Homeಮುಖಪುಟಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನ: ಇಂದು ಭಾರತದಲ್ಲಿ ಶೋಕಾಚರಣೆ

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನ: ಇಂದು ಭಾರತದಲ್ಲಿ ಶೋಕಾಚರಣೆ

- Advertisement -
- Advertisement -

ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರಿಗೆ ಗೌರವಾರ್ಥವಾಗಿ ಮಂಗಳವಾರ ಭಾರತದಾದ್ಯಂತ ಒಂದು ದಿನದ ಶೋಕಾಚರಣೆಯನ್ನು ಆಚರಿಸಲಾಗುವುದು ಎಂದು ಕೇಂದ್ರ ಗೃಹ ಸಚಿವಾಲಯ ಪ್ರಕಟಿಸಿದೆ.

ಭಾರತದಾದ್ಯಂತ ನಿಯಮಿತವಾಗಿ ಹಾರಿಸುವ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಇಳಿಸಲಾಗುವುದು ಮತ್ತು ಶೋಕಾಚರಣೆಯ ಅವಧಿಯಲ್ಲಿ ಯಾವುದೇ ಅಧಿಕೃತ ಮನರಂಜನೆ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದಿಲ್ಲ ಎಂದು ಗೃಹ ಇಲಾಖೆ ತನ್ನ ಅಧಿಸೂಚನೆಯಲ್ಲಿ ತಿಳಿಸಿದೆ.

ಗೃಹ ಸಚಿವಾಲಯದ ವಕ್ತಾರರು ಈ ಕುರಿತು ಮಾಹಿತಿ ನೀಡಿದ್ದು, ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್‌ನ ಅಧ್ಯಕ್ಷ ಸೆಯ್ಯದ್ ಇಬ್ರಾಹಿಂ ರೈಸಿ ಮತ್ತು ದೇಶದ ವಿದೇಶಾಂಗ ಸಚಿವ ಹುಸೇನ್ ಅಮಿತ್-ಅಬ್ದುಲ್ಲಾಹಿಯಾನ್ ಅವರು ಹೆಲಿಕಾಪ್ಟರ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅವರಿಗೆ ಗೌರವಾರ್ಪಣೆ ಹಿನ್ನೆಲೆ ಭಾರತ ಸರ್ಕಾರವು ಮೇ 21 ರಂದು (ಮಂಗಳವಾರ) ಭಾರತದಾದ್ಯಂತ ಒಂದು ದಿನದ ಶೋಕಾಚರಣೆಯನ್ನು ಆಚರಿಸಲು ನಿರ್ಧರಿಸಿದೆ ಎಂದು ಹೇಳಿದ್ದಾರೆ.

ರೈಸಿ ಅವರ ಸಾವಿನ ದೃಢೀಕರಣದ ನಂತರ ಭಾರತದ ಪ್ರಧಾನಿ ನರೇಂದ್ರ ಮೋದಿ ನಿನ್ನೆ ಸಾಮಾಜಿಕ ಮಾಧ್ಯಮದಲ್ಲಿ ಸಂತಾಪ ಸೂಚಿಸಿದ್ದಾರೆ. ರೈಸಿ ಅವರ ದುರಂತ ನಿಧನದಿಂದ ನನಗೆ ಅತೀವ ದುಃಖವಾಗಿದೆ ಮತ್ತು ಆಘಾತವಾಗಿದೆ. ಈ ದುಃಖದ ಸಮಯದಲ್ಲಿ ಭಾರತವು ಇರಾನ್‌ನೊಂದಿಗೆ ನಿಂತಿದೆ ಎಂದು ಹೇಳಿದ್ದರು.

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ವಿದೇಶಾಂಗ ಸಚಿವ ಹುಸೇನ್‌ ಅಮೀರ್ ಅಬ್ದುಲ್ಲಾಹಿ ಇದ್ದ ಹೆಲಿಕಾಪ್ಟರ್‌ ಭಾನುವಾರ ಪತನವಾಗಿತ್ತು. ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ವಿದೇಶಾಂಗ ಸಚಿವ ಹುಸೇನ್‌ ಅಮೀರ್ ಅಬ್ದುಲ್ಲಾಹಿ ಸೇರಿದಂತೆ ವಿಮಾನದಲ್ಲಿದ್ದ ಎಲ್ಲಾ ಅಧಿಕಾರಿಗಳು ಪರ್ವತ ಭೂಪ್ರದೇಶದ ಹಿಮಾವೃತ ವಾತಾವರಣದಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಇರಾನ್ ಅಧಿಕಾರಿಯೊಬ್ಬರು ಸೋಮವಾರ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ ಅವಶೇಷಗಳನ್ನು ಪತ್ತೆ ಮಾಡಿದ ನಂತರ ಹೇಳಿದ್ದರು.

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಇರಾನ್‌ನ ತಬ್ರೀಝ್‌ ನಗರದಲ್ಲಿ ಆಝರ್‌ಬೈಜಾನ್‌ನ ಅಧ್ಯಕ್ಷ ಇಲ್ಹಾಮ್ ಅಲಿಯೆವ್ ಜೊತೆಗೂಡಿ ಖಿಝ್‌ ಖಲಾಸಿ ಅಣೆಕಟ್ಟನ್ನು ಎರಡೂ ದೇಶಗಳು ಹಂಚಿರುವ ಗಡಿ ಸ್ಥಳದಲ್ಲಿ ಉದ್ಘಾಟಿಸಿ ವಾಪಸಾಗುತ್ತಿರುವಾಗ ಈ ಘಟನೆ ಸಂಭವಿಸಿತ್ತು. ಹಾರಾಟ ಆರಂಭಿಸಿದ ಸುಮಾರು 30 ನಿಮಿಷಗಳಲ್ಲಿ ಹೆಲಿಕಾಪ್ಟರ್‌ ಸಂಪರ್ಕ ಕಳೆದುಕೊಂಡಿತ್ತು. ಇರಾನ್‌ ಅಧ್ಯಕ್ಷರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ನಾಪತ್ತೆಯಾಗಿದೆ ಎಂಬ ಸುದ್ದಿ ಬೆನ್ನಲ್ಲಿ 60ಕ್ಕೂ ಹೆಚ್ಚು ರಕ್ಷಣಾ ತಂಡಗಳು ಕೆಟ್ಟ ಹವಾಮಾನ ಪರಿಸ್ಥಿತಿಗಳ ನಡುವೆ ಶೋಧ ನಡೆಸಿದ್ದವು.

ಇದನ್ನು ಓದಿ: ಟಿಕೆಟ್‌ ಕೈತಪ್ಪಿದಕ್ಕೆ ‘ಮತದಾನ’ ಮಾಡದ ಬಿಜೆಪಿ ಸಂಸದ: ಶೋಕಾಸ್ ನೋಟಿಸ್ ಜಾರಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...