Homeಕ್ರೀಡೆಕ್ರಿಕೆಟ್ಜಿಂಬಾಬ್ವೆ ಮಣಿಸಿದ ಭಾರತ: ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ಎದುರಾಳಿ

ಜಿಂಬಾಬ್ವೆ ಮಣಿಸಿದ ಭಾರತ: ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ಎದುರಾಳಿ

ಸೆಮಿಫೈನಲ್‌ ಪಂದ್ಯಗಳಲ್ಲಿ ಭಾರತವು ಇಂಗ್ಲೆಂಡ್ ವಿರುದ್ಧ ಮತ್ತು ಪಾಕಿಸ್ತಾನವು ನ್ಯೂಜಿಲೆಂಡ್ ವಿರುದ್ಧ ಗೆಲುವು ಸಾಧಿಸಿದರೆ ಮತ್ತೊಮ್ಮೆ ಫೈನಲ್‌ನಲ್ಲಿ ಭಾರತ-ಪಾಕ್ ಮುಖಾಮುಖಿಯಾಗಹುದಾಗಿದೆ.

- Advertisement -
- Advertisement -

ಇಂದು ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದ ಕೊನೆಯ ಮೂರು ಪಂದ್ಯಗಳು ಭಾರೀ ರೋಚಕತೆ ಸೃಷ್ಟಿಸಿದ್ದವು. ಕೊನೆಗೂ ಪಾಕಿಸ್ತಾನ ಮತ್ತು ಭಾರತ ತಂಡಗಳು ತಮ್ಮ ಕೊನೆಯ ಪಂದ್ಯಗಳನ್ನು ಗೆಲ್ಲುವ ಮೂಲಕ ಸೆಮಿಫೈನಲ್‌ಗೆ ಪ್ರವೇಶ ಪಡೆದಿವೆ. ಭಾರತ ತಂಡ ತನ್ನ ಕೊನೆಯ ಔಪಚಾರಿಕ ಪಂದ್ಯದಲ್ಲಿ ಜಿಂಬಾಬ್ವೆ ಎದುರು 71 ರನ್‌ಗಳ ಭಾರೀ ಗೆಲುವಿನೊಂದಿಗೆ ಗ್ರೂಪ್ 2 ರಲ್ಲಿ ಅಗ್ರಸ್ಥಾನ ಪಡೆಯಿತು. ಹಾಗಾಗಿ ಅದು ಗ್ರೂಪ್ 1 ರಲ್ಲಿ ಎರಡನೇ ಸ್ಥಾನ ಪಡೆದಿರುವ ಇಂಗ್ಲೆಂಡ್‌ನೊಂದಿಗೆ ನವೆಂಬರ್ 10ರಂದು ಸೆಮಿಫೈನಲ್‌ ಎದುರಿಸಲಿದೆ.

ಮೊದಲು ಬ್ಯಾಟಿಂಗ್ ಮಾಡಿದ ಭಾರತ ಕೆ.ಎಲ್ ರಾಹುಲ್ ಮತ್ತು ಸೂರ್ಯಕುಮಾರ್ ಯಾದವ್‌ರವರು ಆಕರ್ಷಕ ಅರ್ಧಶತಕದ ನೆರವಿನೊಂದಿಗೆ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 186 ರನ್ ಗಳಿಸಿತು. ಆರಂಭಿಕ ಆಟಗಾರ ಕೆ.ಎಲ್ ರಾಹುಲ್ 35 ಎಸೆತಗಳಲ್ಲಿ ಮೂರು ಸಿಕ್ಸರ್ ಮತ್ತು ಮೂರು ಬೌಂಡರಿ ಸೇರಿ 51 ರನ್ ಗಳಿಸಿ ಔಟಾದರು. ಸೂರ್ಯಕುಮಾರ್ ಯಾದವ್ ಕೇವಲ 25 ಎಸೆತಗಳಲ್ಲಿ 4 ಸಿಕ್ಸರ್ ಮತ್ತು 6 ಬೌಂಡರಿಗಳೊಂದಿಗೆ 61 ರನ್ ಚಚ್ಚಿದರು. ಚೆಂಡನ್ನು ಅಂಗಳದ ಮೂಲೆ ಮೂಲೆಗೆ ಅಟ್ಟಿದ ಅವರು ಜಿಂಬಾಬ್ವೆ ಬೌಲರ್‌ಗಳ ಬೆವರಿಳಿಸಿದರು.

