Homeಮುಖಪುಟಮೋದಿ ಸರ್ಕಾರದ ವಿರುದ್ಧ ಮಂಡಿಸಲಾದ ಅವಿಶ್ವಾಸ ನಿರ್ಣಯದ ಮೇಲೆ ಇಂದು ಚರ್ಚೆ: INDIA ನಿರ್ಧಾರ

ಮೋದಿ ಸರ್ಕಾರದ ವಿರುದ್ಧ ಮಂಡಿಸಲಾದ ಅವಿಶ್ವಾಸ ನಿರ್ಣಯದ ಮೇಲೆ ಇಂದು ಚರ್ಚೆ: INDIA ನಿರ್ಧಾರ

- Advertisement -
- Advertisement -

ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಲೋಕಸಭೆಯಲ್ಲಿ ಪ್ರತಿಪಕ್ಷಗಳು ಬುಧವಾರ ಅವಿಶ್ವಾಸ ನಿರ್ಣಯ ಮಂಡಿಸಿದ್ದು, 20 ವರ್ಷಗಳಲ್ಲಿ ಮೊದಲ ಬಾರಿಗೆ ಅಂತಹ ನಿರ್ಣಯವನ್ನು ಮಂಡಿಸಲಾಗಿದೆ. ಹಾಗಾಗಿ ಇದು ಬಹಳ ಮಹತ್ವ ಪಡೆದುಕೊಂಡಿದೆ.

ಮಣಿಪುರದ ಜನಾಂಗೀಯ ಹಿಂಸಾಚಾರದ ವಿಷಯದ ಬಗ್ಗೆ ಗಮನ ಸೆಳೆಯಲು ಚರ್ಚೆ ನಡೆಸಬೇಕು ಎಂದು ವಿರೋಧ ಪಕ್ಷಗಳ ಮೈತ್ರಿ INDIA ಬಯಸುತ್ತಿದೆ. ಕೇಂದ್ರ ಗೃಹ ಸಚಿವರ ಮೂಲಕ ಮಾತ್ರವಲ್ಲದೆ ಇಡೀ ಸರ್ಕಾರದ ಮೇಲೆ ಒತ್ತಡ ಹೇರುವುದು ಅವರ ಗುರಿಯಾಗಿದೆ.

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಅವಿಶ್ವಾಸ ನಿರ್ಣಯವನ್ನು ಅಂಗೀಕರಿಸಿದ್ದಾರೆ ಮತ್ತು ಈ ವಿಷಯದ ಬಗ್ಗೆ ಚರ್ಚೆಗೆ ಸೂಕ್ತ ಸಮಯವನ್ನು ಭರವಸೆ ನೀಡಿದ್ದಾರೆ. ಆದರೆ, ಗುರುವಾರವೇ ಚರ್ಚೆ ನಡೆಸಬೇಕು ಎಂಬುದು ಕಾಂಗ್ರೆಸ್ ಪಕ್ಷದ ಆಗ್ರಹವಾಗಿದೆ.

ಈ ವಿಷಯದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ಪ್ರತಿಪಕ್ಷಗಳು ಒತ್ತಾಯಿಸುತ್ತಿದ್ದಾರೆ ಆದರೆ ಮೋದಿ ಅವರು ಆ ಬಗ್ಗೆ ಮಾತನಾಡದೇ ಆವಿಚಾರದಲ್ಲಿ ಮೌನವಹಿಸಿದ್ದಾರೆ. ಹಾಗಾಗಿಯೇ ಸಂಸತ್ತಿನ ಮುಂಗಾರು ಅಧಿವೇಶನ ಗದ್ದಲ ಗಲಾಟೆಯಲ್ಲೇ ಮುಂದುವರೆದಿದೆ.

ಈ ಬಗ್ಗೆ ಆರ್‌ಜೆಡಿ ಸಂಸದ ಮನೋಜ್ ಝಾ ಮಾತನಾಡಿದ್ದು, ”ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಿವೆ. ಈ ಬಾರಿಯ ಅವಿಶ್ವಾಸ ನಿರ್ಣಯವೂ ಮಹತ್ವದ್ದಾಗಿದೆ ಏಕೆಂದರೆ ನಮಗೆ ಪ್ರಧಾನಿ ಮೋದಿ ಇಷ್ಟವಾಗದ ಕಾರಣ ಅಲ್ಲಮ ಜನರ ಹೊಣೆಗಾರಿಕೆಗಾಗಿ. ಮಣಿಪುರದಲ್ಲಿ ಅವರಿಗೆ ಶಾಸಕಾಂಗ ಬಹುಮತವಿದೆ ಮತ್ತು ನೈತಿಕ ಬಹುಮತವಿಲ್ಲ…” ಎಂದು ವಾಗ್ದಾಳಿ ನಡೆಸಿದ್ದಾರೆ.

”ಪ್ರಧಾನಿ ಮೋದಿ ಮಾತನಾಡಿದರೆ ಮಣಿಪುರದ ಪರಿಸ್ಥಿತಿ ಸುಧಾರಿಸಬಹುದು… ಈ ಘಟನೆಯ ಬಗ್ಗೆ ಸಂಸತ್ತು ಸಾಮೂಹಿಕ ಅವಮಾನವನ್ನು ವ್ಯಕ್ತಪಡಿಸಬೇಕು ಎಂದು ನಾವು ಬಯಸುತ್ತೇವೆ… ಮಣಿಪುರದ ಜನರು ಭಾರತಕ್ಕೆ ಸೇರಿದವರು ಎನ್ನುವ ಭಾವನೆಯನ್ನು ನೀಡಲಾಗಿಲ್ಲ, ಇದು ಸಂಪೂರ್ಣ ಒಕ್ಕೂಟ ವ್ಯವಸ್ಥೆಗೆ ಅಪಾಯಕಾರಿಯಾಗಿದೆ” ಎಂದು ಹೇಳಿದರು.

ಮಣಿಪುರ ಹಿಂಸಾಚಾರದ ಕುರಿತು ಸದನದಲ್ಲಿ ಹೇಳಿಕೆ ನೀಡಲು ಪ್ರಧಾನಿ ಮೋದಿ ಮನವೊಲಿಸುವ ಸಲುವಾಗಿ ಕೇಂದ್ರದ ವಿರುದ್ಧ ಕಾಂಗ್ರೆಸ್ ಪಕ್ಷದ ಸಂಸದ ಗೌರವ್ ಗೊಗೊಯ್ ಅವರು ತಂದಿದ್ದ ಅವಿಶ್ವಾಸ ನಿರ್ಣಯವನ್ನು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ನಿನ್ನೆ ಅಂಗೀಕರಿಸಿದ್ದಾರೆ. ರಾಷ್ಟ್ರೀಯ ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗ ಅಂಗೀಕರಿಸಿದ ಅವಿಶ್ವಾಸ ನಿರ್ಣಯವಾಗಿದೆ.

ಇದನ್ನೂ ಓದಿ: ಮೋದಿ ಸರ್ಕಾರದ ವಿರುದ್ಧ ಮಂಡಿಸಲಾದ ಅವಿಶ್ವಾಸ ನಿರ್ಣಯ ಮೇಲೆ ಇಂದು ಚರ್ಚೆ ನಡೆಸಲು I.N.D.I.A. ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...