Homeಮುಖಪುಟಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನ: ಇಂದು ಭಾರತದಲ್ಲಿ ಶೋಕಾಚರಣೆ

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನ: ಇಂದು ಭಾರತದಲ್ಲಿ ಶೋಕಾಚರಣೆ

- Advertisement -
- Advertisement -

ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರಿಗೆ ಗೌರವಾರ್ಥವಾಗಿ ಮಂಗಳವಾರ ಭಾರತದಾದ್ಯಂತ ಒಂದು ದಿನದ ಶೋಕಾಚರಣೆಯನ್ನು ಆಚರಿಸಲಾಗುವುದು ಎಂದು ಕೇಂದ್ರ ಗೃಹ ಸಚಿವಾಲಯ ಪ್ರಕಟಿಸಿದೆ.

ಭಾರತದಾದ್ಯಂತ ನಿಯಮಿತವಾಗಿ ಹಾರಿಸುವ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಇಳಿಸಲಾಗುವುದು ಮತ್ತು ಶೋಕಾಚರಣೆಯ ಅವಧಿಯಲ್ಲಿ ಯಾವುದೇ ಅಧಿಕೃತ ಮನರಂಜನೆ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದಿಲ್ಲ ಎಂದು ಗೃಹ ಇಲಾಖೆ ತನ್ನ ಅಧಿಸೂಚನೆಯಲ್ಲಿ ತಿಳಿಸಿದೆ.

ಗೃಹ ಸಚಿವಾಲಯದ ವಕ್ತಾರರು ಈ ಕುರಿತು ಮಾಹಿತಿ ನೀಡಿದ್ದು, ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್‌ನ ಅಧ್ಯಕ್ಷ ಸೆಯ್ಯದ್ ಇಬ್ರಾಹಿಂ ರೈಸಿ ಮತ್ತು ದೇಶದ ವಿದೇಶಾಂಗ ಸಚಿವ ಹುಸೇನ್ ಅಮಿತ್-ಅಬ್ದುಲ್ಲಾಹಿಯಾನ್ ಅವರು ಹೆಲಿಕಾಪ್ಟರ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅವರಿಗೆ ಗೌರವಾರ್ಪಣೆ ಹಿನ್ನೆಲೆ ಭಾರತ ಸರ್ಕಾರವು ಮೇ 21 ರಂದು (ಮಂಗಳವಾರ) ಭಾರತದಾದ್ಯಂತ ಒಂದು ದಿನದ ಶೋಕಾಚರಣೆಯನ್ನು ಆಚರಿಸಲು ನಿರ್ಧರಿಸಿದೆ ಎಂದು ಹೇಳಿದ್ದಾರೆ.

ರೈಸಿ ಅವರ ಸಾವಿನ ದೃಢೀಕರಣದ ನಂತರ ಭಾರತದ ಪ್ರಧಾನಿ ನರೇಂದ್ರ ಮೋದಿ ನಿನ್ನೆ ಸಾಮಾಜಿಕ ಮಾಧ್ಯಮದಲ್ಲಿ ಸಂತಾಪ ಸೂಚಿಸಿದ್ದಾರೆ. ರೈಸಿ ಅವರ ದುರಂತ ನಿಧನದಿಂದ ನನಗೆ ಅತೀವ ದುಃಖವಾಗಿದೆ ಮತ್ತು ಆಘಾತವಾಗಿದೆ. ಈ ದುಃಖದ ಸಮಯದಲ್ಲಿ ಭಾರತವು ಇರಾನ್‌ನೊಂದಿಗೆ ನಿಂತಿದೆ ಎಂದು ಹೇಳಿದ್ದರು.

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ವಿದೇಶಾಂಗ ಸಚಿವ ಹುಸೇನ್‌ ಅಮೀರ್ ಅಬ್ದುಲ್ಲಾಹಿ ಇದ್ದ ಹೆಲಿಕಾಪ್ಟರ್‌ ಭಾನುವಾರ ಪತನವಾಗಿತ್ತು. ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ವಿದೇಶಾಂಗ ಸಚಿವ ಹುಸೇನ್‌ ಅಮೀರ್ ಅಬ್ದುಲ್ಲಾಹಿ ಸೇರಿದಂತೆ ವಿಮಾನದಲ್ಲಿದ್ದ ಎಲ್ಲಾ ಅಧಿಕಾರಿಗಳು ಪರ್ವತ ಭೂಪ್ರದೇಶದ ಹಿಮಾವೃತ ವಾತಾವರಣದಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಇರಾನ್ ಅಧಿಕಾರಿಯೊಬ್ಬರು ಸೋಮವಾರ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ ಅವಶೇಷಗಳನ್ನು ಪತ್ತೆ ಮಾಡಿದ ನಂತರ ಹೇಳಿದ್ದರು.

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಇರಾನ್‌ನ ತಬ್ರೀಝ್‌ ನಗರದಲ್ಲಿ ಆಝರ್‌ಬೈಜಾನ್‌ನ ಅಧ್ಯಕ್ಷ ಇಲ್ಹಾಮ್ ಅಲಿಯೆವ್ ಜೊತೆಗೂಡಿ ಖಿಝ್‌ ಖಲಾಸಿ ಅಣೆಕಟ್ಟನ್ನು ಎರಡೂ ದೇಶಗಳು ಹಂಚಿರುವ ಗಡಿ ಸ್ಥಳದಲ್ಲಿ ಉದ್ಘಾಟಿಸಿ ವಾಪಸಾಗುತ್ತಿರುವಾಗ ಈ ಘಟನೆ ಸಂಭವಿಸಿತ್ತು. ಹಾರಾಟ ಆರಂಭಿಸಿದ ಸುಮಾರು 30 ನಿಮಿಷಗಳಲ್ಲಿ ಹೆಲಿಕಾಪ್ಟರ್‌ ಸಂಪರ್ಕ ಕಳೆದುಕೊಂಡಿತ್ತು. ಇರಾನ್‌ ಅಧ್ಯಕ್ಷರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ನಾಪತ್ತೆಯಾಗಿದೆ ಎಂಬ ಸುದ್ದಿ ಬೆನ್ನಲ್ಲಿ 60ಕ್ಕೂ ಹೆಚ್ಚು ರಕ್ಷಣಾ ತಂಡಗಳು ಕೆಟ್ಟ ಹವಾಮಾನ ಪರಿಸ್ಥಿತಿಗಳ ನಡುವೆ ಶೋಧ ನಡೆಸಿದ್ದವು.

ಇದನ್ನು ಓದಿ: ಟಿಕೆಟ್‌ ಕೈತಪ್ಪಿದಕ್ಕೆ ‘ಮತದಾನ’ ಮಾಡದ ಬಿಜೆಪಿ ಸಂಸದ: ಶೋಕಾಸ್ ನೋಟಿಸ್ ಜಾರಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...