Homeಮುಖಪುಟಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನ: ಇಂದು ಭಾರತದಲ್ಲಿ ಶೋಕಾಚರಣೆ

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನ: ಇಂದು ಭಾರತದಲ್ಲಿ ಶೋಕಾಚರಣೆ

- Advertisement -
- Advertisement -

ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರಿಗೆ ಗೌರವಾರ್ಥವಾಗಿ ಮಂಗಳವಾರ ಭಾರತದಾದ್ಯಂತ ಒಂದು ದಿನದ ಶೋಕಾಚರಣೆಯನ್ನು ಆಚರಿಸಲಾಗುವುದು ಎಂದು ಕೇಂದ್ರ ಗೃಹ ಸಚಿವಾಲಯ ಪ್ರಕಟಿಸಿದೆ.

ಭಾರತದಾದ್ಯಂತ ನಿಯಮಿತವಾಗಿ ಹಾರಿಸುವ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಇಳಿಸಲಾಗುವುದು ಮತ್ತು ಶೋಕಾಚರಣೆಯ ಅವಧಿಯಲ್ಲಿ ಯಾವುದೇ ಅಧಿಕೃತ ಮನರಂಜನೆ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದಿಲ್ಲ ಎಂದು ಗೃಹ ಇಲಾಖೆ ತನ್ನ ಅಧಿಸೂಚನೆಯಲ್ಲಿ ತಿಳಿಸಿದೆ.

ಗೃಹ ಸಚಿವಾಲಯದ ವಕ್ತಾರರು ಈ ಕುರಿತು ಮಾಹಿತಿ ನೀಡಿದ್ದು, ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್‌ನ ಅಧ್ಯಕ್ಷ ಸೆಯ್ಯದ್ ಇಬ್ರಾಹಿಂ ರೈಸಿ ಮತ್ತು ದೇಶದ ವಿದೇಶಾಂಗ ಸಚಿವ ಹುಸೇನ್ ಅಮಿತ್-ಅಬ್ದುಲ್ಲಾಹಿಯಾನ್ ಅವರು ಹೆಲಿಕಾಪ್ಟರ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅವರಿಗೆ ಗೌರವಾರ್ಪಣೆ ಹಿನ್ನೆಲೆ ಭಾರತ ಸರ್ಕಾರವು ಮೇ 21 ರಂದು (ಮಂಗಳವಾರ) ಭಾರತದಾದ್ಯಂತ ಒಂದು ದಿನದ ಶೋಕಾಚರಣೆಯನ್ನು ಆಚರಿಸಲು ನಿರ್ಧರಿಸಿದೆ ಎಂದು ಹೇಳಿದ್ದಾರೆ.

ರೈಸಿ ಅವರ ಸಾವಿನ ದೃಢೀಕರಣದ ನಂತರ ಭಾರತದ ಪ್ರಧಾನಿ ನರೇಂದ್ರ ಮೋದಿ ನಿನ್ನೆ ಸಾಮಾಜಿಕ ಮಾಧ್ಯಮದಲ್ಲಿ ಸಂತಾಪ ಸೂಚಿಸಿದ್ದಾರೆ. ರೈಸಿ ಅವರ ದುರಂತ ನಿಧನದಿಂದ ನನಗೆ ಅತೀವ ದುಃಖವಾಗಿದೆ ಮತ್ತು ಆಘಾತವಾಗಿದೆ. ಈ ದುಃಖದ ಸಮಯದಲ್ಲಿ ಭಾರತವು ಇರಾನ್‌ನೊಂದಿಗೆ ನಿಂತಿದೆ ಎಂದು ಹೇಳಿದ್ದರು.

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ವಿದೇಶಾಂಗ ಸಚಿವ ಹುಸೇನ್‌ ಅಮೀರ್ ಅಬ್ದುಲ್ಲಾಹಿ ಇದ್ದ ಹೆಲಿಕಾಪ್ಟರ್‌ ಭಾನುವಾರ ಪತನವಾಗಿತ್ತು. ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ವಿದೇಶಾಂಗ ಸಚಿವ ಹುಸೇನ್‌ ಅಮೀರ್ ಅಬ್ದುಲ್ಲಾಹಿ ಸೇರಿದಂತೆ ವಿಮಾನದಲ್ಲಿದ್ದ ಎಲ್ಲಾ ಅಧಿಕಾರಿಗಳು ಪರ್ವತ ಭೂಪ್ರದೇಶದ ಹಿಮಾವೃತ ವಾತಾವರಣದಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಇರಾನ್ ಅಧಿಕಾರಿಯೊಬ್ಬರು ಸೋಮವಾರ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ ಅವಶೇಷಗಳನ್ನು ಪತ್ತೆ ಮಾಡಿದ ನಂತರ ಹೇಳಿದ್ದರು.

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಇರಾನ್‌ನ ತಬ್ರೀಝ್‌ ನಗರದಲ್ಲಿ ಆಝರ್‌ಬೈಜಾನ್‌ನ ಅಧ್ಯಕ್ಷ ಇಲ್ಹಾಮ್ ಅಲಿಯೆವ್ ಜೊತೆಗೂಡಿ ಖಿಝ್‌ ಖಲಾಸಿ ಅಣೆಕಟ್ಟನ್ನು ಎರಡೂ ದೇಶಗಳು ಹಂಚಿರುವ ಗಡಿ ಸ್ಥಳದಲ್ಲಿ ಉದ್ಘಾಟಿಸಿ ವಾಪಸಾಗುತ್ತಿರುವಾಗ ಈ ಘಟನೆ ಸಂಭವಿಸಿತ್ತು. ಹಾರಾಟ ಆರಂಭಿಸಿದ ಸುಮಾರು 30 ನಿಮಿಷಗಳಲ್ಲಿ ಹೆಲಿಕಾಪ್ಟರ್‌ ಸಂಪರ್ಕ ಕಳೆದುಕೊಂಡಿತ್ತು. ಇರಾನ್‌ ಅಧ್ಯಕ್ಷರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ನಾಪತ್ತೆಯಾಗಿದೆ ಎಂಬ ಸುದ್ದಿ ಬೆನ್ನಲ್ಲಿ 60ಕ್ಕೂ ಹೆಚ್ಚು ರಕ್ಷಣಾ ತಂಡಗಳು ಕೆಟ್ಟ ಹವಾಮಾನ ಪರಿಸ್ಥಿತಿಗಳ ನಡುವೆ ಶೋಧ ನಡೆಸಿದ್ದವು.

ಇದನ್ನು ಓದಿ: ಟಿಕೆಟ್‌ ಕೈತಪ್ಪಿದಕ್ಕೆ ‘ಮತದಾನ’ ಮಾಡದ ಬಿಜೆಪಿ ಸಂಸದ: ಶೋಕಾಸ್ ನೋಟಿಸ್ ಜಾರಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...