Homeಕರೋನಾ ತಲ್ಲಣವಿಶ್ವದಲ್ಲೆ ಅತಿಹೆಚ್ಚು ಲಸಿಕೆ ತಯಾರಿಸುವ ಭಾರತ ಯಾಕೆ ಕೊರತೆ ಎದುರಿಸುತ್ತಿದೆ: ಪ್ರಿಯಾಂಕ ಗಾಂಧಿ

ವಿಶ್ವದಲ್ಲೆ ಅತಿಹೆಚ್ಚು ಲಸಿಕೆ ತಯಾರಿಸುವ ಭಾರತ ಯಾಕೆ ಕೊರತೆ ಎದುರಿಸುತ್ತಿದೆ: ಪ್ರಿಯಾಂಕ ಗಾಂಧಿ

- Advertisement -
- Advertisement -

“ವಿಶ್ವದಲ್ಲೇ ಅತಿಹೆಚ್ಚು ಲಸಿಕೆಗಳನ್ನು ತಯಾರಿಸುವ ದೇಶಗಳಲ್ಲಿ ಒಂದಾದ ಭಾರತ ಇಂದು ಯಾಕೆ ಕೊರತೆಯನ್ನು ಎದುರಿಸುತ್ತಿದೆ?” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಗುರುವಾರ ಪ್ರಶ್ನಿಸಿದ್ದು, ಕೊರೊನಾ ಲಸಿಕೆ ಪ್ರಕ್ರಿಯೆಯ ನಿರ್ವಹಣೆಯ ಬಗ್ಗೆ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಭಾರತ ಸರ್ಕಾರವು ಭಾರತದ ಜನರಿಗೆ ಉತ್ತರಿಸಬೇಕಿದೆ” ಎಂಬ ಶೀರ್ಷಿಕೆಯ ವೀಡಿಯೊವನ್ನು ದಲ್ಲಿ, ಕೇಂದ್ರ ಸರ್ಕಾರವು ಈ ವರ್ಷದ ಜನವರಿಯಲ್ಲಷ್ಟೇ ಲಸಿಕೆಗಾಗಿ ಮೊದಲ ಆದೇಶ ನೀಡಿದೆ ಎಂದು ಹೇಳಿದ್ದಾರೆ.

“ವಿಶ್ವದ ಅತಿ ಹೆಚ್ಚು ಲಸಿಕೆಗಳ ತಯಾರಕರಲ್ಲಿ ಒಂದಾದ ಭಾರತ ಇಂದು ಏಕೆ ಕೊರತೆಯನ್ನು ಎದುರಿಸುತ್ತಿದೆ? 2020 ರ ಬೇಸಿಗೆಯ ಸಮಯದಲ್ಲಿ ಇತರ ದೇಶಗಳು ಲಸಿಕೆಗಾಗಿ ತಮ್ಮ ಆದೇಶಗಳನ್ನು ನೀಡಲು ಪ್ರಾರಂಭಿಸಿದಾಗ, ಭಾರತ ಸರ್ಕಾರವು ತನಗೆ ಲಸಿಕೆ ಬೇಕೆಂದು ಮೊದಲ ಆದೇಶವನ್ನು 2021 ರ ಜನವರಿಯಲ್ಲಿ ನೀಡಿದ್ದು ಯಾಕೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕೇಂದ್ರ ಜನರಿಗಿಂತ ಸಾಮಾಜಿಕ ಜಾಲತಾಣಗಳನ್ನು ಆದ್ಯತೆಯಾಗಿ ಪರಿಗಣಿಸಿದೆ: ರಾಹುಲ್ ಗಾಂಧಿ

“ನಮ್ಮ ಸರ್ಕಾರವು 2021 ರ ಜನವರಿ ಮತ್ತು ಮಾರ್ಚ್ ನಡುವೆ ಆರು ಕೋಟಿ ಲಸಿಕೆಗಳನ್ನು ರಫ್ತು ಮಾಡುವ ಅದೇ ಸಮಯದಲ್ಲಿ, ಭಾರತೀಯರಿಗೆ ಕೇವಲ 3.5 ಕೋಟಿ ಲಸಿಕೆಯನ್ನು ಮಾತ್ರ ನೀಡಿತು.ಇದಕ್ಕೆ ಭಾರತ ಸರ್ಕಾರವು ದೇಶದ ಜನರಿಗೆ ಉತ್ತರಿಸಬೇಕಿದೆ. ನಾವು ಅವರಿಗೆ ಪ್ರಶ್ನೆಗಳನ್ನು ಕೇಳಬೇಕಾಗಿದ್ದು, ಅದಕ್ಕೆ ಅವರು ಉತ್ತರಿಸಲೇ ಬೇಕು” ಎಂದು ಹೇಳಿದ್ದಾರೆ.