ಗೆಲುವಿಗೆ 187 ರನ್‌ಗಳ ಗುರಿಪಡೆದು ಕಣಕ್ಕಿಳಿದ ಜಿಂಬಾಬ್ವೆ ಆಟಗಾರರು ಒಬ್ಬರ ನಂತರ ಒಬ್ಬರು ಔಟಾಗಿ ಯಾವುದೇ ಪ್ರತಿರೋಧ ತೋರದೆ ಭಾರತಕ್ಕೆ ಶರಣಾದರು. ಸಿಖಂದರ್ ರಾಜ 34 ಮತ್ತು ರ್ಯಾನ್ ಬುರಿ 35 ರನ್ ಗಳಿಸಿದ್ದು ಬಿಟ್ಟರೆ ಉಳಿದ ಆಟಗಾರರು ಉತ್ತಮ ಪ್ರದರ್ಶನ ತೋರಲು ವಿಫಲರಾದರು. ಇವರಿಬ್ಬರೂ ಆಟದ ನೆರವಿನಿಂದ ಜಿಂಬಾಬ್ವೆ ತಂಡ 17.2 ಓವರ್‌ಗಳಲ್ಲಿ 115 ರನ್ ಗಳಿಸಿ ತನ್ನೆಲ್ಲ ವಿಕೆಟ್ ಕಳೆದುಕೊಂಡಿತು. ಭಾರತದ ಪರ ರವಿಚಂದ್ರನ್ ಅಶ್ವಿನ್ ಮೂರು ವಿಕೆಟ್ ಪಡೆದರೆ ಮೊಹಮ್ಮದ್ ಶಮಿ ಮತ್ತು ಹಾರ್ದಿಕ್ ಪಾಂಡ್ಯ ತಲಾ 2 ವಿಕೆಟ್ ಪಡೆದು ಮಿಂಚಿದರು.

ಮತ್ತೊಂದು ಗೆಲ್ಲಲೇಬೇಕಾದ ಪಂದ್ಯದಲ್ಲಿ ಗೆಲುವು ಸಾಧಿಸಿದ ಪಾಕಿಸ್ತಾನ ಕೂಡ ಸೆಮಿಫೈನಲ್ ಪ್ರವೇಶಿಸಿದೆ. ಅದು ನವೆಂಬರ್ 09 ರಂದು ನ್ಯೂಜಿಲೆಂಡ್ ತಂಡದ ವಿರುದ್ಧ ಸೆಮಿಫೈನಲ್ ಪಂದ್ಯವನ್ನಾಡಲಿದೆ. ಸೆಮಿಫೈನಲ್‌ ಪಂದ್ಯಗಳಲ್ಲಿ ಭಾರತವು ಇಂಗ್ಲೆಂಡ್ ವಿರುದ್ಧ ಮತ್ತು ಪಾಕಿಸ್ತಾನವು ನ್ಯೂಜಿಲೆಂಡ್ ವಿರುದ್ಧ ಗೆಲುವು ಸಾಧಿಸಿದರೆ ಮತ್ತೊಮ್ಮೆ ಫೈನಲ್‌ನಲ್ಲಿ ಭಾರತ-ಪಾಕ್ ಮುಖಾಮುಖಿಯಾಗಹುದಾಗಿದೆ. 2007ರ ಟಿ20 ವಿಶ್ವಕಪ್‌ ಪಂದ್ಯದಲ್ಲಿ ಇವೆರೆಡು ತಂಡಗಳು ಫೈನಲ್‌ನಲ್ಲಿ ಸೆಣಸಿದ್ದವು. ಆ ಪಂದ್ಯದಲ್ಲಿ ಭಾರತ ತಂಡ 5 ರನ್‌ಗಳಿಂದ ಪಾಕ್‌ ಅನ್ನು ಮಣಿಸಿ ಚಾಂಪಿಯನ್ ಆಗಿತ್ತು.

ಈ ಭಾರಿಯ ಫೈನಲ್ ಪಂದ್ಯವು ನವೆಂಬರ್ 13 ರಂದು ಜರುಗಲಿದೆ.

ಇದನ್ನೂ ಓದಿ; ಟಿ20 ವಿಶ್ವಕಪ್: ಬಾಂಗ್ಲಾ ಮಣಿಸಿ ಸೆಮಿಫೈನಲ್ ಪ್ರವೇಶಿಸಿದ ಪಾಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...