Homeಮುಖಪುಟಮೋದಿ ಸರ್ಕಾರದ ವಿರುದ್ಧ ಮಂಡಿಸಲಾದ ಅವಿಶ್ವಾಸ ನಿರ್ಣಯದ ಮೇಲೆ ಇಂದು ಚರ್ಚೆ: INDIA ನಿರ್ಧಾರ

ಮೋದಿ ಸರ್ಕಾರದ ವಿರುದ್ಧ ಮಂಡಿಸಲಾದ ಅವಿಶ್ವಾಸ ನಿರ್ಣಯದ ಮೇಲೆ ಇಂದು ಚರ್ಚೆ: INDIA ನಿರ್ಧಾರ

- Advertisement -
- Advertisement -

ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಲೋಕಸಭೆಯಲ್ಲಿ ಪ್ರತಿಪಕ್ಷಗಳು ಬುಧವಾರ ಅವಿಶ್ವಾಸ ನಿರ್ಣಯ ಮಂಡಿಸಿದ್ದು, 20 ವರ್ಷಗಳಲ್ಲಿ ಮೊದಲ ಬಾರಿಗೆ ಅಂತಹ ನಿರ್ಣಯವನ್ನು ಮಂಡಿಸಲಾಗಿದೆ. ಹಾಗಾಗಿ ಇದು ಬಹಳ ಮಹತ್ವ ಪಡೆದುಕೊಂಡಿದೆ.

ಮಣಿಪುರದ ಜನಾಂಗೀಯ ಹಿಂಸಾಚಾರದ ವಿಷಯದ ಬಗ್ಗೆ ಗಮನ ಸೆಳೆಯಲು ಚರ್ಚೆ ನಡೆಸಬೇಕು ಎಂದು ವಿರೋಧ ಪಕ್ಷಗಳ ಮೈತ್ರಿ INDIA ಬಯಸುತ್ತಿದೆ. ಕೇಂದ್ರ ಗೃಹ ಸಚಿವರ ಮೂಲಕ ಮಾತ್ರವಲ್ಲದೆ ಇಡೀ ಸರ್ಕಾರದ ಮೇಲೆ ಒತ್ತಡ ಹೇರುವುದು ಅವರ ಗುರಿಯಾಗಿದೆ.

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಅವಿಶ್ವಾಸ ನಿರ್ಣಯವನ್ನು ಅಂಗೀಕರಿಸಿದ್ದಾರೆ ಮತ್ತು ಈ ವಿಷಯದ ಬಗ್ಗೆ ಚರ್ಚೆಗೆ ಸೂಕ್ತ ಸಮಯವನ್ನು ಭರವಸೆ ನೀಡಿದ್ದಾರೆ. ಆದರೆ, ಗುರುವಾರವೇ ಚರ್ಚೆ ನಡೆಸಬೇಕು ಎಂಬುದು ಕಾಂಗ್ರೆಸ್ ಪಕ್ಷದ ಆಗ್ರಹವಾಗಿದೆ.

ಈ ವಿಷಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಪ್ರತಿಪಕ್ಷಗಳು ಒತ್ತಾಯಿಸುತ್ತಿದ್ದಾರೆ ಆದರೆ ಮೋದಿ ಅವರು ಆ ಬಗ್ಗೆ ಮಾತನಾಡದೇ ಆವಿಚಾರದಲ್ಲಿ ಮೌನವಹಿಸಿದ್ದಾರೆ. ಹಾಗಾಗಿಯೇ ಸಂಸತ್ತಿನ ಮುಂಗಾರು ಅಧಿವೇಶನ ಗದ್ದಲ ಗಲಾಟೆಯಲ್ಲೇ ಮುಂದುವರೆದಿದೆ.

ಈ ಬಗ್ಗೆ ಆರ್‌ಜೆಡಿ ಸಂಸದ ಮನೋಜ್ ಝಾ ಮಾತನಾಡಿದ್ದು, ”ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಿವೆ. ಈ ಬಾರಿಯ ಅವಿಶ್ವಾಸ ನಿರ್ಣಯವೂ ಮಹತ್ವದ್ದಾಗಿದೆ ಏಕೆಂದರೆ ನಮಗೆ ಪ್ರಧಾನಿ ಮೋದಿ ಇಷ್ಟವಾಗದ ಕಾರಣ ಅಲ್ಲಮ ಜನರ ಹೊಣೆಗಾರಿಕೆಗಾಗಿ. ಮಣಿಪುರದಲ್ಲಿ ಅವರಿಗೆ ಶಾಸಕಾಂಗ ಬಹುಮತವಿದೆ ಮತ್ತು ನೈತಿಕ ಬಹುಮತವಿಲ್ಲ…” ಎಂದು ವಾಗ್ದಾಳಿ ನಡೆಸಿದ್ದಾರೆ.