ಪ್ರಿಯಾಂಕ ಗಾಂಧಿ ಈ ಹಿಂದೆ ಕೂಡಾ ದೇಶದಲ್ಲಿ ಕೊರೊನಾ ಲಸಿಕೆಗಳ ಕೊರತೆಗೆ ಕೇಂದ್ರ ಸರ್ಕಾರವನ್ನು ಟೀಕಿದ್ದರು.

ಇದನ್ನೂ ಓದಿ: ಸೋಂಕು ಹೆಚ್ಚಾದಂತೆ ವ್ಯವಸ್ಥೆಯ ಅಮಾನವೀಯತೆಗೆ ಗುರಿಯಾಗುತ್ತಿರುವ ಬೆಂಗಳೂರಿನ ಸ್ಮಶಾನ ಕಾರ್ಮಿಕರು

ದೇಶದಾದ್ಯಂತ ಕಳೆದ ಕೆಲವು ದಿನಗಳಿಂದ ಲಸಿಕೆ ಕೊರತೆಯಾಗಿರುವುದಕ್ಕೆ ಲಸಿಕೆ ಕೇಂದ್ರಗಳನ್ನು ಮುಚ್ಚಲಾಗಿದೆ. ಪಂಜಾಬ್, ಕೇರಳ, ಮಹಾರಾಷ್ಟ್ರ, ಪಂಜಾಬ್, ಆಂಧ್ರಪ್ರದೇಶ, ರಾಜಸ್ಥಾನ, ಉತ್ತರಾಖಂಡ ಮತ್ತು ಕರ್ನಾಟಕ ಸೇರಿದಂತೆ ಹಲವಾರು ರಾಜ್ಯಗಳು ಕೊರೊನಾ ಲಸಿಕೆಗಳಿಗಾಗಿ ಜಾಗತಿಕ ಟೆಂಡರ್‌ಗಳನ್ನು ಕರೆಯುವ ಹಾದಿಯಲ್ಲಿದೆ.

ಲಸಿಕೆ ತಯಾರಕ ಸಂಸ್ಥೆಯಾದ ಮೊಡೆರ್ನಾ ನೇರವಾಗಿ ಲಸಿಕೆಗಳನ್ನು ಪಂಜಾಬ್ ಸರ್ಕಾರಕ್ಕೆ ಕಳುಹಿಸಲು ನಿರಾಕರಿಸಿದೆ ಎಂದು ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಕಳೆದ ವಾರ ಮಾಹಿತಿ ನೀಡಿದ್ದರು. ದೆಹಲಿಗೆ ಕೂಡಾ ಫಿಜರ್ ಮತ್ತು ಮಾಡರ್ನಾ ಸಂಸ್ಥೆಗಳು ಅದೇ ಪ್ರತಿಕ್ರಿಯೆ ನೀಡಿದೆ.

ದೆಹಲಿಗೆ ಲಸಿಕೆಗಳನ್ನು ಪೂರೈಸಲು ಸ್ಪುಟ್ನಿಕ್ ವಿ ತಯಾರಕರು ಒಪ್ಪಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬುಧವಾರ ಮಾಹಿತಿ ನೀಡಿದ್ದಾರೆ.

ಕೇಂದ್ರ ಮಟ್ಟದಲ್ಲಿ ಟೆಂಡರ್ ಕರೆಯುವಂತೆ ಹಲವಾರು ರಾಜ್ಯಗಳ ಮುಖ್ಯಮಂತ್ರಿಗಳು ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕೋವಿಡ್ ಸವಾಲುಗಳಲ್ಲಿ ಪ್ರತಿ ಹಂತದಲ್ಲೂ ಎಡವುತ್ತುರಿವ ರಾಜ್ಯ ಸರ್ಕಾರ; ಜನರನ್ನು ಮಾರಣಾಂತಿಕ ಪರಿಣಾಮಗಳತ್ತ ದೂಡುತ್ತಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...