲಾಗಿದೆ ಎಂದು ಅದು ಹೇಳಿದೆ.ಮೊಹಮ್ಮದ್ ಅಜರುದ್ದೀನ್‌

ಇದನ್ನೂಓದಿ: ‘ಗಾಂಧೀಜಿ ಹಂತಕ ಗೋಡ್ಸೆ ಎಂಬ ವ್ಯಕ್ತಿ ಮತ್ತು ಆತನ ದೃಷ್ಟಿಯ ಭಾರತ’ ಪುಸ್ತಕ ಬಿಡುಗಡೆ: ದಿನೇಶ್ ಗುಂಡೂರಾವ್ ಅವರ ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...