”ಪ್ರಧಾನಿ ಮೋದಿ ಮಾತನಾಡಿದರೆ ಮಣಿಪುರದ ಪರಿಸ್ಥಿತಿ ಸುಧಾರಿಸಬಹುದು… ಈ ಘಟನೆಯ ಬಗ್ಗೆ ಸಂಸತ್ತು ಸಾಮೂಹಿಕ ಅವಮಾನವನ್ನು ವ್ಯಕ್ತಪಡಿಸಬೇಕು ಎಂದು ನಾವು ಬಯಸುತ್ತೇವೆ… ಮಣಿಪುರದ ಜನರು ಭಾರತಕ್ಕೆ ಸೇರಿದವರು ಎನ್ನುವ ಭಾವನೆಯನ್ನು ನೀಡಲಾಗಿಲ್ಲ, ಇದು ಸಂಪೂರ್ಣ ಒಕ್ಕೂಟ ವ್ಯವಸ್ಥೆಗೆ ಅಪಾಯಕಾರಿಯಾಗಿದೆ” ಎಂದು ಹೇಳಿದರು.

ಮಣಿಪುರ ಹಿಂಸಾಚಾರದ ಕುರಿತು ಸದನದಲ್ಲಿ ಹೇಳಿಕೆ ನೀಡಲು ಪ್ರಧಾನಿ ಮೋದಿ ಮನವೊಲಿಸುವ ಸಲುವಾಗಿ ಕೇಂದ್ರದ ವಿರುದ್ಧ ಕಾಂಗ್ರೆಸ್ ಪಕ್ಷದ ಸಂಸದ ಗೌರವ್ ಗೊಗೊಯ್ ಅವರು ತಂದಿದ್ದ ಅವಿಶ್ವಾಸ ನಿರ್ಣಯವನ್ನು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ನಿನ್ನೆ ಅಂಗೀಕರಿಸಿದ್ದಾರೆ. ರಾಷ್ಟ್ರೀಯ ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗ ಅಂಗೀಕರಿಸಿದ ಅವಿಶ್ವಾಸ ನಿರ್ಣಯವಾಗಿದೆ.

ಇದನ್ನೂ ಓದಿ: ಮೋದಿ ಸರ್ಕಾರದ ವಿರುದ್ಧ ಮಂಡಿಸಲಾದ ಅವಿಶ್ವಾಸ ನಿರ್ಣಯ ಮೇಲೆ ಇಂದು ಚರ್ಚೆ ನಡೆಸಲು I.N.D.I.A. ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...

ಕೊಡಗು | ಚಾರಣಕ್ಕೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ : 3 ದಿನ ಕಳೆದರೂ ಸಿಗದ ಸುಳಿವು, ಎಎನ್‌ಎಫ್‌ನಿಂದ ತೀವ್ರ ಶೋಧ

ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಯುವತಿಯನ್ನು ಕೇರಳದ...

ಭವಿಷ್ಯದ ಸಂಘರ್ಷದಲ್ಲಿ ಪಾಕಿಸ್ತಾನ ಕೋಲ್ಕತ್ತಾ ಮೇಲೆ ದಾಳಿ ಮಾಡುತ್ತದೆ: ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್

 ಲಾಹೋರ್: ಭವಿಷ್ಯದಲ್ಲಿ ಯಾವುದೇ ದುಸ್ಸಾಹಸಗಳು ನಡೆದರೆ ಕೋಲ್ಕತ್ತಾದಲ್ಲಿ ದಾಳಿ ನಡೆಸುವ ಮೂಲಕ ಭಾರತಕ್ಕೆ ಪ್ರತ್ಯುತ್ತರ ನೀಡುವುದಾಗಿ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಎಚ್ಚರಿಕೆ ನೀಡಿದ್ದಾರೆ. "ಈ ಬಾರಿ ಭಾರತ ಯಾವುದೇ ಸುಳ್ಳು...

ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

2018ರ ವಿಧಾನಸಭಾ ಚುನಾವಣೆಯ ವೇಳೆ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (42ನೇ ಎಸಿಎಂಎಂ ಕೋರ್ಟ್) ಜಾಮೀನು...

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